ರಾಜ್ಯ

ಕೆಎಸ್ಆರ್ ಟಿಸಿ‌ ಬಸ್ ನಲ್ಲಿ ಮೀನು ಮಾಂಸ ತರಬಾರದೇ? ಬಂಟ್ವಾಳದಲ್ಲಿ ನಡೆದದ್ದೇನು?

ಸಮಗ್ರ ನ್ಯೂಸ್: ಪ್ರಯಾಣಿಕರೊಬ್ರು ಚೀಲದಲ್ಲಿ ಕೋಳಿ ಮಾಂಸ ಹಿಡಿದುಕೊಂಡು ಬಸ್ ಹತ್ತಿದ ಕಾರಣಕ್ಕಾಗಿ ಆತನಿಗೆ ನಿರ್ವಾಹಕ ಅವ್ಯಾಚ್ಚ ಶಬ್ದದಿಂದ ಬೈದುದಲ್ಲದೆ, ಚಾಲಕ ಸೀದಾ ಪ್ರಯಾಣಿಕರನ್ನು ಕೂರಿಸಿಕೊಂಡು ಪೋಲಿಸ್ ಠಾಣೆಗೆ ತಂದ ಘಟನೆ ನಡೆದಿದೆ. ಸುರೇಶ್ ಎಂಬವರು ತುಂಬೆಯಲ್ಲಿ ಸ್ಟೇಟ್ ಬ್ಯಾಂಕ್ ಪುತ್ತೂರು ಕೆ.ಎಸ್.ಆರ್.ಟಿ.ಸಿ.ಬಸ್ ಹತ್ತಿದ್ದಾರೆ. ಈ ವೇಳೆ ವೇಳೆ ಬಸ್ ನಿರ್ವಾಹಕ ಟಿಕೆಟ್ ಪಡೆಯಲು ಬಂದಾಗ ಈತನ ಕೈಯಲ್ಲಿ ಚೀಲವೊಂದಿದ್ದು, ಇದರ ಬಗ್ಗೆ ವಿಚಾರಿಸಿದ್ದಾನೆ. ಪ್ರಯಾಣಿಕ ಕೋಳಿ ಮಾಂಸ ಎಂದು ತಿಳಿಸಿದ್ದಾನೆ, ಅಷ್ಟು ಕೇಳಿದ್ದೆ ತಡ ಪ್ರಯಾಣಿಕನನ್ನು

ಕೆಎಸ್ಆರ್ ಟಿಸಿ‌ ಬಸ್ ನಲ್ಲಿ ಮೀನು ಮಾಂಸ ತರಬಾರದೇ? ಬಂಟ್ವಾಳದಲ್ಲಿ ನಡೆದದ್ದೇನು? Read More »

ಬಿಗ್ ಬಾಸ್​ ಮನೆಯಲ್ಲಿ ಮೊದಲ ಎಲಿಮಿನೇಷನ್… ಸ್ನೇಕ್​ ಶ್ಯಾಮ್ ಔಟ್

ಸಮಗ್ರ ನ್ಯೂಸ್: ಕಿರುತೆರೆಯ ಬಿಗೆಸ್ಟ್ ರಿಯಾಲಿಟಿ ಶೋ ಕಾರ್ಯಕ್ರಮ ಬಿಗ್ ಬಾಸ್​ ಸೀಸನ್​ 10ರಲ್ಲಿ ಈ ವಾರ ಎಮಿನೇಷನ್ ಪ್ರಕ್ರಿಯೆಯಲ್ಲಿ ಸ್ನೇಕ್​ ಶ್ಯಾಮ್​ ದೊಡ್ಮನೆಯಿಂದ ಹೊರಗೆ ಬಂದಿದ್ದಾರೆ. ಸಂಡೇ ವಿತ್​ ಸುದೀಪ್​ ಕಾರ್ಯಕ್ರಮದಲ್ಲಿ ಸುದೀಪ್ ಮನೆಯವರನ್ನೆಲ್ಲಾ ತರಾಟೆಗೆ ತೆಗೆದುಕೊಂಡಿದ್ರು.​ ಬಿಗ್ ಬಾಸ್ ಮನೆಯಲ್ಲಿ ಮೊದಲ ಎಲಿಮಿನೇಷನ್ ಪ್ರಕ್ರಿಯೆ ನಡೆಯಿತು. ಈ ವೇಳೆ ಉರಗ ತಜ್ಞ ಸ್ನೇಕ್​ ಶ್ಯಾಮ್​ ಬಿಗ್ ಬಾಸ್​ ಮನೆಯಿಂದ ಹೊರ ಹೋಗಿದ್ದಾರೆ. ಒಂದೇ ವಾರಕ್ಕೆ ಸ್ನೇಕ್ ಶ್ಯಾಮ್​ ಔಟ್ ಆಗಿದು ಬಿಗ್ ಬಾಸ್ ಮನೆಗೆ

ಬಿಗ್ ಬಾಸ್​ ಮನೆಯಲ್ಲಿ ಮೊದಲ ಎಲಿಮಿನೇಷನ್… ಸ್ನೇಕ್​ ಶ್ಯಾಮ್ ಔಟ್ Read More »

ಬಿಜೆಪಿ – ಜೆಡಿಎಸ್ ಮೈತ್ರಿ/ ಜೆಡಿಎಸ್ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ ಸೋಮವಾರ ಪ್ರತ್ಯೇಕ ಸಭೆ

ಸಮಗ್ರ ನ್ಯೂಸ್: ಬಿಜೆಪಿ ಜತೆಗೆ ಮೈತ್ರಿ ಹಿನ್ನಲೆಯಲ್ಲಿ ಜೆಡಿಎಸ್ ನಲ್ಲಿ ಹಲವಾರು ಬೆಳವಣಿಗೆಗಳು ಕಂಡುಬರುತ್ತಿದ್ದು, ಇದೀಗ ಮೈತ್ರಿ ವಿರೋಧಿಸಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸೋಮವಾರ ಪ್ರತ್ಯೇಕ ಸಭೆ ನಡೆಸಲಿದ್ದಾರೆ. ಬಿಜೆಪಿ ಜೊತೆಗೆ ಮೈತ್ರಿ ಘೋಷಣೆ ಆದಂದಿನಿಂದ ಜೆಡಿಎಸ್ ಪಾಳೆಯದಲ್ಲಿ ಅಲ್ಪಸಂಖ್ಯಾತ ಮುಖಂಡರ ರಾಜೀನಾಮೆ ಪರ್ವ ಶುರುವಾಗಿದೆ. ಕೆಲವು ಶಾಸಕರು ಮೈತ್ರಿ ಬಗ್ಗೆ ತೀವ್ರ ಅಪಸ್ವರ ತೆಗೆದಿದ್ದು, ಇನ್ನು ಕೆಲವರು ಕಾದುನೋಡುವ ತಂತ್ರ ಅನುಸರಿಸುತ್ತಿದ್ದಾರೆ. ಈ ನಡುವೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮೈತ್ರಿ ವಿರೋಧಿಸುವ ಶಾಸಕರು, ಮಾಜಿ ಶಾಸಕರು,

ಬಿಜೆಪಿ – ಜೆಡಿಎಸ್ ಮೈತ್ರಿ/ ಜೆಡಿಎಸ್ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ ಸೋಮವಾರ ಪ್ರತ್ಯೇಕ ಸಭೆ Read More »

ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ| ಅಡಿಕೆ ಎಲೆ ಚುಕ್ಕಿ ರೋಗಕ್ಕೆ ಪರಿಹಾರದ ಭರವಸೆ

ಸಮಗ್ರ ನ್ಯೂಸ್: ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಅ.15ರಂದು ಭೇಟಿ ನೀಡಿ, ಸೇವೆ ಸಲ್ಲಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ದಕ್ಷಿಣ ಕನ್ನಡದಲ್ಲಿ ಅಡಿಕೆ ಕೃಷಿಗೆ ಎದುರಾಗಿರುವ ಎಲೆ ಚುಕ್ಕಿ ರೋಗಕ್ಕೆ ಈ ಬಾರಿಯ ಬಜೆಟ್ ನಲ್ಲಿ ಪರಿಹಾರ ಧನ ಮೀಸಲಿಡುವ ಬಗ್ಗೆ ಗಮನ ಹರಿಸುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ, ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಮಾಜಿ ತಾ.ಪಂ

ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ| ಅಡಿಕೆ ಎಲೆ ಚುಕ್ಕಿ ರೋಗಕ್ಕೆ ಪರಿಹಾರದ ಭರವಸೆ Read More »

ಮಡಿಕೇರಿ ದಸರಾ ಕರಗ ಉತ್ಸವ – 2023

ಸಮಗ್ರ ನ್ಯೂಸ್: ನಗರದ ಇತಿಹಾಸ ಪ್ರಸಿದ್ದ ನಾಲ್ಕು ಶಕ್ತಿದೇವತೆಗಳಾದ ಕುಂದುರುಮೊಟ್ಟೆ ಚೌಟಿಮಾರಿಯಮ್ಮ, ದಂಡಿನ ಮಾರಿಯಮ್ಮ, ಕೋಟೆ ಮಾರಿಯಮ್ಮ ಹಾಗೂ ಕಂಚಿ ಕಾಮಾಕ್ಷಿಯಮ್ಮ ದೇವತೆಗಳ ಕರಗಗಳನ್ನು ಅ. 15ರ ಸಂಜೆ 5 ಗಂಟೆಗೆ ಮಹದೇವಪೇಟೆಯ ಪಂಪಿನ ಕೆರೆ ಬಳಿ ನಗರ ದಸರಾ ಸಮಿತಿ ವತಿಯಿಂದ ಸಾಂಪ್ರದಾಯಿಕ ಪೂಜೆಯನ್ನರ್ಪಿಸಿ ನಗರ ಪ್ರದಕ್ಷಿಣೆಗೆ ಕರಗಗಳನ್ನು ಬರಮಾಡಿಕೊಳ್ಳಲಾಗುವುದು. ಮಧ್ಯಾಹ್ನ ನಾಲ್ಕು ಶಕ್ತಿದೇವತೆಗಳ ದೇವಾಲಯದಿಂದ ವ್ರತಧಾರಿಗಳೊಂದಿಗೆ ದೇವಾಲಯ ಸಮಿತಿಯವರು ಮಂಗಳವಾದ್ಯ ಸಹಿತ ಕರಗ ನಿರ್ಮಾಣಕ್ಕೆ ಅಗತ್ಯವಾದ ಸಾಮಗ್ರಿಗಳನ್ನು ಹೊತ್ತು, ಮೆರವಣಿಗೆಯ ಮೂಲಕ ಬನ್ನಿ ಮಂಟಪಕ್ಕೆ

ಮಡಿಕೇರಿ ದಸರಾ ಕರಗ ಉತ್ಸವ – 2023 Read More »

ಅ.16ರಿಂದ 21ರವರೆಗೆ ಹೈಕೋರ್ಟ್ ಗೆ ದಸರಾ ರಜೆ

ಸಮಗ್ರ ನ್ಯೂಸ್: ಕರ್ನಾಟಕ ಹೈಕೋರ್ಟ್ ಗೆ ದಸರಾ ರಜೆ ಘೋಷಣೆಯಾಗಿದೆ. ಅಕ್ಟೋಬರ್ 16ರಿಂದ 21ರವರೆಗೆ ದಸರಾ ರಜೆ ಇರಲಿದೆ. ಈ ಹಿನ್ನಲೆಯಲ್ಲಿ ತುರ್ತು ಅರ್ಜಿಗಳ ವಿಚಾರಣೆಗಾಗಿ ರಜಾಕಾಲೀನ ಪೀಠಗಳನ್ನು ಕೂಡ ರಚನೆ ಮಾಡಲಾಗಿದೆ. ಈ ಕುರಿತಂತೆ ಹೈಕೋರ್ಟ್ ನ್ಯಾಯಿಕ ರಿಜಿಸ್ಟ್ರಾರ್ ಎಂ.ಚಂದ್ರಶೇಖರ ರೆಡ್ಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಅಕ್ಟೋಬರ್ 16ರಿಂದ 21ರವರೆಗೆ ದಸರಾ ಹಿನ್ನಲೆಯಲ್ಲಿ ಹೈಕೋರ್ಟ್ ನ್ಯಾಯಪೀಠಕ್ಕೆ ರಜೆ ಇರಲಿದೆ. ಇದರ ನಡುವೆ ರಜಾಕಾಲೀನ ಪೀಠಗಳು ಬೆಂಗಳೂರು, ಧಾರವಾಡ ಮತ್ತು ಕಲಬುರ್ಗಿಯಲ್ಲಿ ಕರ್ತವ್ಯ ನಿರ್ವಹಿಸಲಿವೆ

ಅ.16ರಿಂದ 21ರವರೆಗೆ ಹೈಕೋರ್ಟ್ ಗೆ ದಸರಾ ರಜೆ Read More »

ಇಂದಿನಿಂದ ಮೈಸೂರಿನಲ್ಲಿ ದಸರಾ ರಂಗು| ನಾಡಹಬ್ಬಕ್ಕೆ ಚಾಲನೆ ನೀಡಲಿದ್ದಾರೆ ನಾದಬ್ರಹ್ಮ ಹಂಸಲೇಖ

ಸಮಗ್ರ ನ್ಯೂಸ್: ಇಂದಿನಿಂದ ಮೈಸೂರಿನಲ್ಲಿ ದಸರಾ ಸಂಭ್ರಮಾಚರಣೆ ಆರಂಭವಾಗಲಿದೆ. ಭಾನುವಾರ ಶರನ್ನವರಾತ್ರಿಯ ಸಾಂಪ್ರದಾಯಿಕ ಪೂಜಾ ಕೈಂಕರ್ಯಗಳ ಜೊತೆಗೆ ರಾಜವಂಶಸ್ಥ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸುವರು. ಸಂಗೀತ ನಿರ್ದೇಶಕ ನಾದ ಬ್ರಹ್ಮ ಡಾ. ಹಂಸಲೇಖ ಚಾಮುಂಡಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿದ್ಯುಕ್ತವಾಗಿ ಉದ್ಘಾಟಿಸುವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೇರಿದಂತೆ ನಾಡಿನ ಗಣ್ಯರು ಇದಕ್ಕೆ ಸಾಕ್ಷಿ ಆಗಲಿದ್ದಾರೆ. ಬೆಳ್ಳಿಯ ಪಲ್ಲಕ್ಕಿಯಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಯನ್ನು ಪ್ರತಿಷ್ಠಾಪನೆ ಮಾಡಿದ್ದು, ಬೆಳಗ್ಗೆ 10:15 ರಿಂದ 10:30

ಇಂದಿನಿಂದ ಮೈಸೂರಿನಲ್ಲಿ ದಸರಾ ರಂಗು| ನಾಡಹಬ್ಬಕ್ಕೆ ಚಾಲನೆ ನೀಡಲಿದ್ದಾರೆ ನಾದಬ್ರಹ್ಮ ಹಂಸಲೇಖ Read More »

ಮಂಡ್ಯ: ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸರಣಿ ಅಪಘಾತ

ಸಮಗ್ರ ನ್ಯೂಸ್: ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರು ಸೇರಿದಂತೆ ನಾಲ್ಕು ಕಾರು ಜಖಂಗೊಂಡಿದೆ. ಒಂದು ಕಾರು ಬೆಂಕಿಗಾಹುತಿಯಾಗಿದೆ. ಬೆಂಗಳೂರು- ಮೈಸೂರು ಹೆದ್ದಾರಿಯ ಶ್ರೀರಂಗಪಟ್ಟಣ ತಾಲ್ಲೂಕಿನ ಟಿ.ಎಂ. ಹೊಸೂರು ಗೇಟ್ ಬಳಿ ಬೆಂಗಳೂರು ಕಡೆಯಿಂದ ಮೈಸೂರು ಕಡೆಗೆ ತೆರಳುವಾಗ ಫೋಕ್ಸ್‌ ವ್ಯಾಗನ್ ಕಾರಿಗೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಮುಂದೆ ಚಲಿಸುತ್ತಿದ್ದ ನಾಲ್ಕು ಕಾರುಗಳು ಡಿಕ್ಕಿಯಾಗಿದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಚಲಿಸುತ್ತಿದ್ದ ಕಾರಿಗೂ

ಮಂಡ್ಯ: ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸರಣಿ ಅಪಘಾತ Read More »

SBI ನಲ್ಲಿ ಕೆಲಸ ಮಾಡಲು ಆಸಕ್ತಿನಾ? ಹಾಗಾದ್ರೆ ಬೇಕಾದಷ್ಟು ಜಾಬ್​ಗಳು ಖಾಲಿ ಇವೆ

ಸಮಗ್ರ ಉದ್ಯೋಗ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಅಧಿಕೃತ ವೆಬ್‌ಸೈಟ್ sbi.co.in ನಲ್ಲಿ ಶೀಘ್ರದಲ್ಲೇ SBI ಕ್ಲರ್ಕ್ ಅಧಿಸೂಚನೆ 2023 ಅನ್ನು ಬಿಡುಗಡೆ ಮಾಡುತ್ತದೆ. ಪ್ರತಿ ವರ್ಷ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಭಾರತದಾದ್ಯಂತ ವಿವಿಧ ಶಾಖೆಗಳಲ್ಲಿ ಜೂನಿಯರ್ ಅಸೋಸಿಯೇಟ್ ಹುದ್ದೆಗೆ ಅರ್ಹ ಅಭ್ಯರ್ಥಿಗಳನ್ನು ನೇಮಿಸಲು SBI ಕ್ಲರ್ಕ್ ಅಧಿಸೂಚನೆ ಹೊರಡಿಸುತ್ತದೆ. ಇದಲ್ಲದೆ, SBI ಕ್ಲರ್ಕ್ ಅಧಿಸೂಚನೆ 2023 ಬಿಡುಗಡೆ ದಿನಾಂಕವನ್ನು ಇನ್ನೂ ಘೋಷಿಸಲಾಗಿಲ್ಲ. ಅಧಿಕಾರಿಗಳು ನಿಖರವಾದ ವೇಳಾಪಟ್ಟಿಯನ್ನು ಪ್ರಕಟಿಸಿದಾಗ ಈ ಬಗ್ಗೆ ಸ್ಪಷ್ಟನೆ ಸಿಗಲಿದೆ.

SBI ನಲ್ಲಿ ಕೆಲಸ ಮಾಡಲು ಆಸಕ್ತಿನಾ? ಹಾಗಾದ್ರೆ ಬೇಕಾದಷ್ಟು ಜಾಬ್​ಗಳು ಖಾಲಿ ಇವೆ Read More »

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ| ಮದ್ಯ ಕುಡಿಸಿ ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಬಳ್ಳಾರಿಯ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಅಪಹರಿಸಿದ ದುಷ್ಕರ್ಮಿಗಳು ಕೊಪ್ಪಳಕ್ಕೆ ಕರೆತಂದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ವಿದ್ಯಾರ್ಥಿನಿಯನ್ನು ಕಿಡ್ನ್ಯಾಪ್ ಮಾಡಿದ ಕಿರಾತಕರು ಕೊಪ್ಪಳದ ಸಣಾಪುರ ಬಳಿಯ ಹೋಟೆಲ್ ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಸಂಬಂಧ ನವೀನ್, ಸಾಕೀವ್, ತನು ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಯುವತಿ ಬಳ್ಳಾರಿಯ ಕಾಲೇಜೊಂದರಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ನಿಮ್ಮ ಅಣ್ಣ ಬಂದಿದ್ದಾನೆಂದು ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ಹೊರಕ್ಕೆ ಕರೆಯಿಸಿ ನಂತರ ಆಟೋದಲ್ಲಿ ಕಿಡ್ನ್ಯಾಪ್

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ| ಮದ್ಯ ಕುಡಿಸಿ ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ Read More »