ಬೆಳ್ತಂಗಡಿ: ನಾಯಿ ಅಡ್ಡ ಬಂದು ರಿಕ್ಷಾ ಪಲ್ಟಿ; ಚಾಲಕ ಸಾವು
ಸಮಗ್ರ ನ್ಯೂಸ್: ನಾಯಿಯೊಂದು ಏಕಾಏಕಿ ರಸ್ತೆಗೆ ಅಡ್ಡಬಂದ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿ ಆಟೋ ಚಾಲಕ ಸಾವನಪ್ಪಿದ ಘಟನೆ ಅಳದಂಗಡಿಯಲ್ಲಿ ನಡೆದಿದೆ. ಮೃತರನ್ನು ನಾವರ ಗ್ರಾಮದ ಹಾರಡ್ಡೆ ನಿವಾಸಿ ದೇವಪ್ಪ @ ಸುಧಾಕರ (37) ಎಂದು ಗುರುತಿಸಲಾಗಿದೆ. ಅಳದಂಗಡಿ ಸತ್ಯದೇವತೆ ದೇವಸ್ಥಾನದ ಬಳಿ ಈ ಅಪಘಾತ ಸಂಭವಿಸಿದೆ. ಗುರುವಾಯನಕೆರೆ ಕಡೆಯಿಂದ ಅಳದಂಗಡಿ ಕಡೆ ಬಾಡಿಗೆ ಮುಗಿಸಿ ವಾಪಸ್ ತೆರಳುತ್ತಿದ್ದ ವೇಳೆ, ರಸ್ತೆ ಮೇಲೆ ಏಕಾಏಕಿ ನಾಯಿ ಅಡ್ಡಬಂದ ಹಿನ್ನೆಲೆಯಲ್ಲಿ ಚಾಲಕ ನಿಯಂತ್ರಣ ಕಳೆದುಕೊಂಡು ಆಟೋ ಪಲ್ಟಿಯಾಗಿದೆ. ಈ […]
ಬೆಳ್ತಂಗಡಿ: ನಾಯಿ ಅಡ್ಡ ಬಂದು ರಿಕ್ಷಾ ಪಲ್ಟಿ; ಚಾಲಕ ಸಾವು Read More »










