ರಾಜ್ಯ

ಬೆಂಗಳೂರಿನಲ್ಲಿ ವಿದ್ಯುತ್ ವೈರ್ ಸ್ಪರ್ಶಿಸಿ ಯುವಕ ದಾರುಣ ಸಾವು

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ವಿದ್ಯುತ್ ಅವಘಡ ಮುಗಿಯದ ಕಥೆ, ಮೊನ್ನೆಯಷ್ಟೆ ವಿದ್ಯುತ್ ತಂತಿ ತಗುಲಿ ತಾಯಿ ಮಗು ಸಾವನಪ್ಪಿದ ಘಟನೆ ಸಂಭವಿಸಿದ್ದು ಅದು ಮಾಸುವ ಮುನ್ನವೇ ಇನ್ನೊಂದು ಘಟನೆ ಬೆಳಕಿಗೆ ಬಂದಿದೆ.ಲಗ್ಗೆರೆಯ ಪಾರ್ವತಿಪುರದಲ್ಲಿ ಇಂದು ಮಧ್ಯಾಹ್ನ ವಿದ್ಯುತ್ ವೈರ್ ತಗುಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಕ್ರೇನ್ ಆಪರೇಟರ್​ಗೆ ಗೈಡ್ ಮಾಡುತ್ತಿದ್ದ ಜೈನ್ ಕುಮಾರ್(20) ಮೃತ ವ್ಯಕ್ತಿ. ಡಿ.8 ರಂದು ಹಳೇ ಕಟ್ಟಡ ತೆರವು ವೇಳೆ ಗೋಡೆ ಸಮೇತ ಮೊಬೈಲ್ ಟವರ್ ಕಂಬ ನೆರಕ್ಕುರುಳಿತ್ತು. ಇಂದು ಮುರಿದುಬಿದ್ದಿದ್ದ

ಬೆಂಗಳೂರಿನಲ್ಲಿ ವಿದ್ಯುತ್ ವೈರ್ ಸ್ಪರ್ಶಿಸಿ ಯುವಕ ದಾರುಣ ಸಾವು Read More »

ಶಾಲೆಯ ಮಕ್ಕಳನ್ನು ಟಾಯ್ಲೆಟ್ ಗುಂಡಿಗೆ ಇಳಿಸಿ ಸ್ಚಚ್ಛತೆ… ಪ್ರಾಂಶುಪಾಲೆ ಸೇರಿ ಇಬ್ಬರು ಅಮಾನತು

ಸಮಗ್ರ ನ್ಯೂಸ್: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲುವಳ್ಳಿ ಬಳಿಯ ಮೊರಾರ್ಜಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯದ ಗುಂಡಿ ಸ್ವಚ್ಛ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಿನ್ಸಿಪಾಲ್ ಸೇರಿ ಇಬ್ಬರನ್ನು ಮಾಸ್ತಿ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪ್ರಾಂಶುಪಾಲೆ ಭಾರತಮ್ಮ, ಸಹ ಶಿಕ್ಷಕ ಮುನಿಯಪ್ಪರನ್ನು ಬಂಧಿಸಿದ್ದಾರೆ.ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ದೂರು ಹಿನ್ನೆಲೆ ಮಲಹೊರುವ ಪದ್ಧತಿ ನಿಯಂತ್ರಣ ಕಾಯ್ದೆ, ಅಟ್ರಾಸಿಟಿ ಕಾಯ್ದೆಯಡಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಕಳೆದ ಹಲವು ದಿನಗಳಿಂದ ಮಕ್ಕಳಿಗೆ ವಿವಿಧ

ಶಾಲೆಯ ಮಕ್ಕಳನ್ನು ಟಾಯ್ಲೆಟ್ ಗುಂಡಿಗೆ ಇಳಿಸಿ ಸ್ಚಚ್ಛತೆ… ಪ್ರಾಂಶುಪಾಲೆ ಸೇರಿ ಇಬ್ಬರು ಅಮಾನತು Read More »

ದತ್ತ ಜಯಂತಿಗೆ ಇಂದು ಚಾಲನೆ

ಸಮಗ್ರ ನ್ಯೂಸ್: ದತ್ತಪೀಠದಲ್ಲಿ ದತ್ತ ಜಯಂತಿ ಕಾರ್ಯಕ್ರಮಕ್ಕೆ ಇಂದು ಅಧಿಕೃತವಾಗಿ ಚಾಲನೆ ದೊರೆತಿದೆ. ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ಮಾಜಿ ಶಾಸಕ ಸಿ.ಟಿ. ರವಿ ಸಹಿತ 300ಕ್ಕೂ ಅಧಿಕ ದತ್ತ ಭಕ್ತರು ಮಾಲಾಧಾರಣೆ ನಡೆಸುವ ಮೂಲಕ ಹತ್ತು ದಿನಗಳ ದತ್ತಜಯಂತಿ ಉತ್ಸವಕ್ಕೆ ಅಧಿಕೃತ ಚಾಲನೆ ನೀಡಿದ್ದಾರೆ. ಹತ್ತು ದಿನಗಳ ದತ್ತಜಯಂತಿ ಉತ್ಸವದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಹಾಗೂ ಪೋಲಿಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ.

ದತ್ತ ಜಯಂತಿಗೆ ಇಂದು ಚಾಲನೆ Read More »

ಖಾಸಗಿ ದೇವಾಲಗಳನ್ನು ವಶಕ್ಕೆ ಪಡೆದುಕೊಳ್ಳುವ ಪ್ರಶ್ನೆಯೇ ಇಲ್ಲ/ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ

ಸಮಗ್ರ ನ್ಯೂಸ್: ಖಾಸಗಿ ದೇವಾಲಯಗಳನ್ನು ಮುಜರಾಯಿ ಇಲಾಖೆ ವಶಕ್ಕೆ ಪಡೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ, ಖಾಸಗಿ ದೇವಾಲಯಗಳನ್ನು ಮುಜರಾಯಿ ವ್ಯಾಪ್ತಿಗೆ ತರಲು ನೋಟಿಸ್ ಕೊಡಲಾಗುತ್ತಿದೆ ಎಂಬ ಆರೋಪಗಳಿಗೆ ಸ್ಪಷ್ಟನೆ ನೀಡಿದ ಸಚಿವರು, ಕೆಲವು ಹಿಂದು ಸಂಘಟನೆಗಳಿಗೆ ಮಾಹಿತಿ ಕೊರತೆಯಿಂದ ತಪ್ಪು ತಿಳುವಳಿಕೆ ಉಂಟಾಗಿದೆ. ನಮ್ಮ ಸರ್ಕಾರ ಯಾವುದೇ ಖಾಸಗಿ ದೇವಾಲಯಗಳನ್ನು ಯಾವುದೇ ಕಾರಣಕ್ಕೂ ತೆಗೆದುಕೊಳ್ಳುವುದಿಲ್ಲ ಎಂದು ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ. ಹಣ ದುರಪಯೋಗ, ಆಡಳಿತ ಮಂಡಳಿ ಕಲಹಗಳಿಂದ ಕೆಲವು ದೇವಾಲಯಗಳ ವಿವಾದ

ಖಾಸಗಿ ದೇವಾಲಗಳನ್ನು ವಶಕ್ಕೆ ಪಡೆದುಕೊಳ್ಳುವ ಪ್ರಶ್ನೆಯೇ ಇಲ್ಲ/ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ Read More »

ಮುಳುಗುತ್ತಿರುವವನನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲು

ಸಮಗ್ರ ನ್ಯೂಸ್: ಈಜಲು ಹೋದವನನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸಹಸ್ರಲಿಂಗ ಬಳಿಯ ಭೂತದಗುಂಡಿಯಲ್ಲಿ ನಡೆದಿದೆ. ರಾಮನಬೈಲಿನ ನಿವಾಸಿಗಳಾದ ಮೌಲಾನ ಮಹಮ್ಮದ್ ಸಲೀಮ್ ಕಲೀಲ್ ರೆಹಮಾನ್ (44), ನಾದಿಯಾ ನೂರ್ (20), ನಬಿಲ್ ನೂರ್ ಅಹ್ಮದ್‌(22), ವಿದ್ಯಾರ್ಥಿಗಳಾದ ಉಮರ್ ಸಿದ್ದಿಕ್(14), ಮಿಸ್ಬಾ ತಬಸುಮ್(21) ಮೃತರು. ಭಾನುವಾರ ರಜೆ ಹಿನ್ನೆಲೆಯಲ್ಲಿ ಈಜಲು ತೆರಳಿದ್ದಾಗ ಈ ಅವಘಡ ಸಂಭವಿಸಿದೆ. ಓರ್ವನ ಮೃತ ದೇಹ ಪತ್ತೆಯಾಗಿದ್ದು, ನಾಲ್ವರ ಮೃತ ದೇಹಕ್ಕಾಗಿ

ಮುಳುಗುತ್ತಿರುವವನನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲು Read More »

ಕುಕ್ಕೆ ಸುಬ್ರಹ್ಮಣ್ಯ: ನಾಳೆ(ಡಿ.18) ಚಂಪಾಷಷ್ಟಿ ಬ್ರಹ್ಮರಥೋತ್ಸವ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ಚಂಪಾ ಷಷ್ಠಿ ಮಹೋತ್ಸವದ ಅಂಗವಾಗಿ ಡಿ.18 ರಂದು ಆದಿತ್ಯವಾರ ಬೆಳಿಗ್ಗೆ 7.33 ರ ಧನುರ್ಲಗ್ನ ಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ಜರುಗಲಿದೆ ಎಂದು ತಿಳಿದುಬಂದಿದೆ. ಡಿ.17 ರಂದು ರಾತ್ರಿ ಪಂಚಮಿ ರಥೋತ್ಸವ ನಡೆಯಲಿದೆ. ಬಳಿಕ ಸಿಡಿಮದ್ದು ಪ್ರದರ್ಶನ ನಡೆಯಲಿದೆ.

ಕುಕ್ಕೆ ಸುಬ್ರಹ್ಮಣ್ಯ: ನಾಳೆ(ಡಿ.18) ಚಂಪಾಷಷ್ಟಿ ಬ್ರಹ್ಮರಥೋತ್ಸವ Read More »

ಚಂಪಾಷಷ್ಟಿ ಹಿನ್ನಲೆ| ಕುಕ್ಕೆಯಲ್ಲಿ ಎಡೆ‌ ಮಡೆಸ್ನಾನ‌ ಆರಂಭ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದ ಕಡಬ ತಾಲೂಕಿನಲ್ಲಿರುವ ಪುರಾಣ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವೈಭವದ ಚಂಪಾಷಷ್ಠಿ ಮಹೋತ್ಸವ ಇಂದಿನಿಂದ ಆರಂಭವಾಗಿದೆ. ಮೂರು ದಿನಗಳ ಕಾಲ ಎಡೆಮಡೆ ಸ್ನಾನ ನಡೆಯಲಿದೆ ಎಂದು ಆಡಳಿತ ಸಮಿತಿ ಹೇಳಿದೆ. ಇಂದು ಶನಿವಾರ ಚೌತಿ , ಭಾನುವಾರ ಪಂಚಮಿ ಮತ್ತು ಸೋಮವಾರದ ಷಷ್ಠಿಯಂದು ಮಾತ್ರ ಎಡೆ ಮಡೆಸ್ನಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ದೇವರ ನೈವೇದ್ಯವನ್ನು ದೇವಸ್ಥಾನದ ಹೊರಾಂಗಣದಲ್ಲಿ ಗೋವುಗಳಿಗೆ ಬಡಿಸಲಾಗುತ್ತದೆ. ಗೋವುಗಳು ತಿಂದು ಉಳಿಸಿದ ಬಾಳೆ ಎಲೆಯಲ್ಲಿ ಭಕ್ತರು ನೆರವೇರಿಸುವ ಉರುಳು ಸೇವೆ ನಡೆಸುತ್ತಾರೆ.

ಚಂಪಾಷಷ್ಟಿ ಹಿನ್ನಲೆ| ಕುಕ್ಕೆಯಲ್ಲಿ ಎಡೆ‌ ಮಡೆಸ್ನಾನ‌ ಆರಂಭ Read More »

ಶ್ರೀರಾಮಮಂದಿರ ಉದ್ಘಾಟನೆ/ ರಾಮ ಭಕ್ತರಿಗೆ ಸಿಹಿ ಸುದ್ದಿ ನೀಡಿದ ರೈಲ್ವೆ ಇಲಾಖೆ

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆಗೆ ಸಜ್ಜಾಗುತ್ತಿದ್ದು, ರಾಮಭಕ್ತರಿಗೆ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡುವ ತಯಾರಿಯಲ್ಲಿದೆ. ಅಯೋಧ್ಯೆಗೆ ತೆರಳುವ ಭಕ್ತರಿಗೆ ಅನುಕೂಲವಾಗುವಂತೆ ದೇಶದ ವಿವಿಧ ಭಾಗಗಳಿಂದ ಒಂದು ಸಾವಿರ ವಿಶೇಷ ರೈಲುಗಳನ್ನು ಆರಂಭಿಸಲು ಇಲಾಖೆ ಯೋಜನೆ ರೂಪಿಸುತ್ತಿದೆ. ಈ ವಿಶೇಷ ರೈಲುಗಳನ್ನು ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಪುಣೆ, ಕೋಲ್ಕತ್ತಾ, ನಾಗುರ, ಲಕ್ಕೋ ಮತ್ತು ಜಮ್ಮು ಸೇರಿದಂತೆ ಪ್ರಮುಖ ನಗರಗಳಿಂದ ಅಯೋಧ್ಯೆಗೆ ಸಂಪರ್ಕ ಕಲ್ಪಿಸಲು ಬಳಸಲಾಗುತ್ತದೆ. ಎಲ್ಲವೂ ಅಂದುಕೊಂಡಂತೆಯೇ ನಡೆದರೆ ಜ.19 ರಿಂದ ಈ ರೈಲುಗಳ ಸೇವೆ

ಶ್ರೀರಾಮಮಂದಿರ ಉದ್ಘಾಟನೆ/ ರಾಮ ಭಕ್ತರಿಗೆ ಸಿಹಿ ಸುದ್ದಿ ನೀಡಿದ ರೈಲ್ವೆ ಇಲಾಖೆ Read More »

ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಮತ್ತು ನೀರು/ ರಾಜ್ಯ ಸರ್ಕಾರದಿಂದ ಆದೇಶ

ಸಮಗ್ರ ನ್ಯೂಸ್: ರಾಜ್ಯದ ಎಲ್ಲಾ ಸರ್ಕಾರಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಮತ್ತು ನೀರಿನ ವ್ಯವಸ್ಥೆ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ‘ಗೃಹ ಜ್ಯೋತಿ’ ಯೋಜನೆಯಡಿ ವಿದ್ಯುಚ್ಛಕ್ತಿಯನ್ನು ಉಚಿತವಾಗಿ ಒದಗಿಸುತ್ತಿರುವ ರೀತಿಯಲ್ಲಿಯೇ, ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೂ ಸಹ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯ ಒದಗಿಸಲಿದೆ. ಸರ್ಕಾರಿ ಶಾಲೆಗಳಲ್ಲಿ ಉಳಿಕೆಯಾಗುವ ನಿರ್ವಹಣಾ ಅನುದಾನದಿಂದ ಶಾಲೆಗಳ ಗುಣಮಟ್ಟ ಅಭಿವೃದ್ಧಿಪಡಿಸಿ ಮಕ್ಕಳ ದಾಖಲಾತಿಯನ್ನು ಹೆಚ್ಚಿಸಬಹುದಾಗಿರು ವುದರಿಂದ, ಸರ್ಕಾರಿ

ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಮತ್ತು ನೀರು/ ರಾಜ್ಯ ಸರ್ಕಾರದಿಂದ ಆದೇಶ Read More »

ನಾಳೆ ಕುಮಾರಸ್ವಾಮಿ ಜನ್ಮದಿನ/ ಸಿಂಗಾಪುರಕ್ಕೆ ಹಾರಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ

ನಾಳೆ ಕುಮಾರಸ್ವಾಮಿ ಜನ್ಮದಿನ/ ಸಿಂಗಾಪುರಕ್ಕೆ ಹಾರಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕುಟುಂಬ ಮತ್ತು ಕೆಲ ಆಪ್ತರ ಜೊತೆ ಕುಮಾರಸ್ವಾಮಿ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ.ನನ್ನ ಜನ್ಮದಿನವಾದ ಡಿಸೆಂಬರ್ 16ರಂದು, ಅಂದರೆ ನಾಳೆ ನಾನು ಬೆಂಗಳೂರು ನಗರದಲ್ಲಿ ಲಭ್ಯವಿರುವುದಿಲ್ಲ. ಕಾರ್ಯಕರ್ತರಾದಿಯಾಗಿ ನನ್ನ ಮೇಲೆ ಪ್ರೀತಿ, ವಾತ್ಸಲ್ಯ ಇರಿಸಿರುವ ಪ್ರತಿಯೊಬ್ಬರೂ ನನ್ನ ವೈಯಕ್ತಿಕ ಭೇಟಿಗೆ ಪ್ರಯತ್ನಿಸದೇ ತಾವು ಇದ್ದಲ್ಲಿಂದಲೇ ಶುಭ ಕೋರಬೇಕಾಗಿ ನಿಮ್ಮೆಲ್ಲರಲ್ಲೂ

ನಾಳೆ ಕುಮಾರಸ್ವಾಮಿ ಜನ್ಮದಿನ/ ಸಿಂಗಾಪುರಕ್ಕೆ ಹಾರಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ Read More »