ರಾಜ್ಯ

ಹುಕ್ಕಾ ಬಾರ್ ನಿಷೇಧಕ್ಕೆ ಕೋಟ್ಪಾ ಕಾಯ್ದೆ ಗೆ ಮಹತ್ವದ ತಿದ್ದುಪಡಿ

ಸಮಗ್ರ ನ್ಯೂಸ್: ಹುಕ್ಕಾ ಬಾರ್ ಸೇರಿದಂತೆ ರಾಜ್ಯದಲ್ಲಿ ತಂಬಾಕು ಉತ್ಪನ್ನಗಳನ್ನ ನಿಷೇಧಿಸಲು ಕೋಟ್ಪಾ ಕಾಯ್ದೆಗೆ ತಿದ್ದುಪಡಿ ತರುವುದರ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನ ವಿಕಾಸ ಸೌಧದಲ್ಲಿ ಸೆ.19ರಂದು ಕ್ರೀಡಾ ಸಚಿವ ನಾಗೇಂದ್ರ ಅವರ ಜೊತೆಗೂಡಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ದಿನೇಶ್ ಗುಂಡೂರಾವ್, ಸಾರ್ವಜನಿಕ ಸ್ಥಳಗಳಲ್ಲಿ ಇತರ ತಂಬಾಕು ಉತ್ಪನ್ನಗಳ ನಿಷೇಧಿಸುವ ಬಗ್ಗೆ ಚರ್ಚಿಸಿದರು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ತಂಬಾಕು

ಹುಕ್ಕಾ ಬಾರ್ ನಿಷೇಧಕ್ಕೆ ಕೋಟ್ಪಾ ಕಾಯ್ದೆ ಗೆ ಮಹತ್ವದ ತಿದ್ದುಪಡಿ Read More »

ಗೃಹಲಕ್ಷ್ಮಿ ಹಣ ಜಮೆಯಾಗಿಲ್ವೇ? ಹಾಗಾದ್ರೆ ಈ ಕೆಲ್ಸ ಮೊದಲು ಮಾಡಿ…

ಸಮಗ್ರ ನ್ಯೂಸ್: ಮಹಿಳೆಯರಿಗೆ 2000 ರೂ ನೀಡುವ ‘ಗೃಹಲಕ್ಷ್ಮಿ’ ಯೋಜನೆ ಆರಂಭವಾಗಿದ್ದು, ಸರ್ಕಾರ ಯಜಮಾನಿಯರ ಖಾತೆಗೆ ಹಣ ಜಮಾ ಮಾಡುತ್ತಿದೆ. ಕೆಲವರ ಖಾತೆಗೆ ಹಣ ಜಮಾ ಪ್ರಕ್ರಿಯೆ ನಡೆಯುತ್ತಿದೆ.ಆದರೆ ಕೆಲವು ಮಹಿಳೆಯರ ಖಾತೆಗೆ ಇನ್ನೂ ಹಣ ಜಮಾ ಆಗಿಲ್ಲ. ಕೆಲವರು ನಮಗೆ SMS ಬಂದಿಲ್ಲ ಹೀಗಾಗಿ ನಮ್ಮ ಅರ್ಜಿ ಸಲ್ಲಿಕೆ ಯಶಸ್ವಿಯಾಗಿದೆಯೋ ಅಥವಾ ತಡೆಹಿಡಿಯಲಾಗಿದೆಯೋ ಅಥವಾ ರದ್ದಾಗಿದೆಯೋ ಎನ್ನುವ ಗೊಂದಲದಲ್ಲಿ ಇದ್ದಾರೆ. ಕೆಲವು ತಾಂತ್ರಿಕ ಕಾರಣಗಳಿಂದ ಗೃಹಲಕ್ಷ್ಮಿ ಹಣ ಬರದೇ ಇರಬಹುದು. ಹಾಗಾಗಿ ಕೆಳಗೆ ಸೂಚಿಸಲಾದ ಕೆಲಸಗಳನ್ನು

ಗೃಹಲಕ್ಷ್ಮಿ ಹಣ ಜಮೆಯಾಗಿಲ್ವೇ? ಹಾಗಾದ್ರೆ ಈ ಕೆಲ್ಸ ಮೊದಲು ಮಾಡಿ… Read More »

ಚೈತ್ರಾ ಕುಂದಾಪುರ ಗ್ಯಾಂಗ್ ನ ಪ್ರಮುಖ ಆರೋಪಿ ಅಭಿನವ ಹಾಲಶ್ರೀ ಬಂಧನ

ಸಮಗ್ರ ನ್ಯೂಸ್: ಚೈತ್ರಾ ಕುಂದಾಪುರ ಗ್ಯಾಂಗ್‌ ನಡೆಸಿದ ಐದು ಕೋಟಿ ರೂ. ವಂಚನೆ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ವಿಜಯ ನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿಯ ಹಾಲಸ್ವಾಮಿ ಮಠದ ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಕೊನೆಗೂ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ದಾಖಲಾದ ದಿನದಿಂದಲೇ ನಾಪತ್ತೆಯಾಗಿದ್ದ ಸ್ವಾಮೀಜಿ ಈಗ ಸೆರೆಸಿಕ್ಕಿದ್ದು ಒಡಿಶಾ ರಾಜ್ಯದ ಕಟಕ್‌ನಲ್ಲಿ! ಅಂದರೆ ಊರು ಬಿಟ್ಟು ಎಲ್ಲಾದರೂ ಹೋಗಿ ತಪ್ಪಿಸಿಕೊಳ್ಳುತ್ತೇನೆ ಎಂದು ಹೊರಟಿದ್ದ ಅವರು ಈಗ ಸಿಸಿಬಿಯ ಕೈಗೆ ಸಿಕ್ಕಿಬಿದ್ದಿದ್ದಾರೆ. ಉದ್ಯಮಿ ಗೋವಿಂದ

ಚೈತ್ರಾ ಕುಂದಾಪುರ ಗ್ಯಾಂಗ್ ನ ಪ್ರಮುಖ ಆರೋಪಿ ಅಭಿನವ ಹಾಲಶ್ರೀ ಬಂಧನ Read More »

ಯುಐ ಟೀಸರ್ ಬಿಡುಗಡೆ| ಏನನ್ನೂ ತೋರಿಸದೇ ಪ್ರೇಕ್ಷಕರ ತಲೆಗೆ ಹುಳ ಬಿಟ್ಟ ಉಪ್ಪಿ

ಸಮಗ್ರ ನ್ಯೂಸ್:‌ ಉಪೇಂದ್ರ ಅವರ ಜನ್ಮದಿನವಾದ ಸೆ.18ರಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಯುಐ (UI) ಟೀಸರ್ ಊರ್ವಶಿ ಚಿತ್ರಮಂದಿರದಲ್ಲಿ ಅಭಿಮಾನಿಗಳ ಮುಂದೆ ಅನಾವರಣವಾಗಿದೆ. ಈ ವೇಳೆ ಏನನ್ನೂ ತೋರಿಸದೇ ಪ್ರೇಕ್ಷಕರ ತಲೆಗೆ ಹುಳ ಬಿಟ್ಟಿದ್ದಾರೆ. ಯುಐ ಟೀಸರ್ ಬಿಡುಗಡೆ ಸಂದರ್ಭದಲ್ಲಿ ಶಿವರಾಜ್ ಕುಮಾರ್ ದಂಪತಿ, ದುನಿಯಾ ವಿಜಯ್ ಕೂಡ ಭಾಗಿಯಾಗಿದ್ದು, ದೊಡ್ಡ ಪರದೆ ಮೇಲೆ ‘ಯುಐ’ ಟೀಸರ್​ ರಿಲೀಸ್ ಮಾಡಲಾಗಿದೆ. ಆದರೆ ಅದರಲ್ಲಿ ಏನೂ ಕಾಣಿಸಿಲ್ಲ. ಬರೀ ಶಬ್ದ ಕೇಳಿಸಿದೆ ಅಷ್ಟೇ.ಉಪೇಂದ್ರ ಏನೇ ಮಾಡಿದರೂ ಅದು ತುಂಬ

ಯುಐ ಟೀಸರ್ ಬಿಡುಗಡೆ| ಏನನ್ನೂ ತೋರಿಸದೇ ಪ್ರೇಕ್ಷಕರ ತಲೆಗೆ ಹುಳ ಬಿಟ್ಟ ಉಪ್ಪಿ Read More »

‘ಸಾಕ್ಷಾತ್ಕಾರದ ದಾರಿಯಲ್ಲಿ’ ಪುಸ್ತಕದೊಂದಿಗೆ ಸಾಂತ್ವನ ಕೇಂದ್ರಕ್ಕೆ ತೆರಳಿದ ಚೈತ್ರಾ

ಸಮಗ್ರ ನ್ಯೂಸ್:‌ ಡೀಲ್‌ ಪ್ರಕರಣದಲ್ಲಿ ಆರೋಪಿಯಾಗಿ ಸಿಸಿಬಿ ವಶದಲ್ಲಿರು ಚೈತ್ರಾ ಕುಂದಾಪುರಳನ್ನು ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದೆ. ಸೆ.12ರಂದು ಬಂಧಿತಳಾಗಿದ್ದ ಚೈತ್ರಾ ಕುಂದಾಪುರಳನ್ನು ಮರುದಿನ ಬೆಂಗಳೂರಿಗೆ ಕರೆತಂದು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಸೆ.15ರಂದು ಸಿಸಿಬಿ ಕಚೇರಿಗೆ ಕರೆತಂದ ಕೆಲವೇ ನಿಮಿಷದಲ್ಲಿ ಆಕೆ ವಾಷ್‌ ರೂಮ್‌ನಲ್ಲಿ ಬಾಯಿಯಲ್ಲಿ ನೊರೆಯೊಂದಿಗೆ ಬಿದ್ದುಕೊಂಡಿದ್ದಳು. ಅಲ್ಲಿಂದ ಆಕೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ಒಯ್ಯಲಾಯಿತು. ಆದರೆ ಇದು ಆತ್ಮಹತ್ಯೆ ಯತ್ನ ಎಂದೂ, ಬಳಿಕ ಅಪಸ್ಮಾರ ಸಮಸ್ಯೆ ಎಂದು ಸುದ್ದಿಯಾಗಿತ್ತು. ಆದರೆ ಪರೀಕ್ಷೆ ಮಾಡಿದಾಗ ಯಾವುದೇ ಅನಾರೋಗ್ಯವಾಗಲಿ, ವಿಷ ಸೇವನೆಯಾಗಲೀ,

‘ಸಾಕ್ಷಾತ್ಕಾರದ ದಾರಿಯಲ್ಲಿ’ ಪುಸ್ತಕದೊಂದಿಗೆ ಸಾಂತ್ವನ ಕೇಂದ್ರಕ್ಕೆ ತೆರಳಿದ ಚೈತ್ರಾ Read More »

ಬಟ್ಟೆ ಮಳಿಗೆ ಪ್ರಕರಣದಲ್ಲೂ ವಂಚನೆ|ಅತ್ಯಾಚಾರ ಪ್ರಕರಣ ದಾಖಲು ಮಾಡೋದಾಗಿ ಬೆದರಿಕೆ|ಚೈತ್ರಾ ಕುಂದಾಪುರ ಮೇಲೆ ಮತ್ತೊಂದು ಎಫ್ಐಆರ್

ಸಮಗ್ರ ನ್ಯೂಸ್:‌ ಡೀಲ್‌ ಪ್ರಕರಣದಲ್ಲಿ ಆರೋಪಿಯಾಗಿರುವ ಚೈತ್ರಾ ಕುಂದಾಪುರ ಮೇಲೆ ಕೋಟ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯ ಸುದಿನಾ ಎಂಬವರು ಈ ಪ್ರಕರಣ ದಾಖಲಿಸಿದ್ದು ಚೈತ್ರಾ ಕುಂದಾಪುರ 5 ಲಕ್ಷ ಹಣವನ್ನು ಪಡೆದು ವಂಚಿಸಿರುವುದಾಗಿ ದೂರು ನೀಡಿದ್ದಾರೆ. 2018ರಲ್ಲಿ 5 ಲಕ್ಷ ಹಣ ಪಡೆದು ಚೈತ್ರಾ ವಂಚಿಸಿದ್ದು, ಅಕೌಂಟ್ ಮುಖಾಂತರ 3 ಲಕ್ಷ ಹಣವನ್ನು ಸುದಿನಾ ಕಳುಹಿಸಿದ್ದಾರೆ. ಬಳಿಕ 2 ಲಕ್ಷ ನಗದು ಹಣವನ್ನೂ ಚೈತ್ರಾಳಿಗೆ ನೀಡಿದ್ದಾರೆ. ಇದಾದ ಬಳಿಕ

ಬಟ್ಟೆ ಮಳಿಗೆ ಪ್ರಕರಣದಲ್ಲೂ ವಂಚನೆ|ಅತ್ಯಾಚಾರ ಪ್ರಕರಣ ದಾಖಲು ಮಾಡೋದಾಗಿ ಬೆದರಿಕೆ|ಚೈತ್ರಾ ಕುಂದಾಪುರ ಮೇಲೆ ಮತ್ತೊಂದು ಎಫ್ಐಆರ್ Read More »

ಚೈತ್ರಾಳ ವಂಚನೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ – ಸೂಲಿಬೆಲೆ

ಸಮಗ್ರ ನ್ಯೂಸ್: ಉದ್ಯಮಿ ಗೋವಿಂದ ಪೂಜಾರಿಗೆ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬಂದಿರುವುದಕ್ಕೆ ಚಕ್ರವರ್ತಿ ಸೂಲಿಬೆಲೆ ಪ್ರತಿಕ್ರಿಯೆ ನೀಡಿದ್ದಾರೆ. ‘ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದ ಬಾಬು ಎರಡು ಬಾರಿ ಕರೆ ಮಾಡಿದ್ದರು. ಗೋವಿಂದ ಬಾಬು ಪೂಜಾರಿಯವರ ಜೊತೆ ಯಾಕೆ ಹೀಗೆ ದುಡ್ಡು ಕೊಟ್ಟಿದ್ದೀರಿ ಎಂದು ಜಗಳ ಮಾಡಿದ್ದೆ. ಹಾಗಂತ ಈ ಪ್ರಕರಣದಲ್ಲಿ ಥಳಕು ಹಾಕೋದು ಬೇಡ’ ಎಂದು ಹೇಳಿದ್ದಾರೆ. ‘ವಂಚನೆ ಪ್ರಕರಣದಲ್ಲಿ ನನ್ನ ಹೆಸರನ್ನು ಥಳಕು ಹಾಕುವ ಪ್ರಯತ್ನ ನಡೆಯುತ್ತಿದೆ. ಆದರೆ ಇದನ್ನು

ಚೈತ್ರಾಳ ವಂಚನೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ – ಸೂಲಿಬೆಲೆ Read More »

ಲೋಕಸಭಾ ಚುನಾವಣೆಗೆ ನಿಖಿಲ್ ಸ್ಪರ್ಧೆ ಇಲ್ಲ

ಸಮರ್ಗ ನ್ಯೂಸ್: ಲೋಕಸಭಾ ಚುನಾವಣೆಯಲ್ಲಿ ತಾನು ಸ್ಪರ್ಧೆ ಮಾಡುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. “ಲೋಕಸಭಾ ಚುನಾವಣೆಯಲ್ಲಿ ನಾನು ಕೇವಲ‌ ಕಾರ್ಯಕರ್ತನಾಗಿ ಚುನಾವಣಾ ಪ್ರಚಾರ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡುವುದಿಲ್ಲ” ಎಂದು ಬೀದರ್ ನಲ್ಲಿ ಹೇಳಿದ್ದಾರೆ. ಲೋಕಸಭಾ ಚುನಾವಣಾ ಟಿಕೆಟ್ ಕುರಿತಂತೆ ದೇವೇಗೌಡರ ಕುಟುಂಬದಲ್ಲಿ ಈಗಾಗಲೇ ಹಲವಾರು ಪ್ರಶ್ನೆಗಳು ಎದ್ದಿದ್ದು, ನಿಖಿಲ್ ಕುಮಾರಸ್ವಾಮಿ ಹೇಳಿಕೆ ಒಂದಿಷ್ಟು ಸಮಾಧಾನ ತಂದಿರುವುದು ಖಚಿತ.

ಲೋಕಸಭಾ ಚುನಾವಣೆಗೆ ನಿಖಿಲ್ ಸ್ಪರ್ಧೆ ಇಲ್ಲ Read More »

ಕೊಡಗು: ಟ್ರಾಲಿ ಬ್ಯಾಗ್ ನಲ್ಲಿ ಕೊಳೆತ ಶವ ಪತ್ತೆ

ಸಮಗ್ರ ನ್ಯೂಸ್: ಟ್ರಾಲಿ ಬ್ಯಾಗ್ ನಲ್ಲಿ ಕೊಳೆತ ಶವ ಪತ್ತೆಯಾದ ಘಟನೆ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿರಾಜಪೇಟೆಯ ಮಾಕುಟ್ಟ ಚೆಕ್ ಪೋಸ್ಟ್ ನಿಂದ 5 ಕಿ. ಮೀ. ದೂರದ ಅರಣ್ಯದಂಚಿನಲ್ಲಿ ಟ್ರಾಲಿ ಬ್ಯಾಗ್ ನಲ್ಲಿ ಕೊಳೆತ ಶವ ಅರಣ್ಯ ಸಿಬ್ಬಂದಿಗಸ್ತು ತಿರುಗುವ ಸಮಯದಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಕೊಡಗು ಎಸ್ ಪಿ ರಾಮರಾಜನ್ ಭೇಟಿನೀಡಿ ತನಿಖೆ ಮುಂದುವರೆದಿದೆ.

ಕೊಡಗು: ಟ್ರಾಲಿ ಬ್ಯಾಗ್ ನಲ್ಲಿ ಕೊಳೆತ ಶವ ಪತ್ತೆ Read More »

ಕಾವೇರಿ ನದಿ ನೀರು ಹಂಚಿಕೆ/ ಕರ್ನಾಟಕಕ್ಕೆ ಮತ್ತೆ ಶಾಕ್

ಸಮಗ್ರ ನ್ಯೂಸ್: ಕಾವೇರಿ ನೀರು ಹಂಚಿಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ನಡೆದ ಕಾವೇರಿ ನದಿ ನೀರು ನಿರ್ವಹಣಾ ಸಮಿತಿಯ ಸಭೆಯಲ್ಲಿ ಮತ್ತೊಮ್ಮೆ ಕರ್ನಾಟಕ ಸರ್ಕಾರಕ್ಕೆ ಹಿನ್ನಡೆ ಉಂಟಾಗಿದ್ದು, ಮತ್ತೆ ಐದು ಸಾವಿರ ಕ್ಯೂಸೆಕ್ ನೀರು ಬಿಡಲು ಸಮಿತಿ ಆದೇಶ ನೀಡಿದೆ. ಸೆಪ್ಟೆಂಬರ್ 15ರಂದು ನಡೆದ ಸಭೆಯಲ್ಲಿ ಮುಂದಿನ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸಮಿತಿ ಆದೇಶ ನೀಡಿತ್ತು. ಅದನ್ನು ಪ್ರಶ್ನಿಸಿದ್ದ, ಕರ್ನಾಟಕ ಸರ್ಕಾರಕ್ಕೆ ಮತ್ತೆ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ನೀರಿನ

ಕಾವೇರಿ ನದಿ ನೀರು ಹಂಚಿಕೆ/ ಕರ್ನಾಟಕಕ್ಕೆ ಮತ್ತೆ ಶಾಕ್ Read More »