ರಾಜ್ಯ

ಉಡುಪಿ: ವಂಡ್ಸೆ ಸರ್ಕಾರಿ ಶಾಲೆಯಲ್ಲಿ ರಾಜ್ಯದ ಮೊದಲ ಎಐ ಟೀಚರ್ ಎಂಟ್ರಿ| ಮಕ್ಕಳಿಗೆ ಖುಷಿಯಿಂದ ಪಾಠ ಹೇಳ್ತಾಳೆ ‘ಐರಿಸ್’

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೈಂದೂರು ಶೈಕ್ಷಣಿಕ ವಲಯದ ವಂಡ್ಸೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಗ ಹೊಸ ಸಂಚಲನ ಮೂಡಿದೆ. ರಾಜ್ಯದ ಸರ್ಕಾರಿ ಶಾಲೆಯೊಂದಕ್ಕೆ ಮೊಟ್ಟಮೊದಲ ಬಾರಿಗೆ ಪ್ರವೇಶ ಪಡೆದಿರುವ ‘ಐರಿಸ್’ (Iris) ಎಂಬ ಎಐ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್) ಶಿಕ್ಷಕಿ ಇದೀಗ ಯಶಸ್ವಿಯಾಗಿ ತನ್ನ ಬೋಧನಾ ಕಾರ್ಯವನ್ನು ಆರಂಭಿಸಿದ್ದಾಳೆ. ಕಳೆದ ಶನಿವಾರ, ಅಂದರೆ ಏಪ್ರಿಲ್ 11 ರಂದು ಶಾಲೆಯಲ್ಲಿ ಈ ವಿನೂತನ ಎಐ ರೋಬೋಟ್ ಟೀಚರ್ ಅನ್ನು ಅದ್ದೂರಿಯಾಗಿ ಲೋಕಾರ್ಪಣೆ ಮಾಡಲಾಗಿದ್ದು, […]

ಉಡುಪಿ: ವಂಡ್ಸೆ ಸರ್ಕಾರಿ ಶಾಲೆಯಲ್ಲಿ ರಾಜ್ಯದ ಮೊದಲ ಎಐ ಟೀಚರ್ ಎಂಟ್ರಿ| ಮಕ್ಕಳಿಗೆ ಖುಷಿಯಿಂದ ಪಾಠ ಹೇಳ್ತಾಳೆ ‘ಐರಿಸ್’ Read More »

ಯೋಗೇಶ್ ಗೌಡ ಕೊಲೆ ಪ್ರಕರಣ| ಮಾಜಿ ಸಚಿವ ವಿನಯ್ ಕುಲಕರ್ಣಿ ದೋಷಿ| ಹೈಕೋರ್ಟ್ ನಿಂದ ಮಹತ್ವದ ತೀರ್ಪು

ಸಮಗ್ರ ನ್ಯೂಸ್: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಅವರ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 21 ಆರೋಪಿಗಳ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ ಮಹತ್ವದ ತೀರ್ಪು ಪ್ರಕಟಿಸಿದೆ. ಸತತ 10 ವರ್ಷಗಳ ನಂತರ ವಿಚಾರಣೆ ಬಳಿಕ ಕೊನೆಗೂ ಈ ಪ್ರಕರಣದಲ್ಲಿ ಶಿಕ್ಷೆಯಾಗಿ ನ್ಯಾಯಾಂಗ ಅಂತಿಮ ಮುದ್ರೆ ಬಿದ್ದಿದೆ. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ 15ನೇ ಅಪರಾಧಿಯಾಗಿದ್ದಾರೆ. ನ್ಯಾ. ಸಂತೋಷ್ ಗಜಾನನ ಭಟ್ ಅವರಿಂದ ಈ ತೀರ್ಪು ಪ್ರಕಟವಾಗಿದ್ದು,

ಯೋಗೇಶ್ ಗೌಡ ಕೊಲೆ ಪ್ರಕರಣ| ಮಾಜಿ ಸಚಿವ ವಿನಯ್ ಕುಲಕರ್ಣಿ ದೋಷಿ| ಹೈಕೋರ್ಟ್ ನಿಂದ ಮಹತ್ವದ ತೀರ್ಪು Read More »

ಮುಸ್ಲಿಂ ಯುವಕನಿಂದ ಅಪ್ರಾಪ್ತ ಬಾಲಕಿಯರನ್ನು ಶೋಷಿಸಿ ಲೈಂಗಿಕ ದೌರ್ಜನ್ಯ| 19ರ ಹರೆಯದ ಆತನ ಬಳಿ ಇತ್ತು 180 ಬಾಲಕಿಯರ 350ಕ್ಕೂ ಹೆಚ್ಚು ವಿಡಿಯೋ

ಸಮಗ್ರ ನ್ಯೂಸ್: ಮಹಾರಾಷ್ಟ್ರದ ಅಮರಾವತಿಯಲ್ಲಿ ಅಪ್ರಾಪ್ತ ಬಾಲಕಿಯರನ್ನು ಶೋಷಿಸಿ, ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿದ ಆರೋಪದ ಮೇಲೆ 19 ವರ್ಷದ ಅಯಾನ್ ಅಹಮದ್ ತನ್ವೀರ್ ಅಹಮದ್ ಅಲಿಯಾಸ್ ಮೊಹಮ್ಮದ್ ಅಯಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಸಂಸದ ಅನಿಲ್ ಬೋಂಡೆ ನೀಡಿದ ದೂರಿನ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಯು WhatsApp ಮತ್ತು Snapchat ಗ್ರೂಪ್ಗಳ ಮೂಲಕ ಬಾಲಕಿಯರನ್ನು ಸಂಪರ್ಕಿಸುತ್ತಿದ್ದನು. ಅವರ ನಂಬಿಕೆ ಗಳಿಸಿ, ಪ್ರೀತಿಯ ಜಾಲಕ್ಕೆ ಬೀಳಿಸಿ, ನಂತರ ಮುಂಬೈ ಮತ್ತು ಪುಣೆಗೆ

ಮುಸ್ಲಿಂ ಯುವಕನಿಂದ ಅಪ್ರಾಪ್ತ ಬಾಲಕಿಯರನ್ನು ಶೋಷಿಸಿ ಲೈಂಗಿಕ ದೌರ್ಜನ್ಯ| 19ರ ಹರೆಯದ ಆತನ ಬಳಿ ಇತ್ತು 180 ಬಾಲಕಿಯರ 350ಕ್ಕೂ ಹೆಚ್ಚು ವಿಡಿಯೋ Read More »

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ| ಎ.17ಕ್ಕೆ ತೀರ್ಪು ಪ್ರಕಟ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ವರ್ಷಗಳ ಹಿಂದೆ ಸಂಭವಿಸಿದ ಸ್ಫೋಟ ಪ್ರಕರಣದ ಆರೋಪಿ ಮಹಮ್ಮದ್ ಶಾರಿಕ್‌ಗೆ ಶಿಕ್ಷೆಯ ಪ್ರಮಾಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯವು ಏಪ್ರಿಲ್ 17 ರಂದು ಪ್ರಕಟಿಸಲಿದೆ. ಮೂರು ತಿಂಗಳ ಹಿಂದೆ ಮೊಹಮ್ಮದ್ ಶಾರಿಕ್ ಸಲ್ಲಿಸಿದ್ದ ತಪ್ಪೊಪ್ಪಿಗೆ ಅರ್ಜಿಯನ್ನು ನ್ಯಾಯಾಲಯ ಇತ್ತೀಚೆಗೆ ಸ್ವೀಕರಿಸಿದೆ. ಶುಕ್ರವಾರವೂ ಪ್ರಕರಣದ ಹೆಚ್ಚಿನ ವಿಚಾರಣೆ ನಡೆದಿದ್ದು, ಈ ಸಂದರ್ಭದಲ್ಲಿ ಆರೋಪಿಗೆ ವಿಧಿಸಲಾಗುವ ಶಿಕ್ಷೆಯನ್ನು ಏಪ್ರಿಲ್ 17 ರಂದು

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ| ಎ.17ಕ್ಕೆ ತೀರ್ಪು ಪ್ರಕಟ Read More »

ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

ಸಮಗ್ರ ನ್ಯೂಸ್: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಸಾರ್ವಜನಿಕವಾಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ಮೂಲದ ನರೇಂದ್ರ ಮೃತಪಟ್ಟ ದುರ್ದೈವಿ. ಇವರು ಕಳೆದ ಏಪ್ರಿಲ್ 11ರಂದು ಶನಿವಾರ ಸಂಜೆ ಧರ್ಮಸ್ಥಳದ ನೇತ್ರಾವತಿ ನದಿಯ ಸ್ನಾನಘಟ್ಟದ ಸಮೀಪ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಏಪ್ರಿಲ್ 11ರ ಸಂಜೆ ವೇಳೆ ಸ್ನಾನಘಟ್ಟದ ಬಳಿ ಬಂದಿದ್ದ ನರೇಂದ್ರ ಅವರು, ಕ್ಯಾನ್‌ನಲ್ಲಿದ್ದ ಪೆಟ್ರೋಲನ್ನು ಮೈಮೇಲೆ ಸುರಿದುಕೊಂಡು ಬೆಂಕಿ

ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು Read More »

ಬಿಹಾರ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ‌ ನೇಮಕ

ಸಮಗ್ರ ನ್ಯೂಸ್: ಬಿಹಾರ ರಾಜಕೀಯದಲ್ಲಿ ಮಂಗಳವಾರ ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದ್ದು, ಸುಮಾರು ಎರಡು ದಶಕಗಳ ಕಾಲ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿದ್ದ ಜೆಡಿಯು ನಾಯಕ ನಿತೀಶ್ ಕುಮಾರ್ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆ ಬೆನ್ನಲ್ಲೇ, ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮುಖಂಡ ಹಾಗೂ ಹಾಲಿ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರು ಬಿಹಾರ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಸಂಪೂರ್ಣ ಸಜ್ಜಾಗಿದ್ದಾರೆ. ವಿಶೇಷವೆಂದರೆ, ಬಿಹಾರದ ರಾಜಕೀಯ ಇತಿಹಾಸದಲ್ಲಿ

ಬಿಹಾರ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ‌ ನೇಮಕ Read More »

ಚಿಕ್ಕಮಗಳೂರಿನಲ್ಲಿ ನೀರಲ್ಲಿ ಮುಳುಗಿ‌ ವಿಟ್ಲ‌ ಮೂಲದ ಬಾಲಕ ಸಾವು

ಸಮಗ್ರ ನ್ಯೂಸ್: ಶಿಕ್ಷಕರೊಂದಿಗೆ ಈಜುಕೊಳಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರವಿವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಮೂಲದ ಅನಿಕೇತ್ (14) ಮೃತಪಟ್ಟ ದುರ್ದೈವಿ. ಜಯಪುರದ ಶ್ರೀ ಸತ್ಯಸಾಯಿ ವಿದ್ಯಾಸಂಸ್ಥೆಯಲ್ಲಿ ಅನಿಕೇತ್ ವ್ಯಾಸಂಗ ಮಾಡುತ್ತಿದ್ದ. ರವಿವಾರ ಮಧ್ಯಾಹ್ನ ಶಿಕ್ಷಕರ ತಂಡದೊಂದಿಗೆ ಈಜುಕೊಳಕ್ಕೆ ತೆರಳಿದ್ದಾಗ ಈ ಅವಘಡ ಸಂಭವಿಸಿದೆ. ಈಜಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಅಸ್ವಸ್ಥಗೊಂಡ ಬಾಲಕನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ

ಚಿಕ್ಕಮಗಳೂರಿನಲ್ಲಿ ನೀರಲ್ಲಿ ಮುಳುಗಿ‌ ವಿಟ್ಲ‌ ಮೂಲದ ಬಾಲಕ ಸಾವು Read More »

2026-27ನೇ ಸಾಲಿನ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ ಅಧಿಕೃತವಾಗಿ ಪ್ರಕಟಿಸಿದೆ. ಹೊಸ ವೇಳಾಪಟ್ಟಿಯಂತೆ ಮೇ 29, 2026 ರಿಂದ ಶಾಲೆಗಳು ಪುನರಾರಂಭಗೊಳ್ಳಲಿವೆ. ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮೇ 29ರಿಂದಲೇ ಶಾಲೆಗಳು ಪುನರಾರಂಭಗೊಳ್ಳಲಿವೆ. ಒಟ್ಟು 245 ದಿನಗಳ ಶಾಲಾ ಕರ್ತವ್ಯದ ಅವಧಿಯಲ್ಲಿ ದಸರಾ ಮತ್ತು

2026-27ನೇ ಸಾಲಿನ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ Read More »

ಬೆಳ್ತಂಗಡಿ: ಅತಿವೇಗದಲ್ಲಿ ಬಂದು ಪಾದಾಚಾರಿಗಳ ಮೇಲೆರಗಿದ ಓಮ್ನಿ ಕಾರು; ಮಹಿಳೆ ಗಂಭೀರ

ಸಮಗ್ರ ನ್ಯೂಸ್: ಅತಿ ವೇಗವಾಗಿ ಬಂದ ಓಮ್ನಿ ಕಾರೊಂದು ನಿಯಂತ್ರಣ ತಪ್ಪಿ ಪಾದಚಾರಿಗಳ ಮೇಲೆ ಡಿಕ್ಕಿ ಹೊಡೆದ ಘಟನೆ ಕೊಲ್ಪೆದಬೈಲು ಎಂಬಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ಮೂವರು ಪವಾಡಸದೃಶವಾಗಿ ಪಾರಾಗಿದ್ದಾರೆ. ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ತಿರುವಿನಲ್ಲಿ ವೇಗವಾಗಿ ಬಂದ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಪಾದಚಾರಿಗಳ ಮೇಲೆ ಉರುಳಿದೆ. ಅದೃಷ್ಟವಶಾತ್ ಮಕ್ಕಳಿಬ್ಬರು ಹಾಗೂ ಮಹಿಳೆಯೊಬ್ಬರು

ಬೆಳ್ತಂಗಡಿ: ಅತಿವೇಗದಲ್ಲಿ ಬಂದು ಪಾದಾಚಾರಿಗಳ ಮೇಲೆರಗಿದ ಓಮ್ನಿ ಕಾರು; ಮಹಿಳೆ ಗಂಭೀರ Read More »

24 ಗಂಟೆಗಳ ನಿರಂತರ ಕೂಚುಪುಡಿ ನೃತ್ಯ| ಗೋಲ್ಡನ್ ಬುಕ್ ನಲ್ಲಿ ದಾಖಲೆ ಬರೆದ ಸುಳ್ಯದ ಅಭಿಷೇಕ್

ಸುಳ್ಯ: ಇಲ್ಲಿನ ನೆಹರೂ ಸ್ಮಾರಕ ಮಹಾವಿದ್ಯಾಲಯದ ಎರಡನೇ ವರ್ಷದ ಬಿಎಸ್‌ಸಿ ವಿದ್ಯಾರ್ಥಿ ಮಂಡೆಕೋಲಿನ ಅಭಿಷೇಕ್ ಕಣೆಮರಡ್ಕ ನಿರಂತರ 24 ಗಂಟೆಗಳ ಕಾಲ ಕೂಚುಪುಡಿ ನೃತ್ಯ ಪ್ರದರ್ಶನ ನೀಡುವ ಮೂಲಕ ಗೋಲ್ಡನ್ ಬುಕ್ ದಾಖಲೆ ಬರೆದಿದ್ದಾರೆ. ನೆಹರೂ‌‌ ಸ್ಮಾರಕ ಕಾಲೇಜಿನ ಸಭಾಂಗಣದಲ್ಲಿ ಏ.11ರಂದು ಸಂಜೆ 6.30ರಿಂದ ಆರಂಭಗೊಂಡು ಏ.12ರ ಸಂಜೆ 6.30ರ ತನಕ ನಿರಂತರ 24 ಗಂಟೆ ಕುಚ್ಚುಪುಡಿ ನೃತ್ಯ ಮಾಡಿದರು. ಗೋಲ್ಡನ್ ಬುಕ್ ಆಪ್ ವಲ್ಡ್ ರೆಕಾರ್ಡ್‌ನಲ್ಲಿ ಸ್ಥಾನ ಪಡೆದು ದಾಖಲೆ ನಿರ್ಮಿಸಬೇಕೆಂಬ ಹಂಬಲದಿಂದ ಅಭಿಷೇಕ್ ಕುಚುಪುಡಿ

24 ಗಂಟೆಗಳ ನಿರಂತರ ಕೂಚುಪುಡಿ ನೃತ್ಯ| ಗೋಲ್ಡನ್ ಬುಕ್ ನಲ್ಲಿ ದಾಖಲೆ ಬರೆದ ಸುಳ್ಯದ ಅಭಿಷೇಕ್ Read More »