ರಾಜ್ಯ

ಶ್ರೀರಾಮನ ಕಟೌಟ್​ ಬಿದ್ದು ಪಾದಚಾರಿಗೆ ಗಾಯ

ಸಮಗ್ರ ನ್ಯೂಸ್: ಶ್ರೀರಾಮನ ಕಟೌಟ್​ ಬಿದ್ದು ಪಾದಚಾರಿಗೆ ಗಾಯವಾದ ಘಟನೆ ಬೆಂಗಳೂರಿನ HAL ರಸ್ತೆಯಲ್ಲಿ ನಡೆದಿದೆ. ಶ್ರೀರಾಮ ಮಂದಿರ ಉದ್ಘಾಟನೆ ದಿನದಂದು ಹೆಚ್​ಎಎಲ್​ ವಿಮಾನ ನಿಲ್ದಾಣದ ಪಕ್ಕದಲ್ಲೆ ಶ್ರೀರಾಮನ ಬೃಹತ್ ಕಟೌಟ್ ಹಾಕಲಾಗಿತ್ತು. ಆದರೆ, ಕಾರ್ಯಕ್ರಮ ಮುಗಿದು 10 ದಿನಗಳಾದರೂ ಕಟೌಟ್ ತೆರವು ಗೊಳಿಸದ ಹಿನ್ನೆಲೆ ಪಾದಚಾರಿ ಮಾರ್ಗದಲ್ಲಿ ಸಾಗುತ್ತಿದ್ದವರ ಮೇಲೆ ಕಟೌಟ್ ಬಿದ್ದಿದೆ. ಇದರಿಂದ ಮೂರು ಜನ ಪಾದಚಾರಿಗಳಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಗಾಯಾಳುಗಳನ್ನು ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಟೌಟ್ ಬಿದ್ದ ಸ್ಥಳದಲ್ಲೇ ಖಾಸಗಿ

ಶ್ರೀರಾಮನ ಕಟೌಟ್​ ಬಿದ್ದು ಪಾದಚಾರಿಗೆ ಗಾಯ Read More »

ರಸ್ತೆ ನಿರ್ಮಾಣ ವಿರೋಧಿಸಿ ಮೀನುಗಾರರಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಉತ್ತರಕನ್ನಡ ಜಿಲ್ಲೆಯ ಕಾಸರಕೋಡು ಮೀನುಗಾರರ ಬಂದರು ಬಳಿ ಹೈಡ್ರಾಮಾ ನಡೆದಿದ್ದು, ಹೊನ್ನಾವರ ತಾಲೂಕಿನ ಕಾಸರಕೋಡು ಬಳಿ ಚತುಷ್ಪಥ ರಸ್ತೆ ನಿರ್ಮಾಣ ವಿರೋಧಿಸಿ ಮೀನುಗಾರರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಎಎಸ್‌ಪಿ ಭೇಟಿ ನೀಡಿದ್ರೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಪ್ರತಿಭಟನೆ ಹತ್ತಿಕ್ಕಲು 200ಕ್ಕೂ ಹೆಚ್ಚು ಪೊಲೀಸರು ಲಾಠಿಚಾರ್ಜ್‌ ನಡೆಸಿದ್ದಾರೆ. ಈ ವೇಳೆ ಮಹಿಳೆಯರು ಹಾಗೂ ಪುರುಷರಿಗೆ ಸೇರಿದಂತೆ 20 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದೆ. ಹೊನ್ನಾವರ ಸಮೀಪ ನಿರ್ಮಾಣ ಆಗುತ್ತಿರುವ ಹೊಸ ಬಂದರಿಗೆ

ರಸ್ತೆ ನಿರ್ಮಾಣ ವಿರೋಧಿಸಿ ಮೀನುಗಾರರಿಂದ ಪ್ರತಿಭಟನೆ Read More »

ದೊಡ್ಮನೆಯಿಂದ ಹೊರ ಬಂದ ಬಳಿಕ ಕಿಚ್ಚ ಸುದೀಪ್ ಜೊತೆ ಪಾರ್ಟಿ

ಸಮಗ್ರ ನ್ಯೂಸ್: ಬಿಗ್ ಬಾಸ್​ ಶೋ ಮುಗಿದು ಮನೆಯಿಂದ ಹೊರಗೆ ಬಂದ ಬಳಿಕ ಸ್ಪರ್ಧಿಗಳೆಲ್ಲಾ ಒಂದೆಡೆ ಸೇರಿ ಪಾರ್ಟಿ ಮಾಡಿದ್ದಾರೆ. ಇವರೆಲ್ಲರ ಜೊತೆ ಸುದೀಪ್ ಕೂಡ ಸೇರಿಕೊಂಡಿದ್ದು ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗಿದೆ. ಭಾಗ್ಯಶ್ರೀ, ಸಿರಿ, ನೀತು ವನಜಾಕ್ಷಿ, ಅವಿನಾಶ್​, ಮೈಕಲ್​ ಅಜಯ್​, ಪವಿ ಪೂವಪ್ಪ, ರಕ್ಷಕ್​ ಬುಲೆಟ್​, ತುಕಾಲಿ ಸಂತೋಷ್ ಎಲ್ಲರೂ ಕಿಚ್ಚ ಸುದೀಪ್ ಜೊತೆ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ​ಈಶಾನಿ, ನಮ್ರತಾ, ವರ್ತೂರು ಸಂತೋಷ್​, ಕಾರ್ತಿಕ್ ಮಹೇಶ್​ ಹಾಗೂ ವಿನಯ್ ಕೂಡ ಪಾರ್ಟಿಯಲ್ಲಿ ಭಾಗಿಯಾಗಿದ್ರು.

ದೊಡ್ಮನೆಯಿಂದ ಹೊರ ಬಂದ ಬಳಿಕ ಕಿಚ್ಚ ಸುದೀಪ್ ಜೊತೆ ಪಾರ್ಟಿ Read More »

ರಾಜ್ಯಮಟ್ಟದ ಎಸ್ಎಸ್ಎಲ್ ಸಿ ಪೂರ್ವ ಸಿದ್ದತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಸಮಗ್ರ ನ್ಯೂಸ್: 2023-24 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಿಸಿದೆ. ಈ ವೇಳಾಪಟ್ಟಿಯ ಪ್ರಕಾರ ಫೆಬ್ರವರಿ 26 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಆರಂಭವಾಗಲಿವೆ. ಇಲ್ಲಿದೆ ವೇಳಾಪಟ್ಟಿ:26-02-2024 : ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ27-02-2024 : ದ್ವಿತೀಯ ಭಾಷೆ -ಇಂಗ್ಲಿಷ್, ಕನ್ನಡ28 -02-2024 : ತೃತೀಯ ಭಾಷೆ- ಹಿಂದಿ,

ರಾಜ್ಯಮಟ್ಟದ ಎಸ್ಎಸ್ಎಲ್ ಸಿ ಪೂರ್ವ ಸಿದ್ದತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ Read More »

ಸಕ್ಕರೆ ನಾಡಿನ ಜನರೇ, ನಾವು ಮಾಡಿದ ತಪ್ಪನ್ನು ನೀವೂ ಮಾಡ್ಬೇಡಿ…| ಸಕ್ಕರೆ ನಾಡಿನ ಜನತೆಗೆ ಒಂದು ಸಿಹಿಯಾದ ಪತ್ರ!! – ಎಂ.ಜಿ ಹೆಗ್ಡೆ

ಸಮಗ್ರ ನ್ಯೂಸ್: ಮಂಡ್ಯದ ಕೆರಗೋಡು ಗ್ರಾಮದಲ್ಲಿ ಭಗವಾನ್ ಹನುಮಾನ್ ಧ್ವಜ ತೆಗೆದ ವಿವಾದ ಈಗ ರಾಜ್ಯದಲ್ಲಿ ಸಕತ್ ಸುದ್ದಿಯಲ್ಲಿದೆ. ಧ್ವಜ ವಿವಾದ ರಾಜಕೀಯ ಸ್ವರೂಪ ಪಡೆದಿದ್ದು, ಇದನ್ನು ದೊಡ್ಡದು ಮಾಡಿರುವ ವಿರೋಧ ಪಕ್ಷಗಳು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿವೆ. ಇದರ ಬೆನ್ನಲ್ಲೇ ಸರ್ಕಾರ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕೆರಗೋಡು ಗ್ರಾಮ ಪಂಚಾಯಿತಿ ಪಿಡಿಓ ಜೀವನ್‌.ಬಿ.ಎಂ ಅವರನ್ನು ಅಮಾನತು ಮಾಡಿದೆ. ಈ ಘಟನೆ ರಾಜ್ಯದಲ್ಲಿ ಸದ್ದು ಮಾಡುತ್ತಿದ್ದಂತೆ ಮಂಡ್ಯವನ್ನು ಮಂಗಳೂರಿನಂತೆಯೇ ಕೋಮುವಾದದ ಪ್ರಯೋಗ ಸಾಲೆ ಮಾಡಲು ಪ್ರಯತ್ನ

ಸಕ್ಕರೆ ನಾಡಿನ ಜನರೇ, ನಾವು ಮಾಡಿದ ತಪ್ಪನ್ನು ನೀವೂ ಮಾಡ್ಬೇಡಿ…| ಸಕ್ಕರೆ ನಾಡಿನ ಜನತೆಗೆ ಒಂದು ಸಿಹಿಯಾದ ಪತ್ರ!! – ಎಂ.ಜಿ ಹೆಗ್ಡೆ Read More »

ನಿಮ್ಮ ಬಳಿ ಸ್ಮಾರ್ಟ್ ಫೋನ್ ಇದ್ರೆ ಸಾಕು, ಲಕ್ಷಗಟ್ಟಲೆ ಹಣ ಗಳಿಸಬಹುದು!

ಸಮಗ್ರ ನ್ಯೂಸ್: ಇಂದಿನ ತಂತ್ರಜ್ಞಾನ ಯುಗದಲ್ಲಿ ಮೊಬೈಲ್ ಬಿಟ್ಟರೆ ಒಂದು ಇಂಚು ಕೂಡ ಕದಿಯಲು ಯಾರಿಂದಲೂ ಸಾಧ್ಯವಿಲ್ಲ. ಮೊಬೈಲ್ ಮಾಯೆ ಜನರನ್ನು ಸ್ವಲ್ಪ ಕಾಲ ತನ್ನ ಹಿಡಿತದಲ್ಲಿ ಇಟ್ಟುಕೊಂಡಿರುವುದಕ್ಕೆ ಇದೇ ಸಾಕ್ಷಿ. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಮೊಬೈಲ್ ಬೇಕು ಎನ್ನುವ ಆಸೆ ಹೆಚ್ಚಿದೆ. ನೀವು ಸ್ವಲ್ಪ ಸಮಯದವರೆಗೆ ನಿಮ್ಮ ಮೊಬೈಲ್ ಫೋನ್‌ನಿಂದ ದೂರವಿರಲು ಸಾಧ್ಯವಾದರೆ, ನೀವು ಐಸ್ಲ್ಯಾಂಡಿಕ್ ಮೊಸರು ಕಂಪನಿಯ ಸವಾಲನ್ನು ಸ್ವೀಕರಿಸಬಹುದು. ಡಿಜಿಟಲ್ ಡಿಟಾಕ್ಸ್ ಪ್ರೋಗ್ರಾಂ ಅನ್ನು ನಡೆಸುತ್ತಿರುವ ಮೊಸರು ಬ್ರ್ಯಾಂಡ್ ಸ್ಮಾರ್ಟ್‌ಫೋನ್ ಇಲ್ಲದೆ

ನಿಮ್ಮ ಬಳಿ ಸ್ಮಾರ್ಟ್ ಫೋನ್ ಇದ್ರೆ ಸಾಕು, ಲಕ್ಷಗಟ್ಟಲೆ ಹಣ ಗಳಿಸಬಹುದು! Read More »

ಕನ್ನಡ ನಾಮಫಲಕ ಸುಗ್ರೀವಾಜ್ಞೆ ವಾಪಸ್

ಸಮಗ್ರ ನ್ಯೂಸ್: ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿರಸ್ಕರಿಸಿಲ್ಲ. ಅಧಿವೇಶನ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಿಲ್ಲ, ಸರ್ಕಾರಕ್ಕೆ ವಾಪಸ್ ಕಳಿಸಲಾಗಿದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್‌ ಸ್ಪಷ್ಟಪಡಿಸಿದ್ದಾರೆ. ಫೆಬ್ರವರಿ 12ರಿಂದ ವಿಧಾನಮಂಡಲ ಅಧಿವೇಶನ ನಿಗದಿಯಾಗಿದೆ. ಅಧಿವೇಶನದಲ್ಲೇ ಉಭಯ ಸದನಗಳಲ್ಲಿ ಮಸೂದೆಯನ್ನು ಮಂಡಿಸಿ ಅನುಮೋದನೆ ಪಡೆಯುವಂತೆ ಸರ್ಕಾರಕ್ಕೆ ಸೂಚಿಸಿ ರಾಜ್ಯಪಾಲರು ಸುಗ್ರೀವಾಜ್ಞೆ ವಾಪಸ್ ಕಳಿಸಿದ್ದಾರೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್‌ ಮಾಧ್ಯಮ ಪ್ರಕಟಣೆ

ಕನ್ನಡ ನಾಮಫಲಕ ಸುಗ್ರೀವಾಜ್ಞೆ ವಾಪಸ್ Read More »

ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ಸಲ್ಲಿಕೆಗೆ ಅವಕಾಶ| ಬಹುದೊಡ್ಡ ಗೆಲುವು ಕಂಡ ಹಿಂದೂಪರ ಹೋರಾಟಗಾರರು

ಸಮಗ್ರ ನ್ಯೂಸ್: ಜ್ಞಾನವಾಪಿ ಮಸೀದಿಯಲ್ಲಿ ಪ್ರಕರಣದಲ್ಲಿ ಬಹುದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ಮಸೀದಿಯಲ್ಲಿ ಹಿಂದೂಗಳು ಪೂಜೆ ಸಲ್ಲಿಸಲು ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದೆ. ಈ ಮೂಲಕ ಹಿಂದುಪರ ಅರ್ಜಿದಾರರಿಗೆ ಬಹುದೊಡ್ಡ ಗೆಲುವು ಸಿಕ್ಕಿದೆ. ಈ ನಡುವೆ ವಾರಣಾಸಿಯ ಜ್ಞಾನವಾಪಿ ಮಸೀದಿಯ ‘ವುಜುಖಾನಾ’ ಸಮೀಕ್ಷೆಗೆ ಸಂಬಂಧಿಸಿದ ಅರ್ಜಿಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಬುಧವಾರ ಅಂಜುಮನ್ ಇಂಟೆಜಾಮಿಯಾ ಮಸಾಜಿದ್ ಸಮಿತಿ ಮತ್ತು ಇತರ ವಿರೋಧ ಪಕ್ಷಗಳಿಗೆ ನೋಟಿಸ್ ನೀಡಿದೆ.

ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ಸಲ್ಲಿಕೆಗೆ ಅವಕಾಶ| ಬಹುದೊಡ್ಡ ಗೆಲುವು ಕಂಡ ಹಿಂದೂಪರ ಹೋರಾಟಗಾರರು Read More »

ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್| ರಾಜ್ಯದ ಹಲವೆಡೆ ದಾಳಿ

ಸಮಗ್ರ ನ್ಯೂಸ್: ರಾಜ್ಯದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು, ಕೊಪ್ಪಳ, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಮಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ. ಮಂಡ್ಯದ ಲೋಕೋಪಯೋಗಿ ಇಲಾಖೆ ಇಇ ಆಗಿರುವ ಹರ್ಷಾ ಅವರ ಕಚೇರಿ, ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ಮನೆ,ಸಂಬಂಧಿಕರ ಮನೆಗಳು, ಮಂಡ್ಯದ ಕಚೇರಿ, ಕಲ್ಲಹಳ್ಳಿಯಲ್ಲಿರುವ ಮಾವನ ಮನೆ,

ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್| ರಾಜ್ಯದ ಹಲವೆಡೆ ದಾಳಿ Read More »

ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ ಸಿಎನ್ ಮಂಜುನಾಥ್ ಸೇವಾವಧಿ ಇಂದಿಗೆ ಮುಕ್ತಾಯ

ಸಮಗ್ರ ನ್ಯೂಸ್: ನಮ್ಮ ನಾಡು ಕಂಡ ಮಹಾನ್ ವೈದ್ಯರಲ್ಲಿ ಡಾ ಮಂಜುನಾಥ ಒಬ್ಬರು. ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ಸಿ. ಎನ್. ಮಂಜುನಾಥ್ ಅವರ ಸೇವಾ ಅವಧಿ ಇಂದಿಗೆ ಮುಕ್ತಾಯವಾಗುತ್ತಿದ್ದು ಇಂದು ಅವರಿಗೆ ಕಚೇರಿಯ ಸಿಬ್ಬಂದಿ ವರ್ಗ ಭಾವಪೂರ್ಣ ವಿದಾಯ ಕೋರಿದ್ದಾರೆ. ಡಾ. ಸಿ. ಎನ್. ಮಂಜುನಾಥ್ ಅವರು 2007ರಿಂದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. 2023ರ ಜುಲೈನಲ್ಲಿಯೇ ಅವರ ಸೇವಾವಧಿ ಮುಕ್ತಾಯಗೊಂಡಿತ್ತು. ಆಸ್ಪತ್ರೆಯ

ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ ಸಿಎನ್ ಮಂಜುನಾಥ್ ಸೇವಾವಧಿ ಇಂದಿಗೆ ಮುಕ್ತಾಯ Read More »