ರಾಜ್ಯ

ಬಗೆಹರಿಯುವ ಸಮಸ್ಯೆಗಳನ್ನು ಜಿಲ್ಲಾ ಮಟ್ಟದಲ್ಲೇ ಬಗೆಹರಿಸಿ| ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಸಮಗ್ರ ನ್ಯೂಸ್: ಜಿಲ್ಲಾ ಮಟ್ಟದಲ್ಲೇ ಬಗೆಹರಿಯಬೇಕಾದ ಸಮಸ್ಯೆಗಳು ಅಲ್ಲಿಯೇ ಬಗೆಹರಿಯಬೇಕು. ಜನ ದುಡ್ಡು ಖರ್ಚು ಮಾಡಿಕೊಂಡು ಬೆಂಗಳೂರಿನವರೆಗೂ ಬಂದರೆ ನಿಮ್ಮ ವೈಫಲ್ಯ ಎಂದರ್ಥ. ಇದನ್ನು ಸಹಿಸುವುದಿಲ್ಲ ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಜನ ಸ್ಪಂದನಾ ಕಾರ್ಯಕ್ರಮಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ದೊರಕಿದ ಬಳಿಕ ಅಧಿಕಾರಿಗಳಿಗೆ ಎಚ್ಚರಿಕೆ ರವಾನಿಸಿದ ಸಿಎಂ, ಎರಡು ತಿಂಗಳ ಹಿಂದೆಯೇ ನಡೆಯಬೇಕಾಗಿತ್ತು.ಆದರೆ ಅನಿವಾರ್ಯ ಕಾರಣಗಳಿಂದ ಇವತ್ತು ಜನಸ್ಪಂದನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಎಲ್ಲ ಜಿಲ್ಲಾ ಸಚಿವರಿಗೆ, ತಮ್ಮ ಜಿಲ್ಲೆಗಳಲ್ಲಿ ಜನತಾ ಸ್ಪಂದನ

ಬಗೆಹರಿಯುವ ಸಮಸ್ಯೆಗಳನ್ನು ಜಿಲ್ಲಾ ಮಟ್ಟದಲ್ಲೇ ಬಗೆಹರಿಸಿ| ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ Read More »

ಆದಾಯ ಮೀರಿದ ಆಸ್ತಿ‌ ಗಳಿಕೆ ವಿಚಾರ| ಡಿಸಿಎಂ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಯತ್ನಾಳ್

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ಸಿಬಿಐ ತನಿಖೆಗೆ ವಹಿಸಿದ್ದನ್ನು ಹಿಂಪಡೆದಿತ್ತು. ಈ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಇದೀಗ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈಗಾಗಲೇ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಕಳೆದ ಸಚಿವ ಸಂಪುಟ ಸಭೆಯಲ್ಲಿ ಡಿಕೆಶಿ ಮೇಲಿನ ಕೇಸ್ ಸಂಬಂಧ ತೆಗೆದುಕೊಂಡ ನಿರ್ಧಾರದ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದರು. ಅಲ್ಲದೇ

ಆದಾಯ ಮೀರಿದ ಆಸ್ತಿ‌ ಗಳಿಕೆ ವಿಚಾರ| ಡಿಸಿಎಂ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಯತ್ನಾಳ್ Read More »

ಸಿಎಂ ‘ಜನತಾ ದರ್ಶನ’ ಭರ್ಜರಿ ಸಕ್ಸಸ್| 3812 ಅರ್ಜಿ ವಿಲೇವಾರಿಗೆ 15 ದಿನ ಗಡುವು

ಸಮಗ್ರ ನ್ಯೂಸ್: ನ.27ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯಮಟ್ಟದ ಜನತಾ ದರ್ಶನ ಕಾರ್ಯಕ್ರಮಕ್ಕೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಬರೋಬ್ಬರಿ 3,812 ಅರ್ಜಿಗಳು ಸಲ್ಲಿಕೆಯಾಗಿದ್ದು, ಇವುಗಳ ವಿಲೇವಾರಿಗೆ ಸಿಎಂ ಸಿದ್ಧರಾಮಯ್ಯ 15 ದಿನಗಳ ಡೆಡ್ ಲೈನ್ ಅನ್ನು ಅಧಿಕಾರಿಗಳಿಗೆ ನೀಡಿದ್ದಾರೆ. ಈ ಬಗ್ಗೆ ಸಿಎಂ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಡೆಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟಾರೆ 3812 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ತಿಳಿಸಿದೆ. ಇದರಲ್ಲಿ 2862 ಅರ್ಜಿಗಳನ್ನು ಈಗಾಗಲೇ ಐಪಿಜಿಆರ್‌ಎಸ್‌ ತಂತ್ರಾಂಶದಲ್ಲಿ

ಸಿಎಂ ‘ಜನತಾ ದರ್ಶನ’ ಭರ್ಜರಿ ಸಕ್ಸಸ್| 3812 ಅರ್ಜಿ ವಿಲೇವಾರಿಗೆ 15 ದಿನ ಗಡುವು Read More »

ಹಾಸ್ಟೆಲ್ ನಲ್ಲಿ ಚಿತ್ರಾನ್ನ ಸೇವಿಸಿ 23 ವಿದ್ಯಾರ್ಥಿಗಳು ಅಸ್ವಸ್ಥ

ಸಮಗ್ರ ಸಮಾಚಾರ: ಹಾಸ್ಟೆಲ್‌ನಲ್ಲಿ ಬೆಳಗ್ಗೆ ಚಿತ್ರಾನ್ನ ಸೇವಿಸಿದ ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರೋ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಕನೂರ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದಿದೆ. 23 ವಿದ್ಯಾರ್ಥಿಗಳು ಅಸ್ಪಸ್ಥರಾಗಿದ್ದಾರೆ. ಈ ಪೈಕಿ 8 ಜನರ ಸ್ಥಿತಿ ಚಿಂತಾಜನಕವಾಗಿದೆ ಅಂತ ಹೇಳಲಾಗುತ್ತಿದೆ. ಅಸ್ವಸ್ಥ ಮಕ್ಕಳನ್ನು ದಾವಣಗೆರೆ ಜಿಲ್ಲಾಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗಳಿಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಚನ್ನಗಿರಿಯ ಕಾಕನೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಮಕ್ಕಳು ಅಸ್ವಸ್ಥಗೊಂಡಿರೋ ಘಟನೆ ನಡೆದಿದೆ. ಅಸ್ವಸ್ಥರ ಸಂಖ್ಯೆ 23ಕ್ಕೆ

ಹಾಸ್ಟೆಲ್ ನಲ್ಲಿ ಚಿತ್ರಾನ್ನ ಸೇವಿಸಿ 23 ವಿದ್ಯಾರ್ಥಿಗಳು ಅಸ್ವಸ್ಥ Read More »

ಬೆಳಗಾವಿ:ವಿದ್ಯುತ್ ತಗುಲಿ ತಂದೆ -ಮಗ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಮಾರ್ಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವೈರ್ ತುಳಿದ ತಾಯಿ ಹಾಗೂ ಮಗು ಸಾವನ್ನಪ್ಪಿದ್ದ ಘಟನೆ ಮಾಸುವ ಮುನ್ನವೇ ಅಥಣಿಯಲ್ಲಿ ತಂದೆ ಮತ್ತು ಮಗನಿಗೆ ವಿದ್ಯುತ್ ತಗುಲಿ ಸ್ಥಳದಲ್ಲಿ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ನ. 26ರಂದು ಸಂಜೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಮಲ್ಲಿಕಾರ್ಜುನ ಸದಾಶಿವ ಪೂಜಾರಿ(32) ಹಾಗೂ ಪ್ರೀತಮ ಮಲ್ಲಿಕಾರ್ಜುನ ಪೂಜಾರಿ (7) ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಧ್ಯಾಹ್ನ ಮೃತ ಮಲ್ಲಿಕಾರ್ಜುನ ತೋಟದಲ್ಲಿ ಬೋರ್ವೆಲ್ ಮೋಟಾರ್

ಬೆಳಗಾವಿ:ವಿದ್ಯುತ್ ತಗುಲಿ ತಂದೆ -ಮಗ ಸ್ಥಳದಲ್ಲೇ ಸಾವು Read More »

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಡಿಕೇರಿಗೆ

ಸಮಗ್ರ ನ್ಯೂಸ್:ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಮಡಿಕೇರಿಗೆ ಭೇಟಿ. ಮಡಿಕೇರಿ ಬಳಿಯ ಖಾಸಗಿ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿರುವ ಹೆಚ್.ಡಿ.ಕುಮಾರಸ್ವಾಮಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುವ ನಿಮಿತ್ತ ಮಡಿಕೇರಿಗೆ ಆಗಮಿಸಿದ್ದಾರೆ. ಅನಿತಾ ಕುಮಾರಸ್ವಾಮಿ, ಮಾಜಿ ಶಾಸಕ ಸಾ.ರಾ.ಮಹೇಶ್ ಜತೆಗೆ ಅಗಮಿಸಿರುವ ಕುಮಾರಸ್ವಾಮಿ ನ. 28ರಂದು ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆ ನಡೆಸುವ ಸಾಧ್ಯತೆ ಇದೆ. ಕೊಡಗಿನಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನ ತೆರವಾಗಿರುವ ಹಿನ್ನೆಲೆ, ನೂತನ ಜಿಲ್ಲಾಧ್ಯಕ್ಷರ ನೇಮಕದ ಬಗ್ಗೆ ರಾಜಕೀಯಾಸಕ್ತರಲ್ಲಿ ಮನೆಮಾಡಿದ ಕುತೂಹಲ.

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಡಿಕೇರಿಗೆ Read More »

ಹವಾಮಾನ ವರದಿ| ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಐದು ದಿನ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆ ಸಾಧ್ಯತೆ ಇದೆ ಡಿಸೆಂಬರ್

ಹವಾಮಾನ ವರದಿ| ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಐದು ದಿನ ಮಳೆ ಸಾಧ್ಯತೆ Read More »

ಚಿಕ್ಕಮಗಳೂರು : ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವು

ಸಮಗ್ರ ನ್ಯೂಸ್: ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಟ್ಟಣಗೆರೆ ಗ್ರಾಮದಲ್ಲಿ ನಡೆದಿದೆ. ಮೃತನನ್ನು 27 ವರ್ಷದ ಅಭಿಷೇಕ್ ಎಂದು ಗುರುತಿಸಲಾಗಿದೆ. ಮೃತ ಅಭಿಷೇಕ್ ಮೂರು ಎಕರೆ ಅಡಿಕೆ ತೋಟವಿತ್ತು. ತೋಟದಲ್ಲಿ ತೆಂಗಿನ ಮರಗಳು ಕೂಡ ಇದ್ದವು. ಭಾನುವಾರ ಸಂಜೆ ತೋಟದಲ್ಲಿ ತೆಂಗಿನಕಾಯಿ ಕೀಳಲು ಹೋದಾಗ ಈ ದುರ್ಘಟನೆ ಸಂಭವಿಸಿದೆ. ತೋಟದಲ್ಲಿ ಒಂದು ಮರದಿಂದ ಮತ್ತೊಂದು ತೆಂಗಿನ ಮರದ ಬಳಿ ಹೋಗುವಾಗ ಅಲ್ಯುಮಿನಿಯಂ ಏಣಿಯನ್ನ ಎತ್ತಿಕೊಂಡು

ಚಿಕ್ಕಮಗಳೂರು : ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವು Read More »

ಇತಿಹಾಸ ಬರೆದ ಬೆಂಗಳೂರು ”ರಾಜ-ಮಹಾರಾಜ” ಜೋಡುಕರೆ ಕಂಬಳ| ಇಲ್ಲಿದೆ ಸಂಪೂರ್ಣ ಫಲಿತಾಂಶ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ನಡೆದ ಎರಡು ದಿನಗಳ ಕಂಬಳ ಉತ್ಸವಕ್ಕೆ ಭಾನುವಾರ ಅದ್ದೂರಿಯಾಗಿ ತೆರೆ ಬಿದ್ದಿದೆ. ಒಟ್ಟು 8 ಲಕ್ಷ ಜನ ಕಂಬಳ ವೀಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ. ಹಾಗಾದರೆ ಈ ಕಂಬಳದ ಫಲಿತಾಂಶ ಏನು ಎಂಬುದನ್ನು ತಿಳಿಯೋಣ… ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಾಜ-ಮಹಾರಾಜ ಜೋಡುಕೆರೆ ಕಂಬಳ ಚರಿತ್ರಾರ್ಹ ಎಂದೆನಿಸಿದೆ. ಭಾನುವಾರ ಒಂದೇ ದಿನ 3 ಲಕ್ಷಕ್ಕೂ ಅಧಿಕ ಮುಂದೆ ಕಂಬಳವನ್ನು ಕಣ್ಣು ತುಂಬಿಕೊಂಡರು. ಶನಿವಾರ ಎರಡು ಲಕ್ಷಕ್ಕೂ ಹೆಚ್ಚು ಕಂಬಳಾಭಿಮಾನಿಗಳು ಸೇರಿದ್ದರು.

ಇತಿಹಾಸ ಬರೆದ ಬೆಂಗಳೂರು ”ರಾಜ-ಮಹಾರಾಜ” ಜೋಡುಕರೆ ಕಂಬಳ| ಇಲ್ಲಿದೆ ಸಂಪೂರ್ಣ ಫಲಿತಾಂಶ Read More »

ಕೊಡಗಿನಲ್ಲಿ ಕಾಡಾನೆಗಳ ಹಾವಳಿ| ಮನೆಯಂಗಳದಲ್ಲಿ ವಾರ್ಕಿಂಗ್ ಮಾಡುತ್ತಿರುವ ಕಾಡಾನೆಗಳು

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಬೇಟೋಳ್ಳಿ ಗ್ರಾಮದದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ ಕಾಡಾನೆಗಳ ಹಿಂಡು ಕಾಡಿನಿಂದ ನಾಡಿಗೆ ಬಂದು ತೋಟಕ್ಕೆ ತೋಟದಿಂದ ಮನೆಯಂಗಳಕ್ಕೆ ಬಂದು ಉಪಟಳ ನೀಡಲು ಆರಂಭಿಸಿದೆ. ಬೇಟೋಳ್ಳಿ ಗ್ರಾಮದಲ್ಲಿ ಸುಮಾರು 4 ಕಾಡಾನೆಗಳು ಕಾಣಿಸಿಕೊಂಡಿದ್ದು ಕಳೆದ ಮೂರು ದಿನಗಳಿಂದ ರಸ್ತೆಯಲ್ಲಿ ಸಂಚಾರಿಸುತ್ತಿದೆ. ಮಾತ್ರವಲ್ಲ ಸ್ಥಳಿಯ ಡಿ.ಎಚ್.ಎಸ್.ಮಿಲ್ ಆವರಣದಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು. ಕಾರುಗಳ ಪಕ್ಕದಲ್ಲಿ ಸ್ವಲ್ಪ ಹೊತ್ತು ಅಡ್ಡಾಡಿದ 2 ಕಾಡಾನೆಗಳು ಯಾವುದೇ ಹಾನಿ ಮಾಡದೆ ಮರಳಿದೆ ಆನೆಗಳ ಹಿಂಡು ಇಲ್ಲಿನ ಶ್ರೀ ಭದ್ರಕಾಳಿ

ಕೊಡಗಿನಲ್ಲಿ ಕಾಡಾನೆಗಳ ಹಾವಳಿ| ಮನೆಯಂಗಳದಲ್ಲಿ ವಾರ್ಕಿಂಗ್ ಮಾಡುತ್ತಿರುವ ಕಾಡಾನೆಗಳು Read More »