ರಾಜ್ಯ

ಮೈಸೂರಿನ ಹುಲಿಗೆ ಮಂಗಳೂರಿನಲ್ಲಿ ಪೊಲೀಸರ ಕಾಟ| ಟಿಪ್ಪು ಸುಲ್ತಾನ್ ಕಟೌಟ್ ತೆರವಿಗೆ ನೋಟೀಸ್ ಜಾರಿ

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಉಳ್ಳಾಲ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ನಡೆಯುವ ಡಿವೈಎಫ್‌ಐ ರಾಜ್ಯ ಸಮ್ಮೇಳನದ ಪ್ರಯುಕ್ತ ಹರೇಕಳ ದಲ್ಲಿ ಅಳವಡಿಸಲಾದ ಟಿಪ್ಪು ಸುಲ್ತಾನ್ ಕಟೌಟ್ ತೆರವುಗೊಳಿಸಬೇಕು ಎಂದು ಕೊಣಾಜೆ ಪೊಲೀಸರು ನೋಟಿಸ್ ನೀಡಿದ್ದಾರೆ. ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಈ ಕಟೌಟ್ ತೆರವುಗೊಳಿಸಬೇಕು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿವೈಎಫ್‌ಐ ದ.ಕ.ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್ ‘ನಾಡಿನ ಆದರ್ಶ ಪುರುಷರ, ಸ್ವಾತಂತ್ರ್ಯ ಸೇನಾನಿಗಳ, ಸಮಾಜ ಸುಧಾರಕರ ಪ್ರತಿಮೆ, ಫ್ಲೆಕ್ಸ್ ಹಾಕಲಾಗಿದೆ. ಹರೇಕಳ ಕಚೇರಿ ಬಳಿ ಕಾರ್ಯಕರ್ತರು

ಮೈಸೂರಿನ ಹುಲಿಗೆ ಮಂಗಳೂರಿನಲ್ಲಿ ಪೊಲೀಸರ ಕಾಟ| ಟಿಪ್ಪು ಸುಲ್ತಾನ್ ಕಟೌಟ್ ತೆರವಿಗೆ ನೋಟೀಸ್ ಜಾರಿ Read More »

ವಿದ್ಯಾರ್ಥಿನಿಯನ್ನು ಚುಡಾಯಿಸಿದಕ್ಕೆ ವಿದ್ಯಾರ್ಥಿಗೆ ಥಳಿತ

ಸಮಗ್ರ ನ್ಯೂಸ್: ಸರ್ಕಾರಿ ಬಾಲಕಿಯರ ಪ್ರೌಢಶಾಲೆ ವಿದ್ಯಾರ್ಥಿನಿಯನ್ನು ಚುಡಾಯಿಸಿದಕ್ಕೆ ಪಿಯು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗೆ ಸಾರ್ವಜನಿಕರು ಥಳಿಸಿದ ಘಟನೆ ಚಿಕ್ಕಬಳ್ಳಾಪುರದ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ ವಾಪಸಂದ್ರದಲ್ಲಿರುವ ಬಾಲಕಿಯರ ಪ್ರೌಢಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿನಿಯನ್ನು ಪಿಯು ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಚುಡಾಯಿಸಿದ್ದಾನೆ. ಇದರಿಂದ ರೊಚ್ಚಿಗೆದ್ದ ಸಾರ್ವಜನಿಕರು ಆತನನ್ನು ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿರುವ ಗೋಡೌನ್​ನಲ್ಲಿ ಹಾಕಿ ಹಿಗ್ಗಾಮುಗ್ಗವಾಗಿ ಥಳಿಸಿದ್ದಾರೆ. ಸಾರ್ವಜನಿಕರೊಂದಿಗೆ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಶಿಕ್ಷಕ ಮಹಂತೇಶ್ ಕೂಡ ವಿದ್ಯಾರ್ಥಿಗೆ ಥಳಿಸಿದ್ದಾರೆ.

ವಿದ್ಯಾರ್ಥಿನಿಯನ್ನು ಚುಡಾಯಿಸಿದಕ್ಕೆ ವಿದ್ಯಾರ್ಥಿಗೆ ಥಳಿತ Read More »

ಬಿಎಂಟಿಸಿ ನೌಕರರಿಗೂ ಅಪಘಾತ ವಿಮೆ ನೀಡಲು ಮುಂದಾದ ಸರ್ಕಾರ

ಸಮಗ್ರ ನ್ಯೂಸ್: ಇನ್ನೂ ಮುಂದೆ ಕೆಎಸ್​ಆರ್​ಟಿಸಿ ಮಾದರಿಯಲ್ಲಿಯೇ ಬಿಎಂಟಿಸಿ ನೌಕರರಿಗೂ ಒಂದು ಕೋಟಿ ರುಪಾಯಿ ಅಪಘಾತ ವಿಮೆ ನೀಡಲು ಸರ್ಕಾರ ಮುಂದಾಗಿದ್ದು, ಇಂದಿನಿಂದಲೇ ಈ ವಿಮಾ ಸೌಲಭ್ಯ ಜಾರಿಯಾಗಲಿದೆ. ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸೂಚನೆ ಮೇರೆಗೆ ಈ ವಿಮಾ ಸೌಲಭ್ಯ ಜಾರಿಯಾಗಿದ್ದು, ಬಿಎಂಟಿಸಿ‌ಯ 28 ಸಾವಿರ ನೌಕರರ ಕುಟುಂಬಗಳಿಗೆ ಸೌಲಭ್ಯ ದೊರೆಯಲಿದೆ. ಬಿಎಂಟಿಸಿ ಎಂಡಿ ರಾಮಚಂದ್ರನ್. ಆರ್, ಕೆಎಸ್​ಆರ್​ಟಿಸಿ ನೌಕರರು ಸಾವನ್ನಪ್ಪಿದರೆ ಮಾತ್ರ ಒಂದು ಕೋಟಿ ರುಪಾಯಿ ಪರಿಹಾರ ನೀಡಲಾಗುತ್ತಿತ್ತು. ಬಿಎಂಟಿಸಿ ನೌಕರರಿಗೆ ಕೇವಲ ಮೂರು

ಬಿಎಂಟಿಸಿ ನೌಕರರಿಗೂ ಅಪಘಾತ ವಿಮೆ ನೀಡಲು ಮುಂದಾದ ಸರ್ಕಾರ Read More »

ವಿಧಾನಸೌಧದಲ್ಲೇ ಮಧ್ಯಾಹ್ನದ ಬಿಸಿಯೂಟ/ ಕಲಾಪದ ಹಾಜರಾತಿಗೆ ಹೊಸ ಸೂತ್ರ

ಸಮಗ್ರ ನ್ಯೂಸ್: ಶಾಸಕರಿಗೆ ಮಧ್ಯಾಹ್ನದ ಬಿಸಿಯೂಟವನ್ನು ವಿಧಾನಸೌಧದಲ್ಲೇ ನೀಡಲಾಗುವುದು ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ. ಬೆಳಗಿನ ಉಪಹಾರದ ವ್ಯವಸ್ಥೆಯನ್ನು ಈಗಾಗಲೇ ಮಾಡಲಾಗಿದ್ದು, ಇದರ ಜೊತೆಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನೂ ಉಚಿತವಾಗಿ ಮಾಡಲಾಗುತ್ತದೆ ಎಂದಿದ್ದಾರೆ. ಊಟದ ನಂತರ ಶಾಸಕರು ಸರಿಯಾದ ಸಮಯಕ್ಕೆ ಕಲಾಪಕ್ಕೆ ಆಗಮಿಸುತ್ತಿಲ್ಲ. ಹೀಗಾಗಿ ಮಧ್ಯಾಹ್ನದ ಕಲಾಪ ವಿಳಂಬವಾಗಬಾರದೆಂದು ಸ್ಪೀಕರ್ ಈ ಕ್ರಮ ಕೈಗೊಂಡಿದ್ದಾರೆ.

ವಿಧಾನಸೌಧದಲ್ಲೇ ಮಧ್ಯಾಹ್ನದ ಬಿಸಿಯೂಟ/ ಕಲಾಪದ ಹಾಜರಾತಿಗೆ ಹೊಸ ಸೂತ್ರ Read More »

ಅನಾರೋಗ್ಯ ಹಿನ್ನೆಲೆ ವಿಧಾನಸೌಧದಿಂದ ಕಾವೇರಿ ನಿವಾಸಕ್ಕೆ ತೆರಳಿದ್ದ ಸಿಎಂ

ಸಮಗ್ರ ನ್ಯೂಸ್: ಸಿಎಂ ಸಿದ್ದರಾಮಯ್ಯ ಅವರು ಅನಾರೋಗ್ಯ ಹಿನ್ನೆಲೆ ವಿಶ್ರಾಂತಿಗಾಗಿ ವಿಧಾನಸೌಧದಿಂದ ಕಾವೇರಿ ನಿವಾಸಕ್ಕೆ ತೆರಳಿದ್ದಾರೆ. ಬಜೆಟ್ ಮಂಡನೆ ಬಳಿಕ ಎರಡು ದಿನ ನಿರಂತರವಾಗಿ ಜಿಲ್ಲಾ ಪ್ರವಾಸದಲ್ಲಿದ್ದ ಸಿಎಂ ಸಿದ್ದರಾಮಯ್ಯನವರಿಗೆ ಸಣ್ಣ ಪ್ರಮಾಣದಲ್ಲಿ ಅನಾರೋಗ್ಯ ಉಂಟಾಗಿತ್ತು ಎನ್ನಲಾಗಿದೆ. ಹೀಗಾಗಿ ವಿಶ್ರಾಂತಿ ಪಡೆಯಲು ಸದ್ಯ ಕಾವೇರಿ ನಿವಾಸಕ್ಕೆ ತೆರಳಿದ್ದಾರೆ. ಫೆ.16 ರಂದು ಸಿಎಂ ಸಿದ್ದರಾಮಯ್ಯ ಕರ್ನಾಟಕ ಬಜೆಟ್ ಮಂಡನೆ ಮಾಡಿದ್ದರು ಇದಾದ ಬಳಿಕ ನಿರಂತರವಾಗಿ ಜಿಲ್ಲಾ ಪ್ರವಾಸಗಳನ್ನು ಕೈಗೊಂಡಿದ್ದ ಸಿಎಂ ಸಿದ್ದರಾಮಯ್ಯನವರಿಗೆ ಆರೋಗ್ಯ ಸಮಸ್ಯೆ ಉಂಟಾಗಿದೆ. 3 ಗಂಟೆ

ಅನಾರೋಗ್ಯ ಹಿನ್ನೆಲೆ ವಿಧಾನಸೌಧದಿಂದ ಕಾವೇರಿ ನಿವಾಸಕ್ಕೆ ತೆರಳಿದ್ದ ಸಿಎಂ Read More »

ಬೆಂಗಳೂರು: ಹೆತ್ತವರಿಗೆ ತಿಳಿಯದಂತೆ 25 ವರ್ಷದ ಯುವಕನೊಂದಿಗೆ ಅಪ್ರಾಪ್ತ ಬಾಲಕಿಯ ವಿವಾಹ

ಸಮಗ್ರ ನ್ಯೂಸ್: 25 ವರ್ಷದ ಯುವಕನೊಂದಿಗೆ 14 ವರ್ಷದ ಬಾಲಕಿಯನ್ನು ಆಕೆಯ ಪೋಷಕರಿಗೆ ಹೇಳದೆ ಸಂಬಂಧಿಕರು ಮದುವೆ ಮಾಡಿಸಿರುವ ಘಟನೆಯೊಂದು ಬೆಂಗಳೂರು ನಗರದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಓರ್ವನನ್ನು ಬಂಧನಕ್ಕೊಳಪಡಿಸಿದ್ದಾರೆ. ಫೆ.15 ರಂದು 25 ವರ್ಷದ ಯುವಕನೊಂದಿಗೆ ಬಾಲಕಿಗೆ ಅಜ್ಜಿ, ದೊಡ್ಡಪ್ಪ-ದೊಡ್ಡಮ್ಮ ಇವರೆಲ್ಲ ಸೇರಿ ತಂದೆ-ತಾಯಿಯವರಿಗೆ ತಿಳಿಯದಂತೆ ಮದುವೆ ಮಾಡಿಸಿದ್ದಾರೆ. “ಮಗಳು ಇನ್ನೂ ಅಪ್ರಾಪ್ತೆಯಾಗಿದ್ದಾಳೆ. ಅವಳನ್ನು ಪುಸಲಾಯಿಸಿ ಮದುವೆ ಮಾಡಿಸಿದ್ದಾರೆ. ಕೈವಾರದಲಿನ ಯಲಮ್ಮ ದೇವಾಲಯದಲ್ಲಿ ತಂದೆ ತಾಯಿಗೆ ಗೊತ್ತಿಲ್ಲದೆ ಮದುವೆ ಮಾಡಲಾಗಿದೆ” ಎಂದು ಬಾಲಕಿ ತಾಯಿ

ಬೆಂಗಳೂರು: ಹೆತ್ತವರಿಗೆ ತಿಳಿಯದಂತೆ 25 ವರ್ಷದ ಯುವಕನೊಂದಿಗೆ ಅಪ್ರಾಪ್ತ ಬಾಲಕಿಯ ವಿವಾಹ Read More »

ನಿದ್ರೆ ತಪ್ಪಿಸಲು ‘ಉಗ್ರ’ ಮಾತ್ರೆ ಸೇವಿಸಿದ್ದ ವಿದ್ಯಾರ್ಥಿನಿ| ಆತಂಕಕಾರಿ ಅಂಶ ಬಯಲು

ಸಮಗ್ರ ನ್ಯೂಸ್: ಪರೀಕ್ಷೆ ವೇಳೆ ನಿದ್ರೆ ತಪ್ಪಿಸಲು ಮಕ್ಕಳು ಉಗ್ರರು ಸೇವಿಸುತ್ತಿದ್ದ ಮಾತ್ರೆಗಳ ಮೊರೆ ಹೋಗುತ್ತಿದ್ದಾರೆ ಎಂಬ ಶಾಕಿಂಗ್ ಮಾಹಿತಿ ಬಯಲಾಗಿದೆ. ಪರೀಕ್ಷೆಯ ಸಮಯದಲ್ಲಿ ಹೆಚ್ಚು ನಿದ್ರೆ ಬಾರದೇ ಇರಲಿ ಎಂದು ವಿದ್ಯಾರ್ಥಿಗಳು ಉಗ್ರರು ನುಂಗುವಂತಹ ಮಾತ್ರೆಗಳನ್ನು ಸೇವಿಸುತ್ತಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. 10ನೇ ತರಗತಿ ಪರೀಕ್ಷೆಗೆ ಸಿದ್ದತೆ ನಡೆಸುತ್ತಿದ್ದ ಉತ್ತರ ಪ್ರದೇಶದ ವಿದ್ಯಾರ್ಥಿನಿಯೊಬ್ಬಳು ಇತ್ತೀಚೆಗೆ ಏಕಾಏಕಿ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಳು. ನಂತರ ಪರೀಕ್ಷೆ ನಡೆಸಿದ ವೈದ್ಯರಿಗೆ ಅಚ್ಚರಿ ಕಾದಿತ್ತು, ಆಕೆಯ ಮೆದುಳಿನಲ್ಲಿ ರಕ್ತ

ನಿದ್ರೆ ತಪ್ಪಿಸಲು ‘ಉಗ್ರ’ ಮಾತ್ರೆ ಸೇವಿಸಿದ್ದ ವಿದ್ಯಾರ್ಥಿನಿ| ಆತಂಕಕಾರಿ ಅಂಶ ಬಯಲು Read More »

ಕೊಯನಾಡು ಸಮೀಪ ಕೆಎಸ್ಆರ್ ಟಿಸಿ ಬಸ್ ಕಾರು ನಡುವೆ ಅಪಘಾತ

ಸಮಗ್ರ ನ್ಯೂಸ್: ಫೆ. 18, ಕೊಯನಾಡು ಅರಣ್ಯ ಕಚೇರಿ ಮುಂಭಾಗ ಕಾರು ಮತ್ತು KSRTC ಬಸ್ ನಡುವೆ ಅಪಘಾತ ಸಂಭವಿಸಿದೆ. ಮಡಿಕೇರಿಯಿಂದ ಸುಳ್ಯ ಕಡೆ ತೆರಳುತ್ತಿದ್ದ KSRTC ಬಸ್ ಲಾರಿಯನ್ನು ಓವರ್ ಟೆಕ್ ಮಾಡುವ ಭರದಲ್ಲಿ ಸುಳ್ಯ ಕಡೆಯಿಂದ ಮೈಸೂರು ಕಡೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರ್ ಜಖಂಗೊಂಡಿದೆ. ಸ್ಥಳಕ್ಕೆ ಸಂಪಾಜೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರೆ.

ಕೊಯನಾಡು ಸಮೀಪ ಕೆಎಸ್ಆರ್ ಟಿಸಿ ಬಸ್ ಕಾರು ನಡುವೆ ಅಪಘಾತ Read More »

ಕುಶಾಲನಗರದಲ್ಲಿ ಕೊಲೆಯಾದ ಶಾದೀದ್ ಮನೆಗೆ ಶಾಸಕ ಮಂಥರ್ ಗೌಡ ಭೇಟಿ

ಸಮಗ್ರ ನ್ಯೂಸ್: ಇತ್ತೀಚೆಗೆ ಕುಶಾಲನಗರ ಶೋರೂಮ್ ಮಾಲಿಕನಿಂದ ಹತ್ಯೆಯಾದ ಶದೀದ್ ಮನೆಗೆ ಮಡಿಕೇರಿ ಕ್ಷೇತ್ರದ ಶಾಸಕ ಮoಥರ್ ಗೌಡ ಬೇಟಿ ನೀಡಿದರು. ಮಡಿಕೇರಿ ಗಣಪತಿ ಬೀದಿಯಲ್ಲಿನ ಮನೆಗೆ ಭೇಟಿ ನೀಡಿದ ಶಾಸಕರು ಮೃತ ಶದೀದ್ ಕುಟುಂಬಕ್ಕೆ ಸಾಂತ್ವನ ನೀಡಿದರು. ಇದೇ ಸಂದರ್ಭದ ಮಡಿಕೇರಿ ಮುಸ್ಲಿಂ ಒಕ್ಕೂಟದ ವತಿಯಿಂದ ಮೃತನ ಕುಟುಂಬಕ್ಕೆ ಪರಿಹಾರ ಕೋರಿ ಮನವಿಯೊಂದನ್ನು ಸಲ್ಲಿಸಲಾಯಿತು.ಶದೀದ್‌ ಕುಟುಂಬಕ್ಕೆ ರೂ.10 ಲಕ್ಷ ಪರಿಹಾರ, ಕುಟುಂಬದ ಒಬ್ಬ ಸದಸ್ಯನಿಗೆ ಸರ್ಕಾರಿ ಉದ್ಯೋಗ, ಸರ್ಕಾರಿ ಸೈಟ್, ಸರ್ಕಾರಿ ಆಸ್ಪತ್ರೆ ಯಲ್ಲಿ ಪ್ರಾಥಮಿಕ

ಕುಶಾಲನಗರದಲ್ಲಿ ಕೊಲೆಯಾದ ಶಾದೀದ್ ಮನೆಗೆ ಶಾಸಕ ಮಂಥರ್ ಗೌಡ ಭೇಟಿ Read More »

ಸಂಸದ ಡಿ.ಕೆ ಸುರೇಶ್ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ಭಯಾನಕ ಸುಂಟರಗಾಳಿ: ಟೆಂಟ್ ಹೌಸ್ ಚೆಲ್ಲಾಪಿಲ್ಲಿ

ಸಮಗ್ರ ನ್ಯೂಸ್: ಸಂಸದ ಡಿ.ಕೆ ಸುರೇಶ್ ಅವರು ಕುಣಿಗಲ್ ಪಟ್ಟಣದ ಜಿ.ಕೆ.ಬಿ.ಎಂ.ಎಸ್ ಮೈದಾನದಲ್ಲಿ ಉದ್ಯೋಗ ಮೇಳ ಆಯೋಜಿಸಿದರು. ಈ ಕಾರ್ಯಕ್ರಮದಲ್ಲಿ ಭಯಾನಕ ಸುಂಟರಗಾಳಿ ಬೀಸಿದ ರಭಸಕ್ಕೆ ಭಾನೆತ್ತರಕ್ಕೆ ಹಾರಿ ಟೆಂಟ್ ಹೌಸ್ ಚೆಲ್ಲಾಪಿಲ್ಲಿಯಾಗಿರುವಂತಹ ಘಟನೆ ನಡೆದಿದೆ. ಕುಣಿಗಲ್ ಪಟ್ಟಣದ ಜಿ.ಕೆ.ಬಿ.ಎಂ.ಎಸ್ ಮೈದಾನದಲ್ಲಿ ಡಿಕೆಎಸ್ ಚಾರಿಟೇಬಲ್ ಟ್ರಸ್ಟ್ ಹಾಗೂ ಅಕ್ಷರ ಫೌಂಡೇಶನ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಹಕಾರದೊಂದಿಗೆ ನಿನ್ನೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಭಯಾನಕ ಸುಂಟರಗಾಳಿ ಬೀಸಿದೆ. ಘಟನೆಯಿಂದ ಯಾರಿಗೂ ಹಾನಿ ಸಂಭವಿಸಿಲ್ಲ. ಸಂಸದ ಡಿ.ಕೆ ಸುರೇಶ್

ಸಂಸದ ಡಿ.ಕೆ ಸುರೇಶ್ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ಭಯಾನಕ ಸುಂಟರಗಾಳಿ: ಟೆಂಟ್ ಹೌಸ್ ಚೆಲ್ಲಾಪಿಲ್ಲಿ Read More »