ರಾಜ್ಯ

ಸಿಬಿಐ ತನಿಖೆ ರದ್ದು/ ನಾಳೆ ಬಿಜೆಪಿ ವತಿಯಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾ‌ರ್ ಅವರ ವಿರುದ್ಧ ಇದ್ದ ಸಿಬಿಐ ತನಿಖೆಯನ್ನು ರದ್ದು ಮಾಡುವ ಸಚಿವ ಸಂಪುಟದ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ವತಿಯಿಂದ ನಾಳೆ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಪ್ರಕಟಿಸಿದೆ. ಸರಕಾರದ ಕಾನೂನುಬಾಹಿರ ಹಾಗೂ ತಪ್ಪು ನಿರ್ಧಾರ ಖಂಡಿಸಿ ಈ ಪ್ರತಿಭಟನೆ ನಡೆಯಲಿದ್ದು, ರಾಜ್ಯಾಧ್ಯಕ್ಷ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆ‌ರ್.ಅಶೋಕ್, ಸಂಸದರು, ಮಾಜಿ ಸಚಿವರು, ಶಾಸಕರು ಮತ್ತು ಕಾರ್ಯಕರ್ತರು

ಸಿಬಿಐ ತನಿಖೆ ರದ್ದು/ ನಾಳೆ ಬಿಜೆಪಿ ವತಿಯಿಂದ ಪ್ರತಿಭಟನೆ Read More »

ಡಿಸಿಎಂಗೆ ಬಿಗ್ ರಿಲೀಫ್/ ಸರಕಾರದಿಂದ ಸಿಬಿಐ ತನಿಖೆ ವಾಪಸ್

ಸಮಗ್ರ ನ್ಯೂಸ್: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದ ಸಿಬಿಐ ತನಿಖೆಯನ್ನು ವಾಪಸ್ ಪಡೆಯುವ ಕುರಿತಾದ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರವನ್ನು ಕೈಗೊಳ್ಳಲಾಗಿದೆ. ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವ ಹೆಚ್ ಕೆ

ಡಿಸಿಎಂಗೆ ಬಿಗ್ ರಿಲೀಫ್/ ಸರಕಾರದಿಂದ ಸಿಬಿಐ ತನಿಖೆ ವಾಪಸ್ Read More »

ಅನಾರೋಗ್ಯದಿಂದ ಹಾಸಿಗೆ ಹಿಡಿದ ನಿಶಿತಾ/ ಪ್ರತಿಭಾವಂತ ಬಾಲಕಿಯ ಚಿಕಿತ್ಸೆಗೆ ಬೇಕಿದೆ ಆರ್ಥಿಕ ನೆರವು.

ಸಮಗ್ರ ನ್ಯೂಸ್: ಪ್ರತಿಭಾವಂತ ಬಾಲಕಿ ನಿಶಿತಾ ಆಟವಾಡುವಾಗ ಬಿದ್ದು ಬೆನ್ನ ಹುರಿ ಮುರಿದು ಹಾಸಿಗೆ ಹಿಡಿದಿರುವ ಕರಣಾಜನಕ ಘಟನೆ ಮೂಡಿಗೆರೆ ತಾಲ್ಲೂಕಿನ ಬಣಕಲ್ ಸಮೀಪದ ಹಾರ್ಗೋಡು ಗ್ರಾಮದಲ್ಲಿ ನಡೆದಿದ್ದು, ಮಗುವಿನ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿಗಳು ಅಗತ್ಯವಿದ್ದು. ಇದೀಗ ಸಹೃದಯಿಗಳಲ್ಲಿ ನೆರವಿನ ಹಸ್ತ ಚಾಚಿದ್ದಾರೆ. ಹಾರ್ಗೋಡಿನಲ್ಲಿ ಕೂಲಿ ಕಾರ್ಮಿಕರಾಗಿರುವ ಕೆ.ಆರ್. ಶ್ರೀಧರ್ ಹಾಗೂ ಗೀತಾ ದಂಪತಿಯ ಪುತ್ರಿ, ಬಾನಳ್ಳಿಯ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ ಬಾಲಕಿ ನಿಶಿತಾ ಪ್ರತಿಭಾವಂತೆಯಾಗಿದ್ದು, ಶಾಲೆಯಲ್ಲಿ ಓದುವುದರಲ್ಲೂ ಮುಂದಿದ್ದಳು. ಒಂದು ದಿನ ಮನೆಯ ಪಕ್ಕದ

ಅನಾರೋಗ್ಯದಿಂದ ಹಾಸಿಗೆ ಹಿಡಿದ ನಿಶಿತಾ/ ಪ್ರತಿಭಾವಂತ ಬಾಲಕಿಯ ಚಿಕಿತ್ಸೆಗೆ ಬೇಕಿದೆ ಆರ್ಥಿಕ ನೆರವು. Read More »

ಹವಾಮಾನ ವರದಿ| ಕರಾವಳಿ ಸಹಿತ ರಾಜ್ಯದ ಈ ಜಿಲ್ಲೆಗಳಲ್ಲಿ ಡಿ.1ರವರೆಗೆ ಮಳೆ ಮುನ್ಸೂಚನೆ|

ಸಮಗ್ರ ನ್ಯೂಸ್: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಹಿಂಗಾರು ಮಳೆ ಅಬ್ಬರಿಸಲು ಶುರುವಿಟ್ಟುಕೊಂಡಿದೆ. ಕಳೆದೊಂದು ವಾರದಿಂದ ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಧಾರಾಕಾರವಾಗಿ ಮಳೆ ಆಗಿದೆ. ಈ ಮಳೆ ಮುಂದಿನ ಎರಡು ವಾರಗಳ ಕಾಲ ಮುಂದುವರಿಯಲಿದೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ತಿಂಗಳು ಡಿಸೆಂಬರ್ 1ರವರೆಗೆ ವ್ಯಾಪಕವಾಗಿ ಮಳೆ ಆಗಲಿದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಅಬ್ಬರಿಸಲಿದೆ. ಕರಾವಳಿಯ ಮೂರು ಜಿಲ್ಲೆಗಳು ಮತ್ತು

ಹವಾಮಾನ ವರದಿ| ಕರಾವಳಿ ಸಹಿತ ರಾಜ್ಯದ ಈ ಜಿಲ್ಲೆಗಳಲ್ಲಿ ಡಿ.1ರವರೆಗೆ ಮಳೆ ಮುನ್ಸೂಚನೆ| Read More »

KSRTC ಮುಡಿಗೆ ಮೂರು‌ ಪ್ರಶಸ್ತಿಗಳ ಗರಿ

ಸಮಗ್ರ ನ್ಯೂಸ್: ರಾಜ್ಯದ ಜನತೆಗೆ ಉತ್ತಮ ಸಾರಿಗೆ ಸಂಪರ್ಕ ಕಲ್ಪಿಸುತ್ತಿರುವ ಕೆ.ಎಸ್.ಆರ್.ಟಿ.ಸಿ ಗೆ National Media Conclaveನ ಎರಡು ಪ್ರಶಸ್ತಿ ಹಾಗೂ World Marketing Congressನ Global Marketing Excellence ಒಂದು ಪ್ರಶಸ್ತಿ ಸೇರಿ ಮೂರು ಪ್ರಶಸ್ತಿಗಳು ಲಭಿಸಿವೆ. ಈ ಕುರಿತಂತೆ ಮಾಹಿತಿ ನೀಡಿರುವ ನಿಗಮವು, ನ.23ರಂದು ಕೆ.ಐ.ಐ.ಟಿ ವಿಶ್ವವಿದ್ಯಾನಿಲಯ ಸಭಾಂಗಣ, ಭುವನೇಶ್ವರ್ National Media Conclave ರವರು, ಆಯೋಜಿಸಿದ 07 ನೇ National Media Conclave Award, ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರದೀಪ್ ಕುಮಾರ್ ಅಮತ್,

KSRTC ಮುಡಿಗೆ ಮೂರು‌ ಪ್ರಶಸ್ತಿಗಳ ಗರಿ Read More »

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2023ರ (ಟಿಇಟಿ) ಫಲಿತಾಂಶವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪ್ರಕಟಿಸಿದ್ದು, ಅಭ್ಯರ್ಥಿಗಳು ಫಲಿತಾಂಶವನ್ನು ಶಿಕ್ಷಣ ಇಲಾಖೆಯ ವೆಬ್‍ಸೈಟ್‍ನಲ್ಲಿ ವೀಕ್ಷಿಸಬಹುದು. ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಜುಲೈ 14 ರಿಂದ ಆಗಸ್ಟ್ 15ರವರೆಗೆ ಅವಕಾಶ ನೀಡಲಾಗಿದ್ದು, ರಾಜ್ಯದ 35 ಶೈಕ್ಷಣಿಕ ಜಿಲ್ಲಾ ಕೇಂದ್ರದಲ್ಲಿ ಸೆ.3ರಂದು ಪರೀಕ್ಷೆ ನಡೆಸಲಾಗಿತ್ತು. . ಅಭ್ಯರ್ಥಿಗಳು ಅರ್ಜಿಸಂಖ್ಯೆ ಮತ್ತು ಅಭ್ಯರ್ಥಿಯ ಜನ್ಮದಿನಾಂಕ (ಆನ್‍ಲೈನ್ ಅರ್ಜಿಯಲ್ಲಿರುವಂತೆ) ನಮೂದಿಸಿ ಫಲಿತಾಂಶ ವೀಕ್ಷಿಸುವುದಷ್ಟೇ ಅಲ್ಲದೇ ಶಿಕ್ಷಣ

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟ Read More »

ಕಾಡಾನೆ ದಾಳಿಗೆ ಮತ್ತೊಂದು ಬಲಿ/ ಶಾಶ್ವತ ಪರಿಹಾರಕ್ಕೆ ಆಗ್ರಹ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೈರಾಪುರ ಸಮೀಪದ ಹೊಸಕೆರೆ ಗ್ರಾಮದಲ್ಲಿ ಸರ್ಕಾರ ರಚಿತ ಆನೆ ನಿಗ್ರಹ ಪಡೆಯಲ್ಲಿ ದಿನಗೂಲಿ ನೌಕರನಾಗಿ ಕೆಲಸ ಮಾಡುತ್ತಿದ್ದ ಯುವಕ ಕಾಡಾನೆ ದಾಳಿಗೆ ಬಲಿಯಾಗಿರುವ ಘಟನೆ ನಡೆದಿದೆ. ಮೂಡಿಗೆರೆ ತಾಲೂಕಿನ ಗೌಡಹಳ್ಳಿ ನಿವಾಸಿ 26 ವರ್ಷದ ಕಾರ್ತಿಕ್ ಗೌಡ ಮೃತನಾದ ವ್ಯಕ್ತಿ. ಕಳೆದ ಎರಡು ತಿಂಗಳಲ್ಲಿ ಕಾಡಾನೆ ದಾಳಿಗೆ ಇದು ಮೂರನೇ ಸಾವು. ಒಂದೂವರೆ ತಿಂಗಳ ಹಿಂದೆ ಆಲ್ದೂರು ಸಮೀಪದ ಅರೆನೂರು ಬಳಿ ಆಸ್ಪತ್ರೆಗೆ ಹೋಗುತ್ತಿದ್ದ ಚಿನ್ನಿ ಎಂಬ ವ್ಯಕ್ತಿ

ಕಾಡಾನೆ ದಾಳಿಗೆ ಮತ್ತೊಂದು ಬಲಿ/ ಶಾಶ್ವತ ಪರಿಹಾರಕ್ಕೆ ಆಗ್ರಹ Read More »

ಮತ್ತೆ ಶಾಕ್ ನೀಡಿದ ಕಾವೇರಿ ನೀರು ನಿರ್ವಹಣಾ ಸಮಿತಿ/ ಪ್ರತಿನಿತ್ಯ 2700 ಕ್ಯೂಸೆಕ್ ನೀರು ಬಿಡಲು ಕರ್ನಾಟಕಕ್ಕೆ ಸೂಚನೆ

ಸಮಗ್ರ ನ್ಯೂಸ್: ಕಾವೇರಿ ನೀರು ನಿರ್ವಹಣಾ ಸಮಿತಿಯ ಸಭೆಯು ಇಂದು ದೆಹಲಿಯಲ್ಲಿ ನಡೆದಿದ್ದು, ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರೆಗೆ ಪ್ರತಿನಿತ್ಯ 2700 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ. ಬಾಕಿ ಇರುವ 7.5 ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ನವೆಂಬರ್ ಮತ್ತು ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆ ಮಾಡಲು ಆದೇಶ ನೀಡಿದೆ. ಇತ್ತ ರಾಜ್ಯದಲ್ಲಿ ತೀವ್ರ ಬರಗಾಲ ಎದುರಾಗಿದ್ದು, ಸಮಿತಿಯ ಈ ನಿರ್ಧಾರ ಕರ್ನಾಟಕಕ್ಕೆ ಶಾಕ್ ನೀಡಿದೆ. ಜಲಾಶಯಗಳಲ್ಲಿ ನೀರಿನ ಸಂಗ್ರಹ ತಳ ಸೇರುತ್ತಿದ್ದು, ಕರ್ನಾಟಕದಿಂದ

ಮತ್ತೆ ಶಾಕ್ ನೀಡಿದ ಕಾವೇರಿ ನೀರು ನಿರ್ವಹಣಾ ಸಮಿತಿ/ ಪ್ರತಿನಿತ್ಯ 2700 ಕ್ಯೂಸೆಕ್ ನೀರು ಬಿಡಲು ಕರ್ನಾಟಕಕ್ಕೆ ಸೂಚನೆ Read More »

ಬೆಂಗಳೂರು ಕಂಬಳ|ಉಪ್ಪಿನಂಗಡಿಯಿಂದ ಬೆಂಗಳೂರಿಗೆ ಹೊರಟ ಕೋಣಗಳು

ಸಮಗ್ರ ನ್ಯೂಸ್: ಬೆಂಗಳೂರು ಅರಮನೆ ಮೈದಾನದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಕಂಬಳಕ್ಕೆ ಉಪ್ಪಿನಂಗಡಿಯಿಂದ ಕಂಬಳ ಕೋಣಗಳನ್ನು ಬೀಳ್ಗೊಡಲಾಯಿತು. ನವಂಬರ್ 25 ಮತ್ತು 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ನಡೆಯಲಿದ್ದು, ಕರಾವಳಿಯಿಂದ ಸುಮಾರು 250ಕ್ಕೂ ಅಧಿಕ ಕೋಣಗಳ ಜೋಡಿ ಭಾಗವಹಿಸುವ ನಿರೀಕ್ಷೆ ಇದೆ. ಈಗಾಗಲೇ ಕಂಬಳ ತಯಾರಿ ಕೊನೆಯ ಹಂತದಲ್ಲಿದ್ದು, ಇದೀಗ ಕಂಬಳ ಕೋಣಗಳು ಬೆಂಗಳೂರಿನತ್ತ ಹೊರಟಿವೆ. ಇಂದು ಉಪ್ಪಿನಂಗಡಿಯ ಪದವಿ ಕಾಲೇಜು ಮೈದಾನದಲ್ಲಿ ಬೆಂಗಳೂರಿಗೆ ಹೊರಟ ಕಂಬಳ ಕೋಣಗಳನ್ನು ನಿಲ್ಲಿಸಲಾಗಿತ್ತು. ಈ ವೇಳೆ

ಬೆಂಗಳೂರು ಕಂಬಳ|ಉಪ್ಪಿನಂಗಡಿಯಿಂದ ಬೆಂಗಳೂರಿಗೆ ಹೊರಟ ಕೋಣಗಳು Read More »

ಬೆಂಗಳೂರು ಕಂಬಳಕ್ಕೆ ಸಕಲ ಸಿದ್ದತೆ| ರಾಜಧಾನಿಯಲ್ಲಿ ರಾರಾಜಿಸಲಿದೆ ಕರಾವಳಿಯ ಜಾನಪದ ಕ್ರೀಡೆ

ಸಮಗ್ರ ನ್ಯೂಸ್: ಕರಾವಳಿಯ ಜಾನಪದ ಮತ್ತು ಸಾಂಸ್ಕೃತಿಕ ಕ್ರೀಡೆಯಾದ ಕಂಬಳದ ವೈಭವವನ್ನು ರಾಜಧಾನಿಯಲ್ಲಿ ಸಾಕಾರಗೊಳಿಸಿ ಇಡೀ ಜಗತ್ತಿಗೆ ಉಣಬಡಿಸುವ ಮಹತ್ವಾಕಾಂಕ್ಷೆ ಹೊತ್ತಿರುವ ಬೆಂಗಳೂರು ಕಂಬಳಕ್ಕೆ ದಿನ ಸನ್ನಿಹಿತವಾಗುತ್ತಿದೆ. ನವೆಂಬರ್‌ 25 ಮತ್ತು 26ರಂದು ಅದ್ಧೂರಿ ಬೆಂಗಳೂರು ಕಂಬಳ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದ್ದು, ಇದಕ್ಕಾಗಿ ಎಲ್ಲ ರೀತಿಯ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿವೆ. ಹಿಂದಿನಿಂದಲೂ ಕುತೂಹಲ ಮೂಡಿಸಿದ್ದ, ಕಾಂತಾರ ಸಿನಿಮಾದ ಮೂಲಕ ಇಡೀ ದೇಶದ ಗಮನ ಸೆಳೆದ ಕಂಬಳ ಈಗ ರಾಜಧಾನಿಯಲ್ಲಿ ಹೊಸ ದಾಖಲೆ ಬರೆಯಲು ʻಕರೆ”

ಬೆಂಗಳೂರು ಕಂಬಳಕ್ಕೆ ಸಕಲ ಸಿದ್ದತೆ| ರಾಜಧಾನಿಯಲ್ಲಿ ರಾರಾಜಿಸಲಿದೆ ಕರಾವಳಿಯ ಜಾನಪದ ಕ್ರೀಡೆ Read More »