ರಾಜ್ಯ

ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ಸಮಗ್ರ ನ್ಯೂಸ್: ಬರೀ ಭಾವನಾತ್ಮಕ ವಿಚಾರಗಳನ್ನೇ ಮುಂದಿಟ್ಟುಕೊಂಡು ಕಳೆದ ಹತ್ತು ವರ್ಷಗಳಿಂದ ಅಭಿವೃದ್ಧಿ ಕಾರ್ಯದಲ್ಲಿ ವಿಫಲರಾಗಿರುವ ಸಂಸದ ಪ್ರತಾಪ್ ಸಿಂಹ ಅವರಿಗೆ ಜಿಲ್ಲೆಯ ಶಾಸಕರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲವೆಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ತಿರುಗೇಟು ನೀಡಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2018ರಲ್ಲಿ ಈ ಹಿಂದಿನ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೊಡಗು ಜಿಲ್ಲೆಯ ಅಭಿವೃದ್ಧಿಗೆಂದು 15 ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಸಿದ್ದ ಹಿನ್ನೆಲೆಯಲ್ಲಿ 10 ಕೋಟಿ ರೂ.ಗಳ ಅನುದಾನವನ್ನು

ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು Read More »

ಭಕ್ತ ಕನಕದಾಸರ ಕೀರ್ತನೆಗಳು ಮತ್ತು ಚಿಂತನೆಗಳು ಸಾರ್ವಕಾಲಿಕ: ಡಾ.ಮಂತರ್ ಗೌಡ

ಸಮಗ್ರ ನ್ಯೂಸ್: ಕನ್ನಡ ನಾಡಿನ ಸಾಹಿತ್ಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಭಕ್ತ ಕನಕದಾಸರ ಕೊಡುಗೆ ಅಪಾರವಾಗಿದ್ದು, ಕನಕದಾಸರ ಚಿಂತನೆಗಳು ಸಾರ್ವಕಾಲಿಕವಾಗಿವೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೊಡಗು ಜಿಲ್ಲಾ ಕುರುಬ ಸಮಾಜದ ಸಹಕಾರದಲ್ಲಿ ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ‘ಕನಕದಾಸರ ಜಯಂತ್ಯುತ್ಸವ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇಂದಿನ ಮೊಬೈಲ್ ತಂತ್ರಜ್ಞಾನ ಯುಗದಲ್ಲಿಯೇ ಸಮಾಜದಲ್ಲಿ ಹಲವು

ಭಕ್ತ ಕನಕದಾಸರ ಕೀರ್ತನೆಗಳು ಮತ್ತು ಚಿಂತನೆಗಳು ಸಾರ್ವಕಾಲಿಕ: ಡಾ.ಮಂತರ್ ಗೌಡ Read More »

ಸೋಮವಾರಪೇಟೆ: ಶಾಸಕರಿಂದ ಹಾನಿಗೊಳಗಾದ ಕಬ್ಬಿಣ ಸೇತುವೆ ಪರಿಶೀಲನೆ

ಸಮಗ್ರ ನ್ಯೂಸ್: ಸೋಮವಾರಪೇಟೆಯಿಂದ ಮಡಿಕೇರಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಐಗೂರು ಸಮೀಪ ಹಾನಿಗೊಳಗಾದ ಕಬ್ಬಿಣ ಸೇತುವೆಯನ್ನು ಶಾಸಕ ಮಂತರ್ ಗೌಡ ಅವರು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯರು ಈ ಬಗ್ಗೆ ಶಾಸಕರಿಗೆ ಮಾಹಿತಿ ನೀಡಿದಾಗ ಶಾಸಕರು ಭೇಟಿ ನೀಡಿ ಇದರ ದುರಸ್ತಿ ಕಾರ್ಯಕ್ಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸದ್ಯದಲ್ಲೇ ಇದರ ಕಾಮಗಾರಿಯನ್ನು ನಡೆಸಲಾಗುವುದು ಎಂದು ತಿಳಿಸಿದರು. ಸ್ಥಳದಲ್ಲಿ ಸೂಚನಾ ಫಲಕಗಳನ್ನು ಕೂಡಲೇ ಅಳವಡಿಸಿ ಹೆಚ್ಚಿನ ಅನಾಹುತ ಸಂಭವಿಸಿದಂತೆ ತಡೆಗಟ್ಟುವಂತೆ ಅಧಿಕಾರಿಗಳಿಗೆ ಈ ಸಂದರ್ಭ

ಸೋಮವಾರಪೇಟೆ: ಶಾಸಕರಿಂದ ಹಾನಿಗೊಳಗಾದ ಕಬ್ಬಿಣ ಸೇತುವೆ ಪರಿಶೀಲನೆ Read More »

ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗವಿದೆ, ತಿಂಗಳಿಗೆ 75,000 ಕೊಡ್ತಾರೆ!

Bengaluru Metro Rail Corporation Limited ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಮ್ಯಾನೇಜರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ. ಅಭ್ಯರ್ಥಿಗಳು ಆನ್​​​ಲೈನ್ ​& ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 22, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿಯೇ ಪೋಸ್ಟಿಂಗ್ ನೀಡಲಾಗುತ್ತದೆ. Job Details:ಮ್ಯಾನೇಜರ್ ಸಿವಿಲ್​ (CSW)-2ಮ್ಯಾನೇಜರ್ (P-Way)-2ಮ್ಯಾನೇಜರ್ (ಆಪರೇಶನ್ಸ್​)-2 Educationಮ್ಯಾನೇಜರ್ ಸಿವಿಲ್​ (CSW), ಮ್ಯಾನೇಜರ್ (P-Way)- ಸಿವಿಲ್

ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗವಿದೆ, ತಿಂಗಳಿಗೆ 75,000 ಕೊಡ್ತಾರೆ! Read More »

ಹಾವೇರಿ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಪಿಯುಸಿ ವಿದ್ಯಾರ್ಥಿ

ಸಮಗ್ರ ನ್ಯೂಸ್: ಬೆಂಕಿ ಹಚ್ಚಿಕೊಂಡು ಪಿಯುಸಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಡೊಳ್ಳೇಶ್ವರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹಾನಗಲ್ ಪಟ್ಟಣದ ಎನ್ ಸಿಜೆಸಿ ಕಾಲೇಜಿನ ಪ್ರಥಮ ಪಿಯಸಿ ವಿದ್ಯಾರ್ಥಿ ಆದಿತ್ಯ ರಘುವೀರ ಚವ್ಹಾಣ ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಮನೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಗಂಭೀರವಾಗಿ ಗಾಯಗೊಂಡ ಆತನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಪ್ರಾಂಶುಪಾಲರ ಕಿರುಕುಳಕ್ಕೆ ಮನನೊಂದು ಬೆಂಕಿ ಹಚ್ಚಿಕೊಂಡು

ಹಾವೇರಿ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಪಿಯುಸಿ ವಿದ್ಯಾರ್ಥಿ Read More »

ಬಂದ್ ಆಗಲಿದೆ ಬೆಂಗಳೂರಿನ ಐಕಾನಿಕ್ ಹೋಟೆಲ್ ‘ನ್ಯೂ ಕೃಷ್ಣ ಭವನ’| ಏಳು ದಶಕಗಳ ನೆಚ್ಚಿನ ಹೊಟೇಲ್ ಬಂದ್ ಆಗಲು‌ ಕಾರಣವೇನು?

ಸಮಗ್ರ ನ್ಯೂಸ್: ಬೆಂಗಳೂರಿನ ಅತ್ಯಂತ ಹಳೆಯ ರೆಸ್ಟೋರೆಂಟ್​ಗಳಲ್ಲಿ ಒಂದಾದ ನ್ಯೂ ಕೃಷ್ಣ ಭವನವು ಡಿಸೆಂಬರ್​ 6 ರಿಂದ ಬಂದ್​ ಆಗಲಿದೆ. ಮಲ್ಲೇಶ್ವರಂನ ಹೃದಯ ಭಾಗದ ಸಂಪಿಗೆ ಥಿಯೇಟರ್​ ಎದುರಿರುವ ನ್ಯೂ ಕೃಷ್ಣ ಭವನ, ಸಸ್ಯಹಾರಿ ಊಟ, ಗ್ರೀನ್​ ಮಸಾಲೆ ಇಡ್ಲಿಗಳು, ಮಂಡ್ಯ ಶೈಲಿಯ ರಾಗಿ ದೋಸೆಗಳು ಮತ್ತು ಇನ್ನಿತರ ಸಸ್ಯಹಾರಿ ಅಡುಗೆಗಳಿಗೆ ಹೆಸರುವಾಸಿಯಾಗಿದೆ. ಆದರೆ, ಇದೀಗ ಬಂದ್​ ಆಗಲಿದೆ ಎಂದು ​ರೆಸ್ಟೋರೆಂಟ್ ಮುಂಭಾಗದಲ್ಲಿ ಬ್ಯಾನ್​ರ್​ ಹಾಕಲಾಗಿದೆ. ಇದರಿಂದ ಗ್ರಾಹಕರಿಗೆ ಶಾಕ್​ ನೀಡಿದಂತಾಗಿದೆ. ಹಳೆಯ ಕಾಲದ ಆಕರ್ಷಣೆಯೊಂದಿಗೆ 1954

ಬಂದ್ ಆಗಲಿದೆ ಬೆಂಗಳೂರಿನ ಐಕಾನಿಕ್ ಹೋಟೆಲ್ ‘ನ್ಯೂ ಕೃಷ್ಣ ಭವನ’| ಏಳು ದಶಕಗಳ ನೆಚ್ಚಿನ ಹೊಟೇಲ್ ಬಂದ್ ಆಗಲು‌ ಕಾರಣವೇನು? Read More »

ಎಲ್ಲಾ ತಾಲೂಕುಗಳಲ್ಲಿ ‘ಬಗರ್ ಹುಕುಂ’ ಸಮಿತಿ| 8 ತಿಂಗಳಲ್ಲಿ ಜಮೀನು ಸಕ್ರಮಕ್ಕೆ ಕ್ರಮ

ಸಮಗ್ರ ನ್ಯೂಸ್: ಭೂರಹಿತ ಸಾಗುವಳಿದಾರರ ಜಮೀನು ಸಕ್ರಮೀಕರಣಗೊಳಿಸುವಲ್ಲಿ ಸಾಕಷ್ಟು ಅಕ್ರಮಗಳು ನಡೆದಿರುವುದು ಕಂಡು ಬಂದ ಹಿನ್ನಲೆಯಲ್ಲಿ, ಎಲ್ಲಾ ತಾಲೂಕುಗಳಲ್ಲೂ ಶೀಘ್ರದಲ್ಲೇ ಬಗರ್ ಹುಕುಂ ಸಮಿತಿಗಳನ್ನು ರಚಿಸಿ, ಮುಂದಿನ 8 ತಿಂಗಳಲ್ಲಿ ಎಲ್ಲಾ ಪ್ರಕ್ರಿಯೆಗಳನ್ನು ಮುಗಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಬಗರ್ ಹುಕುಂ ಸಾಗುವಳಿದಾರರು ಸಕ್ರಮಕ್ಕಾಗಿ ಈವರೆಗೆ 9.29 ಲಕ್ಷ ಅರ್ಜಿ ಸಲ್ಲಿಸಿದ್ದಾರೆ. ಸಕ್ರಮೀಕರಣಗೊಳಿಸಲು ಪರಿಶೀಲನೆ ನಡೆಸಿದಾಗ ಹಲವು ಅಕ್ರಮಗಳು ಬಯಲಾಗಿವೆ ಎಂದರು. ಒಬ್ಬನೇ 25 ಅರ್ಜಿಗಳನ್ನು ಹಾಕಿರುವುದು, ಸಾಗುವಳಿ

ಎಲ್ಲಾ ತಾಲೂಕುಗಳಲ್ಲಿ ‘ಬಗರ್ ಹುಕುಂ’ ಸಮಿತಿ| 8 ತಿಂಗಳಲ್ಲಿ ಜಮೀನು ಸಕ್ರಮಕ್ಕೆ ಕ್ರಮ Read More »

ಕೊಡಗು ಮೈಸೂರು ಲೋಕಸಭಾ ಚುನಾವಣೆ| ಕಾಂಗ್ರೆಸ್ ನಿಂದ ಯಾರೇ ಸ್ಪಧಿ೯ಸಿದರೂ 2 ಲಕ್ಷ ಮತಗಳ ಅಂತರದಿಂದ ಗೆಲವು – ಪ್ರತಾಪ್ ಸಿಂಹ

ಸಮಗ್ರ ನ್ಯೂಸ್: ಮೈಸೂರಿನಲ್ಲಿ ಮಾಧ್ಯಮದವರಿಗೆ ಹೇಳಿಕೆ ನೀಡಿದ ಸಂಸದ ಈ ಬಾರಿ ಜೆಡಿಎಸ್ ಕೂಡ ಬಿಜೆಪಿ ಜತೆ ಮೈತ್ರಿಯಾಗಿದೆ. ಜೆಡಿಎಸ್ ಸಹಕಾರ ನೀಡಿರುವುದು ಬಿಜೆಪಿಗೆ ಮತ್ತಷ್ಟು ಬಲಬಂದಂತಾಗಿದೆ. ಎಲ್ಲಾ ಪಕ್ಷಗಳಲ್ಲಿಯೂ ಮೋದಿ ಅವರ ಅಭಿಮಾನಿಗಳಿದ್ದಾರೆ. ಮೋದಿ ಅವರು ದೇಶಕ್ಕಾಗಿ ಮಾಡಿರುವ ಕಾಯ೯ಗಳು, ಯೋಜನೆಗಳನ್ನು ಮೆಚ್ಚಿರುವ ಜನ ಎಲ್ಲಾ ಪಕ್ಷಗಳಲ್ಲಿಯೂ ಇದ್ದಾರೆ. ಇವರೆಲ್ಲರ ಸಹಕಾರ ಬಿಜೆಪಿಗೆ ಮತ್ತೊಮ್ಮೆ ದೊರಕಲಿದೆ. ಹೀಗಾಗಿ 2 ಲಕ್ಷ ಮತಗಳ ಅಂತರದ ಗೆಲವು ಸುಲಭ ಸಾಧ್ಯವಾಗಲಿದೆ. ಡಿಸೆಂಬರ್ ನಲ್ಲಿ ಮೈಸೂರು – ಕುಶಾಲನಗರ ಚತುಷ್ಪಥ

ಕೊಡಗು ಮೈಸೂರು ಲೋಕಸಭಾ ಚುನಾವಣೆ| ಕಾಂಗ್ರೆಸ್ ನಿಂದ ಯಾರೇ ಸ್ಪಧಿ೯ಸಿದರೂ 2 ಲಕ್ಷ ಮತಗಳ ಅಂತರದಿಂದ ಗೆಲವು – ಪ್ರತಾಪ್ ಸಿಂಹ Read More »

ಶಾಲಾ ಶೈಕ್ಷಣಿಕ ಪ್ರವಾಸಕ್ಕೆ ಖಾಸಗಿ ವಾಹನ‌ ಬಳಕೆಗೆ ಸರ್ಕಾರದಿಂದ ಬ್ರೇಕ್

ಸಮಗ್ರ‌ ನ್ಯೂಸ್: ವರ್ಷಾಂತ್ಯಕ್ಕೆ ದಿನಗಣನೆ ಶುರುವಾಗುತ್ತಿದ್ದಂತೆ ಶಾಲಾ, ಕಾಲೇಜುಗಳ ಶೈಕ್ಷಣಿಕ ಪ್ರವಾಸಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ. ಇದರ ನಡುವೆ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಠಿಯಿಂದ ಖಾಸಗಿ ವಾಹನಗಳ ಬಳಸಿ ಪ್ರವಾಸ ಹೊರಡುವುದಕ್ಕೆ ರಾಜ್ಯದ ಶಿಕ್ಷಣ ಇಲಾಖೆ ಬ್ರೇಕ್‌ ಹಾಕಿದೆ. ಶಾಲಾ ಶೈಕ್ಷಣಿಕ ಪ್ರವಾಸವನ್ನು ಕಡ್ಡಾಯವಾಗಿ ಕೆಎಸ್‌ಆರ್‌ಟಿಸಿ ಹಾಗೂ ಪ್ರವಾಸೋದ್ಯಮ ಇಲಾಖೆ ವಾಹನಗಳಲ್ಲಿ ಮಾತ್ರ ತೆರಳಬೇಕು. ಯಾವುದೇ ಕಾರಣಕ್ಕೂ ಅನಧಿಕೃತ ಹಾಗು ಖಾಸಗಿ ವಾಹನಗಳಲ್ಲಿ ಶಾಲಾ ಶೈಕ್ಷಣಿಕ ಪ್ರವಾಸ ಮಾಡಬಾರದೆಂದು ಶಿಕ್ಷಣ ಇಲಾಖೆ ಆಯುಕ್ತರು ಶಾಲೆಗಳ ಮುಖ್ಯ ಶಿಕ್ಷಕರಿಗೆ ಮಹತ್ವದ

ಶಾಲಾ ಶೈಕ್ಷಣಿಕ ಪ್ರವಾಸಕ್ಕೆ ಖಾಸಗಿ ವಾಹನ‌ ಬಳಕೆಗೆ ಸರ್ಕಾರದಿಂದ ಬ್ರೇಕ್ Read More »

ಚಿಕ್ಕಮಗಳೂರು: ಉಣ್ಣಕ್ಕಿ ಉತ್ಸವ|ವಿಸ್ಮಯ ಸೃಷ್ಟಿಸುವ ಅಲುಗಾಡುವ ಹುತ್ತ

ಸಮಗ್ರ ನ್ಯೂಸ್ : ವೈಜ್ಞಾನಿಕ ಲೋಕಕ್ಕೆ ಸವಾಲಾಗಿ ಮಲೆನಾಡಿನ ಮಡಿಲಲ್ಲಿ ಅನೇಕ ಧಾರ್ಮಿಕ ವಿಸ್ಮಯಗಳು ನಡೆಯುತ್ತಿರುತ್ತವೆ. ಅವುಗಳ ಸರದಿಯಲ್ಲಿ ಬಗ್ಗಸಗೋಡು-ಬಾನಳ್ಳಿಯ ಅಂಚಿನಲ್ಲಿ ಉಣ್ಣಕ್ಕಿ ಹುತ್ತ ಹಲವು ವರ್ಷಗಳಿಂದ ಅಲುಗಾಡಿ ವಿಸ್ಮಯ ಸೃಷ್ಟಿಸುವ ಮೂಲಕ ಮನೆ ಮಾತಾಗಿದೆ.ಅಂದು ಸಹಸ್ರಾರು ಭಕ್ತರು ಅಲುಗಾಡುವ ಹುತ್ತವನ್ನು ನೋಡಿ ಕಣ್ಣು ತುಂಬಿಸಿಕೊಳ್ಳುತ್ತಾರೆ. ಮೂರು ಶತಮಾನಗಳ ಹಿಂದೆ ನೈಸರ್ಗಿಕವಾಗಿ ಸೃಷ್ಟಿಯಾಗಿರುವ ಮಳೆಗೂ ಕರಗದೇ ನಿಂತಿರುವ ಉಣ್ಣಕ್ಕಿ ಹುತ್ತ ವೈಜ್ಞಾನಿಕ ಲೋಕಕ್ಕೆ ಸವಾಲಾಗಿದೆ. ವಿಸ್ಮಯ ಮೂಡಿಸುವ ಹುತ್ತ ರಾತ್ರಿ ಮಹಾಮಂಗಳಾರತಿ ವೇಳೆ ಕೊಂಚ ಅಲುಗಾಡಿ ಪವಾಡ

ಚಿಕ್ಕಮಗಳೂರು: ಉಣ್ಣಕ್ಕಿ ಉತ್ಸವ|ವಿಸ್ಮಯ ಸೃಷ್ಟಿಸುವ ಅಲುಗಾಡುವ ಹುತ್ತ Read More »