ರಾಜ್ಯ

ಮುರಿದು ಬಿದ್ದ ಮದುವೆ, ವರ ಹಿಂಡಲಗಾ ಜೈಲಿಗೆ !

ಸಮಗ್ರ ನ್ಯೂಸ್: ಇನ್ನೇನು ತಾಳಿ ಕಟ್ಟಬೇಕು ಅನ್ನೋವಷ್ಟರಲ್ಲಿ ಮದುವೆ ಮಂಟಪದಲ್ಲೆ ದೊಡ್ಡ ಹೈಡ್ರಾಮ ನಡೆದು ಹೋಗಿದೆ. ಕೊನೇ ಕ್ಷಣದಲ್ಲಿ ಮದುವೆಯೊಂದು ಮುರಿದುಬಿದ್ದು ವರ ಹಿಂಡಲಗಾ ಜೈಲುಪಾಲಾದ ವಿಚಿತ್ರ ಘಟನೆಯೊಂದು ಬೆಳಗಾವಿಯ ಖಾನಾಪುರ ಪಟ್ಟಣದಲ್ಲಿ ನಡೆದಿದೆ. ಅಷ್ಟಕ್ಕೂ ಮದುವೆ ಮುರಿದು ಬೀಳಲು ಕಾರಣವೇನು ಅಂತಿರಾ ಇದೇ ನೋಡಿ ವರದಕ್ಷಿಣೆ ಬೇಡಿಕೆ. ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ಲೋಕಮಾನ್ಯ ಕಲ್ಯಾಣ ಮಂಟಪದಲ್ಲಿ ಮದುವೆ ಸಮಾರಂಭ ಆಯೋಜನೆಯಾಗಿತ್ತು. ಈ ಮದುವೆಯ ನಿಶ್ಚಿತಾರ್ಥ ಸಂದರ್ಭದಲ್ಲಿ 50 ಗ್ರಾಂ ಬಂಗಾರ,‌ ಒಂದು ಲಕ್ಷ ವರೋಪಚಾರ

ಮುರಿದು ಬಿದ್ದ ಮದುವೆ, ವರ ಹಿಂಡಲಗಾ ಜೈಲಿಗೆ ! Read More »

ಹವಾಮಾನ ವೈಪರೀತ್ಯ| ಜ.3ರಿಂದ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಜ.3ರಿಂದ ನಾಲ್ಕು ದಿನ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ರಾಜ್ಯದಲ್ಲಿ ವರುಣ ಅಬ್ಬರಿಸಲಿದ್ದಾನೆ. ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಿಂಗಾರು ಮಳೆ ಇನ್ನೇನು ಕೆಲವೇ ದಿನಗಳಲ್ಲಿ ಮುಕ್ತಾಯವಾಗಲಿದೆ. ಆದರೂ ಇದೇ ಸಮಯದಲ್ಲಿ ಭಾರೀ ಮಳೆ ಬರಬಹುದು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಹವಾಮಾನ ವೈಪರೀತ್ಯ| ಜ.3ರಿಂದ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ Read More »

ಎಣ್ಣೆ ಪ್ರಿಯರಿಗೆ ಬಿಗ್ ಶಾಕ್| ಬಡವರ ಬ್ರ್ಯಾಂಡ್ ಗಳ ಮೇಲೆ ಭಾರೀ ಬೆಲೆ ಏರಿಕೆ

ಸಮಗ್ರ ನ್ಯೂಸ್: ಹೊಸ ವರ್ಷದಂದು ಬರೋಬ್ಬರಿ 193 ಕೋಟಿ ಆದಾಯ ಗಳಿಸಿ ಮಂದಹಾಸ ಬೀರಿದ್ದ ಅಬಕಾರಿ ಇಲಾಖೆ ಮದ್ಯ ಪ್ರಿಯರಿಗೆ ಶಾಕ್ ಕೊಟ್ಟಿದೆ. ಇಂದಿನಿಂದ ಬಡವರು ಕುಡಿಯುವ ಮದ್ಯದ ದರದಲ್ಲಿ ಏರಿಕೆ‌ಯಾಗಿದೆ. ಅಬಕಾರಿ ಇಲಾಖೆ ಬಡವರ ನೆಚ್ಚಿನ‌ ಕೆಲ ಬ್ರ್ಯಾಂಡ್​ಗಳ ದರ ಹೆಚ್ಚಿಸಿದೆ. ಈ ಮೂಲಕ ಮಧ್ಯಮ ವರ್ಗದ ಮದ್ಯ ಪ್ರಿಯರಿಗೆ ಶಾಕ್ ಮೇಲೆ ಶಾಕ್ ಕೊಟ್ಟಿದೆ. ಹೊಸ ವರ್ಷಕ್ಕೆ ಕಂಠ ಪೂರ್ತಿ ಕುಡಿದು ಕುಪ್ಪಳಿಸಿದ್ದ ಬಡವರು ಈಗ ಎಣ್ಣೆ ಖರೀದಿಸಲು ಯೋಚಿಸುವಂತಾಗಿದೆ. ಈಗಾಗಲೇ 17% ರಷ್ಟು

ಎಣ್ಣೆ ಪ್ರಿಯರಿಗೆ ಬಿಗ್ ಶಾಕ್| ಬಡವರ ಬ್ರ್ಯಾಂಡ್ ಗಳ ಮೇಲೆ ಭಾರೀ ಬೆಲೆ ಏರಿಕೆ Read More »

ಜ. 22ರಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ ದಿನ ಸಾರ್ವತ್ರಿಕ ರಜೆ ಘೋಷಣೆಗೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ

ಸಮಗ್ರ ನ್ಯೂಸ್: ಜ. 22ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ನಡೆಯಲಿದ್ದು, ರಾಮಲಲ್ಲಾನ ಪ್ರಾಣಪ್ರತಿಷ್ಠೆ ದಿನವಾದ ಅಂದು ಸಾರ್ವತ್ರಿಕ ರಜೆ ಘೋಷಣೆ ಮಾಡಬೇಕೆಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮುಖ್ಯಮಂತ್ರಿಯನ್ನು ಆಗ್ರಹಿಸಿದ್ದಾರೆ. ಶಾಸಕ ಯಶ್ಪಾಲ್ ಸುವರ್ಣ ಈ ಬಗ್ಗೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆದಿದ್ದು, ಜನವರಿ 22ರ ದಿನ ಕೋಟ್ಯಾಂತರ ಭಕ್ತರ ಭಾವನಾತ್ಮಕ, ಐತಿಹಾಸಿಕ ದಿನವಾಗಿದೆ. ದೇಶದಾದ್ಯಂತ ಅಂದು ಪೂಜೆ ಭಜನೆ ಸಂಕೀರ್ತನೆ ನಡೆಯಲಿದೆ. ಕೋಟ್ಯಾಂತರ ಭಕ್ತರು ಸಂಭ್ರಮಾಚರಣೆ ಮಾಡಲು ನಿರ್ಧರಿಸಿದ್ದಾರೆ. ಶ್ರೀರಾಮ ದೇವರ ಸೇವೆಯಲ್ಲಿ ಜನ

ಜ. 22ರಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ ದಿನ ಸಾರ್ವತ್ರಿಕ ರಜೆ ಘೋಷಣೆಗೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ Read More »

ಹುಣಸೂರು: ಜೀಪ್ -ಬಸ್ ನಡುವೆ ಅಪಘಾತ|ನಾಲ್ವರು ಸಾವು

ಸಮಗ್ರ ನ್ಯೂಸ್: ಹುಣಸೂರು ಶುಂಠಿ ಕೆಲಸಕ್ಕೆ ಕೂಲಿಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಜೀಪ್ -ಬಸ್ ನಡುವೆ ಅಪಘಾತ, ನಾಲ್ವರ ಸಾವು. ಹೆಚ್‌ಡಿ ಕೋಟೆ ತಾಲೂಕಿನ ಜಿಯಾರ ಗ್ರಾಮದ ಸುತ್ತಮುತ್ತಲಿನ ಹಳ್ಳಿಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ಥ.ಇನ್ಸ್ ಪೆಕ್ಟರ್ ದೇವೆಂದ್ರ ನೇತೃತ್ವದಲ್ಲಿ ಪೊಲೀಸರಿಂದ ಅಪಘಾತದಲ್ಲಿ ಸಾವನ್ನಪ್ಪಿದ ಶವವನ್ನು ಸಾರ್ವಜನಿಕ ಆಸ್ಪತ್ರೆಗೆ ಸಿಬ್ಬಂದಿಗಳು ಸಾಗಿಸಿದರು.ಹುಣಸೂರು ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಸಾವನ್ನಪ್ಪಿದವರ ಗುರುತು ಪತ್ತೆಯಾಗಿಲ್ಲ. ಚಾಲಕ ಕುಮಾರ್ ಸೇರಿದಂತೆ ಐವರ ಸ್ಥಿತಿ ಗಂಭೀರವಾಗಿದೆ.

ಹುಣಸೂರು: ಜೀಪ್ -ಬಸ್ ನಡುವೆ ಅಪಘಾತ|ನಾಲ್ವರು ಸಾವು Read More »

ಸ್ಕೂಲ್ ಬಸ್​ ಡ್ರೈವರ್ ಜೊತೆನೆ ಸುಸೈಡ್ ಮಾಡಿಕೊಂಡ 8ನೇ ತರಗತಿ ವಿದ್ಯಾರ್ಥಿ!

ಸಮಗ್ರ ನ್ಯೂಸ್:ಶಾಲಾ‌ ಬಸ್ ಡ್ರೈವರ್ ಪ್ರೇಮದಾಟಕ್ಕೆ 8ನೇ ತರಗತಿ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ. ಚಿಕ್ಕಮಗಳೂರಿನ ಅಜ್ಜಂಪುರ ಸಮೀಪದ ಬಂಕನಕಟ್ಟೆ ಬಳಿ ರೈಲಿಗೆ ತಲೆಕೊಟ್ಟು 38 ವರ್ಷದ ಸಂತೋಷ್‌ ಜತೆ 14 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಪ್ರಾಪ್ತ ಬಾಲಕಿ ಗಿರಿಯಾಪುರ ಗ್ರಾಮದ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಡಿ.31ರಂದು ಸ್ನೇಹಿತರ ಜೊತೆ ನ್ಯೂ ಇಯರ್‌ ಪಾರ್ಟಿಗೆ ಹೋಗ್ತೀನಿ ಎಂದು ಪೋಷಕರಿಗೆ ಹೇಳಿ ಹೋಗಿದ್ದ ಬಾಲಕಿ, ಡ್ರೈವರ್‌ ಸಂತೋಷ್‌ ಜೊತೆ ತೆರಳಿದ್ದಳು. ಅಂದು ಮಧ್ಯರಾತ್ರಿಯೇ ರೈಲಿಗೆ ಸಿಕ್ಕಿ ಇಬ್ಬರು ಸಾವನ್ನಪ್ಪಿದ್ದಾರೆ.

ಸ್ಕೂಲ್ ಬಸ್​ ಡ್ರೈವರ್ ಜೊತೆನೆ ಸುಸೈಡ್ ಮಾಡಿಕೊಂಡ 8ನೇ ತರಗತಿ ವಿದ್ಯಾರ್ಥಿ! Read More »

ವರ್ಷದ ಕೊನೆ ದಿನದಂದು ದಾಖಲೆ ಮದ್ಯ ವಹಿವಾಟು|ಎಂಎಸ್ಐಎಲ್ ಒಂದೇ ದಿನ ₹18.85 ಕೋಟಿ ಮದ್ಯ ಮಾರಾಟ

ಸಮಗ್ರ ನ್ಯೂಸ್: ರಾಜ್ಯದಲ್ಲಿರುವ 1031 ಎಂ ಎಸ್ ಐ ಎಲ್ ಮದ್ಯ ಮಾರಾಟ ಮಳಿಗೆಗಳಲ್ಲಿ 2023ರ ಕೊನೆಯ ದಿನವಾದ ಭಾನುವಾರ (ಡಿ.31) ₹18.85 ಕೋಟಿ ಮೊತ್ತದ ದಾಖಲೆಯ ಮದ್ಯ ಮಾರಾಟವಾಗಿದೆ ಎಂದು ಎಂ ಎಸ್ ಐ ಎಲ್ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್ ತಿಳಿಸಿದ್ದಾರೆ. ಕಳೆದ ವರ್ಷದ ಇದೇ ದಿನಕ್ಕೆ ಹೋಲಿಸಿದರೆ ಇದು ಸುಮಾರು ₹ 4.34 ಕೋಟಿ ಹೆಚ್ಚಳವಾಗಿದೆ. 2022ರ ಡಿ. 31ರಂದು ₹14.51 ಕೋಟಿ ಮೊತ್ತದ ಮದ್ಯ ಮಾರಾಟವಾಗಿತ್ತು ಎಂದು ಅವರು ಹೇಳಿದ್ದಾರೆ. ರಾಯಚೂರಿನ

ವರ್ಷದ ಕೊನೆ ದಿನದಂದು ದಾಖಲೆ ಮದ್ಯ ವಹಿವಾಟು|ಎಂಎಸ್ಐಎಲ್ ಒಂದೇ ದಿನ ₹18.85 ಕೋಟಿ ಮದ್ಯ ಮಾರಾಟ Read More »

ಅಯೋಧ್ಯೆ ರಾಮಮಂದಿರಕ್ಕೆ ಕರ್ನಾಟಕದ ಅರುಣ್‌ ಯೋಗಿರಾಜ್‌ ಕೆತ್ತನೆಯ ಶ್ರೀರಾಮ ವಿಗ್ರಹ ಆಯ್ಕೆ

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದ್ದು, ಕರ್ನಾಟಕದ ಹೆಮ್ಮೆಯ ಶಿಲ್ಪಿ ಮೈಸೂರಿನ ಸಿದ್ದಾಂತಿ ಅರುಣ್‌ ಯೋಗಿರಾಜ್‌ ಕೆತ್ತಿದ ಶ್ರೀರಾಮ ಮೂರ್ತಿ ರಾಮಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲು ಆಯ್ಕೆಯಾಗಿದೆ. ಮೈಸೂರಿನ ಹಿರಿಯ ಶಿಲ್ಪ ಕಲಾವಿದರ ಕುಟುಂಬದ ಐದನೇ ತಲೆಮಾರಿನ ಕುಡಿಯಾಗಿರುವ ಅರುಣ್‌ ಯೋಗಿರಾಜ್‌ ಅವರು ಕೆತ್ತಿರುವ ರಾಮನ ವಿಗ್ರಹವನ್ನು ಅಯೋಧ್ಯೆ ರಾಮಮಂದಿರ ಸಮಿತಿಯು ಆಯ್ಕೆ ಮಾಡಿದೆ. ಈ ಮೂಲಕ ಕರ್ನಾಟಕಕ್ಕೂ ಹೆಮ್ಮೆಪಡುವ ಕ್ಷಣ ಬಂದಿದೆ. ಹೊಸ ವರ್ಷದ ದಿನವೇ ಆಯೋಧ್ಯೆ ರಾಮಮಂದಿರ ಸಮಿತಿಯು ಖುದ್ದು ಅರುಣ್‌ ಯೋಗಿರಾಜ್‌ ಅವರಿಗೆ

ಅಯೋಧ್ಯೆ ರಾಮಮಂದಿರಕ್ಕೆ ಕರ್ನಾಟಕದ ಅರುಣ್‌ ಯೋಗಿರಾಜ್‌ ಕೆತ್ತನೆಯ ಶ್ರೀರಾಮ ವಿಗ್ರಹ ಆಯ್ಕೆ Read More »

ನ್ಯೂಇಯರ್ ಪಾರ್ಟಿಯಲ್ಲಿ ಗಲಾಟೆ… ಮೂಗನ್ನೆ ಕಚ್ಚಿತೆಗೆದ ಭೂಪ!

ಸಮಗ್ರ ನ್ಯೂಸ್: ಹೊಸ ವರ್ಷಾಚರಣೆ ವೇಳೆ ಕುಡಿದು ಒಂದಲ್ಲಾ ಒಂದು ರೀತಿಯಲ್ಲಿ ಅನಾಹುತ ಮಾಡಿಕೊಳ್ಳುವುದಂತು ಇನ್ನೂ ನಿಂತಿಲ್ಲ. ಬೆಂಗಳೂರಿನಲ್ಲಿ ಒಂದು ತರ ಆದರೆ ಮಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ನಡೆದು ಯುವಕನೊಬ್ಬನ ಮೂಗನ್ನೇ ಕಚ್ಚಿ ಕಿತ್ತು ಹಾಕಿದ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದಲ್ಲಿ ಹೊಸ ವರ್ಷಾಚರಣೆಯ ಪ್ರಯುಕ್ತ ಪಾರ್ಟಿ ನಡೆಸಲಾಗುತ್ತಿತ್ತು. ಈ ವೇಳೆ ಕುಡಿದ ಮತ್ತಿನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮೂಲದ ರಾಕೇಶ್ ಮತ್ತು ಉಲ್ಪೆ ಗ್ರಾಮದ

ನ್ಯೂಇಯರ್ ಪಾರ್ಟಿಯಲ್ಲಿ ಗಲಾಟೆ… ಮೂಗನ್ನೆ ಕಚ್ಚಿತೆಗೆದ ಭೂಪ! Read More »

ಖಾಸಗಿ ವಾಹಿನಿಯಲ್ಲಿ ಹೂಡಿಕೆ ವಿಚಾರ…ಜೈ ಹಿಂದ್ ಮಾಧ್ಯಮಕ್ಕೆ ಸಿಬಿಐ ನೋಟಿಸ್​ ಜಾರಿ

ಸಮಗ್ರ ನ್ಯೂಸ್: ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾನೆಲ್​ನಲ್ಲಿ ಮಾಡಿರುವ ಹೂಡಿಕೆಯ ವಿವರಗಳನ್ನು ಕೋರಿ ಜೈ ಹಿಂದ್ ಮಾಧ್ಯಮಕ್ಕೆ ಸಿಬಿಐ ನೋಟಿಸ್​ ಜಾರಿ ಮಾಡಲಾಗಿದೆ. ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಸಿಬಿಐ ನನಗೆ ನೋಟಿಸ್​ ಕೊಟ್ಟಿಲ್ಲ. ಯಾವ ಆಧಾರದ ಮೇಲೆ ನೋಟಿಸ್​ ಕೊಟ್ಟಿದ್ದಾರೋ ಗೊತ್ತಿಲ್ಲ. ನನಗೆ ಕಿರುಕುಳ ಕೊಡಲು ಎಲ್ಲ ಪ್ರಯತ್ನ ಮಾಡುತ್ತಿದ್ದಾರೆ. ಕೆಲ ಬಿಜೆಪಿ ನಾಯಕರಿಂದ ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಖಾಸಗಿ ವಾಹಿನಿಯಲ್ಲಿ ಹೂಡಿಕೆ ವಿಚಾರ…ಜೈ ಹಿಂದ್ ಮಾಧ್ಯಮಕ್ಕೆ ಸಿಬಿಐ ನೋಟಿಸ್​ ಜಾರಿ Read More »