ರಾಜ್ಯ

ಬಿಡದಿಯವರೆಗೆ ರೈಲು/ ಸಮಗ್ರ ಯೋಜನಾ ವರದಿಗೆ ಸಿದ್ಧತೆ

ಸಮಗ್ರ ನ್ಯೂಸ್: ಬೆಂಗಳೂರಿನ ಬಿಡದಿಯವರೆಗೆ ನೇರಳೆ ಮಾರ್ಗ ಮೆಟ್ರೋ ರೈಲು ವಿಸ್ತರಣೆ ಮಾಡುವ ವಿಚಾರವಾಗಿ ಸಮಗ್ರ ಯೋಜನಾ ವರದಿ ಸಿದ್ಧಪಡಿಸಲು ಸೂಚಿಸಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. ಬಿಡದಿ ಪ್ರದೇಶದಲ್ಲಿ ಲಕ್ಷಕ್ಕೂ ಅಧಿಕ ಮಂದಿ ಉದ್ಯೋಗ ಮಾಡುತ್ತಿದ್ದು, ಅವರ ಪ್ರಯಾಣಕ್ಕೆ ಅನುಕೂಲವಾಗಲಿ ಎಂಬ ಆಲೋಚನೆಯಿಂದ ಮೆಟ್ರೋ ವಿಸ್ತರಣೆಯ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಬಿಡದಿ ಪ್ರಾಧಿಕಾರ ರದ್ದು ಮಾಡಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವಾಗಿ ಬದಲಾಯಿಸಲು ಆದೇಶ ನೀಡಲಾಗಿದೆ ಎಂದು ಅವರು ಹೇಳಿದರು.

ಬಿಡದಿಯವರೆಗೆ ರೈಲು/ ಸಮಗ್ರ ಯೋಜನಾ ವರದಿಗೆ ಸಿದ್ಧತೆ Read More »

ರಾಜ್ಯ ಬಿಜೆಪಿಗೆ ಹೊಸ ಸಾರಥಿ| ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ನೇಮಕ

ಸಮಗ್ರ ನ್ಯೂಸ್: ಶಿಕಾರಿಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರನ್ನು ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಅಧ್ಯಕರನ್ನಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಕಳೆದ ಹಲವು ವರ್ಷಗಳಿಂದ ರಾಜ್ಯಾಧ್ಯಕ್ಷರಾಗಿದ್ದ ಸಂಸದ ನಳಿನ್ ಕುಮಾರ್ ಅವರಿಗೆ ಸ್ಥಾನದಿಂದ ಬಿಡುಗಡೆಗೊಳಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಶಾಸಕ ವಿಜಯೇಂದ್ರ ಯಡಿಯೂರಪ್ಪ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ

ರಾಜ್ಯ ಬಿಜೆಪಿಗೆ ಹೊಸ ಸಾರಥಿ| ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ನೇಮಕ Read More »

ಹಾಲಿನ ದರ ಹೆಚ್ಚಳ/ ಪ್ರಸ್ತಾವನೆ ಸಲ್ಲಿಸಿದ ಪಶು ಸಂಗೋಪನಾ ಇಲಾಖೆ

ಸಮಗ್ರ ನ್ಯೂಸ್: ಪ್ರತಿ ಆರು ತಿಂಗಳಿಗೊಮ್ಮೆ ಶೇಕಡಾ 5ರಷ್ಟು ಹಾಲಿನ ದರ ಏರಿಕೆಗೆ ಅವಕಾಶ ನೀಡಬೇಕು ಮತ್ತು ಹಾಲಿನ ದರ ಏರಿಕೆಯನ್ನು ಕರ್ನಾಟಕ ಹಾಲು ಮಹಾಮಂಡಳಕ್ಕೆ ಅನುಮತಿ ನೀಡಬೇಕು ಎಂದು ರಾಜ್ಯ ಪಶು ಸಂಗೋಪನಾ ಇಲಾಖೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸಿದೆ. ರಾಜ್ಯದ ಆರ್ಥಿಕ ಸ್ಥಿತಿಗತಿಗಳನ್ನು ಆಧರಿಸಿ ಹಾಲಿನ ದರ ಹೆಚ್ಚಳಕ್ಕೆ ಅನುಮತಿ ನೀಡಬೇಕು ಎಂದು ಕೋರಲಾಗಿದೆ. ಕೆಎಂಎಫ್ ಹಾಲಿನ ಪುಡಿ ಪೂರೈಸುತ್ತಿರುವ ಕ್ಷೀರಭಾಗ್ಯ ಯೋಜನೆಯಲ್ಲಿ ಪ್ರತಿ ಕೆ.ಜಿ. ಹಾಲಿನ ಪುಡಿಗೆ 300 ರೂಪಾಯಿಗಳನ್ನು ನೀಡಲಾಗುತ್ತಿದ್ದು,

ಹಾಲಿನ ದರ ಹೆಚ್ಚಳ/ ಪ್ರಸ್ತಾವನೆ ಸಲ್ಲಿಸಿದ ಪಶು ಸಂಗೋಪನಾ ಇಲಾಖೆ Read More »

ಹಾಸನಾಂಬೆ ದೇಗುಲದಲ್ಲಿ ಕರೆಂಟ್ ಅವಾಂತರ..!ಕರೆಂಟ್ ಶಾಕ್ ಗೆ ಕುಸಿದು ಬಿದ್ದ ಜನ

ಸಮಗ್ರ ಸಮಾಚಾರ: ಹಾಸನದ ಹಾಸನಾಂಬೆ ದೇವಾಲಯ ಬಳಿ ಕರೆಂಟ್ ಶಾಕ್ ವಿಚಾರವಾಗಿ ಅಲ್ಲೋಲ ಕಲ್ಲೋಲವಾಗಿದೆ. ದಿಢೀರ್ ನೂಕು ನುಗ್ಗಲು ಆರಂಭವಾಗಿದೆ. ಧರ್ಮ‌ ದರ್ಶನ ಸರತಿ ಸಾಲಿನ ಬಳಿ ಮಹಿಳೆಯರು ನರಳಾಡುತ್ತಿದ್ದಾರೆ. ಹಾಸನಾಂಬೆ ದರ್ಶನಕ್ಕೆಂದು ತೆರಳಿದ್ದ ಭಕ್ತರಿಗೆ ಕರೆಂಟ್​ ಶಾಕ್​ ತಗುಲಿದೆ. ಕೆಲವರಿಗೆ ಕರೆಂಟ್ ಶಾಕ್ ಆಗಿ ಕುಸಿದು ಬಿದ್ದು ಅವಾಂತರ ಉಂಟಾಗಿದೆ. ಒಬ್ಬರ ಮೇಲೆ ಒಬ್ಬರು ಬಿದ್ದು ಓಡಿದ ಮಹಿಳೆಯರಿಂದ ಕಾಲ್ತುಳಿತ ಕೂಡ ಉಂಟಾಗಿದೆ. ಇದರಿಂದಾಗಿ ಹಲವಾರು ಮಹಿಳೆಯರು ನರಳಾಡುವಂತಾಗಿದೆ. ಹಾಸನಾಂಬೆ ದರ್ಶನಕ್ಕೆ ಅಪಾರ ಪ್ರಮಾಣದಲ್ಲಿ ಭಕ್ತರು

ಹಾಸನಾಂಬೆ ದೇಗುಲದಲ್ಲಿ ಕರೆಂಟ್ ಅವಾಂತರ..!ಕರೆಂಟ್ ಶಾಕ್ ಗೆ ಕುಸಿದು ಬಿದ್ದ ಜನ Read More »

ಗುರುವಾಯೂರು: ಮಾವುತನನ್ನೇ ತಿವಿದು ಕೊಂದ ಚಂದ್ರಶೇಖರನ್

ಕೇರಳದ ಪುನ್ನತ್ತೂರು ಕೊಟ್ಟಾದಲ್ಲಿರುವ ಗುರುವಾಯೂರು ದೇವಸ್ವಂನ ಆನೆ ಶಿಬಿರದಲ್ಲಿ ಆನೆಯೊಂದು ತನ್ನ ಸಹಾಯಕ ಮಾವುತನನ್ನೇ ತುಳಿದು ಕೊಂದಿರುವ ಘಟನೆ ವರದಿಯಾಗಿದೆ. ಚಂದ್ರಶೇಖರನ್‌ ಎಂಬ ಹೆಸರಿನ ಒಂಟಿ ದಂತದ ಆನೆಯು ಅಶಿಸ್ತಿನಿಂದ ವರ್ತಿಸುತ್ತಿತ್ತಲ್ಲದೇ, ಅಪಾಯಕಾರಿಯಾಗಿಯೂ ತೋರುತ್ತಿದ್ದ ಕಾರಣ ಅದನ್ನು ಎಂದಿಗೂ ಶಿಬಿರದಿಂದ ಹೊರಗೆ ಕರೆತಂದಿರಲಿಲ್ಲ. ಬುಧವಾರ ಮಧ್ಯಾಹ್ನ ರತೀಶ್‌ ಎಂಬ ಮಾವುತ ಆನೆಗೆ ನೀರು ಕುಡಿಸಲು ಹೋದಾಗ ಆತ ತನಗೆ ತೊಂದರೆ ನೀಡಲು ಬಂದಿದ್ದಾನೆಂದು ಭಾವಿಸಿ ತುಳಿದುಬಿಟ್ಟಿದೆ. ರತೀಶ್‌ನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫ‌ಲಕಾರಿಯಾಗದೇ ಮೃತಪಟ್ಟದ್ದಾರೆ. ಆನೆ ಮೊದಲಿನಿಂದಲೂ

ಗುರುವಾಯೂರು: ಮಾವುತನನ್ನೇ ತಿವಿದು ಕೊಂದ ಚಂದ್ರಶೇಖರನ್ Read More »

ಟಿಪ್ಪು ಜಯಂತಿ ಆಚರಣೆ ಸರ್ಕಾರದ ಮುಂದಿಲ್ಲ – ಹೆಚ್ ಕೆ ಪಾಟೀಲ್

ಸಮಗ್ರ ನ್ಯೂಸ್: ಸರ್ಕಾರದಿಂದ ನಡೆಯುತ್ತಿದ್ದ ಟಿಪ್ಪು ಜಯಂತಿ ಆಚರಣೆಯನ್ನು 2019ರಲ್ಲೇ ಹಿಂಪಡೆಯಲಾಗಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೂ ಆಚರಣೆ ರದ್ದತಿ ಆದೇಶವನ್ನು ಹಿಂಪಡೆದಿಲ್ಲ. ಹೀಗಾಗಿ ಸರ್ಕಾರದಿಂದ ಅಧಿಕೃತವಾಗಿ ಟಿಪ್ಪು ಜಯಂತಿ ಆಚರಣೆ ಇಲ್ಲ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲೂ ಚರ್ಚೆ ನಡೆದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್​ಕೆ ಪಾಟೀಲ್ ಹೇಳಿದ್ದಾರೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಮೊದಲ ಬಾರಿ ಸರ್ಕಾರ ಅಧಿಕಾರಕ್ಕೆ ಬಂದಾಗ ಟೀಕೆ, ವಿರೋಧಗಳ ನಡುವೆ ಟಿಪ್ಪು ಜಯಂತಿ ಆಚರಣೆಯನ್ನು ಜಾರಿಗೆ

ಟಿಪ್ಪು ಜಯಂತಿ ಆಚರಣೆ ಸರ್ಕಾರದ ಮುಂದಿಲ್ಲ – ಹೆಚ್ ಕೆ ಪಾಟೀಲ್ Read More »

ಆಟೋ – ಟ್ಯಾಂಕರ್ ನಡುವೆ ಭೀಕರ ಅಪಘಾತ| ಸ್ಥಳದಲ್ಲೇ ನಾಲ್ವರು ಸಾವು

ಸಮಗ್ರ ನ್ಯೂಸ್: ಆಟೋ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ನಡೆದಿದೆ. ವಾಡಿ ಪಟ್ಟಣದಿಂದ ನಾಲವಾರ ಕಡೆ ತೆರಳುತ್ತಿದ್ದ ಆಟೋಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಲವಾರ ಗ್ರಾಮದ ವಾರ್ಡ್ ನಂ.1 ಅಕಾನಿ ಮಸ್ಜಿದ್ ಹತ್ತಿರದ ನಿವಾಸಿಗಳಾದ ನಜ್ಮಿನ್ ಬೇಗಂ (28), ಬೀಬಿ ಫಾತಿಮಾ(12), ಅಬೂಬಕ್ಕರ್(4), ಬೀಬಿ

ಆಟೋ – ಟ್ಯಾಂಕರ್ ನಡುವೆ ಭೀಕರ ಅಪಘಾತ| ಸ್ಥಳದಲ್ಲೇ ನಾಲ್ವರು ಸಾವು Read More »

ಭಾರೀಮಳೆ,‌ಭೂಕುಸಿತ ಹಿನ್ನಲೆ| ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಈಶಾನ್ಯ ಮಾನ್ಸೂನ್ ಮಾರುತವು ಬಿರುಸು ಪಡೆದಿದ್ದು, ತಮಿಳುನಾಡಿನ‌ ಕೊಯಂಬತ್ತೂರು, ತಿರುಪ್ಪೂರು, ಮಧುರೈ, ಥೇಣಿ, ದಿಂಡಿಗಲ್ ಸೇರಿದಂತೆ ಐದು ಜಿಲ್ಲೆಗಳು ಹಾಗೂ ನೀಲಗಿರಿ ಜಿಲ್ಲೆಯ ಕೆಲವು ತಾಲ್ಲೂಕುಗಳಲ್ಲಿನ ಶಾಲಾ ಕಾಲೇಜುಗಳಿಗೆ ಗುರುವಾರದಂದು ರಜೆ ಘೋಷಿಸಲಾಗಿದೆ. ಭಾರಿ ಮಳೆಯಿಂದ ನೀಲಗಿರಿ ಜಿಲ್ಲೆಯ ಕೋಟಾಗಿರಿ-ಮೆಟ್ಟುಪಾಳ್ಯಂ ರಸ್ತೆಯಲ್ಲಿ ಭೂಕುಸಿತವಾಗಿದ್ದು, ಇದರಿಂದ ಸಂಚಾರಕ್ಕೆ ಅಡಚಣೆಯುಂಟಾಗಿತ್ತು. ನಂತರ ಆ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಹನಗಳಿಗೆ ಬೇರೆ ಮಾರ್ಗವಾಗಿ ಪ್ರಯಾಣಿಸಲು ವ್ಯವಸ್ಥೆ ಮಾಡಲಾಯಿತು. ಪರಿಹಾರ ಕಾಮಗಾರಿಗಳು ಪ್ರಗತಿಯಲ್ಲಿವೆ. ಈ ನಡುವೆ, ಭಾರಿ ಮಳೆಯಿಂದಾಗಿ ಕಲ್ಲರ್ ಮತ್ತು

ಭಾರೀಮಳೆ,‌ಭೂಕುಸಿತ ಹಿನ್ನಲೆ| ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಬರೆಗೆ ಅಪ್ಪಳಿಸಿದ KSRTC ಬಸ್

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ರಸ್ತೆ ಪಕ್ಕದ ಬರೆಗೆ ಅಪ್ಪಳಿಸಿದ ಘಟನೆ ಕೊಡಗು ಜಿಲ್ಲೆ ಸುಂಟಿಕೊಪ್ಪ ಸಮೀಪದ ಕೆದಕಲ್ ಬಳಿ ನಡೆದಿದೆ. ಅದೃಷ್ಟವಶಾತ್ ಮೂವತ್ತಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಬರೆಗೆ ಅಪ್ಪಳಿಸಿದ KSRTC ಬಸ್ Read More »

ಮಡಿಕೇರಿ: ಡೆತ್ ನೋಟ್ ಬರೆದಿಟ್ಟು ನಿವೃತ್ತ ಯೋಧ ನಾಪತ್ತೆ

ಸಮಗ್ರ ನ್ಯೂಸ್: ಡೆತ್ ನೋಟ್ ಬರೆದಿಟ್ಟು ನಿವೃತ್ತ ಯೋಧ ನಾಪತ್ತೆಯಾಗಿರುವ ಘಟನೆ ಮಡಿಕೇರಿಯ ಪಂಪಿನ ಕೆರೆ ಎಂಬಲ್ಲಿ ವರದಿಯಾಗಿದೆ. ನಿವೃತ ಯೋಧ ಸಂದೇಶ್ (೩೮) ಅವರು ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದು, ಮಡಿಕೇರಿ ನಗರದ ಹೊರವಲಯದಲ್ಲಿರುವ ಪಂಪಿನ ಕೆರೆಯ ಬಳಿ ಆತನ ಪಾದರಕ್ಷೆ ಹಾಗು ಸೆಲ್ ಫೋನ್ ಸಿಕ್ಕಿರುವ ಹಿನ್ನಲೆ ಆತ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗು ಪೊಲೀಸರು ಕೆರೆಯಲ್ಲಿ ಶೋಧಕಾರ್ಯ ನಡೆಸಿದ್ದಾರೆ. ಮಡಿಕೇರಿಯ ಉಕ್ಕುಡ ನಿವಾಸಿಯವಿರುವ ಸಂದೇಶ್ ಎರಡು ತಿಂಗಳ

ಮಡಿಕೇರಿ: ಡೆತ್ ನೋಟ್ ಬರೆದಿಟ್ಟು ನಿವೃತ್ತ ಯೋಧ ನಾಪತ್ತೆ Read More »