ರಾಜ್ಯ

ಗೃಹಲಕ್ಷ್ಮಿ‌ಹಣ ಲೆಕ್ಕದಲ್ಲಿ ಎಡವಿದ ಸಚಿವೆ| ಆರ್ಥಿಕ ಇಲಾಖೆಯನ್ನು ಹೊಣೆ ಮಾಡಿದ ಡಿಸಿಎಂ

ಸಮಗ್ರ ನ್ಯೂಸ್: ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಗೃಹಲಕ್ಷ್ಮಿ ಯೋಜನೆಯ ಅನುದಾನದ ವಿಚಾರವಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಭಾರೀ ಜಟಾಪಟಿ ನಡೆದಿದೆ. ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಕ್ಕಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ವಿಷಾದ ವ್ಯಕ್ತಪಡಿಸಿದ ಪ್ರಸಂಗ ನಡೆದರೆ, ಮತ್ತೊಂದೆಡೆ ಸಚಿವೆ ಬೆನ್ನಿಗೆ ನಿಂತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಣಕಾಸು ಇಲಾಖೆಯನ್ನೇ ದೂರುವ ಮೂಲಕ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಅವರ ಖಾತೆಯತ್ತ ಬೊಟ್ಟು ಮಾಡಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಗೃಹಲಕ್ಷ್ಮಿ ಯೋಜನೆಗೆ […]

ಗೃಹಲಕ್ಷ್ಮಿ‌ಹಣ ಲೆಕ್ಕದಲ್ಲಿ ಎಡವಿದ ಸಚಿವೆ| ಆರ್ಥಿಕ ಇಲಾಖೆಯನ್ನು ಹೊಣೆ ಮಾಡಿದ ಡಿಸಿಎಂ Read More »

ಕುಡ್ಲ ಟ್ರೋಫಿ ಕ್ರಿಕೆಟ್ ಪಂದ್ಯಾಟ| ಸಂತ ಸೆಬೆಸ್ಟಿಯನ್ ಪೆರ್ಮನ್ನುರ್ ಚಾಂಪಿಯನ್

ಸಮಗ್ರ ನ್ಯೂಸ್: ವಾಮಂಜೂರಿನ ಸಂತೋಷನಗರ ಮೈದಾನದಲ್ಲಿ ಎಸ್‌.ಜೆ.ಸಿ. ಫ್ರೆಂಡ್ಸ್ ವಾಮಂಜೂರು, ರೊ ಇಂಟರ್‌ನ್ಯಾಷನಲ್ ಹಾಗೂ ಗಜಾನನ ಕ್ರಿಕೆಟರ್ಸ್ (ಪ್ರಜ್ವಲ್ ಫಿಲ್ಮ್ಸ್) ಇವರ ಪ್ರಾಯೋಜಕತ್ವದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಚರ್ಚ್ ಹಂತದ ಎರಡು ದಿನಗಳ ಅಂಡರ್‌ಆರ್ಮ್ ಕ್ರಿಕೆಟ್ ಪಂದ್ಯಾಟವು ಡಿಸೆಂಬರ್ 13 ಮತ್ತು 14ರಂದು ಅತ್ಯಂತ ಯಶಸ್ವಿಯಾಗಿ ನಡೆಯಿತು. ಈ ಪಂದ್ಯಾಟದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ವಿವಿಧ ಚರ್ಚ್‌ಗಳಿಂದ ಒಟ್ಟು 19 ತಂಡಗಳು ಭಾಗವಹಿಸಿದ್ದವು. ಅಂತಿಮ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಸಂತ ಸೆಬೆಸ್ಟಿಯನ್ ಪೆರ್ಮನ್ನುರ್ ಕ್ರಿಕೆಟ್ ತಂಡವು ಕುಡ್ಲ ಟ್ರೋಫಿಯನ್ನು

ಕುಡ್ಲ ಟ್ರೋಫಿ ಕ್ರಿಕೆಟ್ ಪಂದ್ಯಾಟ| ಸಂತ ಸೆಬೆಸ್ಟಿಯನ್ ಪೆರ್ಮನ್ನುರ್ ಚಾಂಪಿಯನ್ Read More »

ಸುಬ್ರಹ್ಮಣ್ಯ ರೋಡ್ ರೈಲ್ವೆ ಸ್ಟೇಷನ್ ನಲ್ಲಿ ಕಾಮಗಾರಿ ವೇಳೆ ಉರುಳಿ ಬಿದ್ದ ಕ್ರೇನ್

ಸಮಗ್ರ ನ್ಯೂಸ್: ಸುಬ್ರಹ್ಮಣ್ಯ ರೋಡ್ ನೆಟ್ಟಣ ರೈಲು ನಿಲ್ದಾಣದಲ್ಲಿ ಕಾಮಗಾರಿ ನಿರ್ವಹಿಸುವ ವೇಳೆ ಅಡಿಭಾಗ ಕುಸಿದು ಕ್ರೇನ್ ರೈಲು ಹಳಿಗೆ ಉರುಳಿ ಬಿದ್ದ ಘಟನೆ ಬುಧವಾರ ಸಂಭವಿಸಿದೆ. ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಬುಧವಾರ ಕ್ರೇನ್ ಪ್ಲಾಟ್ ಫಾರ್ಮ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಉರುಳಿ ರೈಲು ಹಳಿ ಮೇಲೆ ಅಡ್ಡಲಾಗಿ ಬಿದ್ದಿದೆ. ಪ್ಲಾಟ್ ಫಾರ್ಮ್ ನ ಸೈಡ್ ನಲ್ಲಿದ್ದ ಕ್ರೇನ್ ಪ್ಲಾಟ್ ಫಾರ್ಮ್ ನ ಬದಿ ಕುಸಿದ ಪರಿಣಾಮ ನಿಯಂತ್ರಣ ತಪ್ಪಿ

ಸುಬ್ರಹ್ಮಣ್ಯ ರೋಡ್ ರೈಲ್ವೆ ಸ್ಟೇಷನ್ ನಲ್ಲಿ ಕಾಮಗಾರಿ ವೇಳೆ ಉರುಳಿ ಬಿದ್ದ ಕ್ರೇನ್ Read More »

ಪ.ಪೂ ಉಪನ್ಯಾಸಕರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಮಧು ಬಂಗಾರಪ್ಪ

ಸಮಗ್ರ ನ್ಯೂಸ್: ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರ ಕಾರ್ಯಭಾರವನ್ನು ಕಡಿಮೆ ಮಾಡಲು ಹಾಲಿ ಇರುವ ನಿಯಮವನ್ನು ಹಿಂಪಡೆಯುವ ಬಗ್ಗೆ ಸದಸ್ಯರ ಜೊತೆ ಚರ್ಚೆ ಮಾಡುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪನವರು ವಿಧಾನಪರಿಷತ್‍ನಲ್ಲಿ ಹೇಳಿದ್ದಾರೆ. ಸದಸ್ಯ ಬೋಜೇಗೌಡರ ಪ್ರಶ್ನೆಗೆ ಉತ್ತರಿಸಿದ ಅವರು, ಕೆಸಿಎಸ್?ಆರ್ ನಿಯಮಗಳ ಪ್ರಕಾರ ಯಾವುದೇ ನಿಯಮಗಳಲ್ಲಿ ಸರ್ಕಾರ ನಿಗದಿಪಡಿಸಿದ ಕಾರ್ಯಭಾರ ಮತ್ತು ಕರ್ತವ್ಯದ ಪ್ರಕಾರ ಕಾರ್ಯ ನಿರ್ವಹಿಸಬೇಕು. ಆದರೆ ಪ್ರಸ್ತುತ ಸರ್ಕಾರಿ/ಅನುದಾನಿತ/ಅನುದಾನರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯ

ಪ.ಪೂ ಉಪನ್ಯಾಸಕರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಮಧು ಬಂಗಾರಪ್ಪ Read More »

ಉಪ್ಪಿನಂಗಡಿ: ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ

ಸಮಗ್ರ ನ್ಯೂಸ್: `ಉಬಾರ್ ಕಪ್’ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ ನಡೆಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆ ಪುತ್ತೂರಿನ ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯಲ್ಲಿ ಡಿ.14ರಂದು‌ ನಡೆದ ಹೊನಲು ಬೆಳಕಿನ `ಉಬಾರ್ ಕಪ್’ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಮಂಗಳೂರಿನ ರೋಲನ್ ಪಿಂಟೋ ಎಂಬ ತೀರ್ಪುಗಾರನ ಕೆಲ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಂಗಳೂರಿನ ಕಾನಾ-ಕೆಜಿಎಫ್ ನಡುವೆ ನಡೆಯುತ್ತಿದ್ದ ಸೆಮಿಫೈನಲ್ ಪಂದ್ಯಾಟ ನಡೆಯುತ್ತಿತ್ತು, ಈ ವೇಳೆ ಅಂಪೈರ್ ರೋಲನ್ ಪಿಂಟೋ ಎಲ್‍ಬಿಡಬ್ಲ್ಯು

ಉಪ್ಪಿನಂಗಡಿ: ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ Read More »

ಸುರತ್ಕಲ್: ಸಹೋದರಿಯನ್ನೇ ಅತ್ಯಾಚಾರಗೈದ ಸಹೋದರ| ಪೈಶಾಚಿಕ ಕೃತ್ಯಕ್ಕೆ ಬೆಚ್ಚಿದ ಕರಾವಳಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ದೊಡ್ಡಪ್ಪನ ಮಗಳಾದ ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಸೋದರನೇ ಅತ್ಯಾಚಾರ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಯಲ್ಲಿ ನಡೆದಿದೆ. ಕುಳಾಯಿ ನಿವಾಸಿ ವಿಠಲ ಕುಂಬಾರ ಎಂಬ ಆರೋಪಿಯು ದೊಡ್ಡಪ್ಪನ ಮಗಳನ್ನು ಬೆದರಿಸಿ ಮನೆಯಲ್ಲಿ ಯಾರೂ ಇಲ್ಲದಾಗ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ್ದಾನೆ. ಈ ವಿಚಾರವನ್ನು ಮನೆಯಲ್ಲಿ ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎಂದು ಸಂತ್ರಸ್ತೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ

ಸುರತ್ಕಲ್: ಸಹೋದರಿಯನ್ನೇ ಅತ್ಯಾಚಾರಗೈದ ಸಹೋದರ| ಪೈಶಾಚಿಕ ಕೃತ್ಯಕ್ಕೆ ಬೆಚ್ಚಿದ ಕರಾವಳಿ Read More »

ಹವಾಮಾನ ವರದಿ| ರಾಜ್ಯದಲ್ಲಿ ಮುಂದುವರಿದ ಚಳಿ| ಹಲವು ಜಿಲ್ಲೆಗಳಲ್ಲಿ ಕುಸಿದ ತಾಪಮಾನ; ಆರೆಂಜ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯದಾದ್ಯಂತ ದಾಖಲಾಗುತ್ತಿರುವ ತೀವ್ರ ಚಳಿಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಕೆಲವು ದಿನಗಳಿಂದೀಚೆಗೆ ಕನಿಷ್ಠ ತಾಪಮಾನವು ಗಣನೀಯವಾಗಿ ಕುಸಿಯುತ್ತಿದ್ದು, ವಿಶೇಷವಾಗಿ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಶೀತದ ಅಲೆಯು ಆವರಿಸುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಡಿಸೆಂಬರ್ 14 ರಿಂದ 16 ರವರೆಗೆ ರಾಜ್ಯದಲ್ಲಿ ಚಳಿಯ ಜೊತೆಗೆ ಶೀತಗಾಳಿ ಬೀಸುವ ಸಾಧ್ಯತೆಯಿದೆ. ಅತ್ಯಂತ ತೀವ್ರ ಚಳಿಯ ಕಾರಣ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ವರದಿ| ರಾಜ್ಯದಲ್ಲಿ ಮುಂದುವರಿದ ಚಳಿ| ಹಲವು ಜಿಲ್ಲೆಗಳಲ್ಲಿ ಕುಸಿದ ತಾಪಮಾನ; ಆರೆಂಜ್ ಅಲರ್ಟ್ ಘೋಷಣೆ Read More »

ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಇನ್ನಿಲ್ಲ

ಸಮಗ್ರ ನ್ಯೂಸ್: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ(94) ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. 6 ಬಾರಿ ಶಾಸಕರಾಗಿದ್ದಂತ ಶಾಮನೂರು ಶಿವಶಂಕರಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಅವರು ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಕಳೆದ ಒಂದು ತಿಂಗಳಿನಿಂದ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 95 ವರ್ಷದಲ್ಲೂ ಶಾಸಕರಾಗಿ ಗುರುತಿಸಿಕೊಂಡಿದ್ದ ಶಿವಶಂಕರಪ್ಪ ಏಕೈಕ ಹಿರಿಯ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದವರು ಇದೀಗ ಅವರು ಶಿವೈಕ್ಯರಾಗಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಇನ್ನಿಲ್ಲ Read More »

ಆಂದ್ರಪ್ರದೇಶ: ಕಣಿವೆಗೆ ಉರುಳಿದ ಬಸ್| ಕನಿಷ್ಠ 22 ಮಂದಿ ಸಾವು

ಸಮಗ್ರ ನ್ಯೂಸ್: ಆಂಧ್ರಪ್ರದೇಶದಲ್ಲಿ ಬಸ್‌ವೊಂದು ಕಣಿವೆಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 9 ಮಂದಿ ಮೃತಪಟ್ಟಿದ್ದು, 22 ಜನರು ಗಾಯಗೊಂಡಿದ್ದಾರೆ. ಚಿತ್ತೂರಿನಿಂದ ತೆಲಂಗಾಣಕ್ಕೆ ತೆರಳುತ್ತಿದ್ದ ಬಸ್ ಮೋತುಗುಡೆಮ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಸ್ತೆಗೆ ಉರುಳಿಬಿದ್ದಿದೆ. ಬಸ್‌ನಲ್ಲಿ ಚಾಲಕ ಮತ್ತು ಕ್ಲೀನರ್ ಸೇರಿದಂತೆ 37 ಜನರು ಪ್ರಯಾಣಿಸುತ್ತಿದ್ದರು. ದಟ್ಟ ಮಂಜು ಆವರಿಸಿದ್ದರಿಂದ ಚಾಲಕನಿಗೆ ತಿರುವು ಕಾಣಿಸದೆ ಅಪಘಾತ ಸಂಭವಿಸಿರಬಹುದು ಎಂದು ಹೇಳಲಾಗಿದೆ. ಈ ಕುರಿತು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಬರ್ದಾರ್ ಮಾಹಿತಿ ನೀಡಿದ್ದು, ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯ ದುರ್ಗಾ ದೇವಸ್ಥಾನದ

ಆಂದ್ರಪ್ರದೇಶ: ಕಣಿವೆಗೆ ಉರುಳಿದ ಬಸ್| ಕನಿಷ್ಠ 22 ಮಂದಿ ಸಾವು Read More »

ಖರ್ಗೆ ಹಠಾವೋ ಪ್ರಿಯಾಂಕಾ ಲಾವೋ| ಕಾಂಗ್ರೆಸ್ ನಲ್ಲಿ ಅಧ್ಯಕ್ಷ ಬದಲಾವಣೆಗೆ ಒತ್ತಾಯ

ಸಮಗ್ರ ನ್ಯೂಸ್: ದೇಶದ ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್‌ನಲ್ಲಿ ಆಂತರಿಕ ಬಿರುಗಾಳಿಯೊಂದು ಭುಗಿಲೆದ್ದಿದೆ. ಒಂದೆಡೆ ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಿಎಂ ಕುರ್ಚಿ ಅಲುಗಾಡುತ್ತಿರುವ ಸಂಗತಿ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದ್ದರೆ, ಇತ್ತ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪದಚ್ಯುತಿಗೆ ಒತ್ತಾಯ ಕೇಳಿಬಂದಿದೆ. ದೇಶದ ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್‌ನಲ್ಲಿ ಆಂತರಿಕ ಬಿರುಗಾಳಿಯೊಂದು ಭುಗಿಲೆದ್ದಿದೆ. ಒಂದೆಡೆ ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಿಎಂ ಕುರ್ಚಿ ಅಲುಗಾಡುತ್ತಿರುವ ಸಂಗತಿ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದ್ದರೆ, ಇತ್ತ ದೆಹಲಿಯಲ್ಲಿ ಎಐಸಿಸಿ

ಖರ್ಗೆ ಹಠಾವೋ ಪ್ರಿಯಾಂಕಾ ಲಾವೋ| ಕಾಂಗ್ರೆಸ್ ನಲ್ಲಿ ಅಧ್ಯಕ್ಷ ಬದಲಾವಣೆಗೆ ಒತ್ತಾಯ Read More »