ರಾಜ್ಯ

ಸೆ.19ರಂದು ಗಣೇಶ ಚತುರ್ಥಿ ಸಾರ್ವತ್ರಿಕ ರಜೆ ಇಲ್ಲ!

ಸಮಗ್ರ ನ್ಯೂಸ್: ಈ ಬಾರಿ ಶ್ರೀ ಗಣೇಶ ಚತುರ್ಥಿ ಆಚರಿಸುವ ಸೆ.19ರಂದು ಸಾರ್ವತ್ರಿಕ ರಜೆ ಇಲ್ಲ; ಬದಲಾಗಿ ಒಂದು ದಿನ ಮೊದಲೇ ರಜೆ ಇರುತ್ತದೆ! ಸೆ. 19ರಂದು ಗಣೇಶ ಹಬ್ಬದ ದಿನಕ್ಕೆ ಇರಬೇಕಾದ ರಜೆ ಸೆ.18ರಂದು ಎಂದು ಸರಕಾರದ ಕ್ಯಾಲೆಂಡರ್‌ನಲ್ಲಿ ಉಲ್ಲೇಖವಾಗಿದೆ. ಹೀಗಾಗಿ, ಕರ್ತವ್ಯದ ದಿನದಲ್ಲೇ ಹಬ್ಬ ಆಚರಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಕರಾವಳಿ ಭಾಗದಲ್ಲಿ ಆಕ್ಷೇಪಕ್ಕೆ ಕಾರಣವಾಗಿದೆ. ರಾಜ್ಯ ಸರಕಾರ ಪ್ರಕಟಿಸಿದ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ಸೆ.18ರಂದು ವರಸಿದ್ಧಿವಿನಾಯಕ ವೃತ ರಜೆ ಎಂದಿದೆ. ಪಂಚಾಂಗ ಪ್ರಕಾರ

ಸೆ.19ರಂದು ಗಣೇಶ ಚತುರ್ಥಿ ಸಾರ್ವತ್ರಿಕ ರಜೆ ಇಲ್ಲ! Read More »

ಚಿಕ್ಕಮಗಳೂರು : ಎತ್ತಿನಗಾಡಿ ನೊಗ ಬಡಿದು ಯುವಕ ಸಾವು

ಸಮಗ್ರ ನ್ಯೂಸ್: ಎತ್ತಿನ‌ ಗಾಡಿ ಸ್ಪರ್ಧೆಯಲ್ಲಿ ವೇಗವಾಗಿದ್ದ ಎತ್ತಿನ ಗಾಡಿಯ ನೊಗ ತಲೆಗೆ ಹೊಡೆದು ಯುವಕ ಸಾವಿಗೀಡಾದ ಘಟನೆ ಸೆ. 9ರಂದು ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ. ಭರತ್ (25) ಮೃತರಾಗಿದ್ದು. ಇವರು ಫೈನಲ್ ಸುತ್ತಿನ ಅಂತಿಮ ಸ್ಪರ್ಧೆಯಲ್ಲಿ ನೊಗ ಹಿಡಿಯಲು ಹೋಗಿದ್ದರು. ಈ ವೇಳೆ ಸ್ಪರ್ಧೆಯ ಕೊನೆಯಲ್ಲಿ ಎತ್ತುಗಳ ನೊಗ ಹಿಡಿದು ನಿಲ್ಲಿಸಲು ಮುಂದಾದಾಗ ಈ ದುರ್ಘಟನೆ ನಡೆದಿದೆ.

ಚಿಕ್ಕಮಗಳೂರು : ಎತ್ತಿನಗಾಡಿ ನೊಗ ಬಡಿದು ಯುವಕ ಸಾವು Read More »

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸರಕಾರದಿಂದ ಸ್ಪರ್ಧಾತ್ಮಕ ಪರೀಕ್ಷಾ ಉಚಿತ ತರಬೇತಿ

ಸಮಗ್ರ ನ್ಯೂಸ್: ಸರಕಾರವು ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ ಉಚಿತ ವಸತಿ ಸಹಿತ ಐಎಎಸ್, ಕೆಎಎಸ್ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು,ಕೂಡಲೇ 2023-24 ನೇ ಸಾಲಿನಲ್ಲಿ ಉಚಿತವಾಗಿ ತರಬೇತಿ ಪಡೆಯಬಹುದಾಗಿದೆ. ಈ ಸದಾವಕಾಶವನ್ನು ಸದುಪಯೋಗಪಡಿಸಲು ಇಲ್ಲಿದೆ ಪೂರ್ಣ ಮಾಹಿತಿ ಇದು ೧೦ ತಿಂಗಳ ತರಬೇತಿ ಆಗಿದ್ದು, ೨೦೨೩-೨೪ನೇ ಸಾಲಿನಲ್ಲಿ ಬೆಂಗಳೂರಿನ ಕರ್ನಾಟಕ ಹಜ್‌ ಭವನದಲ್ಲಿ ನಡೆಯಲಿರುವ ಐಎಎಸ್‌, ಕೆಎಎಸ್‌ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ಪಡೆಯಲು ಬಯಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಈ ಪರೀಕ್ಷೆಗೆ ಅಲ್ಪಸಂಖ್ಯಾತ ಸಮುದಾಯವಾದ

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸರಕಾರದಿಂದ ಸ್ಪರ್ಧಾತ್ಮಕ ಪರೀಕ್ಷಾ ಉಚಿತ ತರಬೇತಿ Read More »

ಗೃಹಲಕ್ಷ್ಮಿ ಹಣ ಜಮೆ ಆಗಿಲ್ವಾ? ಹೀಗಿ ಮಾಡಿ…

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಅತ್ಯಂತ‌ ಮಹತ್ಬಾಕಾಂಕ್ಷಿ‌ ಯೋಜನೆ‌ ಗೃಹಲಕ್ಷ್ಮಿ. ಮನೆಯೊಡತಿಗೆ ಪ್ರತಿ ತಿಂಗಳು ಎರಡು ಸಾವಿರ ಹಣ ಘೋಷಿಸಿದಂತೆ ಈಗಾಗಲೇ ಕಳೆದೊಂದು ವಾರದಿಂದ ಹಣ ಅವರ ಬ್ಯಾಂಕ್ ಖಾತೆಗೆ ಡಿಬಿಟಿ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಇದರ ಪ್ರಮಾಣ ಶೇ.45ರಷ್ಟು ಇದ್ದರೆ ರಾಜಧಾನಿ ಬೆಂಗಳೂರಿನಲ್ಲಿಯೇ ಇದರ ಶೇಕಡಾ 20ರಷ್ಟು ತಲುಪಿಲ್ಲ. ಇನ್ನು ಹತ್ತು ದಿನದಲ್ಲಿ ಉಳಿದವರಿಗೆ ಹಣ ಜಮೆ ಆಗಲಿದೆ. ಇದರಲ್ಲಿ ಕ್ರಮವಾಗಿ ಬೆಂಗಳೂರು ನಗರ 380, ಗ್ರಾಮಾಂತರ ಜಿಲ್ಲೆಯ 478 ಮನೆಯೊಡತಿ ಬ್ಯಾಂಕ್ ಅಕೌಂಟ್ ಕೆವೈಸಿ, ಆಧಾರ್

ಗೃಹಲಕ್ಷ್ಮಿ ಹಣ ಜಮೆ ಆಗಿಲ್ವಾ? ಹೀಗಿ ಮಾಡಿ… Read More »

ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಂಜು | ದಾರಿ ಕಾಣದೆ ಎರಡು ಅಪಘಾತ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಂಜು ಕವಿದಿದ್ದು ವಾಹನ ಸಂಚಾರಿಸಲಾಗದೆ ಸೆ.8 ರಂದು ಸಂಜೆ ಎರಡು ಅಪಘಾತಗಳು ಸಂಭವಿಸಿವೆ. 22 ಕಿ.ಮೀ. ವ್ಯಾಪ್ತಿಯ ಕೊಟ್ಟಿಗೆಹಾರ-ಚಾರ್ಮಾಡಿ ಮಾರ್ಗದಲ್ಲಿ ಬಿದಿರುತಳ ಗ್ರಾಮದ ಬಸ್ ನಿಲ್ದಾಣದ ಬಳಿ ಮಂಗಳೂರಿಗೆ ಹೋಗುತ್ತಿದ್ದ ಬೊಲೆರೋ ವಾಹನವೊಂದು ದಟ್ಟ ಮಂಜಿನಲ್ಲಿ ಸರಿಯಾಗಿ ದಾರಿ ಕಾಣದೆ ರಸ್ತೆಯ ಒಂದು ಬದಿಯ ಪ್ರಪಾತಕ್ಕೆ ಅಡ್ಡಲಾಗಿ ಕಟ್ಟಿದ್ದ ತಡೆಗೋಡೆಗೆ ಡಿಕ್ಕಿಯೊಡೆದು ಪಲ್ಟಿಯಾಗಿದ್ದು,ಅದೃಷ್ಟವಶಾತ್ ಭಾರೀ ಅನಾಹುತದಿಂದ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮತ್ತೊಂದು ಅಪಘಾತ

ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಂಜು | ದಾರಿ ಕಾಣದೆ ಎರಡು ಅಪಘಾತ Read More »

ರಾಜ್ಯದ ಬ್ಯಾಂಕ್ ಗಳಲ್ಲಿ ಕನ್ನಡ ಕಡ್ಡಾಯ| ಹೊಸ ನಿಯಮ ಜಾರಿಗೆ ಸರ್ಕಾರ ಸಿದ್ಧತೆ

ಸಮಗ್ರ ನ್ಯೂಸ್: ರಾಜ್ಯದ ಎಲ್ಲಾ ಬ್ಯಾಂಕ್ ಗಳಲ್ಲೂ ಇನ್ಮುಂದೆ ಕನ್ನಡ ಕಡ್ಡಾಯವಾಗಿದ್ದು, ಹೊಸ ನಿಯಮ ಜಾರಿಗೆ ತರಲು ಸರ್ಕಾರ ಸಿದ್ದತೆ ನಡೆಸಿದೆ. ರಾಜ್ಯದ ಎಲ್ಲಾ ಬ್ಯಾಂಕುಗಳಲ್ಲಿ ಉದ್ಯೋಗಿಗಳು ಗ್ರಾಹಕರೊಂದಿಗೆ ಕನ್ನಡದಲ್ಲಿ ವ್ಯವಹರಿಸುವುದು ಕಡ್ಡಾಯವಾಗಿದೆ. ಈ ಮೂಲಕ ಮಹತ್ವದ ಕ್ರಮ ಜಾರಿಗೊಳ್ಳಲು ಸರ್ಕಾರ ಸಿದ್ದತೆ ನಡೆಸಿದೆ. ಈ ಹಿನ್ನೆಲೆ ಕನ್ನಡ ಮತ್ತು ಸಂಸ್ಕೃತ ಇಲಾಖೆಯಲ್ಲಿ ಈಗಾಗಲೇ ಒಂದೆರಡು ಸುತ್ತಿನ ಗಂಭೀರ ಚರ್ಚೆಗಳು ನಡೆದಿದೆ, ಸೂಕ್ತ ನಿಯಮಾವಳಿ ರೂಪಿಸಲು ಚಿಂತನೆ ನಡೆಸಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ, ಸರ್ಕಾರೇತರ ಸಂಘ, ಬ್ಯಾಂಕುಗಳಲ್ಲಿ

ರಾಜ್ಯದ ಬ್ಯಾಂಕ್ ಗಳಲ್ಲಿ ಕನ್ನಡ ಕಡ್ಡಾಯ| ಹೊಸ ನಿಯಮ ಜಾರಿಗೆ ಸರ್ಕಾರ ಸಿದ್ಧತೆ Read More »

ಹವಾಮಾನ ವರದಿ| ಬಂಗಾಳ ಕೊಲ್ಲಿಯಲ್ಲಿ ತೀವ್ರಗೊಂಡ ವಾಯುಭಾರ ಕುಸಿತ| ಇಂದಿನಿಂದ ೫ ದಿನ ಭಾರೀ ಮಳೆ ಸಂಭವ| ಕರಾವಳಿಗೆ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಲ್ಲಿ ಇಂದಿನಿಂದ 5 ದಿನಗಳ ಕಾಲ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಬಹುತೇಕ ಕಡೆಗಳಲ್ಲಿ ಬಾರೀ ಮಳೆಯಾಗಲಿದೆ. ಉತ್ತರ ಒಳನಾಡಿನ ರಾಯಚೂರು, ಬೀದರ್, ಕೊಪ್ಪಳ, ಕಲಬುರ್ಗಿ, ವಿಜಯಪುರ ಹಾಗೂ ದ.ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಮಳೆಯಾಗುವ ಸಾಧ್ಯತೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ

ಹವಾಮಾನ ವರದಿ| ಬಂಗಾಳ ಕೊಲ್ಲಿಯಲ್ಲಿ ತೀವ್ರಗೊಂಡ ವಾಯುಭಾರ ಕುಸಿತ| ಇಂದಿನಿಂದ ೫ ದಿನ ಭಾರೀ ಮಳೆ ಸಂಭವ| ಕರಾವಳಿಗೆ ಎಲ್ಲೋ ಅಲರ್ಟ್ Read More »

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ‌72 ಹಾವುಗಳು, 6 ಮಂಗಗಳು ವಶಕ್ಕೆ

ಸಮಗ್ರ ನ್ಯೂಸ್: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬುಧವಾರ 55 ಬಾಲ್ ಹೆಬ್ಬಾವುಗಳು, 17 ಕಿಂಗ್ ಕೋಬ್ರಾಗಳು ಮತ್ತು ಆರು ಕಾಪುಚಿನ್ ಮಂಗಗಳನ್ನು ವಶಪಡಿಸಿಕೊಂಡಿದ್ದಾರೆ. ಇದರಲ್ಲಿ ಹೆಬ್ಬಾವುಗಳು ಮತ್ತು ನಾಗರಹಾವುಗಳು ಜೀವಂತವಾಗಿದ್ದು, ಕೋತಿಗಳು ಸತ್ತಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು ಕಸ್ಟಮ್ಸ್ ಹೇಳಿಕೆಯ ಪ್ರಕಾರ, ಪ್ರಾಣಿಗಳನ್ನು ಸಾಮಾನು ಸರಂಜಾಮುಗಳಲ್ಲಿ ತುಂಬಿಸಿ ಬ್ಯಾಂಕಾಕ್‌ನಿಂದ ಏರ್ ಏಷ್ಯಾ ವಿಮಾನದಲ್ಲಿ (ವಿಮಾನ ಸಂಖ್ಯೆ ಎಫ್‌ಡಿ 137) ಬುಧವಾರ ರಾತ್ರಿ 10:30 ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ‌72 ಹಾವುಗಳು, 6 ಮಂಗಗಳು ವಶಕ್ಕೆ Read More »

ಸೌಜನ್ಯ ಪ್ರಕರಣದ ಮರುತನಿಖೆ ಕುರಿತ ಅಪೀಲ್ ವಿಚಾರಣೆ| ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ ಎಂದು ಹೇಳಿದ ಹೈಕೋರ್ಟ್

ಸಮಗ್ರ ನ್ಯೂಸ್: ಹನ್ನೊಂದು ವರ್ಷಗಳ ಹಿಂದೆ ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರಕ್ಕೀಡಾಗಿ ಹತ್ಯೆಯಾಗಿರುವ ವಿದ್ಯಾರ್ಥಿನಿ ‌ಸೌಜನ್ಯರವರ ಪ್ರಕರಣದ ಮರು ತನಿಖೆ ನಡೆಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಿಲೇವಾರಿಗೊಳಿಸಿದೆ. ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿಗಳಾದ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯರವರನ್ನು ಅಪಹರಿಸಿ ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಇಲಾಖೆ, ಸಿಐಡಿ ಮತ್ತು ಸಿಬಿಐಯಿಂದ ತನಿಖೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿದ್ದ ಕಾರ್ಕಳದ ಸಂತೋಷ್

ಸೌಜನ್ಯ ಪ್ರಕರಣದ ಮರುತನಿಖೆ ಕುರಿತ ಅಪೀಲ್ ವಿಚಾರಣೆ| ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ ಎಂದು ಹೇಳಿದ ಹೈಕೋರ್ಟ್ Read More »

ಲೋಕಸಭಾ ಚುನಾವಣೆ| ತೆನೆ ಬಿಟ್ಟು ಕಮಲ ಹೊರಲಿರುವ ಮಹಿಳೆ| ಮೈತ್ರಿಸೂತ್ರ ಒಪ್ಪಿಕೊಳ್ಳಲು ಯಡಿಯೂರಪ್ಪ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ 2024ಕ್ಕೂ ಮುನ್ನ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ಜೆಡಿಎಸ್‌-ಬಿಜೆಪಿ ಮೈತ್ರಿ ಬಗ್ಗೆ ಚರ್ಚೆ ಮಾಡಿ ಒಪ್ಪಂದ ಮಾಡಿಕೊಂಡಿದ್ದಾರೆ. ಈ ಮೈತ್ರಿ ಯಶಸ್ವಿಯೂ ಆಗಿದ್ದು, ಕ್ಷೇತ್ರಗಳ ಹಂಚಿಕೆಯ ಒಪ್ಪಂದವನ್ನೂ ಮಾಡಿಕೊಳ್ಳಲಾಗಿದೆ. ಬಿಜೆಪಿಯಿಂದ ಅಥವಾ ಜೆಡಿಎಸ್ ಕಡೆಯಿಂದ ಅಧಿಕೃತ ಪ್ರಕಟಣೆಯಷ್ಟೇ ಬಾಕಿಯಿದೆ.ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪನವರು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಒಪ್ಪಿಗೆ

ಲೋಕಸಭಾ ಚುನಾವಣೆ| ತೆನೆ ಬಿಟ್ಟು ಕಮಲ ಹೊರಲಿರುವ ಮಹಿಳೆ| ಮೈತ್ರಿಸೂತ್ರ ಒಪ್ಪಿಕೊಳ್ಳಲು ಯಡಿಯೂರಪ್ಪ Read More »