ದೀಪಾವಳಿ ವೇಳೆ ಹಲವು ಜಿಲ್ಲೆ ಗಳಲ್ಲಿ ಹೆಚ್ಚಿದ ವಾಯುಮಾಲಿನ್ಯ|ಮಡಿಕೇರಿಯಲ್ಲಿ ಉತ್ತಮ ಗಾಳಿ ಗುಣಮಟ್ಟ ದಾಖಲೆ
ಸಮಗ್ರ ನ್ಯೂಸ್: ಬೆಂಗಳೂರಿನ ಜಯನಗರದಲ್ಲೇ ಅತಿ ಹೆಚ್ಚು ಎಕ್ಯೂಐ ದಾಖಲು.ಬೆಂಗಳೂರು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ತೀವ್ರ ಹದಗೆಟ್ಟು ಆತಂಕ ಸೃಷ್ಟಿಸಿರುವ ನಡುವೆ ರಾಜ್ಯದ ಹಲವು ಜಿಲ್ಲೆಗಳಲ್ಲೂ ಮೂರು ದಿನ ಕಾಲ ವಾಯು ಗುಣಮಟ್ಟ ಸೂಚ್ಯಂಕ( ಎಕ್ಯೂಐ) ಹೆಚ್ಚಳವಾಗಿ ಕಳಪೆ ಮಟ್ಟಕ್ಕೆ ತಲುಪಿದೆ. ದೀಪಾವಳಿ ನಿಮಿತ್ತ ಸಾರ್ವಜನಿಕರು ಪಟಾಕಿ ಸುಟ್ಟ ಪರಿಣಾಮ ನ.12ರಿಂದ ನ.14ರವರೆಗೆ ರಾಜ್ಯದ ಇತರ ಜಿಲ್ಲೆಗಳಗಿಂತ ಬೆಂಗಳೂರಿನ ಜಯನಗರದಲ್ಲಿ ಅತಿ ಹೆಚ್ಚು ಎಕ್ಯೂಐ ದಾಖಲಾಗಿದೆ. ಮಂಗಳೂರು, ಬೀದರ್, ತುಮಕೂರು ಕ್ರಮವಾಗಿ ನಂತರ ಸ್ಥಾನಗಳಿವೆ.










