ರಾಜ್ಯ

ಸಂಪಾಜೆಯ ಮನೆಯೊಂದರಿಂದ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದ ಕಳ್ಳರು ಕೊಡಗಿನಲ್ಲಿ ಬಲೆಗೆ..!! ತ್ರಿಮೂರ್ತಿ ಕಳ್ಳರಿಗಿದೆಯೇ ಕಲ್ಲುಗುಂಡಿಯ ವ್ಯಕ್ತಿಯ ನಂಟು..?

ಸಮಗ್ರ ನ್ಯೂಸ್: ಕೊಡಗು ಸಂಪಾಜೆಯ ಮನೆಯೊಂದರಿಂದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದ ಕಳ್ಳರ ತಂಡವನ್ನು ಹಿಡಿದು ಮಡಿಕೇರಿ ಗ್ರಾಮಾಂತರ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಬಂಧಿತರನ್ನು ಬಲಮುರಿ ನಿವಾಸಿ ಸುದೀಪ್ ಟಿ.ಎಸ್.(23), ಎಂ.ಬಾಡಗ ನಿವಾಸಿ ನಿಶಾಂತ್ ಎಂ.ಎಂ. (27) ಹಾಗೂ ನಾಪೋಕ್ಲು ಹಳೇ ತಾಲ್ಲೂಕು ನಿವಾಸಿ ಇಬ್ರಾಹಿಂ (29) ಎಂದು ಗುರುತಿಸಲಾಗಿದೆ. ಕೊಡಗು ಸಂಪಾಜೆಯ ನಿವಾಸಿ ವಿಜಯ್ ಕುಮಾರ್ ಕೆ.ಕೆ. ಎಂಬುವವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರ ತಂಡವೊಂದು ನುಗ್ಗಿತ್ತು. 47 ಗ್ರಾಂ ತೂಕದ ಚಿನ್ನಾಭರಣ

ಸಂಪಾಜೆಯ ಮನೆಯೊಂದರಿಂದ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದ ಕಳ್ಳರು ಕೊಡಗಿನಲ್ಲಿ ಬಲೆಗೆ..!! ತ್ರಿಮೂರ್ತಿ ಕಳ್ಳರಿಗಿದೆಯೇ ಕಲ್ಲುಗುಂಡಿಯ ವ್ಯಕ್ತಿಯ ನಂಟು..? Read More »

ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ…ಮೂವರು ಕಾರ್ಮಿಕರು ದುರ್ಮರಣ

ಸಮಗ್ರ ನ್ಯೂಸ್: ಇತ್ತೀಚೆಗೆ ಅಗ್ನಿ ಅವಘಡಗಳು ಹೆಚ್ಚುತ್ತಲೇ ಇದೆ. ದಿನ ಇಂತಹ ಸುದ್ದಿಗಳು ಬರುತ್ತದೆ. ಆದರೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿಲ್ಲವ ಎಂಬ ಸಂಶಯ ಮೂಡುತ್ತಿದೆ. ಹೌದು ಇಂದು ಸಹ ಇಂತಹದೆ ಘಟನೆ ನಡೆದಿದೆ. ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡ ದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ದುರಂತ ಸಂಭವಿಸಿದೆ. ಬೆಂಕಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದು, ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪರ್ಫ್ಯೂಮ್ ಕೆಮಿಕಲ್‌ ಸ್ಫೋಟಗೊಂಡ ಪರಿಣಾಮ ಆಕಸ್ಮಿಕ

ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ…ಮೂವರು ಕಾರ್ಮಿಕರು ದುರ್ಮರಣ Read More »

ರೈತರಲ್ಲಿ ಆತಂಕ ಮೂಡಿಸಿದ ಕಾಳುಮೆಣಸು ದರ ಕುಸಿತ…!

ಸಮಗ್ರ ನ್ಯೂಸ್: ಕಾಳು ಮೆಣಸನ್ನು ಕರಾವಳಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚಾಗಿ ಬೆಳೆಸುವಂತಹ ಕೃಷಿ. ಹಲವು ಬಾರಿ ಅಡಿಕೆಗೆ ದರ ಕುಸಿತ ಕಂಡಂತೆ ಕಾಳು ಮೆಣಸಿನ ದರ ಹೆಚ್ಚಾಗುತ್ತಿತ್ತು. ಆದರೆ ಈ ಬಾರಿ ಈ ಎರಡು ಬೆಳೆಯ ದರವು ಕೊಂಚ ಕುಸಿತ ಕಂಡಿದೆ. ಒಂದು ವಾರದ ಹಿಂದೆ ಪ್ರತಿ ಕ್ವಿಂಟಲ್‌ಗೆ 60 ಸಾವಿರ ಅಸುಪಾಸಿನಲ್ಲಿದ್ದ ದರವು ಈಗ ₹54 ಸಾವಿರಕ್ಕೆ ಇಳಿಕೆಯಾಗಿದೆ. ಎರಡು ವರ್ಷಗಳಿಂದ ಸ್ಥಿರವಾಗಿದ್ದ ದರ ಹಂಗಾಮಿನ ಆರಂಭದಲ್ಲೇ ಇಳಿಮುಖವಾಗಿದೆ. ಇದರಿಂದ ಬೆಳೆಗಾರರಿಗೆ

ರೈತರಲ್ಲಿ ಆತಂಕ ಮೂಡಿಸಿದ ಕಾಳುಮೆಣಸು ದರ ಕುಸಿತ…! Read More »

ಮೈಸೂರು ಲೋಕಸಭೆಗೆ ಡಾಲಿ ಧನಂಜಯ್‌ ಅಭ್ಯರ್ಥಿ.?| ಈ ಬಗ್ಗೆ ಸಿಎಂ ಸಿದ್ ಹೇಳಿದ್ದೇನು?

ಸಮಗ್ರ ನ್ಯೂಸ್: ಸಿಎಂ ತವರು ಜಿಲ್ಲೆಯಾದ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ‌ ಖ್ಯಾತ ಚಿತ್ರ ನಟ ಡಾಲಿ ಧನಂಜಯ (Daali Dhananjay) ಅವರನ್ನು ಕಣಕ್ಕಿಳಿಸಲು ತೆರೆಮರೆ ಹಿಂದೆ ಕಸರತ್ತು ನಡೆಯುತ್ತಿದೆ ಎಂದೇ ಹೇಳಲಾಗುತ್ತಿದೆ. ಆದರೆ, ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡಾಲಿ ಧನಂಜಯ್‌ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಸ್ಪರ್ಧೆ ವಿಚಾರ ಪ್ರಸ್ತಾಪವೇ ಆಗಿಲ್ಲ. ಚರ್ಚೆಯೂ ಆಗಿಲ್ಲ ಎಂದು

ಮೈಸೂರು ಲೋಕಸಭೆಗೆ ಡಾಲಿ ಧನಂಜಯ್‌ ಅಭ್ಯರ್ಥಿ.?| ಈ ಬಗ್ಗೆ ಸಿಎಂ ಸಿದ್ ಹೇಳಿದ್ದೇನು? Read More »

ಕಾಡು ಪ್ರಾಣಿಗಳ ಭಾಗಗಳನ್ನ ಹಿಂತಿರುಗಿಸಲು ಗಡುವು ನೀಡಿದ ಸರ್ಕಾರ| ಕೊಡಗಿನವರಲ್ಲಿ ಸೃಷ್ಟಿಯಾದ ಆತಂಕ

ಸಮಗ್ರ ನ್ಯೂಸ್: ಹುಲಿ ಉಗುರು ಕೊಂಬುಗಳು ಸೇರಿದಂತೆ ಕಾಡು ಪ್ರಾಣಿಗಳ ದೇಹದ ವಿವಿಧ ಭಾಗಗಳನ್ನ ಅರಣ್ಯ ಇಲಾಖೆಗೆ ಹಿಂತಿರುಗಿಸಲು ಸರ್ಕಾರ ಈಗಾಗಲೆ ಮೂರು ತಿಂಗಳ ಗಡುವು ನೀಡಿದೆ. ಆದರೆ, ಈ ಗಡುವು ಕೊಡಗು ಜಿಲ್ಲೆಯಲ್ಲಿ ತಲ್ಲಣ ಸೃಷ್ಟಿಸಿದೆ. ಜಿಲ್ಲೆಯ ನೂರಾರು ದೇವಸ್ಥಾನಗಳಲ್ಲಿ ನೂರಾರು ವರ್ಷಗಳಿಂದ ಜಿಂಕೆ, ಕಡವೆ ಕೊಂಬುಗಳು, ಚಮರಿ ಮೃಗದ ಬಾಲ ನವಿಲು ಗರಿಗಳನ್ನ ಧಾರ್ಮಿಕ ಉತ್ಸವಗಳಲ್ಲಿ ಬಳಸಲಾಗುತ್ತಿದೆ. ಇವುಗಳನ್ನ ಹಿಂತಿರುಗಿಸಲು ಆಗುವುದಿಲ್ಲ. ಹಾಗಾಗಿ ಸರ್ಕಾರ ವಿನಾಯಿತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಕೊಡಗು ಜಿಲ್ಲೆಯ

ಕಾಡು ಪ್ರಾಣಿಗಳ ಭಾಗಗಳನ್ನ ಹಿಂತಿರುಗಿಸಲು ಗಡುವು ನೀಡಿದ ಸರ್ಕಾರ| ಕೊಡಗಿನವರಲ್ಲಿ ಸೃಷ್ಟಿಯಾದ ಆತಂಕ Read More »

ಬಿಗ್ ಬಾಸ್ ಮಾಜಿ ಸ್ಪರ್ಧಿಗೆ ಶಾಕ್| ತನಿಖೆ ನಡೆಸಿದ ಪೊಲೀಸರು

ಸಮಗ್ರ ನ್ಯೂಸ್: ಬಿಗ್ ಬಾಸ್ ಮಾಜಿ ಸ್ಪರ್ಧಿಗೆ ಶಾಕ್ ಎದುರಾಗಿದೆ. ತನ್ನ ಮೇಲೆ ಲಾರಿ ಚಾಲಕ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿ ಮಾಜಿ ಬಿಗ್ ಬಾಸ್ ಸ್ಪರ್ಧಿ ಆದಂ ಪಾಷಾ ಎಲೆಕ್ಟ್ರಾನಿಕ್ ಸಿಟಿ ಠಾಣೆಗೆ ದೂರು ನೀಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಸಿಸಿಟಿವಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಆದಂ ಪಾಷಾ ಕಳ್ಳಾಟ ಬಯಲಾಗಿದೆ. ಸುಳ್ಳು ಪ್ರಕರಣ ದಾಖಲಿಸಿದ ಆದಂ ಪಾಷಾ ವಿರುದ್ಧ ಇದೀಗ ಪೊಲೀಸರು ಕ್ರಮಕೈಗೊಳ್ಳಲು

ಬಿಗ್ ಬಾಸ್ ಮಾಜಿ ಸ್ಪರ್ಧಿಗೆ ಶಾಕ್| ತನಿಖೆ ನಡೆಸಿದ ಪೊಲೀಸರು Read More »

ರಾಮನಗರದ ರೇಷ್ಮೆ ನೂಲು ಕಾರ್ಖಾನೆಯಲ್ಲಿ‌ ಬಾಯ್ಲರ್ ಸ್ಫೋಟ| ಓರ್ವ ಸಾವು

ಸಮಗ್ರ ನ್ಯೂಸ್: ರಾಮನಗರದ ರೇಷ್ಮೆ ನೂಲು ಕಾರ್ಖಾನೆಯಲ್ಲಿ‌ ಬಾಯ್ಲರ್ ಸ್ಫೋಟಗೊಂಡು ಓರ್ವ ಕಾರ್ಮಿಕ‌ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ರಾಮನಗರದ ಟಿಪ್ಪುಬಡಾವಣೆಯ ಕಾರ್ಖಾನೆಯಲ್ಲಿ‌ ಈ ಘಟನೆ ಸಂಭವಿಸಿದೆ. ಸನಾವುಲ್ಲಾ ಖಾನ್(63)‌ ಮೃತ ವ್ಯಕ್ತಿ. ಬಾಯ್ಲರ್‌ಗೆ ಸೌದೆ ಹಾಕುವಾಗ ಏಕಾಏಕಿ ಸ್ಫೋಟಗೊಂಡು ಅನಾಹುತ ಸಂಭವಿಸಿದೆ. ಕಾರ್ಖಾನೆಯಲ್ಲಿ‌ 10ಕ್ಕೂ‌ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅದೃಷ್ಟವಶಾತ್‌ ಉಳಿದ ಕಾರ್ಮಿಕರು ದೂರವಿದ್ದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಈ ಕಾರ್ಖಾನೆ ಅಕ್ರಂ ಪಾಷಾ ಎಂಬುವವರಿಗೆ ಸೇರಿದ್ದು, ಅವರ

ರಾಮನಗರದ ರೇಷ್ಮೆ ನೂಲು ಕಾರ್ಖಾನೆಯಲ್ಲಿ‌ ಬಾಯ್ಲರ್ ಸ್ಫೋಟ| ಓರ್ವ ಸಾವು Read More »

ಪ್ರತಿಷ್ಠಿತ ಕಾರ್ ಶೋ ರೂಂ ಗೆ ಬೆಂಕಿ: ಕೋಟ್ಯಂತರ ರುಪಾಯಿ ನಷ್ಟ

ಸಮಗ್ರ ನ್ಯೂಸ್: ಶಿವಮೊಗ್ಗದ ಪ್ರತಿಷ್ಠಿತ ಕಾರ್ ಶೋ ರೂಂ ಗೆ ಬೆಂಕಿ ಬಿದ್ದು ಕೋಟಿ ಕೋಟಿಗೂ ಅಧಿಕ ಕಾರ್​ಗಳು ಬೆಂಕಿಗೆ ಆಹುತಿಯಾದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಸುಮಾರು 9.30 ಆಸುಪಾಸಿನಲ್ಲಿ ನಗರದ ಶಂಕರ ಮಠದ ರಸ್ತೆಯ ರಾಹುಲ್ ಹುಂಡೈ ಕಾರ್ ಶೋ ರೂಂನಲ್ಲಿ ಆಕಸ್ಮಿಕ ಬೆಂಕಿ ಕಂಡು ಬಂದಿದೆ. ನೋಡು ನೋಡುತ್ತಿದ್ದಂತೆ ಶೋಂ ನಲ್ಲಿ ಗ್ರಾಹಕರಿಗೆ ನೋಡಲು ಇಟ್ಟಿದ್ದ ಒಳಗೆ ಎರಡು ಕಾರ್​ಗಳು ಬೆಂಕಿಗೆ ಆಹುತಿಯಾಗಿವೆ. ಇನ್ನೂ ಪಕ್ಕದಲ್ಲಿ ಟಾಟಾ ಕಾರ್ ಶೋ ರೂಂ ಇದೆ.

ಪ್ರತಿಷ್ಠಿತ ಕಾರ್ ಶೋ ರೂಂ ಗೆ ಬೆಂಕಿ: ಕೋಟ್ಯಂತರ ರುಪಾಯಿ ನಷ್ಟ Read More »

ಶಾಲಾ ಬಸ್ ಪಲ್ಟಿ| 25ಕ್ಕೂ ಅಧಿಕ ಮಕ್ಕಳಿಗೆ ಗಾಯ

ಸಮಗ್ರ ನ್ಯೂಸ್: ಶಾಲಾ ಬಸ್ ಪಲ್ಟಿಯಾಗಿ 25 ಕ್ಕೂ ಅಧಿಕ ಮಕ್ಕಳಿಗೆ ಗಾಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಬಿಳಕಿ ಗ್ರಾಮದ ಬಳಿ ನಡೆದಿದೆ. ಭದ್ರಾವತಿಯ ಸ್ಫೂರ್ತಿ ಇಂಟರ್ ನ್ಯಾಷನಲ್ ಶಾಲೆಗೆ ಸೇರಿದ ಶಾಲಾ ಬಸ್ ಇದಾಗಿದ್ದು, ಎದುರುಗಡೆಯಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ಕೊಡಲು ಹೋಗಿ ಪಲ್ಟಿಯಾಗಿದೆ. ಗಾಯಾಳು ಮಕ್ಕಳಿಗೆ ಭದ್ರಾವತಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಶಾಲಾ ಬಸ್ ಪಲ್ಟಿ| 25ಕ್ಕೂ ಅಧಿಕ ಮಕ್ಕಳಿಗೆ ಗಾಯ Read More »

“ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ” ಎಂಬ ವಿವಾದಾತ್ಮಕ ಪೋಸ್ಟರ್ ಪ್ರದರ್ಶನ ಮಾಡಿದ ಹರೀಶ್ ಪೂಂಜಾ| ಜನಪ್ರತಿನಿಧಿಯಾಗಲು ನಾಲಾಯಕ್: ಎಸ್‌ಡಿಪಿಐ ಆಕ್ರೋಶ

ಸಮಗ್ರ ನ್ಯೂಸ್: ಬಜೆಟ್ ಮಂಡನೆಯ ವಿಚಾರವಾಗಿ ಬಿಜೆಪಿ ಫೆ.17ರಂದು ವಿಧಾನಸೌಧದ ಹೊರಗೆ ಪ್ರತಿಭಟನೆಯ ಸಂದರ್ಭದಲ್ಲಿ ಬೆಳ್ತಂಗಡಿ ಕ್ಷೇತ್ರ ಶಾಸಕ ಹರೀಶ್ ಪೂಂಜ “ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ” ವಿವಾದಾತ್ಮಕ ಪೋಸ್ಟರ್ ಪ್ರದರ್ಶನವು ಸಂವಿಧಾನ ಬಾಹಿರವಾಗಿದೆ. ಇಂತಹ ಕೋಮುವಾದಿ ಮನಸ್ಥಿತಿಯವರು ಜನಪ್ರತಿನಿಧಿಯಾಗಲು ನಾಲಾಯಾಕ್ ಎಂದು SDPI ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆಗೊಳಿಸಿರುವ ಅವರು ನಮ್ಮ ತೆರಿಗೆ ನಮ್ಮ ಹಕ್ಕು, ನಮ್ಮ ತೆರಿಗೆ ನಮಗೆ ಕೊಡಿ. ದಕ್ಷಿಣ ಕನ್ನಡದ

“ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ” ಎಂಬ ವಿವಾದಾತ್ಮಕ ಪೋಸ್ಟರ್ ಪ್ರದರ್ಶನ ಮಾಡಿದ ಹರೀಶ್ ಪೂಂಜಾ| ಜನಪ್ರತಿನಿಧಿಯಾಗಲು ನಾಲಾಯಕ್: ಎಸ್‌ಡಿಪಿಐ ಆಕ್ರೋಶ Read More »