ರಾಜ್ಯ

ಕಾವೇರಿ ವಿವಾದ| ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆದ ನಟ ಪ್ರೇಮ್

ಸಮಗ್ರ ನ್ಯೂಸ್: ಕಾವೇರಿ ನದಿ ನೀರಿಗಾಗಿ ನಡೆದ ಕರ್ನಾಟಕ ಬಂದ್ ನಲ್ಲಿ ಭಾಗಿಯಾಗಿದ್ದ ನಟ ನೆನಪಿರಲಿ ಪ್ರೇಮ್, ಇಂದು(ಅ.1) ಪತ್ರ ಚಳವಳಿಯಲ್ಲಿ ಭಾಗಿಯಾಗಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಕರೆಕೊಟ್ಟಿದ್ದ ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆಯಿರಿ ಚಳವಳಿಯಲ್ಲಿ ಭಾಗಿಯಾಗಿ, ತಮ್ಮ ರಕ್ತದಲ್ಲಿ ಪ್ರೇಮ್ ಪ್ರಧಾನಿಗೆ ಪತ್ರ ಬರೆದಿದ್ದಾರೆ. ಕನ್ನಡ ನೆಲ-ಜಲ ವಿಷಯದಲ್ಲಿ ಹೋರಾಡಲು ಪ್ರೇಮ್ ಯಾವತ್ತಿಗೂ ಮುಂದಾಗಿದ್ದು, ಅನೇಕ ಹೋರಾಟಗಳಲ್ಲೂ ಅವರು ಭಾಗಿಯಾಗಿದ್ದಾರೆ. ಇದೀಗ ರಕ್ತದಲ್ಲಿ ಪತ್ರ ಬರೆದು, ಆ ಪತ್ರವನ್ನು ಪ್ರಧಾನಿ ಕಳುಹಿಸಿದ್ದಾರೆ. ಕಾವೇರಿ ವಿಷಯದಲ್ಲಿ ಮಧ್ಯಸ್ತಿಕೆ

ಕಾವೇರಿ ವಿವಾದ| ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆದ ನಟ ಪ್ರೇಮ್ Read More »

ಶಿವಮೊಗ್ಗ: ಟಿಪ್ಪರ್ ಲಾರಿ, ಎರಡು ಬೈಕ್ ಮುಖಾಮುಖಿ ಡಿಕ್ಕಿ| ಮೂವರು ಸ್ಥಳದಲ್ಲೇ ಮೃತ್ಯು

ಸಮಗ್ರ ನ್ಯೂಸ್: ಶಿವಮೊಗ್ಗದ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಕಲ್ಲಿಹಾಳ್ – ಅರಹತೊಳಲು ರಸ್ತೆಯಲ್ಲಿ ಟಿಪ್ಪರ್ ಲಾರಿ ಮತ್ತು ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೆ. 30ರಂದು ವರದಿಯಾಗಿದೆ. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಒಂದೇ ಬೈಕ್ ನಲ್ಲಿದ್ದ ಮೂವರು ಲಾರಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಮತ್ತೊಂದು ಬೈಕ್ ನಲ್ಲಿದ್ದ ಭದ್ರಾವತಿ ತಾಲೂಕು ಅರಹತೊಳಲು ಗ್ರಾಮದ ಗಗನ್ ಎಂಬುವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹೊಳೆಹೊನ್ನೂರು ಠಾಣೆ ಪೊಲೀಸರು

ಶಿವಮೊಗ್ಗ: ಟಿಪ್ಪರ್ ಲಾರಿ, ಎರಡು ಬೈಕ್ ಮುಖಾಮುಖಿ ಡಿಕ್ಕಿ| ಮೂವರು ಸ್ಥಳದಲ್ಲೇ ಮೃತ್ಯು Read More »

ಬೆಂಗಳೂರು ಕಂಬಳಕ್ಕೆ ನಡಿತಿದೆ ಅದ್ಧೂರಿ ತಯಾರಿ..

ಸಮಗ್ರ ನ್ಯೂಸ್: ಬೆಂಗಳೂರು ಕಂಬಳಕ್ಕೆ ಅದ್ದೂರಿಯಾಗಿ ತಯಾರಿ ನಡೆಯುತ್ತಿದೆ. ನವೆಂಬರ್25 ಮತ್ತು 26 ರಂದು ಬೆಂಗಳೂರಿನಲ್ಲಿ ಕಂಬಳ ನಡೆಯಲಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ನಡೆಯಲಿದ್ದು, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಬೆಂಗಳೂರು ಕಂಬಳ ನಡೆಯಲಿದೆ. ಬೆಂಗಳೂರು ಕಂಬಳದಲ್ಲಿ 125ಕ್ಕೂ ಅಧಿಕ ಜೋಡಿ ಕೋಣಗಳು ಭಾಗವಹಿಸಲಿದೆ. ಅಷ್ಟೇ ಅಲ್ಲದೇ ಬೆಂಗಳೂರು ಕಂಬಳದಲ್ಲಿ ವಿಶೇಷ ತಾರಾ ಮೆರಗು ಇರಲಿದೆ. ಅದೇನಂದ್ರೆ ನಟ ರಜನಿಕಾಂತ್,ಬಾಲಿವುಡ್ ನಟಿ ಐಶ್ವರ್ಯಾರೈ ವಿಶೇಷ ತಾರಾ ಮೆರಗು ಇರಲಿದ್ದು ಸ್ಯಾಂಡಲ್ ವುಡ್ ನ

ಬೆಂಗಳೂರು ಕಂಬಳಕ್ಕೆ ನಡಿತಿದೆ ಅದ್ಧೂರಿ ತಯಾರಿ.. Read More »

ಹಾಸ್ಯ ನಟ ನಾಗಭೂಷಣ್ ಕಾರು ಅಪಘಾತ: ಪಾದಾಚಾರಿ ಸಾವು

ಸಮಗ್ರ ನ್ಯೂಸ್:‌ ಕನ್ನಡ ಚಿತ್ರರಂಗದಲ್ಲಿ ಹಾಸ್ಯ ನಟ ನಾಗಭೂಷಣ್ ನ ಕಾರು ಅಪಘಾತಕ್ಕೆ ಒಳಗಾಗಿ ದಾರಿ ಪಾದಾಚಾರಿ ಸಾವನಪ್ಪಿ ಘಟನೆ ಸೆ. 30 ಕೋಣನಕುಂಟೆ ಕ್ರಾಸ್​ ಬಳಿ ಸಂಭವಿಸಿದೆ. ಮೃತರನ್ನು ಪ್ರೇಮಾ​ ಎಸ್​. (48) ಎಂದು ಗುರುತಿಸಲಾಗಿದೆ. ಕೃಷ್ಣ ಬನ್ನೇರುಘಟ್ಟದ ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಫುಟ್ ಪಾತ್ ಮೇಲೆ ವಾಕಿಂಗ್ ಮಾಡ್ತಿದ್ದಾಗ ಘಟನೆ ಸಂಭವಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಮಾ ಮತ್ತು ಕೃಷ್ಣ ದಂಪತಿಯ ಪುತ್ರ ಪಾರ್ಥ ಕೆ. ಅವರು ದೂರು ನೀಡಿದ್ದಾರೆ. ನಾಗಭೂಷಣ್

ಹಾಸ್ಯ ನಟ ನಾಗಭೂಷಣ್ ಕಾರು ಅಪಘಾತ: ಪಾದಾಚಾರಿ ಸಾವು Read More »

ಬೆಂಗಳೂರು: ಯುವತಿಯನ್ನು ಬೆನ್ನಟ್ಟಿ ಮುತ್ತು ಕೊಟ್ಟ ಕಾಮುಕ ಅಂದರ್

ಸಮಗ್ರ ನ್ಯೂಸ್: ವಿಚಿತ್ರ ಬೀದಿ ಕಾಮುಕನನ್ನು (Amorous) ಹೈಗ್ರೌಂಡ್ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಎಂಬಿಎ ಓದುತ್ತಿದ್ದ ಅಂತಾರಾಜ್ಯದ ಯುವತಿಯೊಬ್ಬರು ವಸಂತ ನಗರ ಪಿಜಿಯಲ್ಲಿದ್ದು, ನಿತ್ಯ ಪಿಜಿಯಿಂದ ಕಾಲೇಜಿಗೆ ಹೋಗುವಾಗ, ಮುಂಜಾನೆ ವಾಕಿಂಗ್ ಹೋಗುವಾಗ ಆರೋಪಿಯು ಹಿಂಬಾಲಿಸಿಕೊಂಡು ಹೋಗಿ ಹಿಂಬದಿಗೆ ಹೊಡೆದು, ತಬ್ಬಿಕೊಂಡು ಮುತ್ತಿಟ್ಟು ಎಸ್ಕೇಪ್ ಆಗುತ್ತಿದ್ದ. ಮೆಕಾನಿಕ್ ಕೆಲಸ ಮಾಡಿಕೊಂಡಿದ್ದ ಆರೋಪಿಯ ಕಿರುಕುಳ (Harassment) ತಾಳಲಾರದೆ ಯುವತಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಕೇಸ್

ಬೆಂಗಳೂರು: ಯುವತಿಯನ್ನು ಬೆನ್ನಟ್ಟಿ ಮುತ್ತು ಕೊಟ್ಟ ಕಾಮುಕ ಅಂದರ್ Read More »

ಮೈಸೂರು: ನಾಲೆಗೆ ಬಿದ್ದ ಪುತ್ರಿಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಮೂವರು ನೀರುಪಾಲು

ಸಮಗ್ರ ನ್ಯೂಸ್: ನಾಲೆಗೆ ಬಿದ್ದ ಪುತ್ರಿಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಮೂವರು ನೀರುಪಾಲಾದ ಘಟನೆ ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ ಚಂಗೌಡನಹಳ್ಳಿ ಗ್ರಾಮದಲ್ಲಿ ನಡದಿದೆ. ಘಟನೆಯಲ್ಲಿ ಮಹಮ್ಮದ್ ಕಪೀಲ್ (42), ಶಾವರ ಭಾನು (35), ಶಾಹೀರಾ ಭಾನು (20)ಮೃತಪಟ್ಟಿದ್ದಾರೆ. ಆಕಸ್ಮಿಕವಾಗಿ ಕಾಲು ಜಾರಿ ನಾಲೆಗೆ ಬಿದ್ದ ಮಗಳನ್ನು ಕಾಪಾಡಲು ಹೋಗಿ ಅಪ್ಪ, ಅಮ್ಮ ಹಾಗೂ ಪುತ್ರಿ ಮೂವರೂ ಸಾವನ್ನಪ್ಪಿದ್ದಾರೆ. ನುಗು ಜಲಾಶಯದ (Nugu Reservoir) ಬಲದಂಡೆ ನಾಲೆಯಲ್ಲಿ ಕೈ ಕಾಲು ತೊಳೆಯಲು ಹೋದಾಗ ಘಟನೆ ನಡೆದಿದೆ. ಶಾಹೀರಾ

ಮೈಸೂರು: ನಾಲೆಗೆ ಬಿದ್ದ ಪುತ್ರಿಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಮೂವರು ನೀರುಪಾಲು Read More »

ಮಡಿಕೇರಿ: ಆಹಾರ ಪದಾರ್ಥ ವ್ಯರ್ಥ ಮಾಡಬೇಡಿ ಶಾಸಕ ಡಾ.ಮಂತರ್ ಗೌಡ

ಸಮಗ್ರ ನ್ಯೂಸ್: ಆಹಾರ ಪದಾರ್ಥಗಳನ್ನು ಎಂದಿಗೂ ವ್ಯರ್ಥ ಮಾಡದೇ ಅಗತ್ಯಕ್ಕೆ ತಕ್ಕಷ್ಟು ಸೇವಿಸಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸೆ.30 ರಂದು ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಆಹಾರ ನಷ್ಟ ಮತ್ತು ತ್ಯಾಜ್ಯ ಜಾಗೃತಿ ದಿನಾಚರಣೆ ಕಾರ್ಯಕ್ರಮದಲ್ಲಿ ಕಿವಿಮಾತು ಹೇಳಿದರು. ಕೊಡಗು ಜಿಲ್ಲಾ ಪಂಚಾಯತ್, ಸ್ವಚ್ಛ ಭಾರತ್ ಮಿಷನ್ (ಗ್ರಾ.)ವತಿಯಿಂದ ಸ್ವಚ್ಛತೆಯೇ ಸೇವೆ ಅಭಿಯಾನದ ಅಂಗವಾಗಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಆಹಾರ ನಷ್ಟ ಮತ್ತು ತ್ಯಾಜ್ಯ ಜಾಗೃತಿ ದಿನಾಚರಣೆ ಕಾರ್ಯಕ್ರಮದ ಸಿಗ್ನೇಚರ್ ಕ್ಯಾಂಪೇನ್‍ನಲ್ಲಿ ಸಹಿ ಮಾಡಿ,

ಮಡಿಕೇರಿ: ಆಹಾರ ಪದಾರ್ಥ ವ್ಯರ್ಥ ಮಾಡಬೇಡಿ ಶಾಸಕ ಡಾ.ಮಂತರ್ ಗೌಡ Read More »

ಮನೆಕಟ್ಟುವವರಿಗೆ ಶಾಕ್| ಸಿಮೆಂಟ್ ದರದಲ್ಲಿ ಭಾರೀ ಹೆಚ್ಚಳ ಸಾಧ್ಯತೆ

ಸಮಗ್ರ ನ್ಯೂಸ್: ಸಿಮೆಂಟ್‌ ದರವು ಅಕ್ಟೋಬರ್‌ 1ರಿಂದ ಮತ್ತೆ ಏರಿಕೆಯಾಗಲಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ. ದಕ್ಷಿಣ ವಲಯದಲ್ಲಿ ಚೀಲವೊಂದಕ್ಕೆ 30ರಿಂದ 40 ರೂ. ಏರಿಕೆಯಾಗಲಿದ್ದರೆ, ಉತ್ತರ ವಲಯದಲ್ಲಿ 10 ರಿಂದ 20 ರೂ. ಏರಿಕೆಯಾಗುವ ಸಂಭವವಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಈಗಾಗಲೇ ಕಳೆದ ಒಂದು ತಿಂಗಳಲ್ಲಿ ಸಿಮೆಂಟ್‌ ದರ ಶೇ. 12ರಿಂದ 13ರಷ್ಟು ಹೆಚ್ಚಾಗಿದೆ. ಭಾರತದಾದ್ಯಂತ ಸಿಮೆಂಟ್‌ನ ಸರಾಸರಿ ಬೆಲೆ ಪ್ರಸ್ತುತ ಪ್ರತಿ 50 ಕೆಜಿ ಚೀಲಕ್ಕೆ 382 ರೂ.ಗೆ ತಲುಪಿದೆ. ಈಶಾನ್ಯ ಭಾಗಗಳಲ್ಲಿ ಸಿಮೆಂಟ್‌

ಮನೆಕಟ್ಟುವವರಿಗೆ ಶಾಕ್| ಸಿಮೆಂಟ್ ದರದಲ್ಲಿ ಭಾರೀ ಹೆಚ್ಚಳ ಸಾಧ್ಯತೆ Read More »

ಕೊಟ್ಟಿಗೆಹಾರ: ಹಿಟ್ ಆ್ಯಂಡ್ ರನ್| ವ್ಯಕ್ತಿ ಗಂಭೀರ ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಕೊಟ್ಟಿಗೆಹಾರ ಸಮೀಪದ ಬಣಕಲ್ ಪೇಟೆಯಲ್ಲಿ ಮೂಡಿಗೆರೆಯಿಂದ ಕೊಟ್ಟಿಗೆಹಾರ ಕಡೆಗೆ ಸಾಗುತ್ತಿದ್ದ ಅಪರಿಚಿತ ಜಿಪ್ಸಿ ವಾಹನ ವ್ಯಕ್ತಿಗೆ ಡಿಕ್ಕಿ ಹೊಡೆದು ವಾಹನ ನಿಲ್ಲಿಸದೇ ಹೋಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.ವಿನಯ್ ಎಂಬ ಯುವಕ ಗಾಯಾಳಾದ ವ್ಯಕ್ತಿ. ಘಟನೆಯ ಹಿನ್ನಲೆ: ಬಣಕಲ್ ಸಮೀಪದ ಮತ್ತಿಕಟ್ಟೆಯಿಂದ ಬಿ.ಎಸ್ ರಕ್ಷಿತ್ ಅವರ ಬೈಕ್ನಲ್ಲಿ ವಿನಯ್ ಸೇರಿ ಅಂಗಡಿ ದಿನಸಿ ತರಲು ಬಣಕಲ್ ಗೆ ಬಂದಿದ್ದರು. ಬೈಕನ್ನು ಆಲಂ ಸೂಪರ್ ಮಾರ್ಕೆಟ್ ಬಳಿ ನಿಲ್ಲಿಸಿ ಇತರ ವಸ್ತುಗಳನ್ನು ಖರೀದಿಸಲು ರಾತ್ರಿ 8ಗಂಟೆ

ಕೊಟ್ಟಿಗೆಹಾರ: ಹಿಟ್ ಆ್ಯಂಡ್ ರನ್| ವ್ಯಕ್ತಿ ಗಂಭೀರ ಆಸ್ಪತ್ರೆಗೆ ದಾಖಲು Read More »

ಕೊಟ್ಟಿಗೆಹಾರ: ಉತ್ತಮ ಸಾರ್ವಜನಿಕ ಸೇವೆ, ಜನಸ್ನೇಹಿ ಆಡಳಿತ| ಜಾವಳಿ ಗ್ರಾ.ಪಂ.ಗೆ ಪ್ರಥಮ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರದ ಗರಿ

ಸಮಗ್ರ ನ್ಯೂಸ್: ಬಾಳೂರು ಹೋಬಳಿಯ ಜಾವಳಿ ಗ್ರಾ.ಪಂ.ಗೆ ಜನಸ್ನೇಹಿ ಆಡಳಿತ, ಸಮಗ್ರ ಗ್ರಾಮಾಭಿವೃದ್ದಿ, ನರೇಗಾ ಸಮರ್ಪಕ ಬಳಕೆಯಿಂದ ಜಾವಳಿ ಗ್ರಾ.ಪಂ.ಗೆ ಗಾಂಧಿ ಗ್ರಾಮದ ಪುರಸ್ಕಾರದ ಗರಿ ಲಭಿಸಿದೆ. ಜಾವಳಿ ಹೇಮಾವತಿ ನದಿಯ ಉಗಮಸ್ಥಾನ. ಹೇಮೆಯ ಮಡಿಲಲ್ಲಿ ಈ ಗ್ರಾಮ ಶೋಭಿಸುತ್ತಿದೆ. ಸರ್ಕಾರದ ಅನುದಾನಗಳನ್ನು ಹಸಿರು ತಾಣದಲ್ಲಿ ಸಮರ್ಪಕವಾಗಿ ಬಳಸಿ ಸೌಲಭ್ಯದಿಂದ ಜನ ವಂಚಿತರಾಗಬಾರದೆಂಬ ಉತ್ತಮ ಉದ್ದೇಶದಿಂದ ಜಾವಳಿ ಗ್ರಾಮ ಸಂಪತ್ಬರಿತವಾಗಿ ಬೆಳೆಯಲು ಸಹಕಾರಿಯಾಗಿದೆ. ಕಳೆದ ವರ್ಷ ನೆರೆಯ ಗ್ರಾಮ ಸುಂಕಸಾಲೆ ಮೂರು ಬಾರಿ ಗಾಂಧಿ ಗ್ರಾಮ ಪುರಸ್ಕಾರ

ಕೊಟ್ಟಿಗೆಹಾರ: ಉತ್ತಮ ಸಾರ್ವಜನಿಕ ಸೇವೆ, ಜನಸ್ನೇಹಿ ಆಡಳಿತ| ಜಾವಳಿ ಗ್ರಾ.ಪಂ.ಗೆ ಪ್ರಥಮ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರದ ಗರಿ Read More »