ರಾಜ್ಯ

ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ನಟ ಅನಂತ್ ನಾಗ್

ಸಮಗ್ರ ನ್ಯೂಸ್: ದೆಹಲಿಯಲ್ಲಿ ನಡೆದ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರು ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕರಿಸಿದರು. ಕನ್ನಡ ಚಿತ್ರರಂಗದಲ್ಲಿ ಸುದೀರ್ಘ ಪಯಣ ಹಾಗೂ ಅಪಾರ ಕೊಡುಗೆಗಳನ್ನು ನೀಡಿರುವ ಅನಂತ್​ ನಾಗ್​ ಅವರ ಸೇವೆಯನ್ನು ಗಮನಿಸಿದ ಕೇಂದ್ರ ಸರ್ಕಾರ, ಇದೀಗ ಅವರಿಗೆ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಇದೇ ವೇಳೆ ಡಾ. ರಿಕಿ ಗ್ಯಾನ್ ಕೇಜ್ (ಕಲೆ), ಪ್ರಶಾಂತ್ ಪ್ರಕಾಶ್ (ವ್ಯಾಪಾರ ಮತ್ತು ಕೈಗಾರಿಕೆ), ಡಾ. […]

ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ನಟ ಅನಂತ್ ನಾಗ್ Read More »

ಹವಾಮಾನ ವರದಿ| ಜೂ.2ರವರೆಗೂ ಜೋರು ಮಳೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂದಿನ ಒಂದು ವಾರಗಳ ಕಾಲ ರಾಜ್ಯದ ಹಲವೆಡೆ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಜೂ.2ರವರೆಗೆ ಭಾರೀ ಮಳೆ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಬೆಂಗಳೂರಿನಲ್ಲಿ ಇಂದು ಕೂಡ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮೇ

ಹವಾಮಾನ ವರದಿ| ಜೂ.2ರವರೆಗೂ ಜೋರು ಮಳೆ Read More »

ವಿಹಿಂಪ‌ ಮುಖಂಡ ಶರಣ್ ಪಂಪ್ವೆಲ್ ಅರೆಸ್ಟ್

ಸಮಗ್ರ ನ್ಯೂಸ್: ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರು ಬಂದ್ ಗೆ ‌ಕರೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್ ಪಂಪ್‌ವೆಲ್ ಅವರನ್ನು ಮಂಗಳವಾರ (ಮೇ 27) ಬಂಧಿಸಿದ್ದಾರೆ. ಕದ್ರಿ ಠಾಣೆ ಪೊಲೀಸರು ಶರಣ್‌ ಪಂಪ್‌ವೆಲ್‌ ಅವರನ್ನು ಬಂಧನಕ್ಕೆ ಒಳಪಡಿಸಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಠಾಣೆಯ ಮುಂದೆ ಜಮಾಯಿಸಿದ್ದಾರೆ. ಪೊಲೀಸರ ಕ್ರಮಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರ ಖಂಡನೆ ವ್ಯಕ್ತಪಡಿಸಿದ್ದಾರೆ. ಠಾಣೆಗೆ ಡಿಸಿಪಿ ರವಿಶಂಕರ್ ಭೇಟಿ ನೀಡಿದರು. ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಕಾರ್ಯಕರ್ತರನ್ನು

ವಿಹಿಂಪ‌ ಮುಖಂಡ ಶರಣ್ ಪಂಪ್ವೆಲ್ ಅರೆಸ್ಟ್ Read More »

ಹೆಚ್ಚುತ್ತಿರುವ ಕೋವಿಡ್ ಪ್ರಕರಣ| ಜ್ವರ, ಶೀತದ ಲಕ್ಷಗಳಿದ್ದರೆ ವಿದ್ಯಾರ್ಥಿಗಳಿಗೆ ರಜೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ‌ ವಿಶೇಷವಾಗಿ ಬೆಂಗಳೂರಿನಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನ ಕೈಗೊಂಡಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಜ್ವರ, ಶೀತ ಕಂಡುಬಂದ ಮಕ್ಕಳಿಗೆ ರಜೆ ನೀಡಲು ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಹೆಚ್ಚುತ್ತಿರುವ ಕೋವಿಡ್ ಪ್ರಕರಣ| ಜ್ವರ, ಶೀತದ ಲಕ್ಷಗಳಿದ್ದರೆ ವಿದ್ಯಾರ್ಥಿಗಳಿಗೆ ರಜೆ Read More »

ಕೊಲ್ಲಂ‌‌‌ ಕಡಲತೀರದಲ್ಲಿ ಲೈಬೀರಿಯಾ ಸರಕು ಹಡಗಿನ ಕಂಟೇನರ್ ಗಳು ಪತ್ತೆ| ಹತ್ತಿರ ಸುಳಿಯದಂತೆ ನಾಗರಿಕರಿಗೆ ಸೂಚನೆ

ಸಮಗ್ರ ನ್ಯೂಸ್: ಕೇರಳ ಕರಾವಳಿಯಲ್ಲಿ ರವಿವಾರ ಮುಳುಗಿದ ಲೈಬೀರಿಯ ಸರಕು ಹಡಗಿನ ಕಂಟೈನರ್‌ಗಳು ಸೋಮವಾರ ಬೆಳಿಗ್ಗೆ ಕೊಲ್ಲಂ ಕರಾವಳಿಯ ವಿವಿಧ ಭಾಗಗಳಲ್ಲಿ ದಡಕ್ಕೆ ಬಂದು ಸೇರಿದೆ. ಘಟನೆ ಬಳಿಕ ಸಂಭಾವ್ಯ ತೈಲ ಸೋರಿಕೆ ಅಥವಾ ರಾಸಾಯನಿಕ ಸೋರಿಕೆ ಭೀತಿಯ ಹಿನ್ನೆಲೆ ರಾಜ್ಯವು ತುರ್ತು ಪರಿಸ್ಥಿತಿಯನ್ನು ಘೋಷಿಸಿತ್ತು. ಈವರೆಗೆ ಕೊಲ್ಲಂ ಕರಾವಳಿಯಲ್ಲಿ ಎಂಟು ಕಂಟೇನರ್‌ಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ. ಮೊದಲ ಕಂಟೇನರ್ ಮಧ್ಯರಾತ್ರಿಯ ಸುಮಾರಿಗೆ ಕರುಣಗಪ್ಪಳ್ಳಿಯ ಚೆರಿಯಾಝಿಕಲ್‌ನಲ್ಲಿ ಪತ್ತೆಯಾಗಿದೆ. ಬಳಿಕ ಚವರದ ಪರಿಮಳಂ ಬೀಚ್, ಶಕ್ತಿಕುಲಂಗರ ಮತ್ತು ಮಾದಮ್ಮ

ಕೊಲ್ಲಂ‌‌‌ ಕಡಲತೀರದಲ್ಲಿ ಲೈಬೀರಿಯಾ ಸರಕು ಹಡಗಿನ ಕಂಟೇನರ್ ಗಳು ಪತ್ತೆ| ಹತ್ತಿರ ಸುಳಿಯದಂತೆ ನಾಗರಿಕರಿಗೆ ಸೂಚನೆ Read More »

ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರು| ಇನ್ನೆರಡು ದಿನವು ವರುಣಾರ್ಭಟ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಮಳೆಯ ಮಳೆಯ ಅಬ್ಬರ ಮುಂದುವರಿದಿದೆ. ಕೆಲವೆಡೆ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ದಿನವಿಡೀ ಧಾರಾಕಾರ ಮಳೆಯಾಗಿದೆ. ಗಾಳಿಯೂ ಜೋರಾಗಿತ್ತು. ಪಶ್ಚಿಮ ಘಟ್ಟ ಹಾಗೂ ಘಟ್ಟದ ಮೇಲ್ಭಾಗದಲ್ಲೂ ಭಾರಿ ಮಳೆಯಾಗಿದ್ದರಿಂದ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ. ಕ್ಷೇತ್ರಕ್ಕೆ ಭೇಟಿ ನೀಡಿರುವ ಭಕ್ತರು ಸ್ನಾನಘಟ್ಟದ ಬಳಿ ನದಿಯ ನೀರಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಭಾಗಮಂಡಲದಲ್ಲಿ 22.50 ಸೆಂ.ಮೀ ಮಳೆ ಸುರಿದಿದ್ದು, ಕಾವೇರಿ ನದಿ

ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರು| ಇನ್ನೆರಡು ದಿನವು ವರುಣಾರ್ಭಟ ಸಾಧ್ಯತೆ Read More »

ಪ್ರಜ್ವಲ್ ರೇವಣ್ಣ ಬಳಿ ಎರಡು ಸಾವಿರಕ್ಕೂ ಹೆಚ್ಚು ಮಹಿಳೆಯರ ಪೋಟೋಗಳಿತ್ತು| ಕೋರ್ಟ್ ನಲ್ಲಿ ಸಾಕ್ಷ್ಯ ನುಡಿದ ಡ್ರೈವರ್ ಕಾರ್ತಿಕ್

ಸಮಗ್ರ ನ್ಯೂಸ್: ಅಶ್ಲೀಲ ವಿಡಿಯೋ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಕಾರಿನ ಚಾಲಕ ಕಾರ್ತಿಕ್‌ ಸೋಮವಾರ(ಮೇ.26) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿ ಸಾಕ್ಷ್ಯ ನುಡಿದಿದ್ದಾರೆ. ಪ್ರಜ್ವಲ್‌ ರೇವಣ್ಣ ಮೊಬೈಲ್‌ನಲ್ಲಿ 2000ಕ್ಕೂ ಹೆಚ್ಚು ಮಹಿಳೆಯರ ಛಾಯಾಚಿತ್ರಗಳು ಮತ್ತು ಸುಮಾರು 40-50 ವೀಡಿಯೊಗಳು ಇದ್ದವು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಪ್ರಜ್ವಲ್‌ ರೇವಣ್ಣ ತನ್ನ ಮೊಬೈಲ್‌ ಫೋನ್‌ ಅನ್ನು ಕಾರಿನಲ್ಲಿಯೇ ಬಿಟ್ಟು ಜಯನಗರದ ಗೆಳತಿ ಮನೆಯೊಳಗೆ ಹೋಗಿದ್ದ. ನನಗೆ

ಪ್ರಜ್ವಲ್ ರೇವಣ್ಣ ಬಳಿ ಎರಡು ಸಾವಿರಕ್ಕೂ ಹೆಚ್ಚು ಮಹಿಳೆಯರ ಪೋಟೋಗಳಿತ್ತು| ಕೋರ್ಟ್ ನಲ್ಲಿ ಸಾಕ್ಷ್ಯ ನುಡಿದ ಡ್ರೈವರ್ ಕಾರ್ತಿಕ್ Read More »

‘ಪಾರು’ ಖ್ಯಾತಿಯ ನಟ ಶ್ರೀಧರ್ ನಾಯಕ್ ಇನ್ನಿಲ್ಲ!! ವಿಚಿತ್ರ ಸೋಂಕಿನಿಂದ ಬಳಲುತ್ತಿದ್ದ ನಟ

ಸಮಗ್ರ ನ್ಯೂಸ್: ಕನ್ನಡ ಕಿರುತೆರೆಯಲ್ಲಿ ನಟಿಸಿ ಹೆಸರುವಾಸಿ ಆಗಿದ್ದ ನಟ ಶ್ರೀಧರ್ ನಾಯಕ್‌ ಅವರು ಮೇ 26ರ ರಾತ್ರಿ ನಿಧನ ಹೊಂದಿದ್ದಾರೆ. ಇತ್ತೀಚೆಗೆ ಅವರಿಗೆ ತೀವ್ರ ಅನಾರೋಗ್ಯ ಕಾಡಿತ್ತು. ಅವರಿಗೆ ಸಹಾಯ ಮಾಡುವಂತೆ ಅನೇಕರು ಕೋರಿಕೊಂಡಿದ್ದರು. ಅವರು ಗುರುತೇ ಸಿಗದಷ್ಟು ಬದಲಾಗಿ ಬೆಡ್ ಮೇಲೆ ಮಲಗಿದ್ದು ನೋಡಿ ಹಲವರಿಗೆ ಶಾಕ್ ಆಗಿತ್ತು. ಈಗ ಶ್ರೀಧರ್ ಅವರು ಚಿಕಿತ್ಸೆ ಫಲಕಾರಿ ಆಗದೆ ಕೊನೆಯುಸಿರು ಎಳೆದಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅವರ ಕಳೆಬರಹವನ್ನು ಇಡಲಾಗಿದೆ. ಅವರಿಗೆ 47 ವರ್ಷ

‘ಪಾರು’ ಖ್ಯಾತಿಯ ನಟ ಶ್ರೀಧರ್ ನಾಯಕ್ ಇನ್ನಿಲ್ಲ!! ವಿಚಿತ್ರ ಸೋಂಕಿನಿಂದ ಬಳಲುತ್ತಿದ್ದ ನಟ Read More »

ರಿಪಬ್ಲಿಕ್ ಕನ್ನಡ ತೊರೆದ ಆ್ಯಂಕರ್ ಜಯಪ್ರಕಾಶ್ ಶೆಟ್ಟಿ

ಸಮಗ್ರ ನ್ಯೂಸ್: ರಾಜ್ಯದ ಪ್ರತಿಷ್ಠಿತ ನ್ಯೂಸ್ ಚಾನಲ್ ರಿಪಬ್ಲಿಕ್ ಕನ್ನಡದ ಸೀನಿಯರ್ ಆ್ಯಂಕರ್ ಹಾಗೂ ಪ್ರೋಗ್ರಾಂ ಹೆಡ್ ಜಯಪ್ರಕಾಶ್ ಶೆಟ್ಟಿ ಚಾನಲ್ ನಿಂದ ಹೊರನಡೆದಿದ್ದಾರೆ. ಚಾನಲ್ ಗೆ ನೂತನ ಸುದ್ದಿ ಸಂಪಾದಕರಾಗಿ ಹಿರಿಯ ಪತ್ರಕರ್ತೆ ಶೋಭಾ ಮಳವಳ್ಳಿ ನೇಮಕವಾದ ಬೆನ್ನಲ್ಲೇ ಜಯಪ್ರಕಾಶ್ ಶೆಟ್ಟಿ ಚಾನಲ್ ನಿಂದ ಹೊರಬಿದ್ದಿರುವುದು ತೀವ್ರ ಕುತೂಹಲ ಕೆರಳಿಸಿದೆ. ಚಾನಲ್ ನ ಆರಂಭದಿಂದಲೂ ತಮ್ಮ ಅಗ್ರೆಸಿವ್ ವರದಿಗಾರಿಕೆ ಹಾಗೂ ನಿರೂಪಣೆಯಿಂದ ಜನರ ಮನಗೆದ್ದಿದ್ದ ಜಯಪ್ರಕಾಶ್ ಶೆಟ್ಟಿ ಕಳೆದ ಕೆಲ ದಿನಗಳ ಹಿಂದೆ ಧರ್ಮಸ್ಥಳದ ಸೌಜನ್ಯ

ರಿಪಬ್ಲಿಕ್ ಕನ್ನಡ ತೊರೆದ ಆ್ಯಂಕರ್ ಜಯಪ್ರಕಾಶ್ ಶೆಟ್ಟಿ Read More »

ಮೇ.30ರವರೆಗೆ ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ರೆಡ್ ಅಲರ್ಟ್| ಮೇ.27ರಿಂದ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ನಾಳೆಯಿಂದ(ಮೇ 27) ಮೇ 30ರವರೆಗೆ ರಾಜ್ಯದಲ್ಲಿ ಮಳೆಯಾಗಲಿದ್ದು, ಕರಾವಳಿ ಹಾಗೂ ಮಲೆನಾಡಿನ ಆರು ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ರೆಡ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದ್ದು, ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ಯಾದಗಿರಿ, ಬಾಗಲಕೋಟೆ, ಹಾಸನದಲ್ಲಿಯೂ ಮಳೆಯಾಗಲಿದ್ದು,

ಮೇ.30ರವರೆಗೆ ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ರೆಡ್ ಅಲರ್ಟ್| ಮೇ.27ರಿಂದ ಭಾರೀ ಮಳೆ ಮುನ್ಸೂಚನೆ Read More »