ರಾಜ್ಯ

ರಾಜ್ಯ ಸಚಿವ ಸಂಪುಟ ಸಭೆ| ಇಂದಿರಾ ಕಿಟ್, ಮುಟ್ಟಿನ ರಜೆಗೆ ಗ್ರೀನ್ ಸಿಗ್ನಲ್

ಸಮಗ್ರ ನ್ಯೂಸ್: ರಾಜ್ಯ ಸಚಿವ ಸಂಪುಟವು ಇಂದು (ಅ.9) ಹಲವಾರು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದು, ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುತ್ತಿದ್ದ 5 ಕೆ.ಜಿ. ಅಕ್ಕಿಯನ್ನು ಕಡಿತಗೊಳಿಸಿ, ಅದರ ಬದಲಿಗೆ ಇಂದಿರಾ ಆಹಾರ ಕಿಟ್‌ಗಳನ್ನು ವಿತರಿಸಲು ತೀರ್ಮಾನಿಸಿದೆ. ಇದರ ಜೊತೆಗೆ ಸರ್ಕಾರಿ ನೇಮಕಾತಿಗಳಲ್ಲಿ ವಯೋಮಿತಿ ಸಡಿಲಿಕೆ ಮತ್ತು ಮಹಿಳಾ ಉದ್ಯೋಗಿಗಳಿಗೆ ಮುಟ್ಟಿನ ಅವಧಿಯಲ್ಲಿ ರಜೆ ನೀಡುವ ಐತಿಹಾಸಿಕ ನಿರ್ಧಾರಕ್ಕೂ ಸಂಪುಟ ಸಭೆ ಅನುಮೋದನೆ ನೀಡಿದೆ. ಸಚಿವ ಸಂಪುಟದ ನಿರ್ಧಾರದಂತೆ, ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಇನ್ನು ಮುಂದೆ 5 ಕೆ.ಜಿ. ಅಕ್ಕಿ […]

ರಾಜ್ಯ ಸಚಿವ ಸಂಪುಟ ಸಭೆ| ಇಂದಿರಾ ಕಿಟ್, ಮುಟ್ಟಿನ ರಜೆಗೆ ಗ್ರೀನ್ ಸಿಗ್ನಲ್ Read More »

ಮಹಿಳೆಯರಿಗೆ ಮಾಸಿಕ ಒಂದು ದಿನ ಋತುಚಕ್ರ ರಜೆ| ಇಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

ಸಮಗ್ರ ನ್ಯೂಸ್: ಮಹಿಳೆಯರ ಆರೋಗ್ಯದ ದೃಷ್ಟಿಯಿಂದ “ಋತುಚಕ್ರ ರಜೆ” ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಚರ್ಚೆ ನಡೆಸುತ್ತಿದ್ದು, ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಿದೆ. ಮಹಿಳೆಯರ ಆರೋಗ್ಯದ ದೃಷ್ಟಿಯಿಂದ ರಾಜ್ಯಾದ್ಯಂತ ಸರ್ಕಾರಿ ಕಚೇರಿ, ಖಾಸಗಿ ಕಂಪೆನಿ, ಕೈಗಾರಿಕಾ ವಲಯದಲ್ಲಿ ಕಾರನಿರ್ವಹಿಸುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ರಜೆ ನೀಡು ವ ‘ಋತು ಚಕ್ರ ರಜೆ ನೀತಿ -2025’ ಜಾರಿಗೆ ತರುವ ಬಗ್ಗೆ ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸುವ

ಮಹಿಳೆಯರಿಗೆ ಮಾಸಿಕ ಒಂದು ದಿನ ಋತುಚಕ್ರ ರಜೆ| ಇಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ Read More »

ಬಿಗ್ ಬಾಸ್ ಶೋ ಪುನರಾರಂಭಕ್ಕೆ ಡಿಸಿಎಂ ಸೂಚನೆ|

ಸಮಗ್ರ ನ್ಯೂಸ್: ನಿಯಮ ಉಲ್ಲಂಘನೆ ಆರೋಪದ ಮೇರೆಗೆ ಪೊಸ್ಥಗಿತವಾಗಿದ್ದ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಅಭಿಮಾನಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಶೀಘ್ರದಲ್ಲೇ ಶೋ ಪುನಾರಂಭಗೊಳ್ಳಲಿದೆ. ಸ್ಥಗಿತಗೊಂಡಿದ್ದ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋಗೆ ಡಿಸಿಎಂ ಡಿಕೆ ಶಿವಕುಮಾರ್ ಮಧ್ಯಸ್ಥಿಕೆ ವಹಿಸಿದ್ದು, ತಪ್ಪು ಸರಿಪಡಿಸಿಕೊಳ್ಳಲು ಜಾಲಿವುಡ್ ಸ್ಟುಡಿಯೋಸ್‌ಗೆ ಮತ್ತೊಂದು ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಕಂದಾಯ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಆರೋಪದ ಮೇಲೆ ಕರ್ನಾಟಕದ ಜನಪ್ರಿಯ ರಿಯಾಲಿಟಿ

ಬಿಗ್ ಬಾಸ್ ಶೋ ಪುನರಾರಂಭಕ್ಕೆ ಡಿಸಿಎಂ ಸೂಚನೆ| Read More »

ನೇಪಾಳದಲ್ಲಿ ಭಾರೀ ಭೂಕುಸಿತ| ಕನಿಷ್ಟ 51 ಮಂದಿ ಸಾವು

ಸಮಗ್ರ ನ್ಯೂಸ್: ಪೂರ್ವ ನೇಪಾಳದ ವಿವಿಧ ಸ್ಥಳಗಳಲ್ಲಿ ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಉಂಟಾದ ಭೂಕುಸಿತ ಮತ್ತು ಪ್ರವಾಹದಲ್ಲಿ ಭಾನುವಾರ ಬೆಳಿಗ್ಗೆವರೆಗೆ ಕನಿಷ್ಠ 51 ಜನರು ಸಾವನ್ನಪ್ಪಿದ್ದಾರೆ ಎಂದು ಸಶಸ್ತ್ರ ಪೊಲೀಸ್ ಪಡೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳೆದ ಎರಡು ದಿನಗಳಲ್ಲಿ ಭಾರೀ ಮಳೆಯಿಂದ ಉಂಟಾದ ಭೂಕುಸಿತಗಳಿಂದಾಗಿ ಕೋಶಿ ಪ್ರಾಂತ್ಯದ ಇಲಾಮ್ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಸುಮಾರು 37 ಜನರು ಸಾವನ್ನಪ್ಪಿದ್ದಾರೆ ಎಂದು ಸಶಸ್ತ್ರ ಪೊಲೀಸ್ ಪಡೆಯ ವಕ್ತಾರ ಕಾಳಿದಾಸ್ ಧೌಬಾಜಿ ತಿಳಿಸಿದ್ದಾರೆ. 37 ಜನರಲ್ಲಿ, ದೆಯುಮೈ ಮತ್ತು

ನೇಪಾಳದಲ್ಲಿ ಭಾರೀ ಭೂಕುಸಿತ| ಕನಿಷ್ಟ 51 ಮಂದಿ ಸಾವು Read More »

ಬಿಗ್ ಬಾಸ್ -12 ಸ್ಟುಡಿಯೋ ಸೀಜ್| ರೆಸಾರ್ಟ್ ಗೆ ಶಿಪ್ಟ್ ಆದ ಸ್ಪರ್ಧಿಗಳು

ಸಮಗ್ರ ನ್ಯೂಸ್: ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್‌ ಬಾಸ್‌ ಮನೆಗೆ ಬೀಗ ಹಾಕಲಾಗಿದ್ದು, ಶೋ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋಸ್​ಗೆ ಬೀಗಮುದ್ರೆ ಬಿದ್ದಿದೆ ಬೆಂಗಳೂರು ದಕ್ಷಿಣ ಜಿಲ್ಲಾಡಳಿತದ ಅಧಿಕಾರಿಗಳು ಸ್ಟುಡಿಯೋಸ್​ಗೆ ದೌಡಾಯಿಸಿದ್ದು, ವೇಲ್ಸ್ ಸ್ಟುಡಿಯೋಸ್ ಮತ್ತು ಎಂಟರ್ಟೈನ್ಮೆಂಟ್ ಪ್ರೈವೇಟ್ ಲಿಮಿಟೆಡ್​ಗೆ ಬೀಗಮುದ್ರೆ ಹಾಕಲಾಗಿದೆ. ಬಿಗ್ ಬಾಸ್ ಬಂದ್ ಮಾಡುವಂತೆ ನೋಟಿಸ್ ನೀಡಿದ್ದರು. ಆದರೆ ನೋಟಿಸ್ ಪಡೆಯಲು ಜಾಲಿವುಡ್ ವೀಡಿಯೋಸ್ ಹಿಂದಿಟು ಹಾಕಿದ್ದರು. ಹಾಗಾಗಿ ಇದೇ ಕಾರಣಕ್ಕೆ ಘಟನಾ ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಪೊಲೀಸರು ಆಗಮಿಸಿದ್ದರು, ಇದೀಗ ತಹಶೀಲ್ದಾರ್‌

ಬಿಗ್ ಬಾಸ್ -12 ಸ್ಟುಡಿಯೋ ಸೀಜ್| ರೆಸಾರ್ಟ್ ಗೆ ಶಿಪ್ಟ್ ಆದ ಸ್ಪರ್ಧಿಗಳು Read More »

ಸೌಜನ್ಯ ಕೊಲೆ ಪ್ರಕರಣಕ್ಕೆ 13 ವರ್ಷ| ಅ.9ರಂದು ಬೆಳ್ತಂಗಡಿಯಲ್ಲಿ ಜನಾಗ್ರಹ ದಿ‌ನ ಆಚರಣೆ

ಸಮಗ್ರ ನ್ಯೂಸ್: ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಅ. 9ರಂದು 13 ವರ್ಷ ತುಂಬುತ್ತಿದ್ದು ಆ ದಿನವನ್ನು ರಾಜ್ಯದಾದ್ಯಂತ ನ್ಯಾಯಕ್ಕಾಗಿ ಜನಾಗ್ರಹ ದಿನವನ್ನಾಗಿ ಆಚರಿಸಲು ‘ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ’ ಕರೆ ನೀಡಿದೆ. ಅಂದು ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ತಹಶೀಲ್ದಾರ್, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು. ವೇದವಲ್ಲಿ, ಪದ್ಮಲತಾ, ಆನೆ ಮಾವುತ ನಾರಾಯಣ, ಸಹೋದರಿ ಯಮುನಾ ಮತ್ತು ಸೌಜನ್ಯಾ ಪ್ರಕರಣಗಳಲ್ಲಿ ನ್ಯಾಯ ಸಿಗಬೇಕು‌. ಎಸ್‌ಐಟಿ ತನಿಖೆ ಸರಿಯಾದ ದಾರಿಯಲ್ಲಿ ಸಾಗಬೇಕು ಮತ್ತು ಸೌಜನ್ಯಾ ಪರ

ಸೌಜನ್ಯ ಕೊಲೆ ಪ್ರಕರಣಕ್ಕೆ 13 ವರ್ಷ| ಅ.9ರಂದು ಬೆಳ್ತಂಗಡಿಯಲ್ಲಿ ಜನಾಗ್ರಹ ದಿ‌ನ ಆಚರಣೆ Read More »

ಸಮೀಕ್ಷೆ ಮುಗಿಯದ ಹಿನ್ನಲೆ|ಅ.18ರವರೆಗೆ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಇಂದು ಸಮೀಕ್ಷೆ ಮುಕ್ತಾಯಗೊಳ್ಳಬೇಕಿತ್ತು. ಆದರೇ ಸಮೀಕ್ಷೆ ಪೂರ್ಣಗೊಳ್ಳದ ಹಿನ್ನಲೆಯಲ್ಲಿ ಅಕ್ಟೋಬರ್18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆಯನ್ನು ನೀಡಲು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಇಂದು ಈ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು, ಸದಸ್ಯರು ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು. ಜಾತಿಗಣತಿ ಸಮೀಕ್ಷೆ ಮುಕ್ತಾಯವಾಗದ ಹಿನ್ನಲೆಯಲ್ಲಿ

ಸಮೀಕ್ಷೆ ಮುಗಿಯದ ಹಿನ್ನಲೆ|ಅ.18ರವರೆಗೆ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ Read More »

ಬಿಹಾರ ವಿಧಾನ ಸಭೆಗೆ ಚುನಾವಣೆ ಘೋಷಣೆ| ನ.6 ಮತ್ತು 11ರಂದು ಮತದಾನ

ಸಮಗ್ರ ನ್ಯೂಸ್: ಬಹು ನಿರೀಕ್ಷಿತ ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, 14ರಂದು ಮತ ಎಣಿಕೆ ಮಾಡಲಾಗುತ್ತದೆ. ಸೋಮವಾರ (ಅ.6) ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ನವೆಂಬರ್ 6ರಂದು ಮೊದಲ ಹಂತದಲ್ಲಿ 121 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಈ ಕುರಿತು ಅಕ್ಟೋಬರ್ 10ರಂದು ಅಧಿಸೂಚನೆ ಹೊರಡಿಸಲಾಗುವುದು. ಅಕ್ಟೋಬರ್ 17 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ ಮತ್ತು

ಬಿಹಾರ ವಿಧಾನ ಸಭೆಗೆ ಚುನಾವಣೆ ಘೋಷಣೆ| ನ.6 ಮತ್ತು 11ರಂದು ಮತದಾನ Read More »

ಬಿಗ್ ಬಾಸ್ -12 ಬಂದ್ ಮಾಡಲು ಮಾಲಿನ್ಯ ನಿಯಂತ್ರಣ ಮಂಡಳಿ ನೋಟೀಸ್ ಜಾರಿ

ಸಮಗ್ರ ನ್ಯೂಸ್: ಬಿಗ್ ಬಾಸ್ ಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದೆ. ತ್ಯಾಜ್ಯ ನೀರು ಸಂಸ್ಕರಣ ಘಟಕ ನಿರ್ಮಿಸಿದ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇದೀಗ ನೋಟಿಸ್ ನೀಡಿದ್ದು ಮಾಡುವಂತೆ ನೋಟಿಸ್ ನೀಡಲಾಗಿದೆ. ಬಿಗ್ ಬಾಸ್ ಹೌಸ್ ಸಂಪೂರ್ಣವಾಗಿ ಬಂದು ಮಾಡುವಂತೆ ಕರ್ನಾಟಕ ವಾಯುವ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದ್ದು ಶೋ ನಡೆಯುತ್ತಿರುವ ಸಂದರ್ಭದಲ್ಲಿ ಈ ರೀತಿ ನೋಟಿಸ್ ನೀಡಿದ್ದು ಬಿಗ್ ಬಾಸ್ ವೀಕ್ಷಕರಿಗೆ ಶಾಕ್ ನೀಡಿದೆ. ಫ್ಲಾಟ್ ನಂಬರ್

ಬಿಗ್ ಬಾಸ್ -12 ಬಂದ್ ಮಾಡಲು ಮಾಲಿನ್ಯ ನಿಯಂತ್ರಣ ಮಂಡಳಿ ನೋಟೀಸ್ ಜಾರಿ Read More »

ಅಂಚೆ ಕಚೇರಿಯ ಈ ನಿರಖು ಠೇವಣಿಯಲ್ಲಿ ಗಳಿಸಬಹುದು ಗರಿಷ್ಠ ಲಾಭ| ಯಾವುದೇ ರಿಸ್ಕ್ ಇಲ್ಲದ ಹೂಡಿಕೆ ಇದು…

ಸಮಗ್ರ ನ್ಯೂಸ್: ಸಾಮಾನ್ಯವಾಗಿ ನಾವು ಬ್ಯಾಂಕ್ ಠೇವಣಿ ಯೋಜನೆಗಳ ಬಗ್ಗೆ ಯೋಚಿಸಿದಾಗ, ನಮ್ಮ ಮನಸ್ಸಿಗೆ ಬರುವ ಮೊದಲ ವಿಷಯವೆಂದರೆ ಸ್ಥಿರ ಠೇವಣಿ ಯೋಜನೆಗಳು. ಪ್ರಸ್ತುತ, ಬ್ಯಾಂಕುಗಳು ಸ್ಥಿರ ಠೇವಣಿ ಯೋಜನೆಗಳ ಮೇಲೆ ಉತ್ತಮ ಬಡ್ಡಿದರಗಳನ್ನು ನೀಡುತ್ತಿವೆ. ಅದೇ ರೀತಿ, ಹಿರಿಯ ನಾಗರಿಕರಿಗೆ ಸ್ಥಿರ ಠೇವಣಿ ಯೋಜನೆಗಳ ಮೇಲಿನ ಬಡ್ಡಿದರಗಳು ಸಾಮಾನ್ಯ ಜನರಿಗಿಂತ ಹೆಚ್ಚಾಗಿದೆ. ನೀವು ಬಯಸಿದರೆ, ನಿಮ್ಮ ಕುಟುಂಬದ ವಯಸ್ಸಾದ ವ್ಯಕ್ತಿಯ ಹೆಸರಿನಲ್ಲಿಯೂ ನೀವು ಸ್ಥಿರ ಠೇವಣಿ ಮಾಡಬಹುದು. ಪ್ರಸ್ತುತ ಎಫ್‌ಡಿಗಳನ್ನು ಬಹಳ ಜನಪ್ರಿಯ ಹೂಡಿಕೆಯಾಗಿ ನೋಡಲಾಗುತ್ತದೆ.

ಅಂಚೆ ಕಚೇರಿಯ ಈ ನಿರಖು ಠೇವಣಿಯಲ್ಲಿ ಗಳಿಸಬಹುದು ಗರಿಷ್ಠ ಲಾಭ| ಯಾವುದೇ ರಿಸ್ಕ್ ಇಲ್ಲದ ಹೂಡಿಕೆ ಇದು… Read More »