ರಾಜ್ಯ

ಬಂಡೆ ಕಲ್ಲಿಗೆ ಲಾರಿ ಡಿಕ್ಕಿ| ಲಾರಿ ಚಾಲಕ ಪ್ರಾಣಾಪಾಯದಿಂದ ಪಾರು

ಸಮಗ್ರ ನ್ಯೂಸ್: ಕೊಟ್ಟಿಗೆಹಾರ ಕರಾವಳಿ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ಲಾರಿಯೊಂದು ಬಂಡೆ ಕಲ್ಲಿಗೆ ಡಿಕ್ಕಿ ಹೊಡೆದ ಘಟನೆ ಜ.6 ರಂದು ನಡೆದಿದೆ. ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಕಡೆಗೆ ಗೊಬ್ಬರ ಸಾಗಿಸುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟ್ ನ ಬಂಡೆ ಕಲ್ಲಿಗೆ ಡಿಕ್ಕಿ ಹೊಡೆದಿದೆ. ಹೊಡೆತದ ರಭಸಕ್ಕೆ ಲಾರಿಯ ಮುಂಬಾಗ ಸಂಪೂರ್ಣ ನಜ್ಜುಗುಜ್ಜಾಗಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಚಾರ್ಮಾಡಿ ಘಾಟ್ ನಲ್ಲಿ ಎರಡು

ಬಂಡೆ ಕಲ್ಲಿಗೆ ಲಾರಿ ಡಿಕ್ಕಿ| ಲಾರಿ ಚಾಲಕ ಪ್ರಾಣಾಪಾಯದಿಂದ ಪಾರು Read More »

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ವಿವಿಧ ಹುದ್ದೆಗಳು/ ಜನವರಿ 11ಕ್ಕೆ ನೇರ ಸಂದರ್ಶನ

ಸಮಗ್ರ ನ್ಯೂಸ್: 133 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 11ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಆಟೋ ಮೆಕಾನಿಕ್ 46, ಆಟೋ ಎಲೆಕ್ಟ್ರಿಷಿಯನ್ 28, ಆಟೋ ವೆಲ್ಡರ್ 20, ಆಟೋ ಬಾಡಿ ಫಿಟ್ಟರ್ 20, ಆಟೋ ಪೇಂಟರ್ 10, ಆಟೋ ಮೆಷಿನಿಸ್ಟ್ 9 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು,ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಐಟಿಐ ಪೂರ್ಣಗೊಳಿಸಿರುವವರು ಸಂದರ್ಶನಕ್ಕೆ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ವಿವಿಧ ಹುದ್ದೆಗಳು/ ಜನವರಿ 11ಕ್ಕೆ ನೇರ ಸಂದರ್ಶನ Read More »

ಸಂಕಷ್ಟಕ್ಕೆ ಸಿಲುಕಿದ ಅಯ್ಯಪ್ಪ ಭಕ್ತರಿಗೆ ಆಶ್ರಯ ನೀಡಿದ ತಿತಿಮತಿಯ ಜಮಾ ಮಸೀದಿಯ ಆಡಳಿತ ಮಂಡಳಿ

ಸಮಗ್ರ ನ್ಯೂಸ್: ಪ್ರಸ್ತುತ ರಾಜಕೀಯ ಮತ್ತು ಕೋಮು ಸಂಘರ್ಷದ ವ್ಯವಸ್ಥೆಯಲ್ಲಿ ಕೊಡಗಿನ ಮಸೀದಿಯೋದು ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ತಿತಿ-ಮತಿಯಲ್ಲಿರುವ ಜಮಾ ಮಸೀದಿಯು ಸಂಕಷ್ಟಕ್ಕೆ ಸಿಲುಕಿದ ಶಬರಿ ಮಲೆಯ ಭಕ್ತರಿಗೆ ಆಶ್ರಯ ಮತ್ತು ಸೌಲಭ್ಯ ಕಲ್ಪಿಸುವ ಮೂಲಕ ಸಹೋದರತ್ವ ಮತ್ತು ಸಾಮರಸ್ಯದ ಕಥೆಯನ್ನು ಬೆಳಗಾವಿಯಿಂದ ಕೊಡಗು ಜಿಲ್ಲೆಯ ಮಾರ್ಗವಾಗಿ ಬೈಕ್ ನಲ್ಲಿ ಕೇರಳದ ಶಬರಿಮಲೆ ದೇವಸ್ಥಾನಕ್ಕೆ ತೆರಳುತ್ತಿದ್ದ ಐವರು ಭಕ್ತರು ಗುರುವಾರ ರಾತ್ರಿ ಹವಾಮಾನ ವೈಪರಿತ್ಯ ಹಾಗೂ ಬೆಳಕು ಕಡಿಮೆಯಾದ ಕಾರಣ ಪ್ರಯಾಣ ಮುಂದುವರಿಸಲು ಸಾಧ್ಯವಾಗದೇ ತಿತಿಮತಿಯಲ್ಲಿ ಸ್ಥಗಿತಗೊಳಿಸಿದ್ದಾರೆ.

ಸಂಕಷ್ಟಕ್ಕೆ ಸಿಲುಕಿದ ಅಯ್ಯಪ್ಪ ಭಕ್ತರಿಗೆ ಆಶ್ರಯ ನೀಡಿದ ತಿತಿಮತಿಯ ಜಮಾ ಮಸೀದಿಯ ಆಡಳಿತ ಮಂಡಳಿ Read More »

ಬೆಳ್ಳಾರೆ: ಪವರ್ ಟಿವಿ ಎಂ.ಡಿ ರಾಕೇಶ್ ಶೆಟ್ಟಿ ಮೇಲಿನ ಕೇಸು ವಾಪಸ್ ತೆಗೆಯುವಂತೆ ಮಹಿಳೆಗೆ ಜೀವ ಬೆದರಿಕೆ| 11 ಮಂದಿ ವಿರುದ್ಧ ದೂರು ದಾಖಲು

ಸಮಗ್ರ ನ್ಯೂಸ್: ಪವರ್ ಟಿವಿ ಎಂಡಿ ರಾಕೇಶ್ ಶೆಟ್ಟಿ ವಿರುದ್ದ ನೀಡಲಾದ ಕೇಸು ವಾಪಾಸು ಪಡೆಯುವಂತೆ ಒತ್ತಾಯಿಸಿ ಮಹಿಳೆಯೋರ್ವರಿಗೆ ಜೀವ ಬೆದರಿಕೆ ಒಡ್ಡಿದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯ ಕೊಳ್ತಿಗೆಯಿಂದ ವರದಿಯಾಗಿದೆ. ಕೊಳ್ತಿಗೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಅವಾಚ್ಯ ಶಬ್ದಗಳಿಂದ ಬೈದು ಜೀವಬೆದರಿಕೆ ಒಡ್ಡಿರುವುದಾಗಿ ಮಹಿಳೆಯೋರ್ವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ‌ ಜ.05ರಂದು ದೂರು ನೀಡಿದ್ದು, 11 ಮಂದಿ ವಿರುದ್ದ‌ ಕೇಸು ದಾಖಲಾಗಿದೆ. ಚಿತ್ರಪ್ರಭಾ ರೈ ಎಂಬವರು ಪೊಲೀಸ್ ದೂರು ನೀಡಿದ್ದು ದೂರಿನಲ್ಲಿ,05-01-2024 ರಂದು ಸಂಜೆ ಪುತ್ತೂರು

ಬೆಳ್ಳಾರೆ: ಪವರ್ ಟಿವಿ ಎಂ.ಡಿ ರಾಕೇಶ್ ಶೆಟ್ಟಿ ಮೇಲಿನ ಕೇಸು ವಾಪಸ್ ತೆಗೆಯುವಂತೆ ಮಹಿಳೆಗೆ ಜೀವ ಬೆದರಿಕೆ| 11 ಮಂದಿ ವಿರುದ್ಧ ದೂರು ದಾಖಲು Read More »

ಖಾಸಗಿ ಬಸ್‌ಗಳಿಗೂ ‘ಶಕ್ತಿ’ ಯೋಜನೆ ವಿಸ್ತರಣೆ| ಎರಡು ತಿಂಗಳಲ್ಲಿ ನಿರ್ಧಾರ ತಿಳಿಸಲು ಹೈಕೋರ್ಟ್ ಆದೇಶ

ಸಮಗ್ರ ನ್ಯೂಸ್: ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ಖಾಸಗಿ ಬಸ್ ಗಳಿಗೂ ಶಕ್ತಿ ಯೋಜನೆ ವಿಸ್ತರಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ. ಅರ್ಜಿದಾರರ ಮನವಿಯನ್ನು ಕಾನೂನು ಪ್ರಕಾರ ಎರಡು ತಿಂಗಳಲ್ಲಿ ಪರಿಗಣಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಉಡುಪಿ ಜಿಲ್ಲೆಯ ಕಾರ್ಕಳದ ಖಾಸಗಿ ಬಸ್ ಆಪರೇಟರ್ ಶರತ್ ಶೆಟ್ಟಿ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ಪೀಠ

ಖಾಸಗಿ ಬಸ್‌ಗಳಿಗೂ ‘ಶಕ್ತಿ’ ಯೋಜನೆ ವಿಸ್ತರಣೆ| ಎರಡು ತಿಂಗಳಲ್ಲಿ ನಿರ್ಧಾರ ತಿಳಿಸಲು ಹೈಕೋರ್ಟ್ ಆದೇಶ Read More »

ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕಕ್ಕೆ ಪದಾಧಿಕಾರಿಗಳ ಆಯ್ಕೆ

ಸಮಗ್ರ ನ್ಯೂಸ್: ಜೆಸಿಐ ಭಾರತದ ವಲಯ 14ರಲ್ಲಿರುವ ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ 13ನೇ ಅಧ್ಯಕ್ಷರಾಗಿ ಬಲ್ಯಮಂಡೂರು ಗ್ರಾಮದ ಪೆಮ್ಮಂಡ ಮಂಜು ಬೋಪಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 2023ನೇ ಸಾಲಿನ ಘಟಕ ಅಧ್ಯಕ್ಷರಾಗಿರುವ ಮುಕ್ಕಾಟಿರ ನೀತ್ ಅಯ್ಯಪ್ಪರವರ ಅಧ್ಯಕ್ಷತೆಯಲ್ಲಿ ಚುನಾವಣಾಧಿಕಾರಿಯಾಗಿದ್ದ ಘಟಕದ ನಿಕಟಪೂರ್ವ ಅಧ್ಯಕ್ಷ ಅಪ್ಪಂಡೆರಂಡ ಪಿ. ದಿನೇಶ್ ಅವರ ಸಮ್ಮುಖದಲ್ಲಿ ನಡೆದ ಘಟಕದ ಸರ್ವ ಸದಸ್ಯರ ವಿಶೇಷ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆದು, 2024ನೇ ಸಾಲಿಗೆ ನೂತನ ಘಟಕಾಡಳಿತ ಮಂಡಳಿ ಪದಾಧಿಕಾರಿಗಳನ್ನು ಅವಿರೋಧವಾಗಿ ಚುನಾಯಿಸಲಾಯಿತು. ಕೋಶಾಧಿಕಾರಿಯಾಗಿ ಬೊಜ್ಜಂಗಡ

ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕಕ್ಕೆ ಪದಾಧಿಕಾರಿಗಳ ಆಯ್ಕೆ Read More »

ವನ್ಯಜೀವಿ ಅಂಗಾಂಗ ಮರಳಿಸಲು 3 ತಿಂಗಳ ಗಡುವು| ಶೀಘ್ರವೇ ಅಧಿಸೂಚನೆ: ಈಶ್ವರ ಖಂಡ್ರೆ

ಸಮಗ್ರ ನ್ಯೂಸ್: ಹುಲಿ ಉಗುರು, ಆನೆ ದಂತ, ಜಿಂಕೆಕೊಂಬು ಸೇರಿದಂತೆ ಅಕ್ರಮವಾಗಿಟ್ಟುಕೊಂಡಿರುವ ಯಾವುದೇ ವನ್ಯ ಜೀವಿಯ ಅಂಗಾಂಗ, ಟ್ರೋಫಿಯನ್ನು ಸರ್ಕಾರಕ್ಕೆ ಹಿಂತಿರುಗಿಸಲು ಒಂದು ಬಾರಿ ಕಾಲಾವಕಾಶ ನೀಡಲು ಇಂದು ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪ್ರಸ್ತಾಪಕ್ಕೆ ಅನುಮೋದನೆ ನೀಡಲಾಯಿತು. ಅಕ್ರಮವ ಸಂರಕ್ಷಣಾ ಅಧಿನಿಯಮ 1972 ಮತ್ತು ಇತ್ತೀಚೆಗೆ ಅಂದರೆ 2022ರಲ್ಲಿ ಕೇಂದ್ರ ಸರ್ಕಾರ ಈ ಕಾಯಿದೆಗೆ ಮಾಡಿರುವ ತಿದ್ದುಪಡಿಯನ್ವಯ ಯಾವುದೇ ವನ್ಯಜೀವಿಯ ಅಂಗಾಂಗವನ್ನು ಅಕ್ರಮವಾಗಿ

ವನ್ಯಜೀವಿ ಅಂಗಾಂಗ ಮರಳಿಸಲು 3 ತಿಂಗಳ ಗಡುವು| ಶೀಘ್ರವೇ ಅಧಿಸೂಚನೆ: ಈಶ್ವರ ಖಂಡ್ರೆ Read More »

ಕೆಲಸಗಾರರು ಬೇಕಾಗಿದ್ದಾರೆ ಎಂದು ರಸ್ತೆ ಬದಿ ಬೋರ್ಡ್ ಹಿಡಿದು ನಿಂತ ಕೊಡಗಿನ ಕಾಫಿ ಬೆಳೆಗಾರ

ಸಮಗ್ರ ನ್ಯೂಸ್: ಕಾಫಿ ಕೀಳಲು ಕಾರ್ಮಿಕರಿಗೆ ಭಾರೀ ಬೇಡಿಕೆ. ಅಧಿಕ ಸಂಬಳ ನೀಡಿದರು ಕಾರ್ಮಿಕರು ಸಿಗುತ್ತಿಲ್ಲ. ಇದರಿಂದ ಕಾಫಿ ಬೆಳೆಗಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅದರಂತೆ ವ್ಯಕ್ತಿಯೊಬ್ಬರು ಕಾಫಿ ಕೀಳಲು ಕಾರ್ಮಿಕರಿಲ್ಲದೆ ಏನು ಮಾಡಿದ್ದಾರೆ ಗೊತ್ತಾ? ಇದು ಕೊಡಗಿನಲ್ಲಿ ಬೆಳಕಿಗೆ ಬಂದ ಘಟನೆ. ಕಾಫಿ ಬೆಳಗಾರರೊಬ್ಬರು ಕಾಫಿ ಬೀಜ ಕೀಳಲು ಕಾರ್ಮಿಕರು ಸಿಗದೆ ಬೇಸತ್ತು ಕೊನೆಗೆ ರಸ್ತೆ ಬದಿ ಬಂದು ಬೋರ್ಡ್​​ ಹಿಡಿದು ನಿಂತಿದ್ದಾರೆ. ಬೋರ್ಡ್​ನಲ್ಲಿ ‘ಕೆಲಸಗಾರರು ಬೇಕು’ ಎಂದು ಬರೆದುಕೊಂಡಿದ್ದಾರೆ. ಅಷ್ಟು ಮಾತ್ರವಲ್ಲ, ಮಹಿಳೆಯರಿಗೆ ದಿನಕ್ಕೆ

ಕೆಲಸಗಾರರು ಬೇಕಾಗಿದ್ದಾರೆ ಎಂದು ರಸ್ತೆ ಬದಿ ಬೋರ್ಡ್ ಹಿಡಿದು ನಿಂತ ಕೊಡಗಿನ ಕಾಫಿ ಬೆಳೆಗಾರ Read More »

‘ಗಾಂಧಿ ಸ್ಮಾರಕ ಉದ್ಯಾನವನ’ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಭೋಸರಾಜು

ಸಮಗ್ರ ನ್ಯೂಸ್: ಮಡಿಕೇರಿಯ ಗಾಂಧಿ ಮಂಟಪದಲ್ಲಿ ನಿರ್ಮಾಣವಾಗುತ್ತಿರುವ ರಾಷ್ಟ್ರಪಿತ ಮಹಾತ್ಮ ‘ಗಾಂಧೀಜಿಯವರ ಸ್ಮಾರಕ ಉದ್ಯಾನವನ’ ಕಾಮಗಾರಿಯನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ವೀಕ್ಷಿಸಿದರು. ಕಾಮಗಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದರ ಜೊತೆಗೆ ಆದಷ್ಟು ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು. ಗಾಂಧಿ ಸ್ಮಾರಕ ಉದ್ಯಾನವನ ನಿರ್ಮಾಣಕ್ಕೆ ಸರ್ಕಾರದಿಂದ ಈಗಾಗಲೇ 50 ಲಕ್ಷ ರೂ. ಬಿಡುಗಡೆಯಾಗಿದ್ದು, ವಿಧಾನ ಪರಿಷತ್ ಅನುದಾನದಿಂದಲೂ ಸಹ 5 ಲಕ್ಷ ರೂ. ಅನುದಾನ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ

‘ಗಾಂಧಿ ಸ್ಮಾರಕ ಉದ್ಯಾನವನ’ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಭೋಸರಾಜು Read More »

ಹಂದಿ ಬೇಟೆಗೆ ಬಳಸುವ ಸ್ಫೋಟಕ ಉಂಡೆಯನ್ನು ಬಾಲ್ ಎಂದು ತಿಳಿದು ಆಟವಾಡಿದ ಮಕ್ಕಳು….!

ಸಮಗ್ರ ನ್ಯೂಸ್: ಶಾಲೆ ಪಕ್ಕದಲ್ಲೇ ಎಸೆದಿದ್ದ ಸಿಡಿಮದ್ದಿನ ಉಂಡೆ ಮಕ್ಕಳ ಕೈಗೆ ಸಿಕ್ಕಿ ಅದರಿಂದ ದೊಡ್ಡ ದುರಂತವೇ ತಪ್ಪಿ ಹೋಗಿದೆ. ಹೌದು ತುಮಕೂರು ಜಿಲ್ಲೆಯ ಚಿಕ್ಕನಾಯನಕನಹಳ್ಳಿ ತಾಲ್ಲೂಕಿನ ಮಾದೇನಹಳ್ಳಿಯಲ್ಲಿ ಹಂದಿ ಬೇಟೆಗೆ ಬಳಸುವ ಸಿಡಿ ಮದ್ದಿನ ಉಂಡೆಯನ್ನು ಶಾಲೆಯೊಂದರ ಪಕ್ಕದಲ್ಲಿ ಎಸೆಯಲಾಗಿತ್ತು. ಇದನ್ನು ಬಾಲ್ ಅಂತ ಭಾವಿಸಿದ್ದ ಬಾಲಕನೊಬ್ಬ ಎತ್ತಿಕೊಂಡು ಶಾಲೆಯತ್ತ ತೆರಳಿದ್ದ. ಬಳಿಕ ಆತ ಅದನ್ನು ಶ್ರೀನಿವಾಸ್ ಎಂಬ ಹುಡುಗನಿಗೆ ನೀಡಿದ್ದ. ಆ ಸ್ಫೋಟಕ ಉಂಡೆಯನ್ನು ಮನೆಗೆ ತೆಗೆದುಕೊಂಡು ಹೋಗಿದ್ದ ಶ್ರೀನಿವಾಸ್ ತಂದೆಗೆ ನೀಡಿದ್ದ. ಇದು

ಹಂದಿ ಬೇಟೆಗೆ ಬಳಸುವ ಸ್ಫೋಟಕ ಉಂಡೆಯನ್ನು ಬಾಲ್ ಎಂದು ತಿಳಿದು ಆಟವಾಡಿದ ಮಕ್ಕಳು….! Read More »