ರಾಜ್ಯ

ಜ.25ರಂದು ಕೊಡಗಿಗೆ ಸಿಎಂ ಭೇಟಿ| ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲಾ ಪೊಲೀಸ್ ವರಿಷ್ಟ ಅಧಿಕಾರಗಳ ಕಚೇರಿಯ ನೂತನ ಕಟ್ಟಡ ಉದ್ಘಾಟನೆ ಹಾಗೂ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ, ಭೂಮಿ ಪೂಜೆಯನ್ನು ನೆರವೇರಿಸಲು ಜ. 25ರಂದು ರಾಜ್ಯದ ಮುಖ್ಯಮಂತ್ರಿಗಳು ಕೊಡಗಿಗೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ವಿರಾಜಪೇಟೆ ಹಾಗೂ ಮಡಿಕೇರಿಯಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ ವಿರಾಜಪೇಟೆಯ ಸೆಂಟೆನ್ಸ್ ಮೈದಾನದಲ್ಲಿ ವಿರಾಜ್ ಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ನಡೆಯಲಿದ್ದು, ನಂತರ ಮಡಿಕೇರಿಯಲ್ಲಿ ಆಯೋಜಿಸಲಾಗಿರುವ ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ

ಜ.25ರಂದು ಕೊಡಗಿಗೆ ಸಿಎಂ ಭೇಟಿ| ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ Read More »

ಇಂದು ಪಿಎಸ್​ಐ ಮರು ಪರೀಕ್ಷೆ| 117 ಪರೀಕ್ಷಾ ಕೇಂದ್ರದಲ್ಲಿ ಭದ್ರತೆ

ಸಮಗ್ರ ನ್ಯೂಸ್: ಇಂದು 545 ಪೊಲೀಸ್ ಸಬ್​ ಇನ್ಸ್​ಪೆಕ್ಟರ್​ (ಪಿಎಸ್​ಐ) ನೇಮಕಾತಿ ಮರು ಪರೀಕ್ಷೆಯು ನಡೆಯುತ್ತಿದ್ದು, ಬೆಂಗಳೂರಿನ ಒಟ್ಟು 117 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಈ ಹಿನ್ನೆಲ್ಲಿ ಈ ಬಾರಿ ಯಾವುದೇ ಅಕ್ರಮಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅಲ್ಲದೇ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬೆಂಗಳೂರಿನಲ್ಲಿ 117 ಕೇಂದ್ರಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಪರೀಕ್ಷೆ ಮುಗಿಯುವವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್‌ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಈ ಹಿಂದೆ

ಇಂದು ಪಿಎಸ್​ಐ ಮರು ಪರೀಕ್ಷೆ| 117 ಪರೀಕ್ಷಾ ಕೇಂದ್ರದಲ್ಲಿ ಭದ್ರತೆ Read More »

ಸುಳ್ಯದಲ್ಲಿಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ

ಸಮಗ್ರ ನ್ಯೂಸ್: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಮಂಗಳವಾರ ಸುಳ್ಯದಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮ ನಡೆಯಲಿದೆ. ಸುಳ್ಯ ಕೆವಿಜಿ ಪುರಭವನದಲ್ಲಿ ನಡೆಯುವ ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾರ್ವಜನಿಕರ ಕುಂದು ಕೊರತೆ, ಅಹವಾಲುಗಳನ್ನು ಉಸ್ತುವಾರಿ ಸಚಿವರು ಸ್ವೀಕರಿಸಿ, ಪರಿಹಾರ ಒದಗಿಸಲು ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಆಯೋಜಿಸಲಾಗುತ್ತಿರುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್‌ನಿಂದ ವ್ಯವಸ್ಥಿತವಾದ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಇಲಾಖಾವಾರು

ಸುಳ್ಯದಲ್ಲಿಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ Read More »

ಬೆಂಗಳೂರು ಪೊಲೀಸರ ಈ ಎಚ್ಚರಿಕೆ ಫಲಕ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್| ಏನಿದು ಸ್ಮಾರ್ಟ್ ಫೋನ್ ಝೋಂಬಿ?

ಸಮಗ್ರ ನ್ಯೂಸ್: ಬೆಂಗಳೂರಿನ ರಸ್ತೆಯೊಂದರಲ್ಲಿ ಕಂಡುಬಂದ ಆಕರ್ಷಕ ಸೂಚನಾ ಫಲಕವು ಅನೇಕ ನೆಟಿಜನ್‌ಗಳ ಗಮನ ಸೆಳೆಯಿತು. ಇತರ ಸೈನ್‌ಬೋರ್ಡ್‌ಗಳಿಗಿಂತ ಭಿನ್ನವಾಗಿ, ಈ ಬೋರ್ಡ್‌ನಲ್ಲಿ ‘ಸ್ಮಾರ್ಟ್‌ಫೋನ್ ಝೋಂಬಿಗಳ’ ವಿರುದ್ಧ ಎಚ್ಚರಿಕೆ ನೀಡುತ್ತದೆ. ನೀವು ಸರಿಯಾಗಿ ಓದಿದ್ದೀರಿ. ಇದರ ಚಿತ್ರವು ಎಕ್ಸ್‌ನಲ್ಲಿ ವೈರಲ್ ಆಗಿದೆ ಮತ್ತು ಬೋರ್ಡ್‌ನಲ್ಲಿರುವ ಸಂದೇಶವು ಇಂದಿನ ಸಮಯದಲ್ಲಿ ಹೇಗೆ ಬುದ್ಧಿವಂತ ಮತ್ತು ಪ್ರಸ್ತುತವಾಗಿದೆ ಎಂದು ಹೇಳಲು ಅನೇಕ ಜನ ಕಾಮೆಂಟ್ ಮಾಡಿದ್ದಾರೆ. ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ ಎಕ್ಸ್‌ ಹ್ಯಾಂಡಲ್ ಪ್ರಕೃತಿ ಅವರು ಚಿತ್ರವನ್ನು ಹಂಚಿಕೊಂಡಿದ್ದಾರೆ. ಇಬ್ಬರು ವ್ಯಕ್ತಿಗಳು

ಬೆಂಗಳೂರು ಪೊಲೀಸರ ಈ ಎಚ್ಚರಿಕೆ ಫಲಕ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್| ಏನಿದು ಸ್ಮಾರ್ಟ್ ಫೋನ್ ಝೋಂಬಿ? Read More »

ಜ.23ರಿಂದ ಭಕ್ತರ ಭೇಟಿಗೆ ಅಯೋಧ್ಯೆಗೆ ಮುಕ್ತ ಅವಕಾಶ| ಆರತಿ, ದರ್ಶನ ಪಾಸ್ ಪಡೆಯೋದು ಹೇಗೆ?

ಸಮಗ್ರ ನ್ಯೂಸ್: ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಯ ಸೋಮವಾರ ನಡೆದಿದ್ದು, ಭಾರತದ ಪಾಲಿಗೆ ಇದೊಂದು ಐತಿಹಾಸಿಕ ಕ್ಷಣವಾಗಿದೆ. ಜ.22, ಸೋಮವಾರ ಉದ್ಘಾಟನೆಯಾಗಿರುವ ರಾಮ ಮಂದಿರವು ಜ.23, ಮಂಗಳವಾರದಿಂದ ಸಾರ್ವಜನಿಕರಿಗೆ ಮುಕ್ತವಾಗಲಿದೆ. ಜನರು ರಾಮ ಲಲ್ಲಾನ ದರ್ಶನವನ್ನು ಪಡೆದುಕೊಳ್ಳಬಹುದು. ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದರು. ಈ ವೇಳೆ, ಬಾಲಿವುಡ್ ಗಣ್ಯರಾದ ಕತ್ರಿನಾ ಕೈಫ್, ವಿಕ್ಕಿ ಕೌಶಲ್, ಆಲಿಯಾ ಭಟ್, ರಣಬೀರ್ ಕಪೂರ್ ಹಾಗೂ ಉದ್ಯಮಿ ದಂಪತಿ ಮುಕೇಶ್ ಅಂಬಾನಿ, ನೀತಾ

ಜ.23ರಿಂದ ಭಕ್ತರ ಭೇಟಿಗೆ ಅಯೋಧ್ಯೆಗೆ ಮುಕ್ತ ಅವಕಾಶ| ಆರತಿ, ದರ್ಶನ ಪಾಸ್ ಪಡೆಯೋದು ಹೇಗೆ? Read More »

ಜೈ ಶ್ರೀರಾಮ್ ಯಾರೊಬ್ಬರ ಸ್ವತ್ತಲ್ಲ – ಸಿಎಂ

ಸಮಗ್ರ ನ್ಯೂಸ್: ಸೀತಾರಾಮ ದೇವಾಲಯ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿದರು. ಸಮಾರಂಭದಲ್ಲಿ ಮಾತನಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ ಅವರು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಸಿದ್ದರಾಮಯ್ಯ ಅವರು, ಜೈಶ್ರೀರಾಮ್‌ ಎನ್ನುವುದು ಯಾರೊಬ್ಬರ ಸ್ವತ್ತಲ್ಲ. ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಆಶಯ ಶ್ರೀರಾಮನ ಆದರ್ಶ ಮತ್ತು ವ್ಯಕ್ತಿತ್ವದಲ್ಲಿದೆ. ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು ಎನ್ನುವುದೇ ರಾಮಾಯಣ, ಮಹಾಭಾರತದ ಸಂದೇಶ ಎಂದಿದ್ದಾರೆ. ಪರಿಶಿಷ್ಠ ಪಂಗಡ ಸಮುದಾಯದ ವಾಲ್ಮೀಕಿ ಅವರು ರಾಮಾಯಣವನ್ನು

ಜೈ ಶ್ರೀರಾಮ್ ಯಾರೊಬ್ಬರ ಸ್ವತ್ತಲ್ಲ – ಸಿಎಂ Read More »

ನಾಣ್ಯಗಳಲ್ಲಿ ಸಿದ್ಧವಾದ ಅಯೋಧ್ಯೆ ರಾಮ ಮಂದಿರ

ಸಮಗ್ರ ನ್ಯೂಸ್: ಇಂದು ಅಯೋಧ್ಯೆ ಶ್ರೀರಾಮ ಮಂದಿರ ಲೋಕಾರ್ಪಣೆಗೊಳ್ಳಲಿದೆ. ಇದರಲ್ಲಿ ಕರ್ನಾಟಕದ ಪಾಲು ಬಹು ಮಟ್ಟಿಗಿದೆ. ಅದರಲ್ಲೂ ಕರ್ನಾಟಕದಲ್ಲಿ ರಾಮ ಭಕ್ತರ ಕಲಾವಿದರು ರಾಮ ಮಂದಿರದ ಸ್ಥಬ್ದಚಿತ್ರಗಳನ್ನು ರಚಿಸುತ್ತಿದ್ದಾರೆ. ಇತ್ತೀಚೆಗೆ ಪೆನ್ಸಿಲ್ ಲೆಡ್​ನಲ್ಲಿ ರಾಮನ ಕೆತ್ತನೆ, ಕೇಕ್​ನಲ್ಲಿ ಅಯೋಧ್ಯೆ ರಾಮ ಮಂದಿರ ನಿರ್ಮಾಣ, ಚಾಕು ಪೀಸ್ ನಲ್ಲಿ ಶ್ರೀರಾಮ, ಎಲೆಯಲ್ಲಿ ಶ್ರೀರಾಮ, ಜೈ ಶ್ರೀರಾಮ್ ಹೆಸರುಗಳಲ್ಲೇ ರಾಮನ ಚಿತ್ರ ಬಿಡಿಸಿರುವುದು ಸೇರಿದಂತೆ ಅನೇಕ ರೀತಿಯ ಚಿತ್ರಗಳನ್ನು ಬಿಡಿಸಲಾಗಿತ್ತು. ಆದರೆ ಇದೀಗ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉಡುಗೊರೆ

ನಾಣ್ಯಗಳಲ್ಲಿ ಸಿದ್ಧವಾದ ಅಯೋಧ್ಯೆ ರಾಮ ಮಂದಿರ Read More »

ಎಲ್​​ಪಿಜಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಮಹಿಳೆ ಸಾವು

ಸಮಗ್ರ ನ್ಯೂಸ್: ಚಿತ್ರದುರ್ಗದಲ್ಲಿ ಎಲ್​​ಪಿಜಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಹೊಳಲ್ಕೆರೆ ತಾಲೂಕಿನ ಹೊಸಹಳ್ಳಿಯಲ್ಲಿ ಈ ಅವಘಡ ಸಂಭವಿಸಿದ್ದು, ಲಕ್ಷ್ಮಮ್ಮ (38) ಮೃತ ದುರ್ದೈವಿ. ರೇಣುಕಮ್ಮ ಮತ್ತು ರಚನಾ ಎಂಬುವರಿಗೆ ಗಾಯಗಳಾಗಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಮೇಶ್ ಎಂಬುವರ ಬೀದಿ ಬದಿ ಹೋಟೆಲ್​​ಗೆ ಬೆಂಕಿ ಬಿದ್ದಿತ್ತು. ಬೆಂಕಿ ಬಿದ್ದ ವಿಚಾರ ತಿಳಿಯುತ್ತಿದ್ದಂತೆ, ಸುತ್ತಮುತ್ತಲಿದ್ದ ಮಹಿಳಾ ಕಾರ್ಮಿಕರು ಬೀದಿ ಬದಿ ಹೋಟೆಲ್​​ನತ್ತ ಧಾವಿಸಿದ್ದಾರೆ. ಈ ವೇಳೆ ಹೋಟೆಲ್​​ನಲ್ಲಿದ್ದ ಸಿಲಿಂಡರ್​ ಸ್ಪೋಟಗೊಂಡಿದೆ ಸಿಲಿಂಡರ್​

ಎಲ್​​ಪಿಜಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಮಹಿಳೆ ಸಾವು Read More »

ರಾಮಮಂದಿರ ಉದ್ಘಾಟನೆ ಹಿನ್ನಲೆ| ನಾಳೆ ರಾಜ್ಯದಲ್ಲಿ ಸರ್ಕಾರಿ‌ ರಜೆ ಇಲ್ಲ – ಸಿಎಂ

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ನಾಳೆ ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡುವಂತೆ ಬಿಜೆಪಿ ನಾಯಕರು, ಹಿಂದೂ ಸಂಘಟನೆ ಮುಖಂಡರು ಒತ್ತಾಯಿಸಿದ್ದರು. ಇದೀಗ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಳೆ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡುವುದಿಲ್ಲ. ಆದರೆ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ನಾಳೆ ವಿಶೇಷ ಪೂಜೆ ಇರಲಿದೆ ಎಂದು ತಿಳಿಸಿದರು. ನಾಳೆ

ರಾಮಮಂದಿರ ಉದ್ಘಾಟನೆ ಹಿನ್ನಲೆ| ನಾಳೆ ರಾಜ್ಯದಲ್ಲಿ ಸರ್ಕಾರಿ‌ ರಜೆ ಇಲ್ಲ – ಸಿಎಂ Read More »

ಸುಮಲತಾ ಅಂಬರೀಶ್ ಅವರಿಗೆ ಗೌರವ ಡಾಕ್ಟರೇಟ್

ಸಮಗ್ರ ನ್ಯೂಸ್: ಕನ್ನಡ ಚಿತ್ರರಂಗದ ಹಿರಿಯ ನಟಿ ಮತ್ತು ಸಂಸದೆಯಾಗಿರುವ ಸುಮಲತಾ ಅಂಬರೀಶ್ ಅವರಿಗೆ ಗೌರವ ಡಾಕ್ಟರೇಟ್ ಲಭಿಸಿದೆ. ಸಮಾಜ ಸೇವೆ, ರಾಜಕೀಯ ಮತ್ತು ಚಲನಚಿತ್ರಗಳಲ್ಲಿನ ಸೇವೆಗಾಗಿ ಯುಎಸ್​ಎ ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಿಂದ ಅನುಮೋದಿಸಲಾದ ಮತ್ತು ಮಾನ್ಯತೆ ಪಡೆದಿರುವ ಹೈದರಾಬಾದ್​ನ ಯುನೈಟೆಡ್ ಥಿಯೋಲಾಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್​ನಿಂದ ಗೌರವ ಡಾಕ್ಟರೇಟ್ ನೀಡಲಾಗಿದೆ. ಗೌರವ ಡಾಕ್ಟರೇಟ್ ಪಡೆದುಕೊಂಡಿರುವುದಕ್ಕೆ ಸುಮಲತಾ ಅವರು ಗೌರವ ಪೂರ್ವಕವಾಗಿ ಧನ್ಯವಾದವನ್ನು ಅರ್ಪಿಸಿದ್ದಾರೆ. ಈ ಕುರಿತಾಗಿ ಫೇಸ್​ಬುಕ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸದೆ ಸುಮಲತಾ, ಈ ಗೌರವ ನನ್ನ

ಸುಮಲತಾ ಅಂಬರೀಶ್ ಅವರಿಗೆ ಗೌರವ ಡಾಕ್ಟರೇಟ್ Read More »