ರಾಜ್ಯ

ಮೂಡಿಗೆರೆ: ಟ್ರೆಕ್ಕಿಂಗ್ ಹೋಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿ ಪ್ರಸಿದ್ಧ ಪ್ರವಾಸಿ ತಾಣ ರಾಣಿಝರಿ ಬಳಿಯಲ್ಲಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ರಾಣಿಝರಿ ಬಳಿಯ ಬೆಟ್ಟವೊಂದರಿಂದ ಸುಮಾರು ಮೂರು ಸಾವಿರ ಅಡಿ ಆಳಕ್ಕೆ ಬಿದ್ದು ಯುವಕ ಮೃತಪಟ್ಟಿದ್ದಾನೆ. ಯುವಕ ಬೆಟ್ಟದಿಂದ ಪ್ರಪಾತಕ್ಕೆ ನಗೆದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಊಹಿಸಲಾಗಿದೆ. ಬೆಂಗಳೂರು ಮೂಲದ ಭರತ್ (30 ವರ್ಷ) ಸಾವಿಗೀಡಾಗಿರುವ ಯುವಕ ಡಿಸೆಂಬರ್ 6ರಂದು ಬೆಂಗಳೂರಿನಿಂದ ದುರ್ಗದಹಳ್ಳಿ ಸಮೀಪದ ರಾಣಿಝರಿಗೆ ಟ್ರಕ್ಕಿಂಗ್ ಎಂದು ಬಂದಿದ್ದ ಯುವಕ ನಾಪತ್ತೆಯಾಗಿದ್ದ. ಕುಟುಂಬದವರ

ಮೂಡಿಗೆರೆ: ಟ್ರೆಕ್ಕಿಂಗ್ ಹೋಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ Read More »

ಕರ್ನಾಟಕದ ಶಕ್ತಿ ತೆಲಂಗಾಣದಲ್ಲಿ ಮಹಾಲಕ್ಷ್ಮಿ/ ಮಹಿಳೆಯರಿಗೆ ಉಚಿತ ಪ್ರಯಾಣ ಇಂದಿನಿಂದ ಶುರು

ಸಮಗ್ರ ನ್ಯೂಸ್: ಕಾಂಗ್ರೆಸ್‌ ತೆಲಂಗಾಣದಲ್ಲಿ ಅಧಿಕಾರಕ್ಕೆ ಬಂದ ಮೂರೇ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳ ಜಾರಿಗೆ ಮುಂದಾಗಿದ್ದು, ಇಂದಿನಿಂದ ಮಹಿಳೆಯರಿಗೆ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ದೊರೆತಿದೆ. ಇಂದು ಮಹಿಳೆಯರಿಗೆ ಉಚಿತ ಪ್ರಯಾಣದ ಮಹಾಲಕ್ಷ್ಮೀ ಯೋಜನೆ ಜಾರಿಗೆ ನೂತನ ಮುಖ್ಯಮಂತ್ರಿ ರೇವಂತ್ ರೆಡ್ಡಿ ನಿರ್ಧರಿಸಿದ್ದಾರೆ. ಈ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣಕ್ಕೆ ಅವಕಾಶ ಸಿಗಲಿದ್ದು, ತೆಲಂಗಾಣ ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರ ಜನ್ಮ ದಿನವಾದ ಇಂದು ಮಹಾಲಕ್ಷ್ಮೀ ಯೋಜನೆಗೆ

ಕರ್ನಾಟಕದ ಶಕ್ತಿ ತೆಲಂಗಾಣದಲ್ಲಿ ಮಹಾಲಕ್ಷ್ಮಿ/ ಮಹಿಳೆಯರಿಗೆ ಉಚಿತ ಪ್ರಯಾಣ ಇಂದಿನಿಂದ ಶುರು Read More »

ಕಡಿಮೆ ತೂಕದ ಬಿಸ್ಕೆಟ್ ಪೊಟ್ಟಣ/ ದಂಡ ವಿಧಿಸಿದ ಗ್ರಾಹಕರ ನ್ಯಾಯಾಲಯ

ಸಮಗ್ರ ನ್ಯೂಸ್: ಬಿಸ್ಕೆಟ್ ಪೊಟ್ಟಣದ ತೂಕ ಕಡಿಮೆ ಇತ್ತು ಎಂಬ ಆರೋಪದ ಮೇರೆಗೆ ಬ್ರಿಟಾನಿಯ ಇಂಡಸ್ಟ್ರೀಸ್‌ಗೆ ಕೊಡಗಿನ ಜಿಲ್ಲಾ ಗ್ರಾಹಕರ ಆಯೋಗವು ಒಟ್ಟು ₹30 ಸಾವಿರ ದಂಡ ವಿಧಿಸಿದೆ. ಕೊಡಗಿನ ಗೋಣಿಕೊಪ್ಪದಲ್ಲಿ ಎಂ.ಇ ಹಾಲಿ ಎಂಬವರು ಮಾರಿಗೋಲ್ಡ್ ಬಿಸ್ಕೆಟ್ ಖರೀದಿಸಿದ್ದರು. ಬಿಸ್ಕೆಟ್‌ಗಳು ಕಡಿಮೆ ಇರುವುದರಿಂದ ತೂಕ ಮಾಡಿಸಿ ನೋಡಿದಾಗ 100 ಗ್ರಾಂ ಇರುವ ಬದಲು 82 ಗ್ರಾಂ ಇತ್ತು. ಹೀಗಾಗಿ ಕೊಡಗಿನ ಜಿಲ್ಲಾ ಗ್ರಾಹಕರ ಆಯೋಗದಲ್ಲಿ ಅವರು ದೂರು ಸಲ್ಲಿಸಿದ್ದರು. ಆರೋಪ ಸಾಬೀತಾದ ಕಾರಣ ಕಂಪನಿಗೆ ₹10

ಕಡಿಮೆ ತೂಕದ ಬಿಸ್ಕೆಟ್ ಪೊಟ್ಟಣ/ ದಂಡ ವಿಧಿಸಿದ ಗ್ರಾಹಕರ ನ್ಯಾಯಾಲಯ Read More »

ಇಂದಿರಾ ಕ್ಯಾಂಟೀನ್‍ನಲ್ಲಿ ಇನ್ಮುಂದೆ ಸಿಗುತ್ತೆ ಮುದ್ದೆ

ಸಮಗ್ರ ನ್ಯೂಸ್: ಬೆಂಗಳೂರಿನ ಇಂದಿರಾ ಕ್ಯಾಂಟೀನ್‍ಗಳಲ್ಲಿ ಮಧ್ಯಾಹ್ನ ಮತ್ತು ರಾತ್ರಿ ಊಟಕ್ಕೆ ಮುದ್ದೆ, ಚಪಾತಿ ನೀಡುವುದಕ್ಕೆ ಬೇಡಿಕೆ ಕೇಳಿ ಬರುತ್ತಿದ್ದು, ಮುಂದಿನ ದಿನಗಳಲ್ಲಿ ಇಂದಿರಾ ಕ್ಯಾಂಟೀನ್‍ಗಳಲ್ಲಿ ಮುದ್ದೆ ಊಟದ ವ್ಯವಸ್ಥೆಗೆ ಬಿಬಿಎಂಪಿ ಸಿದ್ಧತೆ ನಡೆಸಿದೆ. ಕರುನಾಡಿನ ಸುಗ್ಗಿಯ ಹಬ್ಬ ಸಂಕ್ರಾಂತಿ ವೇಳೆಗೆ ಇಂದಿರಾ ಕ್ಯಾಂಟೀನ್‍ನಲ್ಲಿ ಮುದ್ದೆ ದೊರೆಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಇಲ್ಲಿಯವರೆಗೆ ಇಂದಿರಾ ಕ್ಯಾಂಟೀನ್‍ಗಳಲ್ಲಿ ಕೇವಲ ರೈಸ್ ಬಾತ್ ಅಥವಾ ಅನ್ನ, ಸಾಂಬರ್, ಮೊಸರನ್ನ ಮಾತ್ರ ಕೊಡಲಾಗುತ್ತಿತ್ತು. ಆದರೆ ಹಲವರು, ಕೇವಲ ರೈಸ್ ಬೇಡ, ಮುದ್ದೆ, ಚಪಾತಿಯನ್ನೂ

ಇಂದಿರಾ ಕ್ಯಾಂಟೀನ್‍ನಲ್ಲಿ ಇನ್ಮುಂದೆ ಸಿಗುತ್ತೆ ಮುದ್ದೆ Read More »

ಚಳಿಗಾಲದ ಅಧಿವೇಶನ ಸೋಮವಾರಕ್ಕೆ ಮುಂದೂಡಿಕೆ

ಸಮಗ್ರ ನ್ಯೂಸ್: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನವನ್ನು ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಲಾಗಿದೆ. ಡಿಸೆಂಬರ್ 4 ರಿಂದ ಆರಂಭವಾದ ಕಲಾಪದಲ್ಲಿ ಹಲವು ವಿಧೇಯಕ ಮಂಡನೆಯಾಗಿದೆ. ಇದೀಗ ಸೋಮವಾರ ಬೆಳಗ್ಗೆ 11 ಗಂಟೆಗೆ ಕಲಾಪವನ್ನು ಮುಂದೂಡಲಾಗಿದೆ. ಡಿ.4 ರಿಂದ 15ರವರೆಗೆ ಅಧಿವೇಶನ ನಡೆಯಲಿದೆ.

ಚಳಿಗಾಲದ ಅಧಿವೇಶನ ಸೋಮವಾರಕ್ಕೆ ಮುಂದೂಡಿಕೆ Read More »

ಬಿಜೆಪಿ ಕರ್ನಾಟಕ ರಾಜ್ಯ ಘಟಕಗಳ ಪುನರ್ ರಚನೆ/ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಜತೆಗೆ ಬಿ.ವೈ.ವಿಜಯೇಂದ್ರ ಸಮಾಲೋಚನೆ

ಸಮಗ್ರ ನ್ಯೂಸ್: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಜತೆಗೆ ರಾಜ್ಯ ಘಟಕದ ಎಲ್ಲ ಘಟಕಗಳ ಪುನರ್ ರಚನೆ ಕುರಿತು ಸಮಾಲೋಚನೆ ನಡೆಸಿದರು. ಈ ಹಿಂದಿನ ಅವಧಿಯಲ್ಲಿ ಬಿಜೆಪಿ ಯಾವುದೇ ಘಟಕಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿರಲಿಲ್ಲ. ಸಕ್ರಿಯವಾಗಿ ಕಾರ್ಯ ನಿರ್ವಹಿಸುವವರು ಮತ್ತು ಕ್ರಿಯಾಶೀಲರಿಗೆ ಹೆಚ್ಚಿನ ಆದ್ಯತೆ ನೀಡಲು ಘಟಕಗಳ ಪುನರ್ ರಚನೆಗೆ ನಿರ್ಧರಿಸಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಘಟಕಗಳ ಪುನರ್ ರಚನೆಗೆ ಅರುಣ್ ಸಿಂಗ್ ಜತೆಗೆ ಚರ್ಚಿಸುವಂತೆ ವಿಜಯೇಂದ್ರ ಅವರಿಗೆ

ಬಿಜೆಪಿ ಕರ್ನಾಟಕ ರಾಜ್ಯ ಘಟಕಗಳ ಪುನರ್ ರಚನೆ/ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಜತೆಗೆ ಬಿ.ವೈ.ವಿಜಯೇಂದ್ರ ಸಮಾಲೋಚನೆ Read More »

ಶಿರಸಿ: ಕೆಎಸ್ಆರ್ ಟಿಸಿ ಬಸ್ ಕಾರು ಮುಖಾಮುಖಿ ಡಿಕ್ಕಿ| ಐವರು ಬಲಿ

ಸಮಗ್ರ ನ್ಯೂಸ್ : ಕೆಎಸ್ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸಾವನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲದಲ್ಲಿ ಡಿ. 8ರಂದು ನಡೆದಿದೆ. ಕಾರಿನಲ್ಲಿದ್ದವರು ತಮಿಳುನಾಡು ಮೂಲದವರು ಎಂದು ಹೇಳಲಾಗಿದ್ದು, ಮೃತರ ಗುರುತು ಪತ್ತೆಯಾಗಿಲ್ಲ. ಕೆಎಸ್ಆರ್ ಟಿಸಿ ಬಸ್ ಶಿರಸಿಯಿಂದ ಕುಮಟಾ ಕಡೆಗೆ ಹೋಗುತ್ತಿದ್ದು, ಕುಮಟಾ ಕಡೆಯಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತವಾದ ರಭಸಕ್ಕೆ ಕಾರು

ಶಿರಸಿ: ಕೆಎಸ್ಆರ್ ಟಿಸಿ ಬಸ್ ಕಾರು ಮುಖಾಮುಖಿ ಡಿಕ್ಕಿ| ಐವರು ಬಲಿ Read More »

ಕಳಚಿದ ಸಿನಿಮಾ ರಂಗದ ಮತ್ತೊಂದು ಕೊಂಡಿ| ಹಿರಿಯ ನಟಿ ಲೀಲಾವತಿ ಇನ್ನಿಲ್ಲ

ಸಮಗ್ರ ನ್ಯೂಸ್: ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಲೀಲಾವತಿ ಅವರು ವಿಧಿವಶರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ತಮ್ಮ ಸ್ವಗೃಹದಲ್ಲದೇ ಕೆಲವು ದಿನಗಳಿಂದ ಹಾಸಿಗೆ ಹಿಡಿದಿದ್ದರು. ಅವರನ್ನು ಇಂದು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು, ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ನೆಲಮಂಗಲದಲ್ಲಿರುವ ಅವರ ತೋಟದ ಮನೆಯಲ್ಲೇ ನೇರವೇರಲಿದೆ ಅಂತ ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ. ಇಂದು ರಾತ್ರಿ ಅವರ ಪಾರ್ಥೀವ ಶರೀರವವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿದ್ದು,

ಕಳಚಿದ ಸಿನಿಮಾ ರಂಗದ ಮತ್ತೊಂದು ಕೊಂಡಿ| ಹಿರಿಯ ನಟಿ ಲೀಲಾವತಿ ಇನ್ನಿಲ್ಲ Read More »

ತಾಳಿ ಇನ್ನೇನೋ ಕಟ್ಟಬೇಕು ಅನ್ನುವಷ್ಟರಲ್ಲಿ ಹುಡ್ಗಿ ಕೊಟ್ಲು ನೋಡಿ ಶಾಕ್ …!

ಸಮಗ್ರ ನ್ಯೂಸ್: ಇತ್ತೀಚಿನ ದಿನಗಳಲ್ಲಿ ವಿವಾಹಗಳು ಅರ್ಧದಲ್ಲೆ ನಿಲ್ಲುವುದು ಸಾಮಾನ್ಯ. ಅದೇ ತರ ಇಲ್ಲೊಂದು ಘಟನೆ ಸಿನಿಮೀಯ ರೀತಿಯಲ್ಲಿ ನಡೆದಿದೆ. ಮಂಟಪದಲ್ಲಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದರೂ ಕೊನೆ ಗಳಿಗೆಯಲ್ಲಿ ಮದುವೆಯನ್ನು ನಿಲ್ಲಿಸಲಾಗುತ್ತದೆ.ಈ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಇನ್ನೇನು ವರ ಕೈಯಲ್ಲಿ ತಾಳಿ ಹಿಡಿದು ಕಟ್ಟಬೇಕು ಎನ್ನುವಷ್ಟರಲ್ಲೇ ವಧು ನಿರಾಕರಿಸಿದ್ದಾಳೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವರ ಇನ್ನೇನು ತಾಳಿ ಕಟ್ಟಬೇಕು ಎನ್ನುವಷ್ಟರಲ್ಲೇ ವಧು

ತಾಳಿ ಇನ್ನೇನೋ ಕಟ್ಟಬೇಕು ಅನ್ನುವಷ್ಟರಲ್ಲಿ ಹುಡ್ಗಿ ಕೊಟ್ಲು ನೋಡಿ ಶಾಕ್ …! Read More »

ಆದರ್ಶ ಪದವಿ ಪೂರ್ವ ಕಾಲೇಜು/ ರಾಜ್ಯ ಸಚಿವ ಸಂಪುಟದ ಒಪ್ಪಿಗೆ

ಸಮಗ್ರ ನ್ಯೂಸ್: ಕರ್ನಾಟಕದ ಆಯ್ದ 60 ತಾಲ್ಲೂಕುಗಳಲ್ಲಿನ ವಿಜ್ಞಾನ ಸಂಯೋಜನೆ ಹೊಂದಿರುವ 60 ಸರ್ಕಾರಿ ಪದವಿ ಪೂರ್ವ ಕಾಲೇಜುಗಳನ್ನು ‘ಆದರ್ಶ ಪದವಿ ಪೂರ್ವ ಕಾಲೇಜು’ಗಳನ್ನಾಗಿ ಅಭಿವೃದ್ಧಿಪಡಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.ಈ ಯೋಜನೆಯ ಅಡಿಯಲ್ಲಿ ಪ್ರತಿ ಕಾಲೇಜಿಗೆ ತಲಾ 83. 30 ಲಕ್ಷ ನೀಡಲಾಗುವುದು. ಒಟ್ಟು 50 ಕೋಟಿಯನ್ನು ನೀಡಲು ತೀರ್ಮಾನಿಸಲಾಗಿದೆ. ಈ ಕಾಲೇಜುಗಳಲ್ಲಿ ಅತ್ಯಾಧುನಿಕ ಪ್ರಯೋಗಾಲಯ, ಆಧುನಿಕ ತಂತ್ರಜ್ಞಾನ ಆಧಾರಿತ ಬೋಧನಾ ಪರಿಕರಗಳನ್ನು ಒದಗಿಸಿ, ವಿದ್ಯಾರ್ಥಿಗಳನ್ನು ಐಐಟಿ, ಐಐಎಸ್‍ಸಿ, ವೈದ್ಯಕೀಯ ಸಂಸ್ಥೆಗಳಿಗೆ

ಆದರ್ಶ ಪದವಿ ಪೂರ್ವ ಕಾಲೇಜು/ ರಾಜ್ಯ ಸಚಿವ ಸಂಪುಟದ ಒಪ್ಪಿಗೆ Read More »