ರಾಜ್ಯ

ಗಣರಾಜ್ಯೋತ್ಸವ ಹಿನ್ನಲೆ| ಮುಜರಾಯಿ ದೇಗುಲಗಳಲ್ಲಿ ದೀಪಾಲಂಕಾರಕ್ಕೆ ಸುತ್ತೋಲೆ

ಸಮಗ್ರ ನ್ಯೂಸ್: 75ನೇ ಗಣರಾಜ್ಯೋತ್ಸವದ ಹಿನ್ನೆಲೆ ಜನವರಿ 25 ಹಾಗೂ 26 ರಂದು ರಾಜ್ಯದ ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆಸಂಬಂಧಿಸಿದ ಎಲ್ಲಾ ಸಂಸ್ಥೆಗಳು ಹಾಗೂ ದೇವಾಲಯಗಳಲ್ಲಿ ವಿಶೇಷ ವಿದ್ಯುತ್‌ ದೀಪಾಲಂಕಾರಕ್ಕೆ ವ್ಯವಸ್ಥೆ ಮಾಡಲು ಸುತ್ತೋಲೆ ಹೊರಡಿಸಲಾಗಿದೆ. ಜನವರಿ 26 ರಂದು ದೇವಾಲಯಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ವ್ಯವಸ್ಥೆಗಳನ್ನು ಮಾಡಬೇಕು ಎಂದು ಹಿಂದೂ ಧಾರ್ಮಿಕ ದತ್ತಿ ಇಲಾಖೆ ತಿಳಿಸಿದೆ. ಕರ್ನಾಟಕ ಸರ್ಕಾರ ಪ್ರತಿ ವರ್ಷ ಗಣರಾಜ್ಯೋತ್ಸವ ವೇಳೆಗೆ ಅನುದಾನ ಬಿಡುಗಡೆ ಮಾಡುತ್ತದೆ. ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ 50 ಲಕ್ಷ

ಗಣರಾಜ್ಯೋತ್ಸವ ಹಿನ್ನಲೆ| ಮುಜರಾಯಿ ದೇಗುಲಗಳಲ್ಲಿ ದೀಪಾಲಂಕಾರಕ್ಕೆ ಸುತ್ತೋಲೆ Read More »

ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ಪರದಾಟ

ಸಮಗ್ರ ನ್ಯೂಸ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರಿ ಪಾಳಯದಲ್ಲಿ ವೈದ್ಯರಿಲ್ಲದೆ ರೋಗಿಗಳು ಪರದಾಡುವಂತಾಗಿದೆ. ಮಂಗಳವಾರ ರಾತ್ರಿ ಅಪಘಾತದಲ್ಲಿ ಗಾಯಗೊಂಡು ಓರ್ವ ವ್ಯಕ್ತಿ ಆಸ್ಪತ್ರೆಗೆ ಬಂದಿದ್ದಾರೆ. ಆದರೆ ಗಾಯಾಳು ಬಂದ ಸಮಯದಲ್ಲಿ ಶಿಪ್ಟ್ ಬದಲಾವಣೆಯಾಗಿದ್ದು, ಈ ವೇಳೆ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಇರಲಿಲ್ಲ. ಗಂಟೆ ಗಟ್ಟಲೆ ಕಾದರು ವೈದ್ಯರು ಹಾಗೂ ಸಿಬ್ಬಂದಿ ಚಿಕಿತ್ಸೆ ನೀಡಲು ಬರಲಿಲ್ಲ. ಇದರಿಂದ ಗಾಯಳು ನೋವಿನಿಂದ ನರಳುವಂತಾಯಿತು. ಕಡೆಗೆ ಕೆಲ ಸಮಯದ ನಂತರ ಓರ್ವ ವೈದ್ಯ ಬಂದು ಚಿಕಿತ್ಸೆ

ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ಪರದಾಟ Read More »

ಇಂದು ಬೆಂಗಳೂರಿಗೆ ಅರುಣ್ ಯೋಗಿರಾಜ್ ಆಗಮನ… ಭವ್ಯ ಸ್ವಾಗತಕ್ಕೆ ತಯಾರಿ

ಸಮಗ್ರ ನ್ಯೂಸ್: ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಆಗಿ ಎರಡು ದಿನದ ಈ ಸಂಭ್ರಮದಲ್ಲಿ ಜನರೂ ಅಯೋಧ್ಯೆಯತ್ತ ರಾಮಲಲ್ಲಾನ ನೋಡಲು ಮುಗಿಬಿದ್ದಿದ್ದಾರೆ.ಅದೇ ಬಾಲರಾಮನ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಇಷ್ಟು ದಿನ ಅಯೋಧ್ಯೆಯಲ್ಲಿದ್ದು ಇಂದು ಕರುನಾಡಿಗೆ ವಾಪಸ್ಸಾಗುತ್ತಿದ್ದಾರೆ. ಇಂದು ಬೆಂಗಳೂರಿಗೆ ಅರುಣ್ ಯೋಗಿರಾಜ್ ಆಗಮನವಾಗಲಿದೆ. ಸಂಜೆ 5.30ಕ್ಕೆ ಕೆಂಪೇಗೌಡ ಏರ್‌ಪೋರ್ಟ್ಗೆ ಅರುಣ್ ಆಗಮಿಸಲಿದ್ದು ಭವ್ಯ ಸ್ವಾಗತ ಕೋರಲು ಹಿಂದೂ ಸಮಾಜದ ಮುಖಂಡರು ತಯಾರಾಗಿದ್ದಾರೆ. ಅಯೋಧ್ಯೆಯಲ್ಲಿ ಮಾತನಾಡಿದ ಶಿಲ್ಪಿ ಅರುಣ್ ಯೋಗಿರಾಜ್ ರಾಮಲಲ್ಲಾ ಮೂರ್ತಿ ಕೆತ್ತುವ ಕೆಲಸ ಕೊಟ್ಟಿದ್ದಕ್ಕೆ ಧನ್ಯವಾದ,

ಇಂದು ಬೆಂಗಳೂರಿಗೆ ಅರುಣ್ ಯೋಗಿರಾಜ್ ಆಗಮನ… ಭವ್ಯ ಸ್ವಾಗತಕ್ಕೆ ತಯಾರಿ Read More »

ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಕಮಾಂಡರ್ ಆಗಿ ಪುಣ್ಯಪೊನ್ನಮ್ಮ ಆಯ್ಕೆ

ಸಮಗ್ರ ನ್ಯೂಸ್: ಮಡಿಕೇರಿ ಮೂಲದ ಪುಣ್ಯ ಪೊನ್ನಮ್ಮ ದೆಹಲಿಯಲ್ಲಿ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ಪೆರೆಡ್ ನಲ್ಲಿ ಎನ್‌ಸಿಸಿಯ ಅಖಿಲ ಭಾರತ ಯುವತಿಯರ ವಿಭಾಗದ ಕಮಾಂಡರ್ ಆಗಿ ಪಾಲ್ಗೊಳ್ಳುತ್ತಿದ್ದಾಳೆ. ಪುಣ್ಯ ಪೊನ್ನಮ್ಮ ಮಡಿಕೇರಿಯ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಅನೂಪ್ ಮಾದಪ್ಪ ಮತ್ತು ಫೀಲ್ಡ್ ಕಾರ್ಯಪ್ಪ ಕಾಲೇಜು ಉಪನ್ಯಾಸಕಿ ವಿನಿತ ದೇಚಮ್ಮ ದಂಪತಿಯ ಪುತ್ರಿಯಾಗಿದ್ದಾಳೆ. ಎನ್‌ಸಿಸಿ ಕೆಡೆಟ್ ಆಗಿ ಹಲವಾರು ಕ್ಯಾಂಪ್ ಗಳಲ್ಲಿ ಪಾಲ್ಗೊಂಡು ಅತ್ಯುತ್ತಮ ಸಾಧನೆ ತೋರಿದ್ದಾಳೆ. ಪ್ರಸ್ತುತ ಬೆಂಗಳೂರಿನ ಕ್ರೈಸ್ಟ್ ವಿಶ್ವವಿದ್ಯಾನಿಲಯದಲ್ಲಿ ಮೂರನೇ ವರ್ಷದ ಲಾ

ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಕಮಾಂಡರ್ ಆಗಿ ಪುಣ್ಯಪೊನ್ನಮ್ಮ ಆಯ್ಕೆ Read More »

ಮಡಿಕೇರಿ:ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತರಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೊಡಗು ಜಿಲ್ಲಾ ಅಂಗನವಾಡಿ ನೌಕರರು ಹಾಗೂ ಸಿ.ಐ.ಟಿ.ಯು ನೇತೃತ್ವದಲ್ಲಿ ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜ. 23 ರಂದು ಪ್ರತಿಭಟನೆ ನಡೆಸಲಾಯಿತು. ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರು ತಮ್ಮ ಕನಿಷ್ಠ ವೇತನ ಮತ್ತು ಪಿಂಚಣಿ ಸೌಲಭ್ಯ ಕಲ್ಪಿಸುವಂತೆ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು, ಅಗನವಾಡಿ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳು ಪ್ರಸ್ತುತ ಮಾಸಿಕ 11.500 ರೂ ಗೌರವ ಧನವನ್ನಷ್ಟೇ ಪಡೆಯುತ್ತಿದ್ದಾರೆ. 2017ರ ಬಳಿಕ

ಮಡಿಕೇರಿ:ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತರಿಂದ ಪ್ರತಿಭಟನೆ Read More »

FIH ವಿಶ್ವಕಪ್ ಹಾಕಿ ತಾಂತ್ರಿಕ ಅಧಿಕಾರಿಯಾಗಿ ಕೊಡಗಿನ ರೋಹಿಣಿ ಬೋಪಣ್ಣ ಆಯ್ಕೆ

ಸಮಗ್ರ ನ್ಯೂಸ್: ಕೊಡಗಿನ ಪುಳ್ಳಂಗಡ ರೋಹಿಣಿ ಬೋಪಣ್ಣ ಅವರು ಜ. 24ರಿಂದ ಮಸ್ಕಟ್, ಓಮನ್ ನಲ್ಲಿ ನಡೆಯುವ FIH ವಿಶ್ವ ಕಪ್ ಹಾಕಿ ಟೂರ್ನಮೆಂಟ್ ನ ತಾಂತ್ರಿಕ ಅಧಿಕಾರಿಯಾಗಿ ಆಯ್ಕೆಯಾಗಿದ್ದಾರೆ. ರೋಹಿಣಿ ಬೋಪಣ್ಣ ಅವರುಕೊಡಗು ಜೆಲ್ಲೆಯ ಪೊನ್ನಂಪೇಟೆ ತಾಲೂಕಿನ ಬೇಸಗೂರು ಗ್ರಾಮದವರಾಗಿದ್ದಾರೆ.

FIH ವಿಶ್ವಕಪ್ ಹಾಕಿ ತಾಂತ್ರಿಕ ಅಧಿಕಾರಿಯಾಗಿ ಕೊಡಗಿನ ರೋಹಿಣಿ ಬೋಪಣ್ಣ ಆಯ್ಕೆ Read More »

ಕೊಡಗು: ಜ.26 ರಿಂದ 28ರವರೆಗೆ ಫಲಪುಷ್ಪ ಪ್ರದರ್ಶನ

ಸಮಗ್ರ ನ್ಯೂಸ್:ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಜ. 26 ರಿಂದ 28ರವರೆಗೆ ನಗರದ ರಾಜಸೀಟ್ ಉದ್ಯಾನವನ ಹಾಗೂ ಗಾಂಧಿ ಮೈದಾನದಲ್ಲಿ ‘ಫಲಪುಷ್ಪ ಪ್ರದರ್ಶನ’ ನಡೆಯಲಿದೆ. ಫಲಪುಷ್ಪ ಪ್ರದರ್ಶನದ ಉದ್ಘಾಟನೆಯು ಜ. 26ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ತೋಟಗಾರಿಕೆ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ||

ಕೊಡಗು: ಜ.26 ರಿಂದ 28ರವರೆಗೆ ಫಲಪುಷ್ಪ ಪ್ರದರ್ಶನ Read More »

ಆನೇಕಲ್ ನಲ್ಲಿ ಹೆಚ್ಚಾಯ್ತು ಸರಗಳ್ಳರ ಹಾವಳಿ… ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಸಮಗ್ರ ನ್ಯೂಸ್: ಆನೇಕಲ್​ನಲ್ಲಿ ಕಳೆದೊಂದು ತಿಂಗಳಿನಿಂದ ಸರಗಳ್ಳರ ಹಾವಳಿ ಮಿತಿಮೀರಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿ ಸಿಕ್ಕ ಸಿಕ್ಕಲ್ಲಿ ಸರಗಳ್ಳತನ ನಡೆಯುತ್ತಿದೆ. ಅತ್ತಿಬೆಲೆ, ಸೂರ್ಯನಗರ, ಜಿಗಣಿ, ಆನೇಕಲ್ ನಲ್ಲಿ ಸರಣಿ ಕಳ್ಳತನ ಪ್ರಕರಣಗಳು ದಾಖಲಾಗಿವೆ. ಸರಣಿ ಚೈನ್ ಸ್ನ್ಯಾಚಿಂಗ್ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ ಸಿಕ್ಕಿದೆ. ಆನೇಕಲ್ ನಲ್ಲಿ ಪಲ್ಸರ್ ಎನ್ ಎಸ್ ಬೈಕ್​ನಲ್ಲಿ ಬರುವ ಖದೀಮರು ಮಹಿಳೆಯರ ಬಳಿ ಚಿನ್ನದ ಸರ ದೋಚಿ ಪರಾರಿಯಾಗುತ್ತಿದ್ದಾರೆ. ರಾಜಾರೋಷವಾಗಿ ಕತ್ತಿಗೆ ಕೈ ಹಾಕಿ ಸರ ಕಳ್ಳತನ ಮಾಡುತ್ತಿದ್ದಾರೆ. ಇದರಿಂದ ಜನರು

ಆನೇಕಲ್ ನಲ್ಲಿ ಹೆಚ್ಚಾಯ್ತು ಸರಗಳ್ಳರ ಹಾವಳಿ… ಸಿಸಿಟಿವಿಯಲ್ಲಿ ದೃಶ್ಯ ಸೆರೆ Read More »

ಅರ್ಚಕರ ವೇತನ ವಾಪಸ್ಸು ಕೇಳಿದ ಸರ್ಕಾರ.‌‌‌…ಹಿರೇಮಗಳೂರು ಕಣ್ಣಣ್ ಅವರಿಗೆ ನೋಟಿಸ್

ಸಮಗ್ರ ನ್ಯೂಸ್: ಮುಜರಾಯಿ ಇಲಾಖೆಯಡಿ ಬರುವ ದೇವಾಲಯದ ಆದಾಯಕ್ಕಿಂತ ಹೆಚ್ಚು ಸಂಬಳ ನೀಡಲಾಗಿದೆ ಎಂಬ ಆರೋಪದಡಿ ಹಿರಿಯ ಅರ್ಚಕ, ಸಾಹಿತಿ ಹಿರೇಮಗಳೂರು ಕಣ್ಣಣ್ ಅವರಿಗೆ ರಾಜ್ಯ ಸರ್ಕಾರ ನೋಟಿಸ್ ನೀಡಿದೆ. ಹಿರೇಮಗಳೂರು ಕಣ್ಣನ್ ಅವರು ಹಿರೇಮಗಳೂರು ಗ್ರಾಮದಲ್ಲಿರುವ ಕೊಂದಡ ರಾಮಚಂದ್ರಸ್ವಾಮಿ ದೇವಾಲಯದ ಅರ್ಚಕರಾಗಿದ್ದಾರೆ. ಕಣ್ಣನ್ ಅವರು ಅರ್ಚಕರಾಗಿರುವ ದೇವಾಲಯದ ಆದಾಯ ಕಡಿಮೆ ಇದ್ದು, ಸಂಬಳ ಹೆಚ್ಚುವರಿಯಾಗಿ ಪಾವತಿ ಆಗಿದೆ. ಹೀಗಾಗಿ 4,500 ರೂಪಾಯಿಯಂತೆ 10 ವರ್ಷದ 4,74,000 ರೂ. ಹಣವನ್ನು ವಾಪಸ್ ನೀಡುವಂತೆ ತಹಶೀಲ್ದಾರ್ ಸೂಚನೆ ನೀಡಿದ್ದಾರೆ

ಅರ್ಚಕರ ವೇತನ ವಾಪಸ್ಸು ಕೇಳಿದ ಸರ್ಕಾರ.‌‌‌…ಹಿರೇಮಗಳೂರು ಕಣ್ಣಣ್ ಅವರಿಗೆ ನೋಟಿಸ್ Read More »

ಕಾಂಗ್ರೇಸನಿಂದ ಹಿಂದೂಗಳ ಮೇಲೆ ದಾಳಿ; ನಯನ ತಳವಾರ

ಸಮಗ್ರ ನ್ಯೂಸ್: ಕನ್ನಡದ ಪುಜಾರಿ, ಕಣ್ಮಣಿ, ದೇಶ ಕಂಡ ಧೀಮಂತ ಚಿಂತಕ ಹಿರೇಮಗಳೂರು ಕಣ್ಣನ್ ಸೇರಿದಂತೆ ಅರ್ಚಕರಿಗೆ ಸರ್ಕಾರ ಕೊಟ್ಟ ಸಂಬಳವನ್ನು ವಾಪಸ್ ನೀಡಿ ಎಂದು ನೋಟಿಸ್ ನೀಡಿರುವುದು ಹಿಂದೂ ಶ್ರದ್ಧಾ ಕೇಂದ್ರ ದೇವಸ್ಥಾನಗಳನ್ನು ಮುಚ್ಚುವ ಕಾಂಗ್ರೇಸ್ ಸರ್ಕಾರದ ಹುನ್ನಾರ ಎಂದು ಬಿಜೆಪಿ ವಕ್ತಾರ ನಯನ ತಳವಾರ ಅರೋಸಿದ್ದಾರೆ. ಶ್ರೀರಾಮ ದೇವಸ್ಥಾನ ನಿರ್ಮಾಣ ವಿರೋದಿಸಿ ಪ್ರಾಣ ಪ್ರತಿಷ್ಠಾಪನೆ ಒಂದು ದಿನದ ರಜೆಯನ್ನು ನೀಡದೆ ಮಕ್ಕಳು, ಪೋಷಕರು ಮತ್ತು ಹಿಂದೂಗಳಿಂದ ಶಾಪ ಹಾಕಿಸಿಕೊಳ್ಳುತ್ತಿರುವ ಸಮಯದಲ್ಲೇ ಕನ್ನಡದಲ್ಲೇ ಮಂತ್ರ ಉಚ್ಚಾರಗಳನ್ನು

ಕಾಂಗ್ರೇಸನಿಂದ ಹಿಂದೂಗಳ ಮೇಲೆ ದಾಳಿ; ನಯನ ತಳವಾರ Read More »