ರಾಜ್ಯ

ಕೊಟ್ಟಿಗೆಹಾರ: ಕುಡಿದ ಮತ್ತಿನಲ್ಲಿ ತಂದೆಯಿಂದ ಮಗನ ಭೀಕರ ಹತ್ಯೆ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಆನೆಗುಂಡಿ ಗ್ರಾಮದಲ್ಲಿ ಕುಡಿದ ಮತ್ತಿನಲ್ಲಿ ತಂದೆಯೇ ತನ್ನ ಮಗನನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ಭೀಕರ ಘಟನೆ ನಡೆದಿದೆ. ಮೃತ ದುರ್ದೈವಿಯನ್ನು ಪ್ರದೀಪ್ ಆಚಾರ್ (29) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಮೃತನ ತಂದೆ ರಮೇಶ್ ಆಚಾರ್ ಕ್ಷುಲಕ ಕಾರಣಕ್ಕೆ ಮದ್ಯಪಾನ ಮಾಡಿ ಆಗಾಗ ಮನೆಲ್ಲೇ ಗಲಾಟೆ ಮಾಡುತ್ತಿದ್ದ. ತಂದೆ–ಮಗನ ನಡುವಿನ ಕಲಹ ತೀವ್ರವಾಗಿದ್ದು, ಅವರ ಕಾಟದಿಂದ ಬೇಸತ್ತ ಪ್ರದೀಪ್ ತಾಯಿ ಮನೆ ಬಿಟ್ಟು ಹೋಗಿದ್ದರು. ನಂತರ ಮನೆಯಲ್ಲಿ ತಂದೆ–ಮಗ […]

ಕೊಟ್ಟಿಗೆಹಾರ: ಕುಡಿದ ಮತ್ತಿನಲ್ಲಿ ತಂದೆಯಿಂದ ಮಗನ ಭೀಕರ ಹತ್ಯೆ Read More »

ಪುತ್ತೂರು: ಆರನೇ ದಿನಕ್ಕೆ ಕಾಲಿಟ್ಟ ವೃದ್ಧ ದಂಪತಿಗಳ ಅಹೋರಾತ್ರಿ ಧರಣಿ

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಇತ್ತೀಚೆಗೆ ಮನೆ ಕಳೆದುಕೊಂಡ ವೃದ್ಧ ದಂಪತಿಯೊಬ್ಬರು ನ್ಯಾಯಕ್ಕಾಗಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದು, ಇದು ಆರನೇ ದಿನಕ್ಕೆ ಕಾಲಿಟ್ಟಿದೆ. ಪುತ್ತೂರು ಸಹಾಯ ಆಯುಕ್ತರು ತನಿಖೆ ನಡೆಸಿ ಕ್ರಮಕೈಗೊಳ್ಳುವ ಬಗ್ಗೆ ಆಶ್ವಾಸನೆ ನೀಡಿದ್ದರೂ, ದಂಪತಿಗಳು ಧರಣಿಯನ್ನು ಮುಂದುವರೆಸಿದ್ದಾರೆ. ಮನೆ ಕಳೆದುಕೊಂಡ ಕಡಬ ತಾಲೂಕಿನ ಕೌಕ್ರಾಡಿ ಗ್ರಾ.ಪಂ ವ್ಯಾಪ್ತಿಯ ಕಾಪಿನ ಬಾಗಿಲು ನಿವಾಸಿ ರಾಧಾಮ್ಮ, ಮುತ್ತು ಸ್ವಾಮಿ ದಂಪತಿ ತಮಗೆ ನ್ಯಾಯ ಕೊಡಿಸುವಂತೆ ನೀತಿ ತಂಡದ ನೇತೃತ್ವದಲ್ಲಿ ಪುತ್ತೂರು ಸಹಾಯಕ ಕಮೀಷನರ್ ಕಚೇರಿ ಆವರಣದ ಮುಂದೆ ಅನಿರ್ದಿಷ್ಟಾವಧಿ

ಪುತ್ತೂರು: ಆರನೇ ದಿನಕ್ಕೆ ಕಾಲಿಟ್ಟ ವೃದ್ಧ ದಂಪತಿಗಳ ಅಹೋರಾತ್ರಿ ಧರಣಿ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜನವರಿ ತಿಂಗಳ ಈ ವಾರವು ಗ್ರಹಗಳ ಸ್ಥಾನ ಬದಲಾವಣೆಯಿಂದ 12 ರಾಶಿಗಳ ಸಾಪ್ತಾಹಿಕ ಭವಿಷ್ಯ ಹೇಗಿರಲಿದೆ? ಯಾವ ರಾಶಿಗೆ ಶುಭ? ಯಾವ ರಾಶಿಗೆ ಅದೃಷ್ಟಶಾಲಿಯಾಗಿರಲಿದೆ? ಯಾವ ರಾಶಿಗೆ ದುರಾದೃಷ್ಟ ಎದುರಾಗಲಿದೆ? ಎಲ್ಲಾ 12 ರಾಶಿಗಳ ಈ ವಾರದ ರಾಶಿ ಭವಿಷ್ಯ ಹೇಗಿರಲಿದೆ? ನೋಡೋಣ… ಮೇಷ ರಾಶಿ:ಮೇಷ ರಾಶಿಯವರಿಗೆ ಜವಾಬ್ದಾರಿಗಳು ಮತ್ತು ಕಾರ್ಯಭಾರ ಹೆಚ್ಚಾಗುವ ಸೂಚನೆ ಇದೆ. ವಾರದ ಆರಂಭದಲ್ಲಿ ಸ್ವಲ್ಪ ಮಾನಸಿಕ ಒತ್ತಡ ಕಂಡರೂ, ಮಧ್ಯಭಾಗದಿಂದ ಪರಿಸ್ಥಿತಿ ನಿಮ್ಮ ನಿಯಂತ್ರಣಕ್ಕೆ ಬರುತ್ತದೆ. ಕೆಲಸದ ಸ್ಥಳದಲ್ಲಿ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಅನಧಿಕೃತವಾಗಿ ರಜೆ ಹಾಕುವುದು ಉದ್ಯೋಗಿಯ ಹಕ್ಕಲ್ಲ, ದುರ್ನಡತೆ – ಹೈಕೋರ್ಟ್

ಸಮಗ್ರ ನ್ಯೂಸ್: ಅನಧಿಕೃತವಾಗಿ ರಜೆ ಹಾಕುವುದು ಉದ್ಯೋಗಿ ಹಕ್ಕಲ್ಲ, ಶ್ರದ್ಧೆ ಇಲ್ಲದ ನೌಕರನಿಗೆ ಸಹಾನುಭೂತಿ ಬೇಡ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪೂರ್ವಾನುಮತಿ ಇಲ್ಲದೆ ಕೆಲಸಕ್ಕೆ ಗೈರಾಗುವುದು ದುರ್ನಡತೆ, ಶ್ರದ್ಧೆಯಿಂದ ಕೆಲಸ ಮಾಡದ ಉದ್ಯೋಗಿಗೆ ಸಹಾನುಭೂತಿ ತೋರಿಸುವ ಅಗತ್ಯವಿಲ್ಲ ಎಂದು ಹೇಳಿದೆ. ಅನಧಿಕೃತವಾಗಿ ಉದ್ಯೋಗಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಟ್ರೈನಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ವೆಂಕಟರಾಮಯ್ಯ ಎಂಬುವವರನ್ನು ಸೇವೆಯಿಂದ ತೆಗೆದು ಹಾಕಿದ್ದ ಆದೇಶ ರದ್ದುಪಡಿಸಿದ್ದ ಕಾರ್ಮಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಬಿಎಂಟಿಸಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ

ಅನಧಿಕೃತವಾಗಿ ರಜೆ ಹಾಕುವುದು ಉದ್ಯೋಗಿಯ ಹಕ್ಕಲ್ಲ, ದುರ್ನಡತೆ – ಹೈಕೋರ್ಟ್ Read More »

ತಂದೆ ತಾಯಿ ಕೌಟುಂಬಿಕ ಕಲಹ|17 ವರ್ಷದ ಬಾಲಿಕಿ ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: ತಂದೆ ತಾಯಿ ಕೌಟುಂಬಿಕ ಕಲಹದಿಂದ ಮನನೊಂದು 17 ವರ್ಷದ ಬಾಲಿಕಿ ನೇಣು ಬಿಗಿದು ಆತ್ಮಹತ್ಯೆಯನ್ನು ಮಾಡಿಕೊಂಡ ಘಟನೆ ಬೆಂಗಳೂರಿನ ಹೋಸಕೆರೆಹಳ್ಳಿಯ ಮಂಜುನಾಥ್ ನಗರದಲ್ಲಿ ಜ.1 ರಂದು ನಡೆದಿದೆ. ಮೃತ ಬಾಲಕಿ ಲೇಖನಾ (17) ಮನೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಲೇಖನಾ ನಿನ್ನೆ ಮಧ್ಯಾಹ್ನ ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಮನೆಯೊಳಗೆ ನೇಣಿಗೆ ಶರಣಾಗಿದ್ದಾಳೆ. ಸಂಜೆ ಊಟಕ್ಕೆಂದು ತಾಯಿ ಮನೆಗೆ ಬಂದಾಗ ಈ ದುರ್ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಸ್ಥಳೀಯರ ನೆರವಿನಿಂದ ಆಕೆಯನ್ನು ಆಸ್ಪತ್ರೆಗೆ

ತಂದೆ ತಾಯಿ ಕೌಟುಂಬಿಕ ಕಲಹ|17 ವರ್ಷದ ಬಾಲಿಕಿ ನೇಣು ಬಿಗಿದು ಆತ್ಮಹತ್ಯೆ Read More »

ರಾಜ್ಯದ ‌12 IAS ಹಾಗೂ 48 IPS ಅಧಿಕಾರಿಗಳ ವರ್ಗಾವಣೆ

ಸಮಗ್ರ ನ್ಯೂಸ್: ರಾಜ್ಯ Australian ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆಸಿದ್ದು 12 ಐಎಎಸ್, 48 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಲಾಗಿದೆ. ಶಿವಮೊಗ್ಗ ಡಿಸಿಯಾಗಿದ್ದ ಗುರುದತ್ತ ಹೆಗಡೆ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಎಸ್ಪಿಯಾಗಿದ್ದ ಮಿಥುನ್ ಕುಮಾರ್ ಅವರನ್ನು ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿಯಾಗಿ ನೇಮಿಸಲಾಗಿದೆ. ಇನ್ನು ಸಾಗರದ ಎಎಸ್ಪಿಯಾಗಿದ್ದ ಯತೀಶ್ ಅವರನ್ನು ಬೆಂಗಳೂರಿನ ಪಶ್ಚಿಮ ವಿಭಾಗದ ಡಿಸಿಪಿಯಾಗಿ ನೇಮಕ ಮಾಡಲಾಗಿದೆ. ಕೋಲಾರದ ಎಸ್ಪಿ ನಿಖಿಲ್ ಅವರನ್ನು

ರಾಜ್ಯದ ‌12 IAS ಹಾಗೂ 48 IPS ಅಧಿಕಾರಿಗಳ ವರ್ಗಾವಣೆ Read More »

‘ಸಂತ್ರಸ್ತ’ ಎಂಬ ನೆಲೆಗಟ್ಟಿನಲ್ಲಿ ಧರ್ಮಸ್ಥಳ ಕ್ಷೇತ್ರದ ಪರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದಲ್ಲಿ ‘ಸಂತ್ರಸ್ತ’ ಎಂಬ ನೆಲೆಗಟ್ಟಿನಲ್ಲಿ ಸ್ವತಃ ಭಾಗವಹಿಸಲು ಶ್ರೀಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೂ ಅವಕಾಶ ಕಲ್ಪಿಸಬೇಕು ಎಂದು ಕೋರಿ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಬುಧವಾರ ಅರ್ಜಿ ಸಲ್ಲಿಸಲಾಗಿದೆ. ‘ಈ ಪ್ರಕರಣದ ಆರೋಪಿಗಳು ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ರಿಟ್ ಅರ್ಜಿಯಲ್ಲಿ ಧರ್ಮಸ್ಥಳ ದೇವಸ್ಥಾನದ ಹೆಸರನ್ನು ಉಲ್ಲೇಖಿಸಿದ್ದರು. ಅದನ್ನು ಪರಿಗಣಿಸಿ, ಸಂತ್ರಸ್ತ ಎಂಬ ನೆಲೆಯಲ್ಲಿ ಶ್ರೀ ಕ್ಷೇತ್ರ

‘ಸಂತ್ರಸ್ತ’ ಎಂಬ ನೆಲೆಗಟ್ಟಿನಲ್ಲಿ ಧರ್ಮಸ್ಥಳ ಕ್ಷೇತ್ರದ ಪರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ Read More »

ಪುತ್ತೂರು: ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ದರೋಡೆಗೆ ಯತ್ನಿಸಿದ ಅರ್ಚಕ ದಂಪತಿಯ ಬಂಧನ

ಸಮಗ್ರ ನ್ಯೂಸ್: ನಿವೃತ್ತ ಪ್ರಾಂಶುಪಾಲರ ಮನೆಗೆ ಮಧ್ಯರಾತ್ರಿ ನುಗ್ಗಿ ಮನೆಯವರನ್ನು ಬೆದರಿಸಿ ಬೆಲೆಬಾಳುವ ಸೊತ್ತುಗಳನ್ನು ದೋಚಲು ಯತ್ನಿಸಿದ ಪ್ರಕರಣ ಸಂಬಂಧಿಸಿ ಪುರೋಹಿತ ಕೆಲಸ ಮಾಡುವ ಅರ್ಚಕ ಮತ್ತು ಆತನ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪುತ್ತೂರು ಮುಡೂರು ನಿವಾಸಿ ಪ್ರಸ್ತುತ ಪಂಜದಲ್ಲಿ ಬಾಡಿಗೆ ಮನೆಯಲ್ಲಿರುವ ಕಾರ್ತಿಕ್ ರಾವ್ (31) ಮತ್ತು ಆತನ ಪತ್ನಿ ಕೆ.ಎಸ್ ಸ್ವಾತಿ ರಾವ್ (25) ಎಂದು ಗುರುತಿಸಲಾಗಿದೆ. ಡಿಸೆಂಬರ್ 17ರಂದು ಆರೋಪಿಗಳು ಎ.ವಿ ನಾರಾಯಣ ಮತ್ತು ಅವರ ಪತ್ನಿಯನ್ನು ಬೆದರಿಸಿ ಚಿನ್ನಾಭರಣ ಕಿತ್ತುಕೊಳ್ಳಲು

ಪುತ್ತೂರು: ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ದರೋಡೆಗೆ ಯತ್ನಿಸಿದ ಅರ್ಚಕ ದಂಪತಿಯ ಬಂಧನ Read More »

ದ್ವಾದಶ ರಾಶಿಗಳ 2026ರ ವರ್ಷ ಭವಿಷ್ಯ

ಸಮಗ್ರ ನ್ಯೂಸ್: ಈ ವರ್ಷದ ಜೂನ್ ತಿಂಗಳಲ್ಲಿ ಗುರುಗ್ರಹ ತಾನು ಇದುವರೆಗೂ ಇದ್ದ ಮಿಥುನ ರಾಶಿಯನ್ನು ಬಿಟ್ಟು ಕರ್ಕರಾಶಿಯನ್ನು ಪ್ರವೇಶಿಸುತ್ತಾನೆ. ಅಕ್ಟೋಬರ್ 31 ರಂದು ಕರ್ಕದಿಂದ ಸಿಂಹರಾಶಿಗೆ ಪ್ರವೇಶಿಸಿ 2026 ಪೂರ್ತಿಯಾಗಿ ಸಿಂಹರಾಶಿಯಲ್ಲೇ ಇರುತ್ತಾನೆ. ಶನಿ ಈ ವರ್ಷ ಪೂರ್ತಿ ಮೀನರಾಶಿಯಲ್ಲೇ ಇರುತ್ತಾನೆ. ರಾಹುಕೇತುಗಳು 06-12-26 ರಂದು ತಾವು ಇದುವರೆಗೂ ಇದ್ದ ಕುಂಭ-ಸಿಂಹ ರಾಶಿಯನ್ನು ಬಿಟ್ಟು ಕಟಕ ಮಕರ ರಾಶಿಗೆ ಪ್ರವೇಶ ಮಾಡುತ್ತಾರೆ. ಈ ವರ್ಷದ ಅದೃಷ್ಟ ರಾಶಿಗಳು ವೃಷಭ, ಮಿಥುನ, ಕನ್ಯಾ, ತುಲಾ,ವೃಶ್ಚಿಕ, ಮಕರ, ಮೀನ.

ದ್ವಾದಶ ರಾಶಿಗಳ 2026ರ ವರ್ಷ ಭವಿಷ್ಯ Read More »

ಮೊಬೈಲ್ ಬಳಕೆದಾರರೇ ಎಚ್ಚರ| ಹೊಸ ವರ್ಷದ ವಿಶ್ ಓಪನ್ ಮಾಡೋ ಮುನ್ನ ಜೋಪಾನ

ಸಮಗ್ರ ನ್ಯೂಸ್: ಹೊಸ ವರ್ಷಕ್ಕೆ ಶುಭಾಶಯ ಕೋರುವ ವಾಟ್ಸ್‌ಆ್ಯಪ್ ಹಾಗೂ ಸಾಮಾನ್ಯ ಸಂದೇಶಗಳು ಹಾಗೂ ಲಿಂಕ್‌ಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು. ಇದೇ ಈಗ ಡಿಜಿಟಲ್‌ ಹ್ಯಾಕರ್ಸ್‌ಗಳಿಗೆ ಬಂಡವಾಳವಾಗಿದ್ದು, ಬ್ಯಾಂಕ್‌ ಖಾತೆಗಳಿಗೆ ಕನ್ನ ಹಾಕುತ್ತಿದ್ದಾರೆ. 2026ರ ಕ್ಯಾಲೆಂಡರ್ ವರ್ಷವನ್ನು ಸ್ವಾಗತಿಸಲು ಕೆಲವೇ ಗಂಟೆಗಳು ಬಾಕಿ ಇವೆ. ಈ ನಡುವೆ ಅಪರಿಚಿತ ವ್ಯಕ್ತಿ, ಬ್ಯಾಂಕ್‌ಗಳು, ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳ ಹೆಸರಿನಲ್ಲಿ ನಿಮಗೆ ಲಿಂಕ್‌ಗಳ ಸಮೇತ ವಾಟ್ಸ್‌ಆಯಪ್‌ ಮತ್ತು ಸಾಮಾನ್ಯ ಸಂದೇಶಗಳು ಬರಲಿವೆ. ಆದರೆ, ಅದು ಕೇವಲ ಶುಭಾಶಯ ಕೋರುವ

ಮೊಬೈಲ್ ಬಳಕೆದಾರರೇ ಎಚ್ಚರ| ಹೊಸ ವರ್ಷದ ವಿಶ್ ಓಪನ್ ಮಾಡೋ ಮುನ್ನ ಜೋಪಾನ Read More »