ರಾಜ್ಯ

ಬೆಳ್ಳಂಬೆಳಗ್ಗೆ ಬೆಂಗಳೂರಿನ ಹಲವೆಡೆ NIA ಮಿಂಚಿನ ಕಾರ್ಯಾಚರಣೆ| ಹಲವು ಸ್ಪೋಟಕ ಮಾಹಿತಿ ಸಂಗ್ರಹ

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರಿನ ಒಟ್ಟು 6 ಕಡೆಗಳಲ್ಲಿ ಇಂದು ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಗಿನ ಜಾವ ದಾಳಿಗಳು ನಡೆದಿದ್ದು, ಶಂಕಿತ ಉಗ್ರ ನಸೀರ್ ನೀಡಿರುವ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಹೆಬ್ಬಾಳದಲ್ಲಿ ಗ್ರೇನೇಡ್ ದೊರೆತ ಪ್ರಕರಣದ ಬಗ್ಗೆ ಎಫ್‌ಐಆರ್ ದಾಖಲಾಗಿತ್ತು. ಆರ್‌ಟಿ ನಗರದ ಮನೆಯೊಂದರಲ್ಲಿ ಗ್ರೆನೇಡ್ ಹಾಗು ಪಿಸ್ತೂಲ್ ಸಿಕ್ಕಿತ್ತು. ಈ ಪ್ರಕರಣ ಎನ್‌ಐಎಗೆ ವರ್ಗಾವಣೆಯಾಗಿದ್ದು, ತನಿಖಾ ಸಂಸ್ಥೆ ತೀವ್ರವಾಗಿ ತನಿಖೆ ನಡೆಸುತ್ತಿದೆ. ಬಂಧಿತ ಶಂಕಿತ ಉಗ್ರ ಈ

ಬೆಳ್ಳಂಬೆಳಗ್ಗೆ ಬೆಂಗಳೂರಿನ ಹಲವೆಡೆ NIA ಮಿಂಚಿನ ಕಾರ್ಯಾಚರಣೆ| ಹಲವು ಸ್ಪೋಟಕ ಮಾಹಿತಿ ಸಂಗ್ರಹ Read More »

ಶಬರಿಮಲೆ ಯಾತ್ರಿಗಳಿಗೆ ಗುಡ್ ನ್ಯೂಸ್| ದರ್ಶನದ ಅವಧಿ ವಿಸ್ತರಿಸಿದ ಟಿಬಿಡಿ

ಸಮಗ್ರ ನ್ಯೂಸ್: ಶಬರಿಮಲೆ ಅಯ್ಯಪ್ಪ ದರ್ಶನ ಆರಂಭವಾಗಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ತಿರುವಾಂಕೂರು ದೇವಸ್ಥಾನಂ ಮಂಡಳಿ ಮಹತ್ವದ ನಿರ್ಧಾರ ಕೈಗೊಂಡಿದೆ. ಭಕ್ತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಬರಿಮಲೆ ಅಯ್ಯಪ್ಪ ದರ್ಶನದ ಸಮಯವನ್ನು ಟಿಬಿಡಿ ಒಂದು ಗಂಟೆ ವಿಸ್ತರಿಸಿದೆ. ಪ್ರಸ್ತುತ ದಿನದಲ್ಲಿ ಸಂಜೆ 4 ರಿಂದ ರಾತ್ರಿ 11 ರವರೆಗೆ ಭಕ್ತರು ಅಯ್ಯಪ್ಪನ ದರ್ಶನ ಪಡೆಯುತ್ತಿದ್ದರು. ಆದರೆ ಇನ್ನು ಮುಂದೆ ಮಧ್ಯಾಹ್ನ 3 ಗಂಟೆಯಿಂದ ಆರಂಭವಾದ ದರ್ಶನ ರಾತ್ರಿ 11 ರವರೆಗೆ ನಡೆಯಲಿದೆ. ವರ್ಚುವಲ್

ಶಬರಿಮಲೆ ಯಾತ್ರಿಗಳಿಗೆ ಗುಡ್ ನ್ಯೂಸ್| ದರ್ಶನದ ಅವಧಿ ವಿಸ್ತರಿಸಿದ ಟಿಬಿಡಿ Read More »

ಶಬರಿಮಲೆಯಲ್ಲಿ ಭಕ್ತರ ನೂಕುನುಗ್ಗಲು| ಹೈಕೋರ್ಟ್ ನಿಂದ ಎಡಿಜಿಪಿಗೆ ಬುಲಾವ್

ಸಮಗ್ರ ನ್ಯೂಸ್: ಕೇರಳದ ಪ್ರಮುಖ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಶಬರಿಮಲೆಯಲ್ಲಿ ಶುಚಿತ್ವವನ್ನು ಕಾಪಾಡುವಂತೆ ಹೈಕೋರ್ಟ್​ ಆದೇಶ ನೀಡಿದೆ. ಅಲ್ಲದೇ ಪ್ರಕರಣ ಸಂಬಂಧ ಎಡಿಜಿಪಿ ಅವರು ಮಂಗಳವಾರದಂದು ಹೈಕೋರ್ಟ್​ನಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ. ಇಬ್ಬರು ವಕೀಲರು ಸಲ್ಲಿಸಿರುವ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್​ ನಡೆಸುತ್ತಿದೆ. ಇದಕ್ಕೂ ಮುನ್ನ, ಇಬ್ಬರು ವಕೀಲರು ಶಬರಿಮಲೆ ಅಯ್ಯಪ್ಪನ ಸನ್ನಿಧಾನಕ್ಕೆ ತೆರಳಿದ್ದರು. ಈ ವೇಳೆ, ಅಲ್ಲಿನ ಅವ್ಯವಸ್ಥೆಯನ್ನು ಕಂಡು ಹೈಕೋರ್ಟ್​ನಲ್ಲಿ ಪ್ರಶ್ನಿಸಿದ್ದರು. ಶಬರಿಮಲೆಗೆ ಬರುವ ಅಯ್ಯಪ್ಪ ಭಕ್ತರಿಗೆ ಬೇಕಾದ ಕುಡಿಯುವ ನೀರಿನ ಸೌಲಭ್ಯ ದೇವಾಲಯದಲ್ಲಿ ಒದಗಿಸಲಾಗಿಲ್ಲ.

ಶಬರಿಮಲೆಯಲ್ಲಿ ಭಕ್ತರ ನೂಕುನುಗ್ಗಲು| ಹೈಕೋರ್ಟ್ ನಿಂದ ಎಡಿಜಿಪಿಗೆ ಬುಲಾವ್ Read More »

ರಾಜಭವನದಲ್ಲಿ ಬಾಂಬ್| ಬಂತ್ತೊಂದು ಬೆದರಿಕೆ ಕರೆ

ಸಮಗ್ರ ನ್ಯೂಸ್: ರಾಜಭವನದಲ್ಲಿ ಬಾಂಬ್ ಇರೋದಾಗಿ ಸುಳ್ಳು ಕರೆಯೊಂದು ರಾತ್ರಿ 11.30ಕ್ಕೆ ಪೊಲೀಸ್ ಕಂಟ್ರೋಲ್ ರೂಂಗೆ ಬಂದಿದೆ. ತಕ್ಷಣವೇ ರಾತ್ರಿ 11:45 ಕ್ಕೆ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ರಾಜಭವನಕ್ಕೆ ತೆರಳಿ ತಪಾಸಣೆ ನಡೆಸಿದ್ದಾರೆ. ಸುಮಾರು 30 ನಿಮಿಷಕ್ಕೂ ಅಧಿಕ ಸಮಯ ತಪಾಸಣೆ ನಡೆಸಿದ ಬಳಿಕ ಇದೊಂದು ಸುಳ್ಳು ಕರೆ ಎಂಬ ನಿರ್ಧಾರಕ್ಕೆ ಪೊಲೀಸರು ಬಂದಿದ್ದಾರೆ. ರಾತ್ರಿಯೇ ಹಿರಿಯ ಅಧಿಕಾರಿಗಳು ರಾಜಭವನ ಬಳಿ ಬಂದು ಪರಿಶೀಲನೆ ನಡೆಸಿ ಎಲ್ಲಾ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಸದ್ಯ ಕಾಲ್ ಮಾಡಿದ ಮೊಬೈಲ್

ರಾಜಭವನದಲ್ಲಿ ಬಾಂಬ್| ಬಂತ್ತೊಂದು ಬೆದರಿಕೆ ಕರೆ Read More »

ಡಿ.16 ರಿಂದ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಸಂಪ್ರೋಕ್ಷಣೆ ಪೂಜಾ ಕಾರ್ಯಕ್ರಮ

ಸಮಗ್ರ ನ್ಯೂಸ್: ಮಡಿಕೇರಿ ಡಿ.11, ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಪ್ರತೀ ವರ್ಷ ರೂಢಿ ಸಂಪ್ರದಾಯದಂತೆ ಸಂಪ್ರೋಕ್ಷಣೆಯನ್ನು ನಡೆಸಿಕೊಂಡು ಬರುತ್ತಿರುವ ಹಿನ್ನಲೆಯಲ್ಲಿ ಈ ವರ್ಷವೂ ಉಚ್ಚಿಲ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಡಿಸೆಂಬರ್, 16 ರಿಂದ ಡಿಸೆಂಬರ್, 19 ರವರೆಗೆ ಸಂಪ್ರೋಕ್ಷಣೆ” ಕಾರ್ಯಕ್ರಮ ನಡೆಯಲಿದೆ. ಶ್ರೀ ತಲಕಾವೇರಿ ದೇವಾಲಯದಲ್ಲಿ ಡಿ. 16ರಂದು ಬೆಳಗ್ಗೆ 7.30 ಗಂಟೆಗೆ ಗಣಹೋಮ, ಸಂಪ್ರೋಕ್ಷಣೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ. ಭಗಂಡೇಶ್ವರ ದೇವಾಲಯದಲ್ಲಿ ಡಿ. 17ರಂದು ಬೆಳಗ್ಗೆ 7.30 ಗಂಟೆಗೆ ಗಣಪತಿ ಹೋಮ,

ಡಿ.16 ರಿಂದ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಸಂಪ್ರೋಕ್ಷಣೆ ಪೂಜಾ ಕಾರ್ಯಕ್ರಮ Read More »

ಮನೆ ಬಳಿ ಮೇಯ್ತಿತ್ತು ಅಂತಾ 8 ದನಗಳ ಮೇಲೆ ಆ್ಯಸಿಡ್ ಹಾಕಿದ ಮುದುಕಿ

ಸಮಗ್ರ ನ್ಯೂಸ್: ಮನೆ ಬಳಿ ಮೇಯಲು ಬಂದ ಹಸುಗಳ ಮೇಲೆ ಆ್ಯಸಿಡ್‌ ಎರಚಿ ವಿಕೃತಿ ಮೆರೆದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗುಣಿ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ವೃದ್ಧೆ ಜೋಸೆಫ್ ಗ್ರೇಸ್ ಎಂಬುವವರು ಕೃತ್ಯ ಎಸಗಿದ್ದಾರೆ. ಜೋಸೆಫ್ ಗ್ರೇಸ್ ಆ್ಯಸಿಡ್‌ ಎರಚಿದ್ದರಿಂದ 18 ಹಸುಗಳಿಗೆ ಸುಟ್ಟ ಗಾಯಗಳಾಗಿವೆ. ಜೋಸೆಫ್ ಗ್ರೇಸ್ ಮನೆ ಬಳಿಯಿರುವ ಖಾಲಿ ಜಾಗದಲ್ಲಿ ಕಳೆದ ಮೂರು ದಿನಗಳಿಂದ ಹಸುಗಳು ಮೇಯಲು ಬರುತ್ತಿದ್ದವು. ಹೀಗಾಗಿ ಜೋಸೆಫ್ ಗ್ರೇಸ್ ನಿರಂತರವಾಗಿ ಆ್ಯಸಿಡ್‌ ಎರಚುತ್ತಿದ್ದಾರೆ. ನಾಗಣ್ಣ ಎಂಬುವರಿಗೆ ಸೇರಿದ

ಮನೆ ಬಳಿ ಮೇಯ್ತಿತ್ತು ಅಂತಾ 8 ದನಗಳ ಮೇಲೆ ಆ್ಯಸಿಡ್ ಹಾಕಿದ ಮುದುಕಿ Read More »

ಮೈಸೂರು: ರೈತನ ಮೇಲೆ ಚಿರತೆ ದಾಳಿ

ಸಮಗ್ರ ನ್ಯೂಸ್: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರ ಮೇಲೆ ಚಿರತೆ ದಾಳಿಗೆ ಕಿವಿ ಹಾಗೂ ತಲೆ ಭಾಗಕ್ಕೆ ಗಾಯಗೊಂಡ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೊಲ್ಲೂರು ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ರೈತನನ್ನು ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಚಿರತೆ ದಾಳಿಯಿಂದ ಆಕ್ರೋಶಗೊಂಡಿರುವ ಜನರು, ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಕಾರ್ಯಾಚರಣೆಯಲ್ಲಿ ವಿಶೇಷ ರಕ್ಷಣಾ ದಳ, ಚಿರತೆ ಕಾರ್ಯಪಡೆ ಭಾಗಿಯಾಗಿದ್ದು, ಕ್ಯಾಮರಾಗಳ ಮೂಲಕ ಹುಲಿ ಚಲನವಲನ ಪತ್ತೆ ಹಚ್ಚುತ್ತಿದ್ದಾರೆ. ಅನಗತ್ಯವಾಗಿ ಹೊರಗೆ ಓಡಾಡದಂತೆ

ಮೈಸೂರು: ರೈತನ ಮೇಲೆ ಚಿರತೆ ದಾಳಿ Read More »

65ರ ಮಾಜಿ ಯೋಧನಿಗೆ ಯುವತಿಯ ಆಸೆ ತೋರಿಸಿ ಬ್ಲ್ಯಾಕ್ ಮೇಲ್| ಮದುವೆಯ ಬಯಸಿದಾತನಿಗೆ 10 ಲಕ್ಷ ಪಂಗನಾಮ| ಕಡಬದ ಇಬ್ಬರು, ಬಂಟ್ವಾಳದ ಓರ್ವ ಖದೀಮ ಅರೆಸ್ಟ್

ಸಮಗ್ರ ನ್ಯೂಸ್: ಮಾಜಿ ಯೋಧರೊಬ್ಬರಿಗೆ ಮದುವೆ ಮಾಡಿಸುವುದಾಗಿ ನಂಬಿಸಿ ಹೋಮ್‌ ಸ್ಟೇ ಗೆ ಕರೆದುಕೊಂಡು ಹೋಗಿ ಮಹಿಳೆಯನ್ನು ತೋರಿಸಿ ಮದುವೆಯ ನಾಟಕವಾಡಿ ಬಳಿಕ ಅದೇ ಫೋಟೊ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿ ಹಣ ಪೀಕಿಸಿದ ಪ್ರಕರಣವೊಂದು ಮಡಿಕೇರಿಯಿಂದ ವರದಿಯಾಗಿದೆ. 64 ವರ್ಷದ ಮಾಜಿ ಯೋಧನಿಗೆ ವಂಚಿಸಿದ ಮೂವರು ಆರೋಪಿಗಳನ್ನು ಪೊಲೀಸರು ಬಂದಿಸಿದ್ದು, ಇನ್ನೊರ್ವ ತಪ್ಪಿಸಿಕೊಂಡಿದ್ದಾನೆ. ಬಂಧಿತರನ್ನು ದ.ಕ. ಜಿಲ್ಲೆಯ ಬಂಟ್ವಾಳದ ನಿವಾಸಿ ಅಬ್ದುಲ್ ಬಶೀರ್ (29,) ಕಡಬದ ನಿವಾಸಿ ಸಾಧಿಕ್, (30) ಫೈಸುಲ್‌ ಎಂದು ಗುರುತಿಸಲಾಗಿದ್ದು, ಈ

65ರ ಮಾಜಿ ಯೋಧನಿಗೆ ಯುವತಿಯ ಆಸೆ ತೋರಿಸಿ ಬ್ಲ್ಯಾಕ್ ಮೇಲ್| ಮದುವೆಯ ಬಯಸಿದಾತನಿಗೆ 10 ಲಕ್ಷ ಪಂಗನಾಮ| ಕಡಬದ ಇಬ್ಬರು, ಬಂಟ್ವಾಳದ ಓರ್ವ ಖದೀಮ ಅರೆಸ್ಟ್ Read More »

ನಾಪೊಕ್ಲು‌ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮನು ಪೆರುಮುಂಡ ಆಯ್ಕೆ

ಸಮಗ್ರ ನ್ಯೂಸ್: ಪೆರಾಜೆ ವಲಯದ ಪುತ್ಯ ಪೆರಾಜೆ ಬೂತ್ ಮಟ್ಟದ ಸಭೆ ಡಿ.10ರಂದು ನಡೆದ ಸಭೆಯಲ್ಲಿ ನಾಪೊಕ್ಲು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮನು ಪೆರುಮುಂಡ ಅವರು ಆಯ್ಕೆಯಾಗಿದ್ದಾರೆ. ಸಭೆಯಲ್ಲಿ ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್ ಕೆ.ಎ., ಮುಖಂಡ ಟಿ.ಪಿ.ರಮೇಶ ಮಡಿಕೇರಿ, ಬೇಕಲ್ ರಮಾನಾಥ್ ಕರಿಕೆ, ಶೌಕತ್ ಅಲಿ ಕುಂಜಿಲ, ರಾಜೇಶ್ವರಿ ಕೊಯಿನಾಡು, ಚುನಾವಣಾ ಉಸ್ತುವಾರಿ ರಮೇಶ್ ಎ.ಪಿ. ಬಾಳಲೆ, ವಾರ್ಡ್ ಸದಸ್ಯ ಸುರೇಶ್ ಪೆರುಮಂಡ, ಬ್ಲಾಕ್ ಕಾರ್ಯದರ್ಶಿ ಬಶೀರ್ ಚೆರಂಬಾಣೆ ವೇದಿಕೆಯಲ್ಲಿದ್ದರು. ಈ ಸಂದರ್ಭದಲ್ಲಿ ಮನು ಪೆರುಮಂಡ

ನಾಪೊಕ್ಲು‌ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮನು ಪೆರುಮುಂಡ ಆಯ್ಕೆ Read More »

ಹವಾಮಾನ ವರದಿ| ಕರಾವಳಿಯಲ್ಲಿ ಎರಡು ದಿನ ಭಾರೀ ಮಳೆ ನಿರೀಕ್ಷೆ

ಸಮಗ್ರ ನ್ಯೂಸ್: ಇಂದು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಸೋಮವಾರ ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ‌ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆಯ ವಾತಾವರಣ ಕಂಡು ಬರಲಿದೆ ಎನ್ನುವ ಮಾಹಿತಿ ನೀಡಲಾಗಿದೆ. ಮುಂದಿನ 48 ಗಂಟೆಗಳಲ್ಲಿ ಅಂದರೆ ಮಂಗಳವಾರದಂದು ಕರಾವಳಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ

ಹವಾಮಾನ ವರದಿ| ಕರಾವಳಿಯಲ್ಲಿ ಎರಡು ದಿನ ಭಾರೀ ಮಳೆ ನಿರೀಕ್ಷೆ Read More »