ರಾಜ್ಯ

ರೋಹಿಣಿ ಸಿಂಧೂರಿಗೆ ರಾಜ್ಯ ಸರ್ಕಾರದಿಂದ ಶಾಕ್| ‘ಆ’ ಕೇಸ್ ನ ತನಿಖೆಗೆ ಆದೇಶ

ಸಮಗ್ರ ನ್ಯೂಸ್: ಮೈಸೂರು ಜಿಲ್ಲಾಧಿಕಾರಿ ನಿವಾಸದ ನವೀಕರಣ ಹಾಗೂ ಬಟ್ಟೆಬ್ಯಾಗ್‌ ಖರೀದಿಯಲ್ಲಿ ನಿಯಮ ಉಲ್ಲಂಘಿಸಿರುವ ಆರೋಪದಲ್ಲಿ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಸಿಂಧೂರಿ(Rohini sindhuri IAS)ಯವರು ಮೈಸೂರು ಜಿಲ್ಲಾಧಿಕಾರಿ ಆಗಿದ್ದ ವೇಳೆ ಮಾಡಿದ್ದ ಜಿಲ್ಲಾಧಿಕಾರಿ ನಿವಾಸದ ನವೀಕರಣ ಹಾಗೂ ಬಟ್ಟೆಬ್ಯಾಗ್‌ ಖರೀದಿಯಲ್ಲಿ ನಿಯಮ ಉಲ್ಲಂಘನೆ ಆರೋಪ ಈಗ ಸಾಬೀತಾಗಿದ್ದು, ಸರ್ಕಾರದ ಪ್ರಾಥಮಿಕ ತನಿಖಾ ವರದಿ ಪ್ರಕಾರ ಅವರ ಮೇಲೆ ಶಿಸ್ತುಕ್ರಮ ಕೈಗೊಳ್ಳಲು ಡಿಪಿಎಆರ್‌ ಅಧೀನ ಕಾರ್ಯದರ್ಶಿ ಜೇಮ್ಸ ಥಾರಖನ್‌

ರೋಹಿಣಿ ಸಿಂಧೂರಿಗೆ ರಾಜ್ಯ ಸರ್ಕಾರದಿಂದ ಶಾಕ್| ‘ಆ’ ಕೇಸ್ ನ ತನಿಖೆಗೆ ಆದೇಶ Read More »

ದಸರಾ ರಜೆಗೆ ಈ ಬಾರಿಯೂ ಕತ್ತರಿ| ವಿದ್ಯಾರ್ಥಿ, ಶಿಕ್ಷಕರಿಗೆ ನಿರಾಸೆ

ಸಮಗ್ರ ನ್ಯೂಸ್: ಅಕ್ಟೋಬರ್ ತಿಂಗಳಿನಲ್ಲಿ ಶಾಲೆಗಳಿಗೆ ದಸರಾ ರಜೆ ಸಿಗಲಿದೆ ಎಂದು ಖುಷಿಯಲ್ಲಿದ್ದ ವಿದ್ಯಾರ್ಥಿಗಳಿಗೆ ನಿರಾಸೆಯಾಗಿದೆ. ದಸರಾ ರಜೆ ನೀಡುವ ಕುರಿತು ಪರಿಷ್ಕೃತ ಮಾರ್ಗಸೂಚಿ ಪ್ರಕಟವಾಗಿದೆ. ರಜೆಯಲ್ಲಿ ಕಡಿತ ಮಾಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರಿ ಶಾಲೆಗಳ ದಸರಾ ರಜೆಯನ್ನು ಕಡಿತಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದು ಶಿಕ್ಷಕರ ಆಕ್ರೋಶಕ್ಕೆ ಕಾರಣವಾಗಿದೆ. ಅಕ್ಟೋಬರ್ 2ರಿಂದ 29ರ ತನಕ ದಸರಾ ರಜೆಯನ್ನು ನೀಡಲಾಗುತ್ತಿತ್ತು. ಕೋವಿಡ್ ಸಂದರ್ಭದಲ್ಲಿ ಲಾಕ್‌ಡೌನ್ ಸಮಯದಲ್ಲಿ ನಡೆಯದ ತರಗತಿ ಸರಿದೂಗಿಸಲು ದಸರಾ ರಜೆ ಕಡಿತ ಮಾಡಲಾಗಿತ್ತು. ಆದರೆ

ದಸರಾ ರಜೆಗೆ ಈ ಬಾರಿಯೂ ಕತ್ತರಿ| ವಿದ್ಯಾರ್ಥಿ, ಶಿಕ್ಷಕರಿಗೆ ನಿರಾಸೆ Read More »

ಇನ್ಮುಂದೆ RTO ನಿಯಮಗಳನ್ನು ಪಾಲಿಸದೆ ವಾಹನ ಚಲಾಯಿಸಿದರೆ DL ಕ್ಯಾನ್ಸಲ್

ಸಮಗ್ರ ನ್ಯೂಸ್: ದಿನಗಳೆದಂತೆ ವಾಹನಗಳ ಸಂಖ್ಯೆ ಹೆಚ್ಚುತ್ತಿದ್ದು, ಎಲ್ಲರೂ ತಮ್ಮ ಸ್ವಂತ ವಾಹನಗಳಲ್ಲೇ ಓಡಾಡಬೇಕು ಎಂದು ಬಯಸುವ ಈ ಕಾಲದಲ್ಲಿ ಪ್ರತಿಯೊಬ್ಬರ ಮನೆಯಲ್ಲೂ ಕನಿಷ್ಠ ಒಂದು ವಾಹನವಾದರು ಇದ್ದೇ ಇರುತ್ತದೆ. ಈ ವಾಹನ ದಟ್ಟಣೆಯಿಂದಾಗಿ ಟ್ರಾಫಿಕ್ (Traffic) ಕೂಡ ಹೆಚ್ಚಾಗುತ್ತಿದ್ದು, ವಾಹನ ಸಂಖ್ಯೆಗಳ ಏರಿಕೆಯು ನಗರಗಳಲ್ಲಿ ಪ್ರಯಾಣ ದಟ್ಟಣೆಯಿಂದ ಹೆಚ್ಚಾಗುತ್ತಿದೆ. ವೇಗವಾಗಿ ಚಾಲನೆ ಮಾಡುವುದರಿಂದ ಆಕ್ಸಿಡೆಂಟ್ ಗಳು ಕೂಡ ಹೆಚ್ಚುತ್ತಿದೆ. ಈ ಕಾರಣಕ್ಕೆ ಈಗ ವಾಹನಗಳ ವಿಚಾರಕ್ಕೆ ಸರ್ಕಾರ ಈಗ ಹೊಸದೊಂದು ನಿರ್ಧಾರ ತೆಗೆದುಕೊಂಡಿದೆ. ರಾಜ್ಯದಲ್ಲಿ ಇನ್ನುಮುಂದೆ

ಇನ್ಮುಂದೆ RTO ನಿಯಮಗಳನ್ನು ಪಾಲಿಸದೆ ವಾಹನ ಚಲಾಯಿಸಿದರೆ DL ಕ್ಯಾನ್ಸಲ್ Read More »

ಮಡಿಕೇರಿ:ಕಾರು-ಬೈಕ್ ಮುಖಾಮುಖಿ ಡಿಕ್ಕಿ| ಮೂವರು ಗಂಭೀರ ಗಾಯ

ಸಮಗ್ರ ನ್ಯೂಸ್: ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ನಲ್ಲಿದ್ದ ವ್ಯಕ್ತಿ ಗಂಭೀರ ಗಾಯಗೊಂಡ ಘಟನೆ ನಾಪೋಕ್ಲು ಮೂರ್ನಾಡು ಸಂಪರ್ಕ ಕಲ್ಪಿಸುವ ಹೊದ್ದೂರು ಬಳಿಯ ಬೊಳಿಬಾಣೆ ಎಂಬಲ್ಲಿ ನಡೆದಿದೆ. ಮಗು ಸೇರಿದಂತೆ ಮೂವರು ಬೈಕ್ ನಲ್ಲಿ ಸಂಚರಿಸುತ್ತಿದ್ದರು. ಅಪಘಾತದಲ್ಲಿ ಮೂವರ ಕಾಲುಗಳಿಗೆ ಗಂಭೀರ ಗಾಯವಾಗಿದ್ದು, ಇಬ್ಬರು ಗಾಯಾಳುಗಳನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ. ಮತ್ತು ಮಗುವಿಗೆ ನಾಪೋಕ್ಲು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ನಾಪೋಕ್ಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಡಿಕೇರಿ:ಕಾರು-ಬೈಕ್ ಮುಖಾಮುಖಿ ಡಿಕ್ಕಿ| ಮೂವರು ಗಂಭೀರ ಗಾಯ Read More »

ಶಾಲಾ ಮಕ್ಕಳ ಮೇಲೆ ಹರಿದ ಯಮಸ್ವರೂಪಿ ಬಸ್| ಇಬ್ಬರು ಮಕ್ಕಳು ಗಂಭೀರ; ಐವರು ಕೂದಲೆಳೆಯಲ್ಲಿ ಪಾರು

ಸಮಗ್ರ ನ್ಯೂಸ್: ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ಸೊಂದು ಹರಿದ ಪರಿಣಾಮ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡ ಆತಂಕಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ನಲ್ಲಿ ನಡೆದಿದೆ. ತುಳಸಿ (15) ನಿವೇದಿತ (14) ಎಂಬ ಇಬ್ಬರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರವಾಗಿದೆ. ಇವರನ್ನು ತಕ್ಷಣವೇ ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ರವಾನಿಸಲಾಗಿದೆ. ಘಟನೆ ವೇಳೆ ಸ್ಥಳದಲ್ಲಿದ್ದ ಐವರು ಮಕ್ಕಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಓವರ್ ಸ್ಪೀಡ್ ನಿಂದ

ಶಾಲಾ ಮಕ್ಕಳ ಮೇಲೆ ಹರಿದ ಯಮಸ್ವರೂಪಿ ಬಸ್| ಇಬ್ಬರು ಮಕ್ಕಳು ಗಂಭೀರ; ಐವರು ಕೂದಲೆಳೆಯಲ್ಲಿ ಪಾರು Read More »

ದೇವರಮನೆಯಲ್ಲಿ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು

ಸಮಗ್ರ ನ್ಯೂಸ್: ಕೊಟ್ಟಿಗೆಹಾರದ‌ ಬಣಕಲ್ ಸಮೀಪದ ದೇವರಮನೆ ಸಾಗುವ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ಬಿದ್ದ ಘಟನೆ ನಡೆದಿದೆ. ದೇವರಮನೆ ದೇವಸ್ಥಾನ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ಕಾರು ದೇವರಮನೆಯ ಗುಡ್ಡೆತೋಟ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಫಿ ತೋಟದ ಕಂದಕಕ್ಕೆ ಬಿದ್ದಿದೆ.ಕಾರಿನಲ್ಲಿ ಇದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ದೇವರಮನೆಯಲ್ಲಿ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು Read More »

ಕೊಟ್ಟಿಗೆಹಾರದಲ್ಲಿ ಭರ್ಜರಿ ಮಳೆ

ಸಮಗ್ರ ನ್ಯೂಸ್: ಕೊಟ್ಟಿಗೆಹಾರ, ಬಣಕಲ್ ಸುತ್ತಮುತ್ತ ಬುಧವಾರ ಸಂಜೆ 7 ಗಂಟೆಗೆ ಆರಂಭವಾಗಿ ಅರ್ಧ ಗಂಟೆಗೂ ಅಧಿಕ ಕಾಲ ಸುರಿಯಿತು. ಕೊಟ್ಟಿಗೆಹಾರದ ಮುಖ್ಯ ರಸ್ತೆಯಲ್ಲಿ ನೀರು ಹರಿಯುವ ದೃಶ್ಯ ಕಂಡು ಬಂತು. ಮಳೆ ಅನೇಕ ದಿನಗಳಿಂದ ಇಲ್ಲದೆ ಜನರು ಕಂಗಾಲಾಗಿದ್ದರು. ಈ ಬಾರಿ ಮಳೆ ಇಲ್ಲದೇ ಬರಗಾಲದ ಛಾಯೆ ಮೂಡಿತ್ತು.ಮಳೆಗಾಲದಲ್ಲಿ ಅತಿಯಾಗಿ ಸುರಿಯುವ ಎಲ್ಲಾ ಮಳೆಗಳು ಈ ಬಾರಿ ಕೈಕೊಟ್ಟಿದ್ದು ಬುಧವಾರದ ಮಳೆಯಿಂದ ರೈತರು ತುಸು ನಿಟ್ಟುಸಿರು ಬಿಟ್ಟರು.

ಕೊಟ್ಟಿಗೆಹಾರದಲ್ಲಿ ಭರ್ಜರಿ ಮಳೆ Read More »

ದುರಸ್ತಿ ಆಗುತ್ತಿರುವ ಜನರಲ್ ತಿಮ್ಮಯ್ಯ ಪ್ರತಿಮೆ ಪರಿಶೀಲಿಸಿದ ಸಂಸದ ಪ್ರತಾಪ್ ಸಿಂಹ

ಸಮಗ್ರ ನ್ಯೂಸ್: ಸುಮಾರು ಒಂದು ತಿಂಗಳ ಹಿಂದೆ ಮಡಿಕೇರಿಯ ಬಸ್ ಡಿಕ್ಕಿ ಹೊಡೆದು ಜನರಲ್ ಕೆ.ಎಸ್ ತಿಮ್ಮಯ್ಯರವರ ಪ್ರತಿಮೆ ಹಾನಿಗೊಂಡಿತ್ತು. ಇದೀಗ ಆ ಪ್ರತಿಮೆಯನ್ನು ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಪ್ರತಿಮೆಯ ದುರಸ್ತಿ ಕಾರ್ಯವನ್ನು ಕೈಗೊಂಡಿದ್ದು, ಇಂದು ಸಂಸದ ಪ್ರತಾಪ್ ಸಿಂಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದುರಸ್ತಿ ಆಗುತ್ತಿರುವ ಜನರಲ್ ತಿಮ್ಮಯ್ಯ ಪ್ರತಿಮೆ ಪರಿಶೀಲಿಸಿದ ಸಂಸದ ಪ್ರತಾಪ್ ಸಿಂಹ Read More »

ನಾವು ಹಿಂದೂಗಳಲ್ವೇ? ಇದ್ಯಾವುದು ಹೊಸ ಸನಾತನ ಧರ್ಮ?, ಹಿಂದೂ ಎಂದು ಅರಚುತ್ತಿದ್ದವರು ಎಲ್ಲೋದ್ರು? – ನಟ ಕಿಶೋರ್

ಸಮಗ್ರ ನ್ಯೂಸ್: ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಬಗ್ಗೆ ಹೇಳಿಕೆಯೊಂದನ್ನು ನೀಡಿದ್ದರು. ಅದಕ್ಕೆ ಹಿಂದೂ ಸಂಘಟನೆಗಳು, ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಅಯೋಧ್ಯೆ ಸ್ವಾಮಿಯೊಬ್ಬರು ಉದಯನಿಧಿ ಸ್ಟಾಲಿನ್ ಅವರ ತಲೆ ಕಡಿಯಬೇಕು ಎಂದಿದ್ದಾರೆ. ಇದಕ್ಕೆ ಖ್ಯಾತ ಬಹುಭಾಷಾ ನಟ ಕಿಶೋರ್ ಕುಮಾರ್ ಅವರು ಕಿಡಿ ಕಾರಿದ್ದಾರೆ. ಈ ಬಗ್ಗೆ ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ”ಇಷ್ಟೂ ದಿನ ಹಿಂದೂ ಹಿಂದೂ ಎಂದು ಅರಚುತಿದ್ದವರೆಲ್ಲ ಯಾಕೋ ಆ ಪದ ಬಿಟ್ಟೇ ಬಿಟ್ಟರೆನಿಸುತ್ತಿಲ್ಲವೇ? ಹಾಗಾದರೆ

ನಾವು ಹಿಂದೂಗಳಲ್ವೇ? ಇದ್ಯಾವುದು ಹೊಸ ಸನಾತನ ಧರ್ಮ?, ಹಿಂದೂ ಎಂದು ಅರಚುತ್ತಿದ್ದವರು ಎಲ್ಲೋದ್ರು? – ನಟ ಕಿಶೋರ್ Read More »

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ರಾಜ್ಯಾದ್ಯಂತ ಉತ್ತಮ ಮಳೆ ಸಂಭವ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿ ಸಮುದ್ರದ ವಾಯವ್ಯ ಮತ್ತು ಪಶ್ಚಿಮ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಈ ಕುರಿತು ಭಾರತೀಯ ಹವಾಮಾನ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಈ ವಾಯುಭಾರ ಕುಸಿತವು ಕರ್ನಾಟಕದ ಮೇಲೆ ಭಾರಿ ಮಳೆ ಸುರಿಸಲಿದೆ. ವಾಯುಭಾರ ಕುಸಿತದ ಸ್ಥಳದಲ್ಲಿ ಸಮುದ್ರ ಮೇಲ್ಮೈನಲ್ಲಿ 7.6 ಕೀಲೋ ಮಿಟರ್ ಎತ್ತರದಲ್ಲಿ ಸುಳಿಗಾಳಿಯೊಂದು ಸೃಷ್ಟಿಯಾಗಿದೆ. ಇದು ದಕ್ಷಿಣಕ್ಕೆ ಓರೆಯಾಗಿದ್ದು, ಅದೇ ಮಾರ್ಗವಾಗಿ ದಟ್ಟಗಾಳಿ ಬೀಸುವ ಸಾಧ್ಯೆತೆಗಳು ಇದೆ. ವಾಯುಭಾರ ಕುಸಿತ ಪ್ರಭಾವ ಕರ್ನಾಟಕದ ಉತ್ತರ ಒಳನಾಡು

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ರಾಜ್ಯಾದ್ಯಂತ ಉತ್ತಮ ಮಳೆ ಸಂಭವ Read More »