ರಾಜ್ಯ

ಸುಂಟಿಕೊಪ್ಪ:ಬೈಕ್ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಸಮಗ್ರ ನ್ಯೂಸ್: ಬೈಕ್‌ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ಘಟನೆ ಕೊಡಗಿನ ಸುಂಟಿಕೊಪ್ಪದಿಂದ ವರದಿಯಾಗಿದೆ ಕುಶಾಲನಗರದಿಂದ ಸುಂಟಿಕೊಪ್ಪಕ್ಕೆ ತೆರಳುತ್ತಿದ್ದ ಸಂದರ್ಭ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು ಇಬ್ಬರೂ ಸಮೀಪದ ಪೊದೆಯೊಳಗೆ ಬಿದ್ದು ಮೃತಪಟ್ಟಿದ್ದಾರೆ. ರಾತ್ರಿ ಅಪಘಾತ ನಡೆದಿದ್ದರೂ ಯಾರಿಗೂ ಗೋಚರಿಸಲಿಲ್ಲ. ಬೆಳಿಗ್ಗೆ ಈ ಘಟನೆ ಗೋಚರಿಸಿದೆ. ಸುಂಟಿಕೊಪ್ಪ ಮಾಧುರಮ್ಮ ಬಡಾವಣೆಯ ನಿವಾಸಿಗಳಾದ ಉದಯ ಹಾಗೂ ಚಂದನ್ ಮೃತಪಟ್ಟ ದುರ್ದೈವಿಗಳು. ಸುಂಟಿಕೊಪ್ಪ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸುಂಟಿಕೊಪ್ಪ:ಬೈಕ್ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ Read More »

ಚಿಂತಕಿ ಕೆ.ಷರೀಪಾರ ‘ನೀರೊಳಗಣ ಕಿಚ್ಚು’ ಗೆ ಮುಸ್ಲಿಂ ಸಾಹಿತ್ಯ‌ ಪ್ರಶಸ್ತಿ

ಸಮಗ್ರ ನ್ಯೂಸ್: ಮುಸ್ಲಿಂ ಬರಹಗಾರರ ಕನ್ನಡದ ಪ್ರಕಟಿತ ಅತ್ಯುತ್ತಮ ಕೃತಿಗೆ, ಕರ್ನಾಟಕ ಮುಸ್ಲಿಂ ಲೇಖಕರ ಸಂಘವು ಕೊಡಮಾಡುವ 2022ನೇ ಸಾಲಿನ ‘ಮುಸ್ಲಿಂ ಸಾಹಿತ್ಯ ಪ್ರಶಸ್ತಿ’ಗೆ ಸಾಹಿತಿ, ಚಿಂತಕಿ ಕೆ.ಷರೀಫಾ ಅವರ ‘ನೀರೊಳಗಣ ಕಿಚ್ಚು’ ಕಥಾಸಂಕಲನ ಆಯ್ಕೆಯಾಗಿದೆ. ದಿ. ಯು.ಟಿ‌ ಫರೀದ್ ಸ್ಮರಣಾರ್ಥ ನೀಡಲಾಗುವ ಈ ಪ್ರಶಸ್ತಿಯು ₹10 ಸಾವಿರ ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ. ನವೆಂಬರ್‌ 23ರಂದು ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮುಸ್ಲಿಂ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಎಚ್.

ಚಿಂತಕಿ ಕೆ.ಷರೀಪಾರ ‘ನೀರೊಳಗಣ ಕಿಚ್ಚು’ ಗೆ ಮುಸ್ಲಿಂ ಸಾಹಿತ್ಯ‌ ಪ್ರಶಸ್ತಿ Read More »

ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡರು ಇನ್ನಿಲ್ಲ

ಸಮಗ್ರ ನ್ಯೂಸ್: ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡರು(87 ವರ್ಷ) ತಡರಾತ್ರಿ 12.20 ಕ್ಕೆ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಮಂಗಳವಾರ ಮಧ್ಯಾಹ್ನ 2 ರಿಂದ ಸಂಜೆ 6ರ ವರೆಗೆ ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಡಿ.ಬಿ. ಚಂದ್ರೇಗೌಡರ ಪಾರ್ಥಿವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಇರಿಸಲಾಗುವುದು. ಬುಧವಾರ ಮಧ್ಯಾಹ್ನ ದಾರದಹಳ್ಳಿಯ ಅವರ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು. ಮೂಡಿಗೆರೆ ತಾಲ್ಲೂಕಿನ ದಾರದಹಳ್ಳಿ ಗ್ರಾಮದ ಪಟೇಲ್ ಭೈರೇಗೌಡ ಹಾಗೂ ಪುಟ್ಟಮ್ಮ ಅವರ

ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡರು ಇನ್ನಿಲ್ಲ Read More »

ವಿರಾಜಪೇಟೆ:ನಸುಕಿನಲ್ಲಿ ಕಾರು ಡಿಕ್ಕಿ |ಇಬ್ಬರಿಗೆ ಗಾಯ

ಸಮಗ್ರ ನ್ಯೂಸ್: ನಸುಕಿನ ವೇಳೆಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ವಿರಾಜಪೇಟೆಯ ನಿವಾಸಿಗಳಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬಗ್ಗೆ ವರದಿಯಾಗಿದೆ. ವಿರಾಜಪೇಟೆಯ ವ್ಯಾಪಾರಿ ಹುಸೇನ್ ಹಾಗೂ ಅವರ ಮಗ ಎಸ್.ಹೆಚ್. ಹುಮಾಯುನ್ ಎಂಬ ಇಬ್ಬರು ಇಂದು ಮುಂಜಾನೆ 4.30ರ ಸಮಯದಲ್ಲಿ ಮಾರುತಿ ಕಾರಿನಲ್ಲಿ ಹುಣಸೂರಿಗೆ ತೆರಳುತ್ತಿದ್ದರು. ಮಾರ್ಗಮಧ್ಯದ ತಿತಿಮತಿಯ ಬಿ.ಸಿ.ಕೆ. ಎಸ್ಟೇಟ್ ಬಳಿ ಹುಣಸೂರು ಕಡೆಯಿಂದ ಅಜಾಗರೂಕತೆಯಿಂದ ಅತೀ ವೇಗವಾಗಿ ಬಂದ ಕಾರು ಹುಮಾಯುನ್ ಅವರು ಚಲಾಯಿಸುತ್ತಿದ್ದ ಮಾರುತಿ ಕಾರಿನ ಮುಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ಪರಿಣಾಮ

ವಿರಾಜಪೇಟೆ:ನಸುಕಿನಲ್ಲಿ ಕಾರು ಡಿಕ್ಕಿ |ಇಬ್ಬರಿಗೆ ಗಾಯ Read More »

ಪ್ರತಿಮಾ ಕೊಲೆ ಕೇಸ್: ನಾಪತ್ತೆಯಾಗಿದ್ದ ಕಾರ್ ಡ್ರೈವರ್ ಪೊಲೀಸರ ವಶಕ್ಕೆ!

ಸಮಗ್ರ ಸಮಾಚಾರ: ಬೆಂಗಳೂರಿನ ದೊಡ್ಡಕಲ್ಲಸಂದ್ರದ ಗೋಕುಲ್ ಅಪಾರ್ಟ್ ಮೆಂಟ್ ನಲ್ಲಿ ಚಾಕು ಇರಿದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಎಂಬವರನ್ನು ಕೊಲೆ ಮಾಡಲಾಗಿತ್ತು. ಪ್ರತಿಮಾ ಕಳೆದ 8 ವರ್ಷಗಳಿಂದ ಒಬ್ಬರೇ ಈ ಅಪಾರ್ಟ್​​ಮೆಂಟ್​​ನಲ್ಲಿ ವಾಸವಿದ್ದರು. ಈ ಸಂದರ್ಭದಲ್ಲಿ ನವೆಂಬರ್ 4ರಂದು ರಾತ್ರಿ 8.30 ಗೆ ಪ್ರತಿಮಾ ಅವರನ್ನು ಮನೆಯ ಮುಂಭಾಗದಲ್ಲೇ ಉಸಿರುಗಟ್ಟಿಸಿ ಕತ್ತು ಇರಿದು ಕೊಲೆ ಮಾಡಲಾಗಿದೆ. ಆದ್ರೆ ಪೊಲೀಸರು ಈ ಬಗ್ಗೆ ಕೊಲೆಯಾದ ದಿನದಿಂದ ಸತತವಾಗಿ ಪರಿಶೀಲನೆ ನಡೆಸುತ್ತಲೇ ಇದ್ದರು. ಇದೀಗ

ಪ್ರತಿಮಾ ಕೊಲೆ ಕೇಸ್: ನಾಪತ್ತೆಯಾಗಿದ್ದ ಕಾರ್ ಡ್ರೈವರ್ ಪೊಲೀಸರ ವಶಕ್ಕೆ! Read More »

ಉಗ್ರರ ಕೆಂಗಣ್ಣಿನಿಂದ ಜಸ್ಟ್ ಮಿಸ್ ಆಯ್ತು‌ ಕರ್ನಾಟಕ!? NIA ತನಿಖೆಯಲ್ಲಿ ಬಯಲಾಯ್ತು ಆ ಆತಂಕಕಾರಿ ವಿಚಾರ

ಸಮಗ್ರ ನ್ಯೂಸ್: ನಿಜಕ್ಕೂ ಕರ್ನಾಟಕದ ಜನ ಬೆಚ್ಚಿ ಬೀಳೋ ಸುದ್ದಿಯಿದು. ಸ್ವಲ್ಪ ಯಾಮಾರಿದ್ದರೂ ಕರ್ನಾಟಕದಲ್ಲಿ ನಡೆಯುತ್ತಿತ್ತಾ ಭಾರೀ ವಿದ್ವಂಸಕ ಕೃತ್ಯ? ಹೀಗೊಂದು ಶಂಕೆ ಇದೀಗ ಶುರುವಾಗಿದೆ. ಕಳೆದ ಜುಲೈ ತಿಂಗಳಲ್ಲಿ ಪುಣೆ ಬಳಿ ರಾಷ್ಟ್ರೀಯ ತನಿಖಾ (NIA) ಸಂಸ್ಥೆ ಬಂಧಿಸಿದ್ದ 7 ಮಂದಿ ಶಂಕಿತ ಉಗ್ರರ ವಿರುದ್ಧ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಈ ವೇಳೆ ಬಂಧಿತ ಶಂಕಿತ ಉಗ್ರರು ಕರ್ನಾಟಕದಲ್ಲೂ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದರು ಎನ್ನುವ ವಿಚಾರ ಪ್ರಸ್ತಾಪಿಸಲಾಗಿದೆ. ಕಳೆದ ಜುಲೈನಲ್ಲಿ ಪುಣೆ ಬಳಿ

ಉಗ್ರರ ಕೆಂಗಣ್ಣಿನಿಂದ ಜಸ್ಟ್ ಮಿಸ್ ಆಯ್ತು‌ ಕರ್ನಾಟಕ!? NIA ತನಿಖೆಯಲ್ಲಿ ಬಯಲಾಯ್ತು ಆ ಆತಂಕಕಾರಿ ವಿಚಾರ Read More »

ಚಿಕ್ಕಮಗಳೂರು ನಗರಸಭೆ ಅಧ್ಯಕ್ಷನ ಕೆಳಗಿಳಿಸಲು‌ SDPI‌ ಜೊತೆ ಬಿಜೆಪಿ ಹೊಂದಾಣಿಕೆ!!

ಸಮಗ್ರ ನ್ಯೂಸ್: ಚಿಕ್ಕಮಗಳೂರು ನಗರಸಭೆಯಲ್ಲಿ ಬಿಜೆಪಿ ಸದಸ್ಯರು ಎಸ್‌ಡಿಪಿಐ ಬೆಂಬಲ ಪಡೆದುಕೊಂಡಿದ್ದಾರೆ. ನಗರಸಭೆ ಅಧ್ಯಕ್ಷರ ವಿರುದ್ಧ ಬಿಜೆಪಿ ಆಡಳಿತ ಮಂಡಳಿ ಸದಸ್ಯರು ಸೇರಿದಂತೆ ಜೆಡಿಎಸ್ ಸದಸ್ಯರು ಇದೇ ತಿಂಗಳು 10ರಂದು ಅವಿಶ್ವಾಸ ಮಂಡನೆಗೆ ಸಿದ್ಧತೆ ನಡೆಸಿದ್ದು, ಈ ಅವಿಶ್ವಾಸ ಮಂಡನೆಗೆ ಎಸ್ಡಿಪಿಐನ ಸದಸ್ಯರು ಸಹಿ ಹಾಕಿರುವುದು ಸದ್ಯ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಮಾಜಿ ಸಚಿವ ಸಿ.ಟಿ.ರವಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿನಿಧಿಸುವ ಕ್ಷೇತ್ರದಲ್ಲಿಯೇ ಸ್ಥಳೀಯ ಬಿಜೆಪಿ ನಾಯಕರು ಎಸ್ಡಿಪಿಐ ಜೊತೆ ಕೈ ಜೋಡಿಸಲು ಮುಂದಾಗಿದ್ದಾರೆ. ಹಾಲಿ

ಚಿಕ್ಕಮಗಳೂರು ನಗರಸಭೆ ಅಧ್ಯಕ್ಷನ ಕೆಳಗಿಳಿಸಲು‌ SDPI‌ ಜೊತೆ ಬಿಜೆಪಿ ಹೊಂದಾಣಿಕೆ!! Read More »

ವಿರಾಜಪೇಟೆ:ಜಿಂಕೆ ಬೇಟೆ |ಇಬ್ಬರ ಬಂಧನ

ಸಮಗ್ರ ನ್ಯೂಸ್: ರಕ್ಷಿತಾರಣ್ಯದಲ್ಲಿ ಬೇಟೆಯಾಡಿ ಎರಡು ಜಿಂಕೆಗಳನ್ನು ಕೊಂದು ಮಾಂಸ ಮಾಡಿ ಇನೋವಾ ಕಾರಿನಲ್ಲಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಾಲು ಸಮೇತ ಬಂಧಿಸುವಲ್ಲಿ ವಿರಾಜಪೇಟೆ ಪೊಲೀಸ್ ಅರಣ್ಯ ಸಂಚಾರಿ ದಳದವರು ಯಶಸ್ವಿಯಾಗಿದ್ದಾರೆ. ಪೊಲೀಸ್ ಅರಣ್ಯ ಸಂಚಾರಿ ದಳದ ಉಪನಿರೀಕ್ಷಕ ಎಂ.ಸಿ.ಮುತ್ತಣ್ಣ ಅವರಿಗೆ ದೊರೆತ ಖಚಿತ ವರ್ತಮಾನದ ಮೇಲೆನ. 3ರಂದು ಪೆರುoಬಾಡಿ ಕಡೆಯಿಂದ ಬಿಟ್ಟಂಗಾಲದತ್ತ ಸಾಗುತ್ತಿದ್ದ ಇನೋವಾ (KA 02 MA 7011) ಕಾರನ್ನು ವಿರಾಜಪೇಟೆ ಪೊಲೀಸ್ ಅರಣ್ಯ ಸಂಚಾರಿ ದಳದವರು ಹೆಗ್ಗಳ ಗ್ರಾಮದಲ್ಲಿ ತಡೆದು ನಿಲ್ಲಿಸಿ ತಪಾಸಣೆ

ವಿರಾಜಪೇಟೆ:ಜಿಂಕೆ ಬೇಟೆ |ಇಬ್ಬರ ಬಂಧನ Read More »

ಮಡಿಕೇರಿ: ಲಾರಿ ಡಿಕ್ಕಿಯಾಗಿ ಪಲ್ಟಿಯಾದ ಕಾರು

ಸಮಗ್ರ ನ್ಯೂಸ್:ಬೆಂಗಳೂರಿನಿಂದ ಮಡಿಕೇರಿಯತ್ತ ತೆರಳುತ್ತಿದ್ದ ಕಾರಿಗೆ ಇಬ್ಬನಿ ರೆಸಾರ್ಟ್ ಸಮೀಪ ಮಡಿಕೇರಿ ಕಡೆಯಿಂದ ಬರುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಪ್ರವಾಸಿಗರಿದ್ದ ಕಾರು ಪಲ್ಟಿಯಾದ ಘಟನೆ ಸಂಭವಿಸಿದೆ. ಲಾರಿ ಅಪ್ಪಳಿಸಿದ ರಭಸಕ್ಕೆ ಕಾರು ರಸ್ತೆ ಬದಿಯಲ್ಲಿ ಮಗುಚಿಕೊಂಡಿದೆ. ವೃದ್ದರೊಬ್ಬರ ಸಮೇತ ಕಾರಿನಲ್ಲಿದ್ದ ದಂಪತಿ ಮತ್ತು ಇಬ್ಬರು ಪುಟ್ಟ ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಮಡಿಕೇರಿಯಲ್ಲಿರುವ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಮಡಿಕೇರಿ: ಲಾರಿ ಡಿಕ್ಕಿಯಾಗಿ ಪಲ್ಟಿಯಾದ ಕಾರು Read More »

ಉಡುಪಿ: ತುಲಾಭಾರದ ವೇಳೆ‌ ಕಳಚಿ ಬಿದ್ದ ಹಗ್ಗ; ಪೇಜಾವರ ಶ್ರೀಗಳಿಗೆ ಗಾಯ

ಸಮಗ್ರ ನ್ಯೂಸ್: ಪೇಜಾವರ ಸ್ವಾಮೀಜಿಯ ತುಲಾಭಾರದ ವೇಳೆ ತಕ್ಕಡಿಯ ಹಗ್ಗ ಕಳಚಿ ಬಿದ್ದ ಘಟನೆ ನ.3 ರಂದು ನಡೆದಿದೆ. ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ದೆಹಲಿ ಪ್ರವಾಸದಲ್ಲಿದ್ದಾರೆ. ದೆಹಲಿಯ ಪೇಜಾವರ ಮಠಕ್ಕೆ ಭೇಟಿ ನೀಡಿದ ಸಂದರ್ಭ, ಚಾತುರ್ಮಾಸ್ಯ ಪೂರ್ಣಗೊಳಿಸಿ ಬಂದ ಹಿನ್ನೆಲೆಯಲ್ಲಿ ಭಕ್ತರು ಸ್ವಾಮೀಜಿಯವರಿಗೆ ತುಲಾಭಾರ ನಡೆಸಿದ್ದಾರೆ. ಈ ಸಂದರ್ಭದಲ್ಲಿ ತಕ್ಕಡಿಯ ಹಗ್ಗ ಕಳಚಿಬಿದ್ದಿದೆ. ಸ್ವಾಮೀಜಿಯ ತಲೆಗೆ ತರಚಿದ ಗಾಯವಾಗಿದ್ದು, ಗಂಭೀರ ಗಾಯವಾಗಿಲ್ಲ ಎಂದು ಮಠದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಉಡುಪಿ: ತುಲಾಭಾರದ ವೇಳೆ‌ ಕಳಚಿ ಬಿದ್ದ ಹಗ್ಗ; ಪೇಜಾವರ ಶ್ರೀಗಳಿಗೆ ಗಾಯ Read More »