ರಾಜ್ಯ

ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅವರಿಗೆ ಗೌರವ ಡಾಕ್ಟರೇಟ್| ರಾಜ್ಯಪಾಲರಿಂದ ಗೌರವ ಡಾಕ್ಟರೇಟ್ ಪ್ರದಾನ

ಸಮಗ್ರ ನ್ಯೂಸ್: ಬೆಂಗಳೂರು ವಿಶ್ವವಿದ್ಯಾಲಯದ 58ನೇ ಘಟಿಕೋತ್ಸವ ಅಂಗವಾಗಿ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅವರಿಗೆ ಗೌರವ ಡಾಕ್ಟರೇಟ್ ಘೋಷಿಸಲಾಗಿತ್ತು. ಆದರೆ ಘಟಿಕೋತ್ಸವ ದಿನದಂದು ಎಸ್.ಸೋಮನಾಥ್ ಭಾಗವಹಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಬುಧವಾರ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ್ದಾರೆ. ಜಿಎಸ್​ಎಲ್​ವಿ ಮಾರ್ಕ್ 3 ಲಾಂಚರ್ ರೂಪಿಸುವಲ್ಲಿ ಸೋಮನಾಥ್ ಮುಖ್ಯಪಾತ್ರ ವಹಿಸಿದ್ದರು. ತಮ್ಮ ವೃತ್ತಿ ಜೀವನದ ಆರಂಭದ ದಿನಗಳಲ್ಲಿ ಪಿಎಸ್​ಎಲ್​ವಿ (Polar Satellite Launch Vehicle – PSLV) ಉಡಾವಣಾ ವಾಹನ ರೂಪಿಸುವ ತಂಡದಲ್ಲಿ

ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅವರಿಗೆ ಗೌರವ ಡಾಕ್ಟರೇಟ್| ರಾಜ್ಯಪಾಲರಿಂದ ಗೌರವ ಡಾಕ್ಟರೇಟ್ ಪ್ರದಾನ Read More »

ರಾಜ್ಯ ರಾಜಕೀಯದಲ್ಲಿ ಮಹತ್ತರ ಬೆಳವಣಿಗೆ: ಒಂದೇ ಹೋಟೆಲ್​ನಲ್ಲಿ ನಡೆಯಿತು ಕಾಂಗ್ರೆಸ್​ನ 2 ಪ್ರತ್ಯೇಕ ಸಭೆ

ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್ ನಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿವೆ. ಲೋಕಸಭಾ ಚುನಾವಣೆಗೆ ತಯಾರಿ ನಡೆಸಿದ್ದ ಕಾಂಗ್ರೆಸ್​​ಗೆ ಇದೀಗ ಮೊದಲು ರಾಜ್ಯಸಭೆಯಲ್ಲಿ ಗೆಲ್ಲುವ ಟಾಸ್ಕ್​ ಇದೆ. ನಾಲ್ಕು ಸ್ಥಾನಕ್ಕೆ ಎನ್​ಡಿಎ ಅಭ್ಯರ್ಥಿಯಾಗಿ 5ನೇ ಅಭ್ಯರ್ಥಿ ಕಣದಲ್ಲಿರುವುದರಿಂದ ಆಡಳಿತರೂಢ ಕಾಂಗ್ರೆಸ್​​ಗೆ ಭಯ ಶುರುವಾಗಿದೆ. ಈ ಸಂಬಂಧ ಬೆಂಗಳೂರಿನ ಖಾಸಗಿ ಹೋಟೆಲ್​ವೊಂದರಲ್ಲಿ ಕಾಂಗ್ರೆಸ್​ನ ಎರಡು ಪ್ರತ್ಯೇಕ ಸಭೆಗಳು ನಡೆದಿದ್ದು, ಇದು ಕುತೂಹಲಕ್ಕೆ ಕಾರಣವಾಗಿದೆ. ಒಂದೇ ಹೋಟೆಲ್​ನಲ್ಲಿ ಒಂದು ಕಡೆ ಹಳೇ ಮೈಸೂರು ಭಾಗದ ಕಾಂಗ್ರೆಸ್​​ನ ಒಕ್ಕಲಿಗ ನಾಯಕರ ಸಭೆ ನಡೆದಿದ್ದರೆ,

ರಾಜ್ಯ ರಾಜಕೀಯದಲ್ಲಿ ಮಹತ್ತರ ಬೆಳವಣಿಗೆ: ಒಂದೇ ಹೋಟೆಲ್​ನಲ್ಲಿ ನಡೆಯಿತು ಕಾಂಗ್ರೆಸ್​ನ 2 ಪ್ರತ್ಯೇಕ ಸಭೆ Read More »

ಸಿಗರೇಟ್‍ಗಳ ಮತ್ತು ಇತರೆ ತಂಬಾಕು ಉತ್ಪನ್ನಗಳ ತಿದ್ದುಪಡಿ ವಿಧೇಯಕ/ ಸಿಗರೇಟು ಮಾರಾಟದ ವಯೋಮಿತಿ 18 ವರ್ಷದಿಂದ 21 ವರ್ಷಕ್ಕೆ ಏರಿಕೆ

ಸಮಗ್ರ ನ್ಯೂಸ್: ಸಿಗರೇಟ್‍ಗಳ ಮತ್ತು ಇತರೆ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಮಯ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಈ ಮಸೂದೆಯಿಂದ ಶಾಲೆಗಳಿಂದ ನೂರು ಮೀಟರ್ ವ್ಯಾಪ್ತಿಯಲ್ಲಿ ಸಿಗರೇಟ್ ಮಾರಾಟ ನಿಷೇಧಿಸಲಾಗಿದೆ ಮತ್ತು ಸಿಗರೇಟು ಮಾರಾಟದ ವಯೋಮಿತಿ 18 ವರ್ಷದಿಂದ 21 ವರ್ಷಕ್ಕೆ ಏರಿಕೆ ಮಾಡಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದವರ ವಿರುದ್ಧ ದಂಡದ ಪ್ರಮಾಣ 100 ರೂ. ರಿಂದ 1000 ರೂ.ಗೆ ಏರಿಕೆ ಮಾಡಲಾಗಿದೆ

ಸಿಗರೇಟ್‍ಗಳ ಮತ್ತು ಇತರೆ ತಂಬಾಕು ಉತ್ಪನ್ನಗಳ ತಿದ್ದುಪಡಿ ವಿಧೇಯಕ/ ಸಿಗರೇಟು ಮಾರಾಟದ ವಯೋಮಿತಿ 18 ವರ್ಷದಿಂದ 21 ವರ್ಷಕ್ಕೆ ಏರಿಕೆ Read More »

ದ್ವಿತೀಯ ಪಿಯುಸಿ ಪರೀಕ್ಷೆ/ ಉಚಿತ ಸೇವೆ ನೀಡಲಿದೆ ಬಿಎಂಟಿಸಿ

ಸಮಗ್ರ ನ್ಯೂಸ್: ಬೆಂಗಳೂರಿನ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಸೇವೆ ನೀಡುವ ಶುಭ ಸುದ್ದಿಯನ್ನು ಬಿಬಿಎಂಟಿಸಿ ನೀಡಿದೆ. ಪರೀಕ್ಷೆಗಳು ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು. ಬಿಎಂಟಿಸಿ ವೋಲ್ಲೋ ಬಸ್ ಹೊರತುಪಡಿಸಿ ಇನ್ನುಳಿದ ಎಲ್ಲಾ ಬಿಎಂಟಿಸಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಬಹದು. ವಿದ್ಯಾರ್ಥಿಗಳ ಅನುಕೂಲಕ್ಕೆ ಪರೀಕ್ಷಾ ಕೇಂದ್ರಗಳ ಮುಂದೆಯೇ ಸ್ಟಾಪ್ ಕೊಡಲು ಚಾಲಕ ಹಾಗೂ ನಿರ್ವಹಕರಿಗೆ ಸೂಚನೆ ನೀಡಲಾಗಿದ್ದು. ಇನ್ನು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ

ದ್ವಿತೀಯ ಪಿಯುಸಿ ಪರೀಕ್ಷೆ/ ಉಚಿತ ಸೇವೆ ನೀಡಲಿದೆ ಬಿಎಂಟಿಸಿ Read More »

ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯ| ಕಡ್ಡಾಯವಲ್ಲ ಎಂಬ ಮಿಸ್ಟೇಕ್ ನಿಂದ ಎಚ್ಚರಗೊಂಡ ಸರ್ಕಾರದಿಂದ ಮತ್ತೆ ತಿದ್ದುಪಡಿ ಆದೇಶ

ಸಮಗ್ರ ನ್ಯೂಸ್: ಕುವೆಂಪುರವರ “ಜಯ ಭಾರತ ಜನನಿಯ ತನುಜಾತೆ” ಕವನವನ್ನು ನಾಡಗೀತೆಯಾಗಿ ಘೋಷಿಸುವ ಕುರಿತು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ: ಸಂಕಇ 207 ಕಸದ 2003, ದಿನಾಂಕ:07.01.2004ರ ಆದೇಶ ಭಾಗದಲ್ಲಿನ ಮಾರ್ಗಸೂಚಿ ‘ಇ” ಅಂಶಕ್ಕೆ ಹೊರಡಿಸಲಾದ ತಿದ್ದುಪಡಿ ಆದೇಶವನ್ನು ಹಿಂಪಡೆಯಲಾಗಿದೆ. ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಅರ್ಥ ಬರುವ ಸುತ್ತೋಲೆಯನ್ನು ಹೊರಡಿಸಿದ್ದ ರಾಜ್ಯ ಸರ್ಕಾರ ವಿವಾದವಾಗುತ್ತಿದ್ದಂತೆ ಆದೇಶವನ್ನು ತಿದ್ದುಪಡಿ ಮಾಡಿ ಆದೇಶ ಹೊರಡಿಸಿದೆ. ಮುಂದುವರೆದು ಎಲ್ಲಾ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ

ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯ| ಕಡ್ಡಾಯವಲ್ಲ ಎಂಬ ಮಿಸ್ಟೇಕ್ ನಿಂದ ಎಚ್ಚರಗೊಂಡ ಸರ್ಕಾರದಿಂದ ಮತ್ತೆ ತಿದ್ದುಪಡಿ ಆದೇಶ Read More »

ಗ್ಯಾರಂಟಿ ಯೋಜನೆ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶ/ ಸಜ್ಜುಗೊಳ್ಳುತ್ತಿದೆ ಶಿವಮೊಗ್ಗದ ಫ್ರೀಡಂ ಪಾರ್ಕ್

ಸಮಗ್ರ ನ್ಯೂಸ್: ಐದು ಗ್ಯಾರಂಟಿ ಯೋಜನೆ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶವನ್ನು ಫೆಬ್ರವರಿ 24ರಂದು ನಗರದ ಫ್ರೀಡಂ ಪಾರ್ಕ್‍ನಲ್ಲಿ ಆಯೋಜಿಸಲಾಗಿದೆ. ಜಿಲ್ಲೆಯಿಂದ ಸರ್ಕಾರದ ಗ್ಯಾರಂಟಿ ಸೌಲಭ್ಯ ಪಡೆದ ಎಲ್ಲಾ ಫಲಾನುಭವಿಗಳು ಆಗಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುಮಾರು 50 ಸಾವಿರಕ್ಕೂ ಹೆಚ್ಚಿನ ಜನ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಆಗಮಿಸುವ ನಿರೀಕ್ಷೆಯಿದ್ದು, ಅವರ ಅನುಕೂಲಕ್ಕಾಗಿ ಎಲ್ಲ ರೀತಿಯ ಮೂಲಭೂತ ಸೌಕರ್ಯ, ಶೌಚಾಲಯ, ಕುಡಿಯುವ ನೀರು, ಮಧ್ಯಾಹ್ನದ ಉಪಹಾರ ಮತ್ತಿತರ ಸೌಲಭ್ಯಗಳನ್ನು ಒದಗಿಸಲು ಆಗತ್ಯ

ಗ್ಯಾರಂಟಿ ಯೋಜನೆ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶ/ ಸಜ್ಜುಗೊಳ್ಳುತ್ತಿದೆ ಶಿವಮೊಗ್ಗದ ಫ್ರೀಡಂ ಪಾರ್ಕ್ Read More »

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ/ ಸರ್ಕಾರದ ಅಧಿಕೃತ ಆದೇಶ

ಸಮಗ್ರ ನ್ಯೂಸ್; ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಇನ್ನು ಮುಂದೆ ಕಡ್ಡಾಯವಲ್ಲ ಎಂದು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕøತಿ ಸಚಿವಾಲಯವು ನಿರ್ದೇಶನವನ್ನು ಹೊರಡಿಸಿದ್ದು, ನಾಡಗೀತೆ ಹಾಡುವುದಕ್ಕೆ ಖಾಸಗಿ ಶಾಲೆಗಳಿಗೆ ಸರ್ಕಾರ ವಿನಾಯಿತಿ ನೀಡಿದೆ. ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆಯನ್ನು ಹಾಡಬಹುದು ಎಂದು ಆದೇಶ ನೀಡಲಾಗಿದೆ. ಈ ಹಿಂದೆ, ಎಲ್ಲಾ ಶಾಲೆಗಳು ತಮ್ಮ ದೈನಂದಿನ ಚಟುವಟಿಕೆಗಳನ್ನು ಪ್ರಾರಂಭಿಸುವ ಮೊದಲು ನಾಡಗೀತೆಯನ್ನು ಹಾಡಬೇಕಾಗಿತ್ತು. ಕಚೇರಿಗಳು, ಇಲಾಖೆಗಳು, ಅಧಿಕಾರಿಗಳು

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ/ ಸರ್ಕಾರದ ಅಧಿಕೃತ ಆದೇಶ Read More »

ಸೌಜನ್ಯ ಕೊಲೆ ಪ್ರಕರಣ ಮರುತನಿಖೆ ಅರ್ಜಿ‌ ವಿಚಾರಣೆ| ಸಿಬಿಐ ಗೆ ನೋಟೀಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಆರೋಪ ಪ್ರಕರಣದ ಮರು ತನಿಖೆಗೆ ಆದೇಶಿಸುವಂತೆ ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ಸಿಬಿಐಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ. ಈ ಸಂಬಂಧ ಮೃತ ಸೌಜನ್ಯ ತಂದೆಯೂ ಆದ ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಂ.ಆರ್‌.ಬಾಲಕೃಷ್ಣ,

ಸೌಜನ್ಯ ಕೊಲೆ ಪ್ರಕರಣ ಮರುತನಿಖೆ ಅರ್ಜಿ‌ ವಿಚಾರಣೆ| ಸಿಬಿಐ ಗೆ ನೋಟೀಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ Read More »

ಉದ್ಯೋಗ ಕೊಡಿಸೋದಾಗಿ ನಂಬಿಸಿ ವಂಚನೆ: ಖತರ್ನಾಕ್ ದಂಪತಿ ಅರೆಸ್ಟ್

ಸಮಗ್ರ ನ್ಯೂಸ್: ಇತ್ತೀಚೆಗೆ ನಿರುದ್ಯೋಗಿ‌ಗಳು ಹೆಚ್ಚು. ಕೆಲಸಕ್ಕಾಗಿ ಹುಡುಕಾಟ ನಡೆಸುವ ಯುವಕರನ್ನೇ ಟಾರ್ಗೆಟ್ ಮಾಡಿ ಉದ್ಯೋಗ ಕೊಡಿಸೋದಾಗಿ ಹೇಳಿ ವಂಚನೆ ಮಾಡುವ ಘಟನೆ ನಡೆಯುತ್ತಿರುತ್ತದೆ. ಇದೇ ವಿಚಾರವಾಗಿ ದಂಪತಿಯನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಪ್ರಕಾಶ್ ಹಾಗೂ ಮಧು ಜೋಡಿ, ಕೆಲಸಕ್ಕಾಗಿ ಅಲೆಯುವ ಯುವಕರನ್ನು ಹುಡುಕಿ ಸರ್ಕಾರಿ ನೌಕರಿ ಕೊಡಿಸೋದಾಗಿ ಕಾಗೆ ಹಾರಿಸುತ್ತಿದ್ದರು. ನಮಗೆ ದೊಡ್ಡ ದೊಡ್ಡ ರಾಜಕಾರಣಿಗಳ ಪರಿಚಯ ಇದೆ. ಅಲ್ಲದೆ ವಿವಿಧ‌ ಇಲಾಖೆಯ ಮುಖ್ಯಸ್ಥರು ಪರಿಚಯ ಇದ್ದಾರೆ. ಖಾಲಿ‌ ಇರುವ ಸರ್ಕಾರಿ‌ ಕೆಲಸ ಕೊಡಿಸೋದಾಗಿ‌ ಹೇಳಿ

ಉದ್ಯೋಗ ಕೊಡಿಸೋದಾಗಿ ನಂಬಿಸಿ ವಂಚನೆ: ಖತರ್ನಾಕ್ ದಂಪತಿ ಅರೆಸ್ಟ್ Read More »

ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ತಾಯಿ ಮಕ್ಕಳು| ಮಗು ಮೃತ್ಯು

ಸಮಗ್ರ ನ್ಯೂಸ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಳಿ ರಸ್ತೆ ದಾಟುತ್ತಿದ್ದ ತಾಯಿ ಹಾಗೂ ಇಬ್ಬರು ಮಕ್ಕಳಿಗೆ ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದವರ ಮೇಲೆ ಆಂಧ್ರ ಸಾರಿಗೆ ಬಸ್ ಹರಿದು ಮಗು ಸ್ಥಳದಲ್ಲೇ ಸಾವನ್ನಪ್ಪಿದು. ಮತ್ತಿಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಮತ್ತೊಂದು ಮಗು ಹಾಗೂ ತಾಯಿ ಸ್ಥಿತಿ ಗಂಭೀರವಾಗಿದೆ. ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸ್ಥಳಕ್ಕೆ ಹೊಸಕೋಟೆ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ತಾಯಿ ಮಕ್ಕಳು| ಮಗು ಮೃತ್ಯು Read More »