ರಾಜ್ಯ

ಅಯ್ಯಪ್ಪ ಮಾಲಾಧರಿಗಳಿಗೆ ಅನ್ನ ಸಂತರ್ಪಣೆ ನೀಡಿ ಸೌಹಾರ್ದತೆ ಮೆರೆದ ಮುಸ್ಲಿಂ ಕುಟುಂಬ

ಸಮಗ್ರ ನ್ಯೂಸ್: ಮುಸ್ಲಿಂ ಕುಟುಂಬವೊಂದು ಶಬರಿಮಲೆ ತೀರ್ಥಯಾತ್ರಿಗಳಿಗೆ ಅನ್ನಸಂತರ್ಪಣೆ ಆಯೋಜಿಸಿ ಧಾರ್ಮಿಕ ಸೌಹಾರ್ದತೆ ಮೆರೆದಿರುವ ಸುದ್ದಿಯೊಂದು ಕೊಪ್ಪಳದ ಜಯನಗರದಿಂದ ವರದಿಯಾಗಿದೆ. ಈ ಕುರಿತ ಫೋಟೋಗಳು ಹಾಗೂ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ಜಿಲ್ಲಾ ಪಿಂಜಾರ ಸಮುದಾಯದ ಅಧ್ಯಕ್ಷ ಖಾಶಿಂ ಆಲಿ ಮುದ್ದಬಳ್ಳಿ ಅವರ ನಿವಾಸದಲ್ಲಿಯೇ ಈ ಅನ್ನಸಂತರ್ಪಣೆ ಆಯೋಜಿಸಲಾಗಿತ್ತು. ಅಯ್ಯಪ್ಪ ವೃತಧಾರಿಗಳು ಖಾಶಿಂ ಮನೆಯಲ್ಲಿ ಭಜನೆಗಳನ್ನು ಹಾಡಿ ಅಯ್ಯಪ್ಪನನ್ನು ಆರಾಧಿಸಿದರು. ಖಾಶಿಂ ಅವರ ಕುಟುಂಬ ಸದಸ್ಯರೂ ಪಾಲ್ಗೊಂಡರು. ಎಲ್ಲಾ ಧರ್ಮಗಳೂ ಒಂದೇ ಹಾಗೂ ಎಲ್ಲರೂ ಎಲ್ಲಾ

ಅಯ್ಯಪ್ಪ ಮಾಲಾಧರಿಗಳಿಗೆ ಅನ್ನ ಸಂತರ್ಪಣೆ ನೀಡಿ ಸೌಹಾರ್ದತೆ ಮೆರೆದ ಮುಸ್ಲಿಂ ಕುಟುಂಬ Read More »

ಇಂದು ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಜನವರಿ 10 ರಂದು ಬುಧವಾರ ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಲಿದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಗದಗ, ಕೊಪ್ಪಳ, ರಾಯಚೂರು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ. ದಕ್ಷಿಣ ಕನ್ನಡ, ಹಾಸನ, ಕೊಡಗು ಜಿಲ್ಲೆಗಳ ವ್ಯಾಪ್ತಿಯಲ್ಲಿ ಗುಡುಗು ಸಹಿತ 7 ಸೆಂ.ಮೀ.ಗಿಂತ

ಇಂದು ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ Read More »

ಇಂದಿನಿಂದ ತೈಲ‌ ಬೆಲೆ ಕನ್ನಡದಲ್ಲಿ ಪ್ರಕಟ – ಹರ್ದೀಪ್ ಸಿಂಗ್

ಸಮಗ್ರ ನ್ಯೂಸ್: ರಾಜ್ಯದ ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ ಪಟ್ರೋಲ್ ಹಾಗೂ ಡಿಸೇಲ್ ದರದ ಪಟ್ಟಿಯನ್ನು ಕನ್ನಡದಲ್ಲಿ ತೋರಿಸಲಾಗುವುದು ಎಂದು ಕೇಂದ್ರ ಇಂಧನ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದರು. ಶೇ.60 ರಷ್ಟು ಕನ್ನಡ ನಾಮಫಲಕಗಳ ಅಳವಡಿಕೆಗೆ ಹೋರಾಟ ನಡೆಯುತ್ತಿರುವ ಬೆನ್ನೆಲ್ಲೇ ಕೇಂದ್ರ ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜ.10ರಿಂದಲೇ ಪೆಟ್ರೋಲ್​ ಬಂಕ್​ಗಳಲ್ಲಿ ದರ ಪಟ್ಟಿ ಕನ್ನಡದಲ್ಲಿ ಇರಲಿದೆ. ಕನ್ನಡದಲ್ಲಿ ದರ ಪಟ್ಟಿ ಪ್ರಕಟಿಸುವ ಬಗ್ಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.

ಇಂದಿನಿಂದ ತೈಲ‌ ಬೆಲೆ ಕನ್ನಡದಲ್ಲಿ ಪ್ರಕಟ – ಹರ್ದೀಪ್ ಸಿಂಗ್ Read More »

ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್​ ಅವರಿಗೆ ಕೊರೋನಾ ಪಾಸಿಟಿವ್

ಸಮಗ್ರ ನ್ಯೂಸ್: ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್​ ಅವರಿಗೆ ಕೊರೋನಾ ಸೋಂಕು ತಗುಲಿದೆ. ಕೋವಿಡ್ ಪರೀಕ್ಷೆಯಲ್ಲಿ ಥಾವರ್‌ಚಂದ್ ಗೆಹ್ಲೋಟ್​ ಅವರಿಗೆ ಕೊವಿಡ್‌ ಪಾಸಿಟಿವ್ ದೃಢಪಟ್ಟಿದೆ. ಈ ಬಗ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭು ಶಂಕರ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಕೊವಿಡ್‌ ಪಾಸಿಟಿವ್ ದೃಢಪಟ್ಟಿರುವುದರಿಂದ ಥಾವರ್‌ಚಂದ್ ಗೆಹ್ಲೋಟ್‌ ಅವರು ರಾಜಭವನದಲ್ಲಿ ಕ್ವಾರಂಟೈನ್‌ ಆಗಿದ್ದಾರೆ. ಹೀಗಾಗಿ ಮುಂದಿನ ದಿನಾಂಕದವರೆಗೆ ರಾಜ್ಯಪಾಲರ ನಿಗದಿತ ಕಾರ್ಯಕ್ರಮ ರದ್ದು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಿದ್ದಾರೆ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಟ್ವೀಟ್ ಮಾಡಿದ್ದು,

ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್​ ಅವರಿಗೆ ಕೊರೋನಾ ಪಾಸಿಟಿವ್ Read More »

ಬೆಂಗಳೂರಿನ ಪೀಣ್ಯ ಫ್ಲೈಓವರ್​ 4 ದಿನಗಳ ಕಾಲ ಬಂದ್…?

ಸಮಗ್ರ ನ್ಯೂಸ್: ಬೆಂಗಳೂರು ನಗರದಿಂದ ವಿವಿಧ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪೀಣ್ಯ ಮೇಲ್ಸೇತುವೆ 4 ದಿನಗಳ ಕಾಲ ಬಂದ್ ಆಗಲಿದೆ. ಜನವರಿ 16ರ ರಾತ್ರಿ 11 ಗಂಟೆಯಿಂದ ಜ.19ರ ಬೆಳಗ್ಗೆ 11ವರೆಗೆ ಬೆಂಗಳೂರಿನ ಪೀಣ್ಯ ಫ್ಲೈಓವರ್ ಬಂದ್ ಆಗಲಿದೆ. ಲೋಡ್ ಟೆಸ್ಟಿಂಗ್ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪೀಣ್ಯ ಮೇಲ್ಸೇತುವೆ ಮೇಲೆ ವಾಹನ ಸಂಚಾರಕ್ಕೆ ನಿರ್ಬಂಧಿಸಿದೆ. ಒಟ್ಟು ನಾಲ್ಕು ದಿನ ಫ್ಲೈಓವರ್ ಬಂದ್ ಆಗುವುದರಿಂದ ಸರ್ವಿಸ್ ರಸ್ತೆ ಬಳಸುವಂತೆ ಟ್ರಾಫಿಕ್ ಪೊಲೀಸರು ವಾಹನ ಸವಾರರಿಗೆ ಮನವಿ

ಬೆಂಗಳೂರಿನ ಪೀಣ್ಯ ಫ್ಲೈಓವರ್​ 4 ದಿನಗಳ ಕಾಲ ಬಂದ್…? Read More »

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್..!

ಸಮಗ್ರ ನ್ಯೂಸ್: ರಾಜ್ಯದ ಹಲವೆಡೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ಹಲವಡೆ ದಾಳಿ ನಡೆಸಲಾಗಿದೆ. ಬೆಂಗಳೂರಿನಲ್ಲಿಯೇ 10ಕ್ಕೂ ಹೆಚ್ಚು ಕಡೆ ದಾಳಿ ನಡೆಸಲಾಗಿದೆ. ಬೆಸ್ಕಾಂ ಅಧಿಕಾರಿ ನಾಗರಾಜ್ ನಿವಾಸಕ್ಕೆ ಬೆಳಗ್ಗೆಯೇ ಎಂಟ್ರಿ ನೀಡಿರುವ ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದಾರೆ. ಸಿವಿ ರಾಮನ್ ನಗರದ ನಾಗವಾರಪಾಳ್ಯದ ಮನೆ ಹಾಗೂ ಸರ್ಕಾರಿ ನಿವಾಸದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರು ಬೆಸ್ಕಾಂ ಜನರಲ್ ಮ್ಯಾನೇಜರ್ ಆಗಿರುವ ನಾಗರಾಜ್ ವಿರುದ್ಧ ಅಕ್ರಮ ಆಸ್ತಿ ಆರೋಪ ಕೇಳಿ ಬಂದಿದ್ದು, ಕೂಡ್ಲಿಗಿ,

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್..! Read More »

ಕರವೇ ನಾರಾಯಣಗೌಡಗೆ ಇಂದೂ ಬಿಡುಗಡೆ ಭಾಗ್ಯ ಇಲ್ಲ…!

ಸಮಗ್ರ ನ್ಯೂಸ್: ಕನ್ನಡ ನಾಮಫಲಕ ಕಡ್ಡಾಯಗೊಳಿಸುವಂತೆ ಹೋರಾಟ ನಡೆಸಿ ಜೈಲು ಸೇರಿದ ಕರವೇ ಅಧ್ಯಕ್ಷ ಎ.ನಾರಾಯಣಗೌಡ ಸೇರಿದಂತೆ 29 ಕಾರ್ಯಕರ್ತರಿಗೆ ಜಾಮೀನು ಸಿಕ್ಕಿದೆ. ಆದ್ರೆ, ಜಾಮೀನು ಆದೇಶ ಪ್ರತಿ ಜೈಲಾಧಿಕಾರಿಗೆ ಸರಿಯಾದ ಸಮಯಕ್ಕೆ ತಲುಪಿಲ್ಲ. ಈ ಹಿನ್ನೆಲೆಯಲ್ಲಿ ಇಂದೂ ಸಹ ನಾರಾಯಣಗೌಡ ಸೇರಿದಂತೆ 29 ಕರವೇ ಕಾರ್ಯಕರ್ತರಿಗೆ ಬಿಡುಗಡೆ ಭಾಗ್ಯವಿಲ್ಲ. ಜಾಮೀನು ಆದೇಶ ಪ್ರತಿ ತಲುಪಿಸುವುದು ವಿಳಂಬವಾಗಿದ್ದರಿಂದ ನಾಳೆ ಬಿಡುಗಡೆಯಾಗುವ ಸಾಧ್ಯತೆಗಳಿವೆ. ಈ ಬಗ್ಗೆ ನಾರಾಯಣಗೌಡ ಪರ ವಕೀಲ ಕುಮಾರ್ ಎಲ್‌.ಜಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಸಂಜೆ 6.45

ಕರವೇ ನಾರಾಯಣಗೌಡಗೆ ಇಂದೂ ಬಿಡುಗಡೆ ಭಾಗ್ಯ ಇಲ್ಲ…! Read More »

ಕುಡಿದ ಮತ್ತಲ್ಲಿ ಪೊಲೀಸರಿಗೆ ಟಾರ್ಚರ್ ಕೊಟ್ಟ ಭೂಪ… ನನಗೆ ಹೆಂಡ್ತಿರು ಬೇಕು ಅಂತಾ ಪಟ್ಟು

ಸಮಗ್ರ ನ್ಯೂಸ್: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರಿಗೆ ಕಾಟ ಕೊಟ್ಟ ಘಟನೆ ರಾಯಚೂರಿನ ಮಾನ್ವಿ ಠಾಣೆಯಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿ ಬಟ್ಟೆ ಬಿಚ್ಚಿಕೊಂಡು ಓಡಾಡುತ್ತಿದ್ದ ವ್ಯಕ್ತಿ ನೇರವಾಗಿ ಮಾನ್ವಿ ಪೊಲೀಸ್ ಠಾಣೆಗೆ ಬಂದು ನೀಡಿದ ಕಾಟಕ್ಕೆ ಪೊಲೀಸರೇ ಸುಸ್ತಾಗಿದ್ದರು. ಏಕಾಏಕಿ ಠಾಣೆಗೆ ಎಂಟ್ರಿ ಕೊಟ್ಟಿದ್ದ ನರಸಿಂಹ, ನನಗೆ ಹೆಂಡ್ತಿ ಬೇಕು, ಇಲ್ಲದಿದ್ದರೆ ಠಾಣೆ ಬಿಟ್ಟು ಹೋಗಲ್ಲ ಅಂತ ಪಟ್ಟು ಹಿಡಿದಿದ್ದಾನೆ. ಅರೆಬರೆ ಬಟ್ಟೆ ಹಾಕಿಕೊಂಡು ತೇಲಾಡುತ್ತಿದ್ದಿದ್ದನ್ನ ನೋಡಿ ಈತ ಪಕ್ಕಾ ಕುಡುಕ ಅನ್ನೋದು

ಕುಡಿದ ಮತ್ತಲ್ಲಿ ಪೊಲೀಸರಿಗೆ ಟಾರ್ಚರ್ ಕೊಟ್ಟ ಭೂಪ… ನನಗೆ ಹೆಂಡ್ತಿರು ಬೇಕು ಅಂತಾ ಪಟ್ಟು Read More »

ಕೊಟ್ಟಿಗೆಹಾರ : ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ತಾಯಿ

ಸಮಗ್ರ ನ್ಯೂಸ್: ತುಂಬು ಗರ್ಭಿಣಿಯೋರ್ವಳು ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆ ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿfನ ಬಾಳೂರು ಗ್ರಾಮದಲ್ಲಿ ನಡೆದಿದೆ. ಪರ್ವೀನ್ ಸುಲ್ತಾನ್ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ. ಪರ್ವೀನ್ ಸುಲ್ತಾನ್ ಅಸ್ಸಾಂ ಮೂಲದವರು. ಕೂಲಿಗಾಗಿ ಮೂಡಿಗೆರೆ ತಾಲೂಕಿನ ಬಾಳೂರು ಎಸ್ಟೇಟ್ ಗೆ ಆಗಮಿಸಿದ್ದರು. ತೋಟದ ಲೈನ್ ಮನೆಗಳಲ್ಲಿ ವಾಸವಿದ್ದ ಪರ್ವೀನ್ ತುಂಬು ಗರ್ಭೀಣಿಯಾಗಿದ್ದು ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಕೂಡಲೇ ಆಂಬುಲೆನ್ಸ್ ನಲ್ಲಿ ಆಕೆಯನ್ನ ಮೂಡಿಗೆರೆ

ಕೊಟ್ಟಿಗೆಹಾರ : ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ತಾಯಿ Read More »

ಯಶ್ ಕಟೌಟ್ ಕಟ್ಟುವ ವೇಳೆ ಮೂವರು ಫ್ಯಾನ್ಸ್ ಸಾವು… ಘಟನಾ ಸ್ಥಳಕ್ಕೆ ಕೆಲವೇ ಕ್ಷಣಗಳಲ್ಲಿ ಯಶ್ ಭೇಟಿ

ಸಮಗ್ರ ನ್ಯೂಸ್: ಇಂದು ರಾಕಿಂಗ್ ಸ್ಟಾರ್ ಯಶ್ ಹುಟ್ಟು ಹಬ್ಬದ ಸಂಭ್ರಮ. ಹುಟ್ಟು ಹಬ್ಬದ ದಿನವೇ ಯಶ್ ಗೆ ಶಾಕ್ ಸಿಕ್ಕಿದೆ. ದುರದೃಷ್ಟವಶಾತ್ ಅವರ ಮೂವರು ಅಭಿಮಾನಿಗಳು ಮೃತಪಟ್ಟಿದ್ದಾರೆ. ಯಶ್ ಬರ್ತ್​ಡೇ ಪ್ರಯುಕ್ತ ಫ್ಲೆಕ್ಸ್ ಕಟ್ಟಲು ಹೋಗಿ ವಿದ್ಯುತ್ ಶಾಕ್ ಹೊಡೆದು ಅಭಿಮಾನಿಗಳು ಮೃತಪಟ್ಟಿದ್ದಾರೆ. ಯಶ್ ಅವರು ಇಂದು ವಿದೇಶದಿಂದ ವಿಶೇಷ ವಿಮಾನದ ಮೂಲಕ ಗ್ರಾಮಕ್ಕೆ ಭೇಟಿ ಕೊಟ್ಟು ಮೃತ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ‌. ಯಶ್ ಅಭಿಮಾನಿಗಳು ಬ್ಯಾನರ್ ಕಟ್ಟುವಾಗ ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿದ್ದಾರೆ.

ಯಶ್ ಕಟೌಟ್ ಕಟ್ಟುವ ವೇಳೆ ಮೂವರು ಫ್ಯಾನ್ಸ್ ಸಾವು… ಘಟನಾ ಸ್ಥಳಕ್ಕೆ ಕೆಲವೇ ಕ್ಷಣಗಳಲ್ಲಿ ಯಶ್ ಭೇಟಿ Read More »