ರಾಜ್ಯ

ಸಂಪಾಜೆ: ಮುಹಿಯುದ್ಧಿನ್ ಜುಮ್ಮಾ ಮಸೀದಿ ಅಧ್ಯಕ್ಷರಾಗಿ ಟಿ.ಎಂ ಶಹೀದ್ ತೆಕ್ಕಿಲ್ ಪುನರಾಯ್ಕೆ

ಸಮಗ್ರ ನ್ಯೂಸ್: ಇತಿಹಾಸ ಪ್ರಸಿದ್ಧವಾದ ಸಂಪಾಜೆ ಗ್ರಾಮದ ಪೇರಡ್ಕ ಮುಹಿಯುದ್ದೀನ್ ಜುಮ್ಮಾ ಮಸೀದಿ ಅಧ್ಯಕ್ಷರಾಗಿ ಟಿ.ಎಂ ಶಹೀದ್ ತೆಕ್ಕಿಲ್ ಪುನರಾಯ್ಕೆ. 2006ರಲ್ಲಿ ಪೇರಡ್ಕ ಜುಮ್ಮಾ ಮಸೀದಿಯ ಪ್ರಧಾನ ಕಾರ್ಯದರ್ಶಿಯಾಗಿ, ಗೌರವಾಧ್ಯಕ್ಷರಾಗಿ, ಅಧ್ಯಕ್ಷರಾಗಿ, ಗೂನಡ್ಕ ಪೇರಡ್ಕ ಮದರಸ ಮಸೀದಿಯ ಪುನರ್ ನಿರ್ಮಾಣ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಟಿ.ಎಂ.ಶಹೀದ್ ಅವರು ಅಧ್ಯಕ್ಷರಾಗಿ ಪುನರಾಯ್ಕೆಗೊಂಡಿದ್ದಾರೆ. ಭಾರತ ಸರಕಾರದ ಕೊಯರ್ ಬೋರ್ಡ್ ಸದಸ್ಯರಾಗಿ, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ, ಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯರಾಗಿ, ರಾಜ್ಯ ವಕ್ಸ್ ಕೌನ್ಸಿಲ್

ಸಂಪಾಜೆ: ಮುಹಿಯುದ್ಧಿನ್ ಜುಮ್ಮಾ ಮಸೀದಿ ಅಧ್ಯಕ್ಷರಾಗಿ ಟಿ.ಎಂ ಶಹೀದ್ ತೆಕ್ಕಿಲ್ ಪುನರಾಯ್ಕೆ Read More »

ಚೈತ್ರಾ ಕುಂದಾಪುರ ಡೀಲ್‌ ಪ್ರಕರಣ| ಡ್ರೈವಿಂಗ್ ಸ್ಕೂಲ್‍ನಲ್ಲಿ ಕಿಯಾ ಕಾರು ಪತ್ತೆ|ಇನ್ನೋರ್ವ ಸಿಸಿಬಿ ವಶಕ್ಕೆ

ಬಾಗಲಕೋಟೆ: ಚೈತ್ರಾ ಕುಂದಾಪುರ ಡೀಲ್ ಪ್ರಕರಣವು ಹೊರಬೀಳುತ್ತಿದ್ದಂತೆಯೇ ಆರೋಪಿ ಶ್ರೀಕಾಂತ್, ಕಿರಣ್‍ಗೆ ಕರೆ ಮಾಡಿ ಕಾರು ಮಹಾರಾಷ್ಟ್ರದ ಸೊಲ್ಲಾಪುರದ ಒಂದು ಬಾರ್ ಆ್ಯಂಡ್ ರೆಸ್ಟೊರೆಂಟ್ ಮುಂದೆ ಇದೆ. ಅದನ್ನು ತಂದು ನಿಮ್ಮ ಬಳಿ ಇಟ್ಕೊಳಿ ಎಂದು ಹೇಳಿರುವುದು ಇದೀಗ ಬಯಲಾಗಿದೆ. ಶ್ರೀಕಾಂತ್ ಹೇಳಿದಂತೆ ಕಿರಣ್ ಅವರು ಸೆಪ್ಟೆಂಬರ್ 9 ರಂದು ಸೊಲ್ಲಾಪುರಕ್ಕೆ ಹೋಗಿ ಕಿಯಾ ಕಾರೆನ್ಸ್ (Kia Carens) ತಂದು ತನ್ನ ಡ್ರೈವಿಂಗ್ ಸ್ಕೂಲ್‍ನಲ್ಲಿಟ್ಟುಕೊಂಡಿದ್ದರು. ಚೈತ್ರಾ ಕುಂದಾಪುರ, ಪಿಎ ಶ್ರೀಕಾಂತ್, ಕಿರಣ್ ಕರೆಯನ್ನು ಸಿಸಿಬಿ ಪೊಲೀಸರು ಟ್ರೇಸೌಟ್

ಚೈತ್ರಾ ಕುಂದಾಪುರ ಡೀಲ್‌ ಪ್ರಕರಣ| ಡ್ರೈವಿಂಗ್ ಸ್ಕೂಲ್‍ನಲ್ಲಿ ಕಿಯಾ ಕಾರು ಪತ್ತೆ|ಇನ್ನೋರ್ವ ಸಿಸಿಬಿ ವಶಕ್ಕೆ Read More »

ಕಸಾಯಿಖಾನೆಗೆ ಸಾಗಿಸುತ್ತಿದ್ದ 11 ಗೋವುಗಳ ರಕ್ಷಿಸಿದ ಶ್ರೀರಾಮ ಸೇನೆ ಕಾರ್ಯಕರ್ತರು

ಸಮಗ್ರ ನ್ಯೂಸ್: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ 11 ಗೋವುಗಳನ್ನು ಶ್ರೀರಾಮ ಸೇನೆ ಕಾರ್ಯಕರ್ತರು ರಕ್ಷಣೆ ಮಾಡಿದ್ದಾರೆ. ಆರೋಪಿಗಳು 11 ಹಸುಗಳನ್ನು ಕ್ಯಾಂಟರ್ ಮೂಲಕ ಕಸಾಯಿಖಾನೆಗೆ ಸಾಗಿಸುತ್ತಿದ್ದ ವೇಳೆ ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ಶ್ರೀರಾಮ ಸೇನೆ ಹಸುಗಳ ರಕ್ಷಣೆ ಮಾಡಿದೆ. ಖಚಿತ ಮಾಹಿತಿಯ ಮೇರೆಗೆ ವಾಹನ ಅಡ್ಡಗಟ್ಟಿದ್ದು, ಬಳಿಕ ರಾಮನಗರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಕೆಎಂ ದೊಡ್ಡಿಯಿಂದ ಚಿಂತಾಮಣಿಗೆ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಸಂದರ್ಭ ಸ್ಥಳಕ್ಕೆ ಬಂದ ಪೊಲೀಸರು

ಕಸಾಯಿಖಾನೆಗೆ ಸಾಗಿಸುತ್ತಿದ್ದ 11 ಗೋವುಗಳ ರಕ್ಷಿಸಿದ ಶ್ರೀರಾಮ ಸೇನೆ ಕಾರ್ಯಕರ್ತರು Read More »

ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ| ಇಡೀ ರಾತ್ರಿ ಕಾವಲಿದ್ದ ಪೊಲೀಸರು…!

ಸಮಗ್ರ ನ್ಯೂಸ್: ಪ್ಲೈವುಡ್ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಹೊರಟ್ಟಿ ಎಂಬ ಗ್ರಾಮದಲ್ಲಿ ರಾತ್ರಿ 1ಗಂಟೆ ಸುಮಾರಿಗೆ (ಸೆ. 17) ನಡೆದಿದೆ. ಮೂಡಿಗೆರೆಯ ಸಾಮಿಲ್ ನಲ್ಲಿ ಪ್ಲೇವುಡ್ ತುಂಬಿಕೊಂಡು ಮಹಾರಾಷ್ಟ್ರಕ್ಕೆ ಹೋಗುತ್ತಿದ್ದ ಹತ್ತು ಚಕ್ರದ ಲಾರಿ ಮೂಡಿಗೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಪಲ್ಟಿಯಾಗಿದೆ. ಚಾಲಕ ಅತಿಯಾದ ವೇಗದಲ್ಲಿ ಇದ್ದ ಕಾರಣ ಲಾರಿ ನಿಯಂತ್ರಣಕ್ಕೆ ಸಿಗದೆ ಪಲ್ಟಿಯಾಗಿದೆ. ಲಾರಿಯ ಚಾಲಕ ಹಾಗೂ

ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ| ಇಡೀ ರಾತ್ರಿ ಕಾವಲಿದ್ದ ಪೊಲೀಸರು…! Read More »

ಗೂಂಡಾ ಕಾಯ್ದೆ ರದ್ದು: ಪುನೀತ್ ಕೆರೆಹಳ್ಳಿ‌ ಜೈಲಿನಿಂದ ಬಿಡುಗಡೆ

ಸಮಗ್ರ ನ್ಯೂಸ್: ಗೂಂಡಾ ಕಾಯ್ದೆಯಡಿ ಬಂಧಿತರಾಗಿದ್ದ ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ‌ ಪುನೀತ್ ಕೆರೆಹಳ್ಳಿಯನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಪುನೀತ್ ಕೆರೆಹಳ್ಳಿ ಮಂಡ್ಯದ ಇದ್ರೀಸ್ ಪಾಷಾ ಕೊಲೆ ಆರೋಪಿಯಾಗಿದ್ದು, ಈತನ ವಿರುದ್ಧ ಬೇಗೂರು ಪೊಲೀಸ್ ಠಾಣೆಯಲ್ಲಿ ಎರಡು, ಡಿಜೆ ಹಳ್ಳಿ, ಕಗ್ಗಲೀಪುರ, ಹಂಪಿ, ಮಳವಳ್ಳಿ, ಹಲಸೂರು, ಚಾಮರಾಜಪೇಟೆ, ಎಲೆಕ್ಟ್ರಾನ್ ಸಿಟಿ, ಸಾತನೂರು ಪೊಲೀಸ್ ಠಾಣೆಗಳಲ್ಲಿ ಒಂದೊಂದು ಪ್ರಕರಣ ದಾಖಲಾಗಿವೆ. ಇನ್ನು ಈತನಿಗೆ ಕೆಲ ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿದ್ದು, ಅಪರಾಧ ಪ್ರಕರಣಗಳಲ್ಲಿ‌ ಪದೇ ಪದೇ ಭಾಗಿಯಾಗುತ್ತಿರುವುದರಿಂದ ಪುನೀತ್‌ ವಿರುದ್ಧ

ಗೂಂಡಾ ಕಾಯ್ದೆ ರದ್ದು: ಪುನೀತ್ ಕೆರೆಹಳ್ಳಿ‌ ಜೈಲಿನಿಂದ ಬಿಡುಗಡೆ Read More »

ಮಡಿಕೇರಿ: ವ್ಯಕ್ತಿಯ ಅಪಹರಿಸಿ 5 ಲಕ್ಷ ರೂ. ಬೇಡಿಕೆ : 14 ಮಂದಿ ಆರೋಪಿಗಳ ಬಂಧನ

ಸಮಗ್ರ ನ್ಯೂಸ್:‌ ವ್ಯಕ್ತಿಯೊಬ್ಬರನ್ನು ಅಪಹರಿಸಿ ಹಲ್ಲೆ ಮಾಡಿ ಕೊಲೆ ಬೆದರಿಕೆಯೊಡ್ಡಿ 5 ಲಕ್ಷ ರೂ. ಬೇಡಿಕೆಯಿಟ್ಟಿದ್ದ 14 ಮಂದಿ ಆರೋಪಿಗಳನ್ನು ಮಡಿಕೇರಿ ಪೊಲೀಸರು ಪ್ರಕರಣ ನಡೆದ ಕೆಲವೇ ಗಂಟೆಗಳಲ್ಲಿ ಬಂಧಿಸಿ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಮಡಿಕೇರಿ ಕಾನ್ವೆಂಟ್ ಜಂಕ್ಷನ್ ನಿವಾಸಿ ಎಂ. ಜೆಡ್. ಮಹಮ್ಮದ್ ರಾಶಿದ್ (41), ಮಡಿಕೇರಿ ಗೌಳಿಬೀದಿಯ ಎಂ. ಜಿ. ಪ್ರಮೋದ್ (31), ಟಿ. ಆರ್. ದರ್ಶನ್ (48), ಮಡಿಕೇರಿ ಚಾಮುಂಡೇಶ್ವರಿ ನಗರದ ಬಿ. ಡಾಲಿ (48), ಮಕ್ಕಂದುರುವಿನ ಜೀವನ್ ಕುಮಾರ್ (25), ಮಹದೇವಪೇಟೆಯ

ಮಡಿಕೇರಿ: ವ್ಯಕ್ತಿಯ ಅಪಹರಿಸಿ 5 ಲಕ್ಷ ರೂ. ಬೇಡಿಕೆ : 14 ಮಂದಿ ಆರೋಪಿಗಳ ಬಂಧನ Read More »

ಪಿಎಸ್​ಐ ಪುತ್ರನ ವ್ಹೀಲಿಂಗ್​ ಹುಚ್ಚಾಟಕ್ಕೆ ವೃದ್ಧ ಬಲಿ

ಸಮಗ್ರ ನ್ಯೂಸ್: ಮಹಿಳಾ ಪಿಎಸ್​ಐ ಪುತ್ರನ ದ್ವಿಚಕ್ರ ವಾಹನ ವ್ಹೀಲಿಂಗ್ ಹುಚ್ಚಾಟಕ್ಕೆ ವೃದ್ಧರೊಬ್ಬರು ಬಲಿಯಾಗಿರುವ ಘಟನೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹಿಮ್ಮಾವು ಬಳಿ ನಡೆದಿದೆ. ಆರೋಪಿ ಸೈಯ್ಯದ್ ಐಮಾನ್​ನನ್ನು ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ. ಇನ್ನು ಸೈಯ್ಯದ್ ನಂಬರ್ ಪ್ಲೇಟ್ ಇಲ್ಲದ ಬೈಕ್​ನಲ್ಲಿ ವ್ಹೀಲಿಂಗ್ ಮಾಡಿದ್ದು, ಉದಯಗಿರಿ ನಿವಾಸಿ ವೃದ್ಧ ಗುರುಸ್ವಾಮಿ ಅವರಿಗೆ ಡಿಕ್ಕಿ ಹೊಡೆದಿದ್ದು ಗಂಭೀರವಾಗಿ ಗಾಯಗೊಂಡ ಗುರುಸ್ವಾಮಿ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆತ ಘಟನೆಯ ಬಳಿಕ ಸ್ಥಳದಿಂದ

ಪಿಎಸ್​ಐ ಪುತ್ರನ ವ್ಹೀಲಿಂಗ್​ ಹುಚ್ಚಾಟಕ್ಕೆ ವೃದ್ಧ ಬಲಿ Read More »

ಚೈತ್ರಾ ಕುಂದಾಪುರ ಪ್ರಕರಣ| 3 ಕೋಟಿ ಆರು ಭಾಗ ಮಾಡಿದ್ದು ಹೇಗೆ..? ಇಲ್ಲಿದೆ ಫುಲ್‌ ಮಾಹಿತಿ

ಸಮಗ್ರ ನ್ಯೂಸ್: ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್‍ಗಾಗಿ 5 ಕೋಟಿ ಡೀಲ್ ಮಾಡಿದ ನಾಯಕಿ ಚೈತ್ರಾ ಕುಂದಾಪುರ 3 ಕೋಟಿಯನ್ನು ಯಾವ ರೀತಿ ಹಂಚಿಕೊಂಡಿದ್ದಾರೆ ಎಂಬ ಮಾಹಿತಿ ಇಲ್ಲಿದೆ ನೋಡಿ. ಚೈತ್ರಾ ಮತ್ತು ಗ್ಯಾಂಗ್ ಅಲಿಯಾಸ್ ಕಬಾಬ್ ಗ್ಯಾಂಗ್ ಒಬ್ಬ ಬಕ್ರಾ ಸಿಕ್ಕಿದ ಅಂತ ಚೆನ್ನಾಗಿ ಸುಲಿಗೆ ಮಾಡಿದ್ದ ಗ್ಯಾಂಗ್ ಇದು. ಎಂಎಲ್‍ಎ ಆಗ್ತೀನಿ ಅಂತ ಹಗಲು ಕನಸನ್ನೇ ಕಾಣುತ್ತಾ ಇದ್ದ ಗೋವಿಂದ ಬಾಬು ಪೂಜಾರಿ ಕೋಟಿ ಕೋಟಿ ಹಣ ಪಡೆದು ಮೂರು ನಾಮ ಹಾಕಿದ್ರು. ಇದು ಒಂದು

ಚೈತ್ರಾ ಕುಂದಾಪುರ ಪ್ರಕರಣ| 3 ಕೋಟಿ ಆರು ಭಾಗ ಮಾಡಿದ್ದು ಹೇಗೆ..? ಇಲ್ಲಿದೆ ಫುಲ್‌ ಮಾಹಿತಿ Read More »

ಚೈತ್ರಾ ಕುಂದಾಪುರ ಪ್ರಕರಣ| ಆರೋಪಿ ಶ್ರೀಕಾಂತ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ

ಸಮಗ್ರ ನ್ಯೂಸ್: ಉದ್ಯಮಿಯೊಬ್ಬರಿಗೆ ಕೋಟ್ಯಾಂತರ ವಂಚನೆ ಮಾಡಿದ ಚೈತ್ರಾ ಕುಂದಾಪುರ ಗ್ಯಾಂಗ್ ನ ಒಂದೊಂದೆ ಇತಿಹಾಸ ಇದೀಗ ಹೊರಬರುತ್ತಿದ್ದು ಇದೀಗ 7ನೇ ಆರೋಪಿ ಶ್ರೀಕಾಂತ್ ಮನೆಯನ್ನು ಜಾಲಾಡಿದ ಪೊಲೀಸರಿಗೆ ಲಕ್ಷ ಲಕ್ಷ ಕಂತೆ ಹಣ ಸಿಕ್ಕಿರಿವ ಬಗ್ಗೆ ವರದಿಯಾಗಿದೆ. ಗುಡ್ಡೆಯಂಗಡಿಯಲ್ಲಿರುವ ಶ್ರೀಕಾಂತ್ ಮನೆಯ ಬಾಕ್ಸ್‌ನಲ್ಲಿ ಇಟ್ಟಿದ್ದ 41 ಲಕ್ಷ ರೂ. ನಗದು ಪತ್ತೆಯಾಗಿದ್ದು ಅದನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ವೇಳೆ ಶ್ರೀಕಾಂತ್ 10 ಲಕ್ಷ ರೂ. ಕೊಟ್ಟು ಜಮೀನು ಖರೀದಿ ಮಾಡಿದ್ದು, ಸುಮಾರು 70 ಲಕ್ಷ

ಚೈತ್ರಾ ಕುಂದಾಪುರ ಪ್ರಕರಣ| ಆರೋಪಿ ಶ್ರೀಕಾಂತ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ Read More »

ದ.ಕ, ಉಡುಪಿ, ಉ.ಕ ಜಿಲ್ಲೆಗಳ‌ ಹೊರತುಪಡಿಸಿ ನಾಳೆ(ಸೆ.18) ರಾಜ್ಯಾದ್ಯಂತ ಗಣೇಶ ಚತುರ್ಥಿ ರಜೆ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ಗಣೇಶ ಹಬ್ಬದ ಸಲುವಾಗಿ ಸಾರ್ವತ್ರಿಕ ರಜಾ ದಿನವನ್ನು ಮೂರು ಜಿಲ್ಲೆಗಳನ್ನು ಹೊರತುಪಡಿಸಿ, ಒಂದೇ ದಿನ ಸರ್ಕಾರಿ ರಜೆಯನ್ನು ಘೋಷಣೆ ಮಾಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆ ಹೊರತು ಪಡಿಸಿ, ನಾಳೆ ಗಣೇಶ ಹಬ್ಬಕ್ಕೆ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ಸಂಬಂಧ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದಾರೆ. ಗಣೇಶ ಚತುರ್ಥಿಗೆ ಸಾರ್ವತ್ರಿಕ ರಜೆಯನ್ನು ದಕ್ಷಿಣ ಕನ್ನಡ ಉಡುಪಿ ಮತ್ತು ಉತ್ತರ‌ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 18ರ (ಸೋಮವಾರ)

ದ.ಕ, ಉಡುಪಿ, ಉ.ಕ ಜಿಲ್ಲೆಗಳ‌ ಹೊರತುಪಡಿಸಿ ನಾಳೆ(ಸೆ.18) ರಾಜ್ಯಾದ್ಯಂತ ಗಣೇಶ ಚತುರ್ಥಿ ರಜೆ Read More »