ರಾಜ್ಯ

ಏಷ್ಯಾಕಪ್ ಕ್ರಿಕೆಟ್| ಗರಿಷ್ಟ ಸಿಕ್ಸರ್ ದಾಖಲೆ ಬರೆದ ಅಭಿಷೇಕ್ ಶರ್ಮಾ

ಸಮಗ್ರ ನ್ಯೂಸ್: ಏಷ್ಯಾ ಕಪ್ ಟಿ20 ಟೂರ್ನಿಯ ಬುಧವಾರದ ಪಂದ್ಯದಲ್ಲಿ ಬಾಂಗ್ಲಾ ಬೌಲಿಂಗ್ ದಾಳಿಯನ್ನು ಪುಡಿಗಟ್ಟಿ 37 ಎಸೆತಗಳಲ್ಲಿ 75 ರನ್ ಸಿಡಿಸಿದ ಯುವ ಐಕಾನ್ ಅಭಿಷೇಕ್ ಶರ್ಮಾ ಮತ್ತೊಂದು ಹೊಸ ದಾಖಲೆ ಬರೆದಿದ್ದಾರೆ. ಆರಂಭದಿಂದಲೂ ಅದ್ಭುತ ಫಾರ್ಮ್ನಲ್ಲಿರುವ ಶರ್ಮಾ ಕೇವಲ 25 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರು. ಶತಕದತ್ತ ದೃಷ್ಟಿ ನೆಟ್ಟಿದ್ದ ಆರಂಭಿಕ ಆಟಗಾರ ದುರದೃಷ್ಟಕರ ರನೌಟ್ಗೆ ಬಲಿಯಾದರು. ತಮ್ಮ ಚುಟುಕು ಇನಿಂಗ್ಸ್ನಲ್ಲಿ 5 ಸಿಕ್ಸರ್ ಸಿಡಿಸಿದ ಅವರು, ಒಂದೇ ಏಷ್ಯಾಕಪ್ನಲ್ಲಿ 15ಕ್ಕೂ ಅಧಿಕ ಸಿಕ್ಸರ್ ಸಿಡಿಸಿದ […]

ಏಷ್ಯಾಕಪ್ ಕ್ರಿಕೆಟ್| ಗರಿಷ್ಟ ಸಿಕ್ಸರ್ ದಾಖಲೆ ಬರೆದ ಅಭಿಷೇಕ್ ಶರ್ಮಾ Read More »

ಹಿರಿಯ ಸಾಹಿತಿ ಎಸ್.ಎಲ್ ಬೈರಪ್ಪ ಇನ್ನಿಲ್ಲ

ಸಮಗ್ರ ನ್ಯೂಸ್: ಹಿರಿಯ ಸಾಹಿತಿ ಎಸ್‌ಎಲ್‌ ಭೈರಪ್ಪ (94) ವಿಧವಿಶರಾಗಿದ್ದಾರೆ. ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಒಬ್ಬ ಭಾರತೀಯ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಚಿತ್ರಕಥೆಗಾರ, ಅವರು ಕನ್ನಡದಲ್ಲಿ ಬರೆಯುತ್ತಾರೆ. ಅವರ ಕೃತಿಗಳು ಕರ್ನಾಟಕ ರಾಜ್ಯದಲ್ಲಿ ಜನಪ್ರಿಯವಾಗಿವೆ ಮತ್ತು ಅವರನ್ನು ಆಧುನಿಕ ಭಾರತದ ಜನಪ್ರಿಯ ಕಾದಂಬರಿಕಾರರಲ್ಲಿ ಒಬ್ಬರೆಂದು ವ್ಯಾಪಕವಾಗಿ ಪರಿಗಣಿಸಲಾಗಿದೆ. ಅವರ ಕಾದಂಬರಿಗಳು ವಿಷಯ, ರಚನೆ ಮತ್ತು ಪಾತ್ರಗಳ ನಿರೂಪಣೆಯಲ್ಲಿ ವಿಶಿಷ್ಟವಾಗಿವೆ.ಭೈರಪ್ಪ ಅವರ ಕೃತಿಗಳು ನವೋದಯ, ನವ್ಯ, ಬಂದಾಯ ಅಥವಾ ದಲಿತದಂತಹ ಸಮಕಾಲೀನ ಕನ್ನಡ ಸಾಹಿತ್ಯದ ಯಾವುದೇ ನಿರ್ದಿಷ್ಟ ಪ್ರಕಾರಕ್ಕೆ

ಹಿರಿಯ ಸಾಹಿತಿ ಎಸ್.ಎಲ್ ಬೈರಪ್ಪ ಇನ್ನಿಲ್ಲ Read More »

ಹಿಂದೂ ಹುಡುಗನ ಜೊತೆ ಹಸೆಮಣೆ ಏರಲಿರುವ ಗಾಯಕಿ ಸುಹಾನಾ ಸೈಯದ್

ಸಮಗ್ರ ನ್ಯೂಸ್: ಜೀಕನ್ನಡ ವಾಹಿನಿಯ ಸರಿಗಮಪ ರಿಯಾಲಿಟಿ ಶೋನಲ್ಲಿ ಶ್ರೀಕರನೇ ಶ್ರೀನಿವಾಸನೇ ಎಂದು ಹಾಡಿ ಕಲಾಭಿಮಾನಿಗಳ ಮನಸ್ಸು ಕದ್ದಿದ್ದ ಮುಸ್ಲಿಂ ಯುವತಿ ಸುಹಾನಾ ಸೈಯದ್ ನಂತರ ಮುಸ್ಲಿಂ ಮೌಲ್ವಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಆದರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಸುಹಾನಾ ಗಾಯಕಿಯಾಗಿ ವೃತ್ತಿಜೀವನ ಆರಂಭಿಸಿದ್ದರು. ತಮ್ಮ ಬೋಲ್ಡ್ ಲುಕ್ಸ್ ಹಾಗೂ ಡೊಂಟ್ ಕೇರ್ ಸ್ವಭಾವದ ಮೂಲಕ ಅವರು ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಈ ಮಧ್ಯೆ ತಾವು ಮದುವೆಯಾಗುತ್ತಿರುವುದಾಗಿ ಸುಹಾನಾ ಹೇಳಿದ್ದಾರೆ. ಮುಸ್ಲಿಂ ಕುಟುಂಬದಲ್ಲಿ ಜನಿಸಿದ್ದ ಸುಹಾನಾಗೆ ಹಾಡುಗಾರಿಕೆ ಎಂದರೆ ಎಲ್ಲಿಲ್ಲದ

ಹಿಂದೂ ಹುಡುಗನ ಜೊತೆ ಹಸೆಮಣೆ ಏರಲಿರುವ ಗಾಯಕಿ ಸುಹಾನಾ ಸೈಯದ್ Read More »

ದೈಹಿಕ ಶಿಕ್ಷಕನ ಮೊಬೈಲ್ ಒಳಗೆ 2500ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ? ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮೀರಿಸುವ ಮತ್ತೊಂದು ಲೈಂಗಿಕ ಹಗರಣ ಆರೋಪ

ಸಮಗ್ರ ನ್ಯೂಸ್: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವನ್ನೂ ಮೀರಿಸುವ ಲೈಂಗಿಕ ಹಗರಣವೊಂದು ಬೆಂಗಳೂರಿನಲ್ಲಿ ನಡೆದಿದೆ ಎಂದು ಹೇಳಲಾಗಿದ್ದು, ಶಾಲಾ ಸಿಬ್ಬಂದಿಯೊಬ್ಬರ ಬಳಿ 2500ಕ್ಕೂ ಅಧಿಕ ಅಶ್ಲೀಲ ವಿಡಿಯೋಗಳಿವೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಕ್ರಿಕೆಟ್ ಕೋಚ್ ಮತ್ತು ಶಾಲಾ ದೈಹಿಕ ಶಿಕ್ಷಕನ ಬಳಿ ಬೇರೆ ಬೇರೆ ಮಹಿಳೆಯರ ಅಶ್ಲೀಲ ವಿಡಿಯೋಗಳು ಇವೆ ಎಂದು ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಖಾಸಗಿ ಶಾಲೆಯೊಂದರ ದೈಹಿಕ ಶಿಕ್ಷಕನಾಗಿರುವ ಮ್ಯಾಥ್ಯೂ ಎಂಬಾತನ ವಿರುದ್ಧ ಮಹಿಳೆ ಆರೋಪಿಸಿದ್ದು, ಕೆಲವು ಮಹಿಳೆಯರು

ದೈಹಿಕ ಶಿಕ್ಷಕನ ಮೊಬೈಲ್ ಒಳಗೆ 2500ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ? ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮೀರಿಸುವ ಮತ್ತೊಂದು ಲೈಂಗಿಕ ಹಗರಣ ಆರೋಪ Read More »

ವೀರೇಂದ್ರ ಹೆಗ್ಗಡೆ ಒಂದು ದಿನವಾದರೂ ಜೈಲಿಗೆ ಹೋಗಬೇಕೆಂಬುದು ಅವರ ಆಸೆಯಾಗಿತ್ತು| ಸ್ಪೋಟಕ ಹೇಳಿಕೆ ನೀಡಿದ ಚಿನ್ನಯ್ಯ ಪತ್ನಿ ಮಲ್ಲಿಕಾ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಸರಣಿ ಕೊಲೆ ಹಾಗೂ ಅತ್ಯಾಚಾರ ಕೊಲೆಗಳ ಆರೋಪ ಮಾಡಿದ ಚಿನ್ನಯ್ಯ ದಾಖಲಿಸಿದ ದೂರಿನ ಆಧಾರದ ಮೇಲೆ ರಾಜ್ಯ ಸರ್ಕಾರ ಎಸ್ ಐಟಿ ರಚಿಸಿದ್ದು, ಸದ್ಯ ಈ ತಂಡ ತನ್ನ ತನಿಖೆಯನ್ನು ಮುಂದುವರಿಸಿದೆ. ಮೊದಲಿಗೆ ಚಿನ್ನಯ್ಯ ತೋರಿಸಿದ ಜಾಗಗಳಲ್ಲಿ ಉತ್ಖನನ ಮಾಡಿದ ಎಸ್‌ಐಟಿ ಬಳಿಕ ಆತನನ್ನು ಬಂಧಿಸಿದ್ದು, ಸದ್ಯ ಇದೀಗ ಸೌಜನ್ಯ ಮಾವ ವಿಠಲ ಗೌಡ ಹೇಳಿದ ಜಾಗದಲ್ಲಿ ಬುರುಡೆ ಹಾಗೂ ಮೂಳೆಗಳನ್ನು ಸಂಗ್ರಹಿಸಿದೆ. ಇನ್ನು ಮೊದಲಿಗೆ ತಾನು ನೂರಾರು ಶವಗಳನ್ನು ಹೂತಿದ್ದು ಅವುಗಳ

ವೀರೇಂದ್ರ ಹೆಗ್ಗಡೆ ಒಂದು ದಿನವಾದರೂ ಜೈಲಿಗೆ ಹೋಗಬೇಕೆಂಬುದು ಅವರ ಆಸೆಯಾಗಿತ್ತು| ಸ್ಪೋಟಕ ಹೇಳಿಕೆ ನೀಡಿದ ಚಿನ್ನಯ್ಯ ಪತ್ನಿ ಮಲ್ಲಿಕಾ Read More »

ನಾನು ಕನ್ನಡಿಗ, ಹಿಂದೂ. ಕಲಾವಿದರ ನಡುವೆ ಧರ್ಮ ತಂದಿಡಬೇಡಿ| ಯೂಟ್ಯೂಬರ್ ಮುಕಳೆಪ್ಪ ಮೊದಲ ಪ್ರತಿಕ್ರಿಯೆ

ಸಮಗ್ರ ನ್ಯೂಸ್: ಧಾರವಾಡದ ಕಾಮಿಡಿ ಸ್ಟಾರ್ ಯುಟ್ಯುಬರ್ ಮುಕಳೆಪ್ಪನ ಅನ್ಯ ಧರ್ಮದ ಯುವತಿ ಜೊತೆ ಮದುವೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ತನ್ನ ಮುಕಳೆಪ್ಪ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಮುಕಳೆಪ್ಪ ಜೊತೆ ಆತನ ಪತ್ನಿ ಗಾಯತ್ರಿ ಕೂಡಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ವಿಡಿಯೋದಲ್ಲಿ ಮೊದಲು ಮಾತನಾಡಿದ ಮುಕಳೆಪ್ಪ, ಎಲ್ಲರೂ ಮುಕಳೆಪ್ಪ ಲವ್ ಜಿಹಾದ್ ಎಂದು ಹೇಳುತಿದ್ದಾರೆ. ಆದರೆ‌ ನಾನು ಯಾವುದೇ ಲವ್ ಜಿಹಾದ್ ಮಾಡಿಲ್ಲ. ಇಬ್ಬರು ಇಷ್ಟ ಪಟ್ಟು ಮದುವೆಯಾಗಿದ್ದೆವೆ. ನಾವು ಇಬ್ಬರೂ ಮತಾಂತರಗೊಂಡಿಲ್ಲ. ನನ್ನ ಪತ್ನಿ

ನಾನು ಕನ್ನಡಿಗ, ಹಿಂದೂ. ಕಲಾವಿದರ ನಡುವೆ ಧರ್ಮ ತಂದಿಡಬೇಡಿ| ಯೂಟ್ಯೂಬರ್ ಮುಕಳೆಪ್ಪ ಮೊದಲ ಪ್ರತಿಕ್ರಿಯೆ Read More »

ಧರ್ಮಸ್ಥಳ ಬುರುಡೆ ಪ್ರಕರಣ| ನಂದೇನೂ ತಪ್ಪಿಲ್ಲ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ ಚಿನ್ನಯ್ಯ

ಸಮಗ್ರ ನ್ಯೂಸ್: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇದರಲ್ಲಿ ನಂದೇನು ತಪ್ಪಿಲ್ಲ ಎಂಬುದಾಗಿ ನ್ಯಾಯಾಧೀಶರ ಎದುರು ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯ ಕಣ್ಣೀರಿಟ್ಟಿರುವುದಾಗಿ ತಿಳಿದು ಬಂದಿದೆ. ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶರ ಎದುರು ಆರೋಪಿ ಚಿನ್ನಯ್ಯ ಕಣ್ಣೀರಿಟ್ಟಿದ್ದಾರೆ. ಪ್ರಕರಣದಲ್ಲಿ ನಂದೇನು ತಪ್ಪಿಲ್ಲ ಎಂದು ಚಿನ್ನಯ್ಯ ಕಣ್ಣೀರಿಟ್ಟಿರುವುದಾಗಿ ತಿಳಿದು ಬಂದಿದೆ.

ಧರ್ಮಸ್ಥಳ ಬುರುಡೆ ಪ್ರಕರಣ| ನಂದೇನೂ ತಪ್ಪಿಲ್ಲ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ ಚಿನ್ನಯ್ಯ Read More »

ಬಡವರ ಪಾಲಿಗೆ ಬಂಗಾರ ಮತ್ತಷ್ಟು ಭಾರ| ಇಂದಿನ ಚಿನ್ನದ ದರ ನೋಡಿ…

ಸಮಗ್ರ ನ್ಯೂಸ್: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಭಾರೀ ಏರಿಕೆಯನ್ನು ಕಂಡಿವೆ. ಭಾರತೀಯ ಹಾಗೂ ವಿದೇಶಿ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆಗಳು ಮೈಲಿಗಲ್ಲು ಮುಟ್ಟಿದ್ದು, ಹೂಡಿಕೆದಾರರ ಗಮನ ಸೆಳೆದಿವೆ. ಈ ಬೆಲೆ ಏರಿಕೆ, ವಿಶ್ವದ ಆರ್ಥಿಕ ಪರಿಸ್ಥಿತಿಗಳ ಪ್ರಭಾವ ಮತ್ತು ಬೇಡಿಕೆ ಹೆಚ್ಚಳದಿಂದ ಸಂಭವಿಸಿದೆ. ಭಾರತದಲ್ಲಿ 22 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ 1,04,800 ರೂವರೆಗೆ ಏರಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 1,14,330 ರೂಗೆ ಮುಟ್ಟಿದೆ. 18 ಕ್ಯಾರಟ್ ಚಿನ್ನದ 10 ಗ್ರಾಂ

ಬಡವರ ಪಾಲಿಗೆ ಬಂಗಾರ ಮತ್ತಷ್ಟು ಭಾರ| ಇಂದಿನ ಚಿನ್ನದ ದರ ನೋಡಿ… Read More »

ಮಲ್ಟಿಪ್ಲೆಕ್ಸ್ ಗಳಲ್ಲಿ ಟಿಕೆಟ್ ದರ ₹200 ನಿಗದಿ ಮಾಡಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

ಸಮಗ್ರ ನ್ಯೂಸ್: ಮಲ್ಟಿಪ್ಲೆಕ್ಸ್‌ ಸೇರಿ ರಾಜ್ಯ ಎಲ್ಲಾ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಯ ಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂ.ಗಳ ಏಕರೂಪ ದರ ನಿಗದಿಪಡಿಸಿದ ರಾಜ್ಯ ಸರ್ಕಾರ ಹೊರಡಿಸಿದ ಆದೇಶಕ್ಕೆ ಮಧ್ಯಂತರ ತಡೆ ನೀಡುವ ಕುರಿತಂತೆ ಮನವಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್​ ಏಕ ಸದಸ್ಯ ಪೀಠ ಇಂದು ಈ ಕುರಿತು ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಮಲ್ಟಿಪ್ಲೆಕ್ಸ್ ಗಳಲ್ಲಿ ರಾಜ್ಯ ಸರ್ಕಾರ 200 ರೂಪಾಯಿ ಟಿಕೆಟ್ ದರ ನಿಗದಿ ಮಾಡಿತ್ತು. ಇದೀಗ ರಾಜ ಸರ್ಕಾರದ

ಮಲ್ಟಿಪ್ಲೆಕ್ಸ್ ಗಳಲ್ಲಿ ಟಿಕೆಟ್ ದರ ₹200 ನಿಗದಿ ಮಾಡಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ Read More »

ವಿಮಾನದ ಲ್ಯಾಂಡಿಂಗ್ ಗೇರ್ ನಲ್ಲಿ ಕುಳಿತು ಅಪ್ಘಾನ್ ನಿಂದ ಭಾರತಕ್ಕೆ ಬಂದಿಳಿದ ಬಾಲಕ

ಸಮಗ್ರ ನ್ಯೂಸ್: ವಿಮಾನದ ಲ್ಯಾಂಡಿಂಗ್ ಗೇರ್‌ನಲ್ಲಿ ಅಡಗಿ ಕುಳಿತು ಬಾಲಕನೊಬ್ಬ ಅಫ್ಗಾನಿಸ್ತಾನದ ಕಾಬೂಲ್‌ನಿಂದ ದೆಹಲಿಗೆ ಬಂದಿದ್ದಾನೆ. ಭಾನುವಾರ ಬೆಳಿಗ್ಗೆ 11 ಗಂಟೆಯ ಹೊತ್ತಿಗೆ ಘಟನೆ ನಡೆದಿದೆ. ಎರಡು ಗಂಟೆಯ ಪ್ರಯಾಣದ ಬಳಿಕ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಮಾನ ಬಂದಿಳಿದಾಗ ಬಾಲಕ ಇರುವುದು ಗೊತ್ತಾಗಿದ್ದು, ಅದೇ ವಿಮಾನದಲ್ಲಿ ಆತನನ್ನು ವಾಪಸ್‌ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ. ವಿಮಾನ ಲ್ಯಾಂಡ್‌ ಆದ ಬಳಿಕ ಬಾಲಕನೊಬ್ಬ ವಿಮಾನದ ಸುತ್ತ ಓಡಾಡುತ್ತಿರುವುದನ್ನು ಗಮನಿಸಿದ ಭದ್ರತಾ ಸಿಬ್ಬಂದಿ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ವಿಮಾನದ ಲ್ಯಾಂಡಿಂಗ್ ಗೇರ್ ನಲ್ಲಿ ಕುಳಿತು ಅಪ್ಘಾನ್ ನಿಂದ ಭಾರತಕ್ಕೆ ಬಂದಿಳಿದ ಬಾಲಕ Read More »