ರಾಜ್ಯ

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಲಘು ಸ್ಟ್ರೋಕ್| ಅಪೋಲೋ ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಜಯನಗರದ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಅಪ್ಡೇಟ್ ನೀಡಿರುವ ಆಸ್ಪತ್ರೆ ಡಾಕ್ಟರ್ ಸತೀಶ್‌ ಚಂದ್ರ, ಕುಮಾರಸ್ವಾಮಿ ಅವರಿಗೆ ಲಘುವಾಗಿ ಸ್ಟ್ರೋಕ್ ಆಗಿತ್ತು. ಸೂಕ್ತ ಚಿಕಿತ್ಸೆ ನೀಡಿದ್ದು, ಈಗ ಚೇತರಿಸಿಕೊಂಡಿದ್ದಾರೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಅವರ ಪತ್ನಿ ಅನಿತಾ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಅವರು ಆಸ್ಪತ್ರೆಯಿಂದ ಶುಕ್ರವಾರದಂದು ಡಿಸ್ಚಾರ್ಜ್

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಲಘು ಸ್ಟ್ರೋಕ್| ಅಪೋಲೋ ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ Read More »

ಮಡಿಕೇರಿ:ಅರಣ್ಯ ಇಲಾಖೆ ಮಹಿಳಾ ಅಧಿಕಾರಿ ನೇಣಿಗೆ ಶರಣು

ಸಮಗ್ರ ನ್ಯೂಸ್: ಮಡಿಕೇರಿಯ ಅರಣ್ಯ ಇಲಾಖೆಯ ವಸತಿ ಗೃಹದಲ್ಲಿ ಮಹಿಳಾ ಅಧಿಕಾರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.30 ರಂದು ನಡೆದಿದೆ. ಮೃತರು ಮಂಡ್ಯ ಮೂಲದ ರಶ್ಮಿ(27) ಎಂದು ತಿಳಿದಿದೆ. ಅರಣ್ಯ ಇಲಾಖೆ ರಿಸರ್ಚ್ ವಿಭಾಗದಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ರಶ್ಮಿ ಕಳೆದ ಎರಡು ವರ್ಷಗಳಿಂದ ಕೊಡಗಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಡಿಕೇರಿಯ ಅರಣ್ಯ ಇಲಾಖೆಯ ಡಿ.ಎಫ್‌.ಓ ಎ.ಟಿ ಪೂವಯ್ಯ ಅವರು ಸಂತಾಪ ಸೂಚಿಸಿದ್ದು. ಈ ಬಗ್ಗೆ ಮಡಿಕೇರಿ ನಗರ ಪೊಲೀಸ್

ಮಡಿಕೇರಿ:ಅರಣ್ಯ ಇಲಾಖೆ ಮಹಿಳಾ ಅಧಿಕಾರಿ ನೇಣಿಗೆ ಶರಣು Read More »

ರಾಜ್ಯದಲ್ಲಿ ‘ಗೃಹಲಕ್ಷ್ಮಿ’ ಯೋಜನೆಗೆ ಚಾಲನೆ| 1.11 ಕೋಟಿ ಮಹಿಳೆಯರ ಖಾತೆಗೆ ₹.2000 ಜಮಾ

ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹ ಲಕ್ಷ್ಮಿ ಯೋಜನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ‌ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹಾಗು ಸಚಿವ ಸಂಪುಟದ ಸಹೋದ್ಯೋಗಿಗಳು ಭಾಗವಹಿಸಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಲಕ್ಷಾಂತರ ಜನರು ಸೇರಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಉಪಸ್ಥಿತಿಯಲ್ಲಿ ಚಾಲನೆ ನೀಡಲಾಗಿದೆ. ಈ ಯೋಜನೆಯಡಿ ಮನೆಯ ಯಜಮಾನಿಗೆ 2000 ರೂಪಾಯಿ

ರಾಜ್ಯದಲ್ಲಿ ‘ಗೃಹಲಕ್ಷ್ಮಿ’ ಯೋಜನೆಗೆ ಚಾಲನೆ| 1.11 ಕೋಟಿ ಮಹಿಳೆಯರ ಖಾತೆಗೆ ₹.2000 ಜಮಾ Read More »

ಮಡಿಕೇರಿ: ಕೆ.ಎಸ್.ಅರ್.ಟಿ.ಸಿ. ಡಿಪೋ ಮ್ಯಾನೇಜರ್ ಕಿರುಕುಳ| ಡೆತ್ ನೋಟ್ ಬರೆದಿಟ್ಟು ಕಿರಿಯ ಸಹಾಯಕ ಆತ್ಮಹತ್ಯೆಗೆ ಯತ್ನ

ಸಮಗ್ರ ನ್ಯೂಸ್: ಮಡಿಕೇರಿ KSRTC ಡಿಪೋ ಮ್ಯಾನೇಜರ್ ಕಿರುಕುಳ ತಾಳಲಾರದೆ ಕಿರಿಯ ಸಹಾಯಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಆ. 29 ರಂದು ವರದಿಯಾಗಿದೆ. ಮಡಿಕೇರಿ ಡಿಪೋದ ಕಿರಿಯ ಸಹಾಯಕ ಅಭಿಷೇಕ್ ಎಂಬವರು ಅಲ್ಲಿನ ವ್ಯವಸ್ಥಾಪಕಿ ಗೀತಾ ಅವರಿಂದ ಅನುಭವಿಸುತ್ತಿರುವ ಮಾನಸಿಕ ಕಿರುಕುಳವನ್ನು ತಾಳಲಾರದೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದೀಗ ಮಡಿಕೇರಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಪೊಲೀಸರು ಅವರಿಂದ ಹೇಳಿಕೆ ಪಡೆದುಕೊಂಡಿದ್ದು, ಮಾನಸಿಕ ಕಿರುಕುಳವೆ ನನ್ನ ಈ ಪ್ರಯತ್ನಕ್ಕೆ ಕಾರಣ ಎಂದು ಸ್ಪಷ್ಟ

ಮಡಿಕೇರಿ: ಕೆ.ಎಸ್.ಅರ್.ಟಿ.ಸಿ. ಡಿಪೋ ಮ್ಯಾನೇಜರ್ ಕಿರುಕುಳ| ಡೆತ್ ನೋಟ್ ಬರೆದಿಟ್ಟು ಕಿರಿಯ ಸಹಾಯಕ ಆತ್ಮಹತ್ಯೆಗೆ ಯತ್ನ Read More »

ಇಂದು ಗೃಹಲಕ್ಷ್ಮಿ ಯೋಜನೆಗೆ ಮೆಗಾ ಲಾಂಚ್| ಮೈಸೂರಿನಲ್ಲಿ ನಡೆಯಲಿದೆ ಅದ್ಧೂರಿ ಕಾರ್ಯಕ್ರಮ

ಸಮಗ್ರ ನ್ಯೂಸ್: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ನಡೆಯಲಿರುವ ಗೃಹ ಲಕ್ಷ್ಮಿ ಖಾತರಿ ಯೋಜನೆಯ ಮೆಗಾ ಲಾಂಚ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಇಂದೇ ಬಿಪಿಎಲ್ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ಮಾಸಿಕ 2,000 ರೂ. ನ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ದೊರೆಯಲಿದೆ. ಮೈಸೂರು ನಗರದಾದ್ಯಂತ ಕಾಂಗ್ರೆಸ್‌ ನಾಯಕರ ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಾಗಿನಿಂದ ʻನುಡಿದಂತೆ ನಡೆದಿದ್ದೇವೆʼ ಎಂಬ ಘೋಷವಾಕ್ಯಗಳ ಬ್ಯಾನರ್‌ಗಳನ್ನು ಹಾಕಲಾಗಿದೆ. ಈಗಾಗಲೇ ಕಾರ್ಯಕ್ರಮಕ್ಕೆ ವೇದಿಕೆ ಸಿದ್ಧಗೊಂಡಿದ್ದು, ಮಧ್ಯಾಹ್ನ

ಇಂದು ಗೃಹಲಕ್ಷ್ಮಿ ಯೋಜನೆಗೆ ಮೆಗಾ ಲಾಂಚ್| ಮೈಸೂರಿನಲ್ಲಿ ನಡೆಯಲಿದೆ ಅದ್ಧೂರಿ ಕಾರ್ಯಕ್ರಮ Read More »

ಶೀಘ್ರದಲ್ಲೇ ಕರ್ನಾಟಕ ಬಿಜೆಪಿ ಮುಕ್ತವಾಗಲಿದೆ – ಎಂ‌.ಪಿ ರೇಣುಕಾಚಾರ್ಯ

ಸಮಗ್ರ ನ್ಯೂಸ್: ರಾಜ್ಯ ಬಿಜೆಪಿಯಲ್ಲಿ ಆಂತರಿಕ ಕಲಹ ಮುಂದುವರಿದಿದ್ದು, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರು, ʼʼಶೀಘ್ರದಲ್ಲೇ ರಾಜ್ಯ ಬಿಜೆಪಿ ಮುಕ್ತವಾಗಲಿದೆʼʼ ಎಂದು ಭವಿಷ್ಯ ನುಡಿದಿದ್ದಾರೆ. ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼʼಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬಲವಂತವಾಗಿ ಕೆಳಗಿಳಿಸಿದ ಪರಿಣಾಮ ಪಕ್ಷಕ್ಕೆ ಭಾರೀ ಹಾನಿಯಾಗಿದೆ.ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ಕಡೆಗಣಿಸಿದ್ದೇ ಬಿಜೆಪಿಗೆ ಶಾಪವಾಗಿ ಪರಿಣಮಿಸಿದೆʼʼ ಎಂದು ಕಿಡಿಕಾರಿದರು. ʼʼಬಿಜೆಪಿ ನಾಯಕರು ಭ್ರಮೆಯಲ್ಲಿ ಬದುಕುತ್ತಿದ್ದು, ಇದರಿಂದ ಮೊದಲು ಹೊರಬರಬೇಕು. ರಾಜ್ಯದ ಅಧ್ಯಕ್ಷರ ಅವಧಿ ಮುಗಿದರೂ ಇನ್ನೂ ರಾಜ್ಯಾಧ್ಯಕ್ಷರ ನೇಮಕ ಮಾಡಿಲ್ಲ.

ಶೀಘ್ರದಲ್ಲೇ ಕರ್ನಾಟಕ ಬಿಜೆಪಿ ಮುಕ್ತವಾಗಲಿದೆ – ಎಂ‌.ಪಿ ರೇಣುಕಾಚಾರ್ಯ Read More »

ಮಡಿಕೇರಿಯಿಂದ ಮೈಸೂರಿಗೆ ಸಾಗಿದ ಜನರಲ್ ತಿಮ್ಮಯ್ಯ ಪ್ರತಿಮೆ

ಸಮಗ್ರ ನ್ಯೂಸ್:ಆ. 21 ರಂದು ಸರಕಾರಿ ಬಸ್ ಡಿಕ್ಕಿಯಾಗಿ ಹಾನಿಗೊಳಗಾಗಿದ್ದ ಪ್ರತಿಮೆ 50 ವಷ೯ ಪರಂಪರೆಯುಳ್ಳ ವೀರಸೇನಾನಿ ಪ್ರತಿಮೆಯನ್ನು ಮಡಿಕೇರಿಯಿಂದ ಮೈಸೂರಿನಿಂದ ಮಾಡಿಕೇರಿಗೆ ಸಾಗಿಸಲಾಯಿತು. ಜನರಲ್ ತಿಮ್ಮಯ್ಯ ಪ್ರತಿಮೆಯನ್ನು ಮಡಿಕೇರಿಯ ತಿಮ್ಮಯ್ಯ ಮ್ಯೂಸಿಯಂ ಆವರಣದಲ್ಲಿಡಲಾಗಿತ್ತು. ಇದೀಗ ಪ್ರತಿಮೆಗೆ ಆದ ಹಾನಿಯನ್ನು ಸರಿಪಡಿಸಿ, ಸೂಕ್ತ ರೀತಿಯಲ್ಲಿ ದುರಸ್ಥಿಪಡಿಸುವ ನಿಟ್ಟಿನಲ್ಲಿ ಮೈಸೂರಿಗೆ ಸಾಗಾಣೆ ಮಾಡಲಾಯಿತು. ಈ ಪ್ರತಿಮೆಯನ್ನು ಸ್ಥಾಪಿಸಿದ್ದ ಹಿರಿಯರಾದ ಎಂ.ಸಿ.ನಾಣಯ್ಯ ಸಲಹೆ ಮೇರೆಗೆ ಇದೇ ಪ್ರತಿಮೆಯನ್ನು ದುರಸ್ಥಿ ಪಡಿಸಲು ಶಾಸಕರಾದ ಡಾ.ಮಂಥರ್ ಗೌಡ, ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟರಾಜು ಅವರ

ಮಡಿಕೇರಿಯಿಂದ ಮೈಸೂರಿಗೆ ಸಾಗಿದ ಜನರಲ್ ತಿಮ್ಮಯ್ಯ ಪ್ರತಿಮೆ Read More »

ದೇಶವಾಸಿಗಳಿಗೆ ಬಿಗ್ ರಿಲೀಪ್| ಅಡುಗೆ ಅನಿಲ ಬೆಲೆಯಲ್ಲಿ ಭಾರೀ ಇಳಿಕೆ

ಸಮಗ್ರ ನ್ಯೂಸ್: ಹಣದುಬ್ಬರದಿಂದ ಕಂಗೆಟ್ಟಿರುವ ಜನರಿಗೆ ಕೇಂದ್ರ ಸರ್ಕಾರ ಬಿಗ್ ರಿಲೀಫ್ ನೀಡಿದ್ದು, ಸರ್ಕಾರವು ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ 200 ರೂ.ವರೆಗೆ ಕಡಿತಗೊಳಿಸಿದೆ. ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ಮೇಲೆ 200 ರೂ.ಗಳ ಸಹಾಯಧನವನ್ನ ಸರ್ಕಾರ ಘೋಷಿಸಿದೆ. ಉಜ್ವಲ ಯೋಜನೆಯಡಿ ಬರುವ ಫಲಾನುಭವಿಗಳಿಗೆ ಈ ಸಹಾಯಧನವನ್ನ ನೀಡಲಾಗುವುದು. ಆಗಸ್ಟ್ ಒಂದರಂದು ಪೆಟ್ರೋಲಿಯಂ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 100 ರೂಪಾಯಿ ಕಡಿತಗೊಳಿಸಿದ್ದವು. ಆದ್ರೆ, ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅಂದ್ಹಾಗೆ, ಪೆಟ್ರೋಲಿಯಂ

ದೇಶವಾಸಿಗಳಿಗೆ ಬಿಗ್ ರಿಲೀಪ್| ಅಡುಗೆ ಅನಿಲ ಬೆಲೆಯಲ್ಲಿ ಭಾರೀ ಇಳಿಕೆ Read More »

ಸಂಗೀತ ನಿರ್ದೇಶಕ ಹಂಸಲೇಖರಿಗೆ ಒಲಿದ ಮೈಸೂರು ದಸರಾ ಉದ್ಘಾಟನಾ ಭಾಗ್ಯ

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಈ ಬಾರಿಯ ದಸರಾ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಸಂಗೀತ ನಿರ್ದೇಶಕ ಹಂಸಲೇಖ ಅವರು ಈ ಬಾರಿಯ ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಬಾರಿ ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಈ ಬಾರಿಯ ದಸರಾ ಉದ್ಘಾಟನೆಯನ್ನು ಸಂಗೀತ ನಿರ್ದೇಶಕ ಹಂಸಲೇಖ ನೆರವೇರಸಲಿದ್ದಾರೆ ಎಂದು ತಿಳಿಸಿದ್ದಾರೆ.

ಸಂಗೀತ ನಿರ್ದೇಶಕ ಹಂಸಲೇಖರಿಗೆ ಒಲಿದ ಮೈಸೂರು ದಸರಾ ಉದ್ಘಾಟನಾ ಭಾಗ್ಯ Read More »

ಉತ್ತರ, ದಕ್ಷಿಣವಲ್ಲ, ರಾಜಕಾರಣವೇ ಬೇಡ ಅಂತಿದ್ದೀನಿ| ಜನಸೇವೆಗೆ ಸಂಸದನಾಗಿಯೇ ಇರಬೇಕೆಂದಿಲ್ಲ- ಡಿ.ಕೆ ಸುರೇಶ್ ಅಚ್ಚರಿಯ ಹೇಳಿಕೆ

ಸಮಗ್ರ ನ್ಯೂಸ್: ಸದ್ಯಕ್ಕೆ ನಾನು ರಾಜಕಾರಣವೇ ಸಾಕು ಅಂತಿದ್ದೀನಿ. ನೀವು ನೋಡಿದರೆ ನನ್ನ ಉತ್ತರಕ್ಕೆ ಕರೆದುಕೊಂಡು ಹೋಗುತ್ತಿದ್ದೀರಿ. ಉತ್ತರವೋ? ದಕ್ಷಿಣವೋ? ಪೂರ್ವವೋ? ಪಶ್ಚಿಮವೋ ? ಯಾವುದೋ ಏನೋ ನನಗೆ ಗೊತ್ತಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ಕ್ಷೇತ್ರ ಬದಲಾವಣೆ ಮಾಡುವ ಚರ್ಚೆ ನಡೆದಿರುವ ಕುರಿತು ಪತ್ರಕರ್ತರು ಪ್ರಶ್ನಿಸಿದಾಗ ಈ ಉತ್ತರ ನೀಡಿದ ಅವರು ನನ್ನನ್ನು ರಾಜಕೀಯವಾಗಿ ಬೆಳೆಸುತ್ತಿರುವವರ ತೀರ್ಮಾನವೇ ಅಂತಿಮ. ರಾಜ್ಯ ರಾಜಕಾರಣ ರಾಷ್ಟ್ರ ರಾಜಕಾರಣ ಎಲ್ಲ ಒಂದೇಅಲ್ಲವೇ ಎಂದು ಹೊಸ

ಉತ್ತರ, ದಕ್ಷಿಣವಲ್ಲ, ರಾಜಕಾರಣವೇ ಬೇಡ ಅಂತಿದ್ದೀನಿ| ಜನಸೇವೆಗೆ ಸಂಸದನಾಗಿಯೇ ಇರಬೇಕೆಂದಿಲ್ಲ- ಡಿ.ಕೆ ಸುರೇಶ್ ಅಚ್ಚರಿಯ ಹೇಳಿಕೆ Read More »