ರಾಜ್ಯ

ಬಾನು ಮುಷ್ತಾಕ್ ರಿಂದ‌ ದಸರಾ ಉದ್ಘಾಟನೆ ವಿಚಾರ| ಮಾಜಿ ಸಂಸದ ಪ್ರತಾಪ್ ಸಿಂಹ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರ ಅಹ್ವಾನ ನೀಡಿದೆ.ಈ ವಿಚಾರವಾಗಿ ಭಾರಿ ವಿರೋಧ ವ್ಯಕ್ತವಾಗಿದ್ದು, ಮಾಜಿ ಸಂಸದ ಪ್ರತಾಪ್ ಸಿಂಹ ಈ ಕುರಿತು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರವಾಗಿ ಇಂದು ಹೈಕೋರ್ಟ್ ನಲ್ಲಿ ಪ್ರತಾಪ್ ಸಿಂಹ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಹೈಕೋರ್ಟ್ ಸಿಜೆ ವಿಭು ಬಖ್ರು ಹಾಗು ನ್ಯಾ.ಸಿಎಂ ಜೋಶಿ ಅವರಿದ್ದ ಪೀಠ ಪ್ರತಾಪ್ ಸಿಂಹ ಸಲ್ಲಿಸಿದ ಪಿಐಎಲ್ ವಜಾಗೊಳಿಸಿದ್ದಾರೆ. ಇಂದು ಹೈ […]

ಬಾನು ಮುಷ್ತಾಕ್ ರಿಂದ‌ ದಸರಾ ಉದ್ಘಾಟನೆ ವಿಚಾರ| ಮಾಜಿ ಸಂಸದ ಪ್ರತಾಪ್ ಸಿಂಹ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್ Read More »

ಶಸ್ತ್ರಚಿಕಿತ್ಸೆ ನಡುವೆ ನರ್ಸ್ ಜೊತೆಗೆ ಲೈಂಗಿಕ ಕ್ರಿಯೆ ನಡೆಸಿದ ವೈದ್ಯ

ಸಮಗ್ರ ನ್ಯೂಸ್: ಹಿರಿಯ ವೈದ್ಯರೊಬ್ಬರು ಶಸ್ತ್ರಚಿಕಿತ್ಸೆಯ ಮಧ್ಯದಲ್ಲಿ ರೋಗಿಯನ್ನು ಹತ್ತಿರದ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಬಿಟ್ಟು ನರ್ಸ್ ಜೊತೆ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿದ್ದ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಸೆಪ್ಟೆಂಬರ್ 16, 2023 ರಂದು ಗ್ರೇಟರ್ ಮ್ಯಾಂಚೆಸ್ಟರ್ನ ಟೇಮ್ಸೈಡ್ ಜನರಲ್ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ರಂಗಮಂದಿರದಲ್ಲಿ ಸಮಾಲೋಚಕ ಅರಿವಳಿಕೆ ತಜ್ಞ ಅಂಜುಮ್, ನರ್ಸ್ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದು ಕಂಡುಬಂದರು ಎಂದು ವರದಿಯಾಗಿದೆ. ಕೀಹೋಲ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರೋಗಿಯನ್ನು ಅಂಜುಮ್ ಬಿಟ್ಟು ಹೋಗಿ, ನರ್ಸ್ ಜೊತೆಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದರು. ಜನರಲ್

ಶಸ್ತ್ರಚಿಕಿತ್ಸೆ ನಡುವೆ ನರ್ಸ್ ಜೊತೆಗೆ ಲೈಂಗಿಕ ಕ್ರಿಯೆ ನಡೆಸಿದ ವೈದ್ಯ Read More »

ಹಾಸನ ಮೆರವಣಿಗೆ ದುರಂತ| ಪ್ರಧಾನಿಯಿಂದ ತಲಾ ಎರಡು ಲಕ್ಷ ಪರಿಹಾರ ಘೋಷಣೆ

ಸಮಗ್ರ ನ್ಯೂಸ್: ಕರ್ನಾಟಕದ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮೊಸಳೆ ಹೊಸಳ್ಳಿ ಬಳಿ ಗಣೇಶ ಉತ್ಸವದ ವೇಳೆಟ್ರಕ್ ಹರಿದು ಸಾವನ್ನಪ್ಪಿದವರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿಯವರು 2 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು ಟ್ರಕ್ಹರಿದು ಸಾವನ್ನಪ್ಪಿದ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲ 50,000 ಪರಿಹಾರವನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ( PMNR) ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಹಾಸನ ಮೆರವಣಿಗೆ ದುರಂತ| ಪ್ರಧಾನಿಯಿಂದ ತಲಾ ಎರಡು ಲಕ್ಷ ಪರಿಹಾರ ಘೋಷಣೆ Read More »

ಬೆಂಗಳೂರು: ಡ್ರಗ್ಸ್ ಪೆಡ್ಲರ್ ಗಳ ಜೊತೆ ಪೊಲೀಸರ ಪಾರ್ಟಿ| ಮೋಜು, ಮಸ್ತಿಯಲ್ಲಿ ತೊಡಗಿದ್ದ 11 ಅಧಿಕಾರಿಗಳು ಹಾಗೂ ಸಿಬ್ಬಂದಿ ಸಸ್ಪೆಂಡ್

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಡ್ರಗ್ಸ್ ಮುಕ್ತ ಬೆಂಗಳೂರು ಕನಸು ಕಂಡಿದ್ದು ಆದರೆ ಪೊಲೀಸರು ಡ್ರಗ್ಸ್ ಪೆಡ್ಲರುಗಳ ಜೊತೆಗೆ ನೇರವಾಗಿ ನೆಂಟರು ಹೊಂದಿದ್ದಾರೆ ಜೊತೆಗೆ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಪಾರ್ಟಿ ಸಹ ಮಾಡಿದ್ದಾರೆ ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ ಮಾಡಲು ಪೊಲೀಸರೇ ಶ್ರೀರಕ್ಷೆ ಆಗಿದ್ದಾರೆ. ತಿಂಗಳಿಗೆ 1.5 ರಿಂದ 2 ಲಕ್ಷದವರೆಗೆ ಮಾಮೂಲಿ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಚಾಮರಾಜಪೇಟೆ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಟಿ ಮಂಜಣ್ಣ ಹೆಡ್ ಕಾನ್ಸೆಪ್ಟ್ಗಳಾದ ರಮೇಶ್ ಶಿವರಾಜ್ ಪಿಸಿ ಮಧುಸೂದನ್, ಪ್ರಸನ್ನ, ಶಂಕರ್

ಬೆಂಗಳೂರು: ಡ್ರಗ್ಸ್ ಪೆಡ್ಲರ್ ಗಳ ಜೊತೆ ಪೊಲೀಸರ ಪಾರ್ಟಿ| ಮೋಜು, ಮಸ್ತಿಯಲ್ಲಿ ತೊಡಗಿದ್ದ 11 ಅಧಿಕಾರಿಗಳು ಹಾಗೂ ಸಿಬ್ಬಂದಿ ಸಸ್ಪೆಂಡ್ Read More »

ನಾನೀಗ ಒಬ್ಬಂಟಿ, ನಂಬಿದವರೇ ನನಗೆ ಕೈಕೊಟ್ಟರು| ಮತ್ತೊಂದು ವಿಡಿಯೋದಲ್ಲಿ ಸಮೀರ್ ಎಂ.ಡಿ ಹೇಳಿಕೆ

ಸಮಗ್ರ ನ್ಯೂಸ್: ಈ ಹಿಂದೆ ಧರ್ಮಸ್ಥಳ ಗ್ರಾಮದ ಬುರುಡೆ ಕೇಸ್‌ ಬಗ್ಗೆ ಎಐ ವಿಡಿಯೋ ಮಾಡಿ, ಕಣ್ಣಿಗೆ ಕಟ್ಟಿದಂತೆ ಕತೆ ಕಟ್ಟಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ. ಈಗ ಮತ್ತೊಂದು ವಿಡಿಯೋ ಮಾಡಿ, ತನ್ನ ಕಣ್ಣೀರ ಕಥೆಯನ್ನು ಹೇಳಿಕೊಂಡಿದ್ದಾನೆ. ‘ಎಸ್‌ಐಟಿ ವಿಚಾರಣೆ ನಂತರ ನಾನು ಮನೆ ಕಳೆದುಕೊಂಡೆ. ಇರಲು ಮನೆಯೂ ಇಲ್ಲದೆ ಅನಾಥನಾದೆ. ನಾನು ನಂಬಿದವರು ನನ್ನ ಕೈಬಿಟ್ಟಿದ್ದು, ನಾನೀಗ ಒಬ್ಬಂಟಿಯಾಗಿದ್ದೇನೆ’ ಎಂದು ಅಳಲು ತೋಡಿಕೊಂಡಿದ್ದಾನೆ. ಇರಲು ಮನೆಯೂ ಇಲ್ಲದೆ ಅನಾಥನಾದೆ. ನಾನು ನಂಬಿದವರು ನನ್ನ ಕೈಬಿಟ್ಟಿದ್ದು, ನಾನೀಗ

ನಾನೀಗ ಒಬ್ಬಂಟಿ, ನಂಬಿದವರೇ ನನಗೆ ಕೈಕೊಟ್ಟರು| ಮತ್ತೊಂದು ವಿಡಿಯೋದಲ್ಲಿ ಸಮೀರ್ ಎಂ.ಡಿ ಹೇಳಿಕೆ Read More »

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ| ಉಪ್ಪಿನಂಗಡಿ ಮೂಲದ ಫೋಟೋಗ್ರಾಫರ್ ಮೂಡಬಿದಿರೆಯಲ್ಲಿ ಅರೆಸ್ಟ್

ಸಮಗ್ರ ನ್ಯೂಸ್: ಯುವತಿಯನ್ನು ವಿವಾಹವಾಗುವುದಾಗಿ ನಂಬಿಸಿ, ದೈಹಿಕ ಸಂಬಂಧ ಬೆಳೆಸಿ ಬಳಿಕ ಮದುವೆಗೆ ನಿರಾಕರಿಸಿದ ಮೂಡುಬಿದಿರೆಯ ಛಾಯಾಗ್ರಾಹಕನ ವಿರುದ್ಧ ಪೊಲೀಸರು ದಲಿತ ದೌರ್ಜನ್ಯ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.ಮೂಲತಃ ಉಪ್ಪಿನಂಗಡಿ ಬೆದ್ರೋಡಿಯ ನಿವಾಸಿ, ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿದ್ದ ಸಂಕೇತ್ ಗಾಣಿಗ (31) ಆರೋಪಿ. ಆತ ಉಡುಪಿ ಮೂಲದ ಯುವತಿಯೊಂದಿಗೆ ಇನ್‌ಸ್ಟ್ರಾಗ್ರಾಂನಲ್ಲಿ ಸ್ನೇಹ ಬೆಳೆಸಿ ಬಳಿಕ ಲೈಂಗಿಕ ದೌರ್ಜನ್ಯ ಎಸಗಿದ್ದ. ಬಳಿಕ ಜಾತಿಯ ನೆಪವೊಡ್ಡಿ ಮದುವೆಗೆ ನಿರಾಕರಿಸಿದ್ದಾನೆ ಎಂದು ಸಂತ್ರಸ್ತೆ ಮೂಡುಬಿದಿರೆ ಪೊಲೀಸ್ ಠಾಣೆಗೆ ನೀಡಿದ

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ| ಉಪ್ಪಿನಂಗಡಿ ಮೂಲದ ಫೋಟೋಗ್ರಾಫರ್ ಮೂಡಬಿದಿರೆಯಲ್ಲಿ ಅರೆಸ್ಟ್ Read More »

ಹಿಂದೆ ಸರಿದ ಮುಂಗಾರು| ಸೆ.15ರಿಂದ ಹಿಂಗಾರು ಮಳೆ ಆರಂಭ

ಸಮಗ್ರ ನ್ಯೂಸ್: ಪ್ರಸಕ್ತ ಸಾಲಿನ ನೈರುತ್ಯ ಮುಂಗಾರು ದೇಶದ ವಾಯವ್ಯ ಭಾಗದಲ್ಲಿ ಸೆ. 15ರಿಂದ ಹಿಂದೆ ಸರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ತಿಳಿಸಿದೆ. ದೇಶಕ್ಕೆ ಮೊದಲ ಮಳೆ ಸುರಿಸುವ ಮುಂಗಾರು ಜೂನ್‌ 1ಕ್ಕೆ ಕೇರಳ ಪ್ರವೇಶಿಸಿ, ಜುಲೈ 8ಕ್ಕೆ ಇಡೀ ದೇಶವನ್ನು ವ್ಯಾಪಿಸಿತ್ತು. ಸೆ. 17ಕ್ಕೆ ವಾಯವ್ಯ ಭಾಗದಿಂದ ನೈರುತ್ಯ ಮುಂಗಾರು ಹಿಂದೆ ಸರಿಯಲು ಆರಂಭಿಸಲಿದೆ. ಅ. 15ಕ್ಕೆ ಕೊನೆಗೊಳ್ಳಲಿದೆ’ ಎಂದು ಇಲಾಖೆ ತಿಳಿಸಿದೆ. ‘ಸೆ. 15ರಿಂದ ನೈರುತ್ಯ ಮುಂಗಾರು

ಹಿಂದೆ ಸರಿದ ಮುಂಗಾರು| ಸೆ.15ರಿಂದ ಹಿಂಗಾರು ಮಳೆ ಆರಂಭ Read More »

ಹಾಸನದಲ್ಲಿ ಗಣಪತಿ ಮೆರವಣಿಗೆ ಮೇಲೆ ಹರಿದ ಲಾರಿ| ನಾಲ್ವರು ಸಾವು, 20 ಮಂದಿ ಗಂಭೀರ

ಸಮಗ್ರ ನ್ಯೂಸ್: ಗಣಪತಿ ವಿಸರ್ಜನಾ ಮೆರವಣೆಗೆ ಮೇಲೆ ಟ್ರಕ್ ಒಂದು ನಿಯಂತ್ರಣ ತಪ್ಪಿ ಹರಿದ ಪರಿಣಾಮ ಕನಿಷ್ಠ ನಾಲ್ಕು ಮಂದಿ ಸಾವನ್ನಪ್ಪಿ ಹಲವು ಗಂಭೀರವಾಗಿ ಗಾಯಗೊಂಡ ಘಟನೆ ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಅವಘಡದಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ದೌಡಾಯಿಸಿದ್ದಾರೆ. ಅದ್ಧೂರಿಯಾಗಿ ಗಣೇಶ ಮೆರವಣಿಗೆ ಸಾಗುತ್ತಿರುವ ವೇಳೆ ಟ್ರಕ್​ವೊಂದು ಜನರ ಮೇಲೆ ನುಗ್ಗಿದೆ. ಚಾಲಕನ ಅಜಾಗುರಕತೆಯಿಂದ ಈ ಘಟನೆ ನಡೆದಿದೆ. ಡಿವೈಡರ್​ಗೆ ಡಿಕ್ಕಿ ಆಗಿ ಜನರ ಮೇಲೆ

ಹಾಸನದಲ್ಲಿ ಗಣಪತಿ ಮೆರವಣಿಗೆ ಮೇಲೆ ಹರಿದ ಲಾರಿ| ನಾಲ್ವರು ಸಾವು, 20 ಮಂದಿ ಗಂಭೀರ Read More »

ಪುತ್ತೂರು: ಪುತ್ತಿಲ ಪರಿವಾರ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಬಿರುಕು| ಹಿಂಜಾವೇ ಕಾರ್ಯಕರ್ತನಿಗೆ ಹಲ್ಲೆ

ಸಮಗ್ರ ನ್ಯೂಸ್: ಪುತ್ತಿಲ ಪರಿವಾರ ಮತ್ತು ಬಿಜೆಪಿ ನಡುವೆ ಅಸಮಧಾನದ ಹೊಗೆ ಇದೀಗ ಹಲ್ಲೆ ಮಟ್ಟಕ್ಕೆ ತಿರುಗಿದ್ದು, ಬಿಜೆಪಿ ವಿರುದ್ದ ಪುತ್ತಿಲ ಪರಿವಾರದ ಸಭೆ ನಡೆದ ಬೆನ್ನಲ್ಲೇ ಇದೀಗ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿರುವ ಘಟನೆ ನಡೆದಿದೆ. ಸುಭಾಸ್ ಮುಕ್ವೆ ಹಲ್ಲೆಗೊಳಗಾದ ಯುವಕ ಎಂದು ಗುರುತಿಸಲಾಗಿದೆ. ಪುತ್ತಿಲ ಪರಿವಾರದ ಅಶೋಕ್ ತ್ಯಾಗರಾಜನಗರ ಎಂಬಾತ ಹಲ್ಲೆ ನಡೆಸಿದಾನೆ ಎಂದು ಆರೋಪಿಸಲಾಗಿದೆ. ಇತ್ತೀಚೆಗೆ ಪುತ್ತಿಲ ಪರಿವಾರದ ಸಭೆಯಲ್ಲಿ ಬಿಜೆಪಿ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದೇ

ಪುತ್ತೂರು: ಪುತ್ತಿಲ ಪರಿವಾರ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಬಿರುಕು| ಹಿಂಜಾವೇ ಕಾರ್ಯಕರ್ತನಿಗೆ ಹಲ್ಲೆ Read More »

ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ಇದೆಯಂತೆ ಹಲವು ವ್ಯಕ್ತಿಗಳ ಕಳೇಬರ| ಸೌಜನ್ಯ ಮಾವ ವಿಠಲಗೌಡರಿಂದ ಸ್ಪೋಟಕ ಹೇಳಿಕೆ

ಸಮಗ್ರ ನ್ಯೂಸ್: ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯ ತೋರಿಸಿದ ಜಾಗಗಳಲ್ಲಿ ಬಂಗ್ಲೆಗುಡ್ಡೆ ಶೋಧ ಕಾರ್ಯ ಮುಗಿದ ಬಳಿಕ, ಸೌಜನ್ಯಾ ಮಾವ ವಿಠಲಗೌಡರ ಎಂಟ್ರಿಯಾಗಿದೆ. ಈಗಾಗಲೇ ವಿಠಲಗೌಡ ವಿರುದ್ಧ ಹಲವು ಆರೋಪ ಕೇಳಿಬಂದಿದ್ದು, ಎಸ್‌ಐಟಿ ತನಿಖೆಯೂ ನಿರಂತರವಾಗಿ ನಡೆಯುತ್ತಿದೆ. ಇದೀಗ ಎಸ್‌ಐಟಿ ನಡೆಸಿದ ಬಂಗ್ಲೆಗುಡ್ಡೆ ಸ್ಥಳ ಮಹಜರಿನ ಬಳಿಕ ವಿಠಲಗೌಡ ಕೊಟ್ಟ ಹೇಳಿಕೆಯೊಂದು ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಹೇಳಿದ್ದೇನು?ಎಸ್ ಐಟಿ ವಿಚಾರಣೆ ನಡೆಯುತ್ತಿರುವಾಗಲೇ ಸೌಜನ್ಯಾ ಮಾವ ಸ್ಪೋಟಕ ಹೇಳಿಕೆ ನೀಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. “ಬಂಗ್ಲೆಗುಡ್ಡೆ ಪ್ರದೇಶಕ್ಕೆ ಎಸ್

ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ಇದೆಯಂತೆ ಹಲವು ವ್ಯಕ್ತಿಗಳ ಕಳೇಬರ| ಸೌಜನ್ಯ ಮಾವ ವಿಠಲಗೌಡರಿಂದ ಸ್ಪೋಟಕ ಹೇಳಿಕೆ Read More »