ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಪ್ರತಿಮೆ ಅನಾವರಣಕ್ಕೆ ಸಿದ್ಧ| ರಾಜ್ಯದ ಅತೀ ದೊಡ್ಡ ಪ್ರತಿಮೆಗೆ ಬಿಜೆಪಿಯಿಂದ ವಿರೋಧ
ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ 15 ಅಡಿ ಎತ್ತರದ ಕಂಚಿನ ಪ್ರತಿಮೆ ಶೇಷಾದ್ರಿಪುರದಲ್ಲಿ ಅನಾವರಣಗೊಳ್ಳಲು ಸಿದ್ಧವಾಗಿದೆ.ರಾಜ್ಯದಲ್ಲೇ ಅತಿ ಎತ್ತರದ ರಾಜೀವ್ ಗಾಂಧಿ ಪ್ರತಿಮೆ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಲಿದೆ. ಜಂಕ್ಷನ್ಗಳ ಅಭಿವೃದ್ಧಿ ಯೋಜನೆಯಡಿ ಬಿಬಿಎಂಪಿ ನಗರದಲ್ಲಿ 25 ಜಂಕ್ಷನ್ಗಳನ್ನು ಅಭಿವೃದ್ಧಿ ಮಾಡುತ್ತಿದ್ದು, ಶೇಷಾದ್ರಿಪುರ, ಪ್ಲಾಟ್ಫಾರ್ಮ್ ರಸ್ತೆ ಹಾಗೂ ಸಂಪಿಗೆ ರಸ್ತೆ ಸೇರುವ ಜಂಕ್ಷನ್ನಲ್ಲಿ ‘ರಾಜೀವ್ ಗಾಂಧಿ ಸ್ಕ್ವೇರ್’ ನಿರ್ಮಿಸಲಾಗುತ್ತಿದೆ. ‘ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆ ಮೇರೆಗೆ ಪ್ರತಿಮೆಯನ್ನು ಸ್ಥಾಪಿಸಲಾಗುತ್ತಿದೆ.










