ರಾಜ್ಯ

ವಿಧಾನ ಪರಿಷತ್ ಗೆ ಮೂವರು ನಾಮನಿರ್ದೇಶನ

ಸಮಗ್ರ ನ್ಯೂಸ್: ವಿಧಾನ ಪರಿಷತ್‌ಗೆ ಕೊನೆಗೂ ಮೂವರು ಹೆಸರು ಫೈನಲ್ ಆಗಿದೆ. ಉಮಾಶ್ರೀ, ಸುಧಾಮ್ ದಾಸ್ ಹಾಗೂ ಮಾಜಿ ಸಚಿವ ಎಂ.ಆರ್.ಸೀತಾರಾಮ್ ಅವರನ್ನು ಪರಿಷತ್ ಸ್ಥಾನಕ್ಕೆ ನಾಮನಿರ್ದೇಶನ ಮಾಡಲಾಗಿದೆ. ಮೂವರು ಹೆಸರನ್ನು ರಾಜ್ಯಪಾಲರು ಅನುಮೋದಿಸಿದ್ದಾರೆ. ವಿಧಾನ ಪರಿಷತ್‌ಗೆ ನಟಿ ಉಮಾಶ್ರೀ, ಮಾಜಿ ಸಚಿವ ಎಂ.ಆರ್.ಸೀತಾರಾಮ್ ಹಾಗೂ ನಿವೃತ್ತ ಇ.ಡಿ ಅಧಿಕಾರಿ ಸುಧಾಮ್ ದಾಸ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮ್ಯಯ ಅಂತಿಮಗೊಳಿಸಿ ರಾಜ್ಯಪಾಲರಿಗೆ ರವಾನಿಸಿದ್ದರು. ಆದರೆ ಸುಧಾಮ್ ದಾಸ್ ಹೆಸರು ಶಿಫಾರಸ್ಸು ಮಾಡಿದ್ದಕ್ಕೆ ಸ್ವಪಕ್ಷೀಯರಿಂದಲೇ ಆಕ್ಷೇಪ ಕೇಳಿಬಂದಿತ್ತು. ಈ

ವಿಧಾನ ಪರಿಷತ್ ಗೆ ಮೂವರು ನಾಮನಿರ್ದೇಶನ Read More »

ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ| ಹಂದಿಗಳನ್ನು ಕೊಲ್ಲಲು ಜಿಲ್ಲಾಧಿಕಾರಿಗಳಿಂದ ಆದೇಶ

ಸಮಗ್ರ ನ್ಯೂಸ್: ಕೇರಳದ ಕನಿಚಾರ್ ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ ಪತ್ತೆಯಾಗಿದ್ದು, ಈ ಹಿನ್ನಲೆಯಲ್ಲಿ ಹಂದಿಗಳನ್ನು ಎರಡು ಫಾರ್ಮ್ಗಳಲ್ಲಿ ಕೊಲ್ಲಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಮಲೆಯಂಪಾಡಿನಲ್ಲಿ ಖಾಸಗಿ ಫಾರ್ಮ್ ನಲ್ಲಿ ಹಂದಿ ಜ್ವರ ಪತ್ತೆಯಾಗಿದ್ದು, ಈ ಬಗ್ಗೆ ಜಿಲ್ಲಾ ಪಶುಸಂಗೋಪನಾ ಅಧಿಕಾರಿಗಳು ದೃಢಪಡಿಸಿದ್ದಾರೆ. ನಂತರ, ಜಿಲ್ಲಾಧಿಕಾರಿಗಳು ಹಂದಿಗಳನ್ನು ಮಲೆಯಂಪಾಡಿಯಲ್ಲಿರುವ ಮತ್ತು 10 ಕಿಮೀ ವ್ಯಾಪ್ತಿಯಲ್ಲಿರುವ ಹಂದಿಗಳನ್ನು ಕೊಲ್ಲಲು ಆದೇಶ ನೀಡಿದ್ದಾರೆ. ಹಂದಿ ಸಾಕಾಣಿಕೆ ಕೇಂದ್ರದ ಸುತ್ತಲಿನ ಒಂದು ಕಿ.ಮೀ ಪ್ರದೇಶ ಮತ್ತು 10 ಕಿಮೀ ವ್ಯಾಪ್ತಿಯನ್ನು ರೋಗ ಕಣ್ಗಾವಲು ವಲಯವೆಂದು

ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ| ಹಂದಿಗಳನ್ನು ಕೊಲ್ಲಲು ಜಿಲ್ಲಾಧಿಕಾರಿಗಳಿಂದ ಆದೇಶ Read More »

ಹಾಸನ:ವಿದ್ಯುತ್ ಸರಿಯಾಗಿ ನೀಡುತ್ತಿಲ್ಲ ಎಂದು ಲೈನ್‍ಮೆನ್ ಮೇಲೆ ಹಲ್ಲೆ

ಸಮಗ್ರ ನ್ಯೂಸ್: ಸರಿಯಾಗಿ ವಿದ್ಯುತ್ ನೀಡುತ್ತಿಲ್ಲ ಎಂದು ಆರೋಪಿಸಿ ಚೆಸ್ಕಾಂ ನೌಕರರ ಮೇಲೆ ಯುವಕರು ಹಲ್ಲೆ ನಡೆಸಿರುವ ಘಟನೆ ಹೊಳೆನರಸೀಪುರದ ಕಡವಿನಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರದೀಪ್ ಹಾಗೂ ಕೃಷ್ಣಮೂರ್ತಿ ಎಂಬ ಚೆಸ್ಕಾಂ ಸಿಬ್ಬಂದಿಗಳಿಗೆ ಆ 18ರಂದು ಸಂಜೆ ಇಬ್ಬರೂ ನೌಕರರು ಕಡವಿನಹೊಸಹಳ್ಳಿ ಗ್ರಾಮದಲ್ಲಿ ವಿದ್ಯುತ್ ಲೈನ್ ದುರಸ್ತಿ ಮಾಡುತ್ತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಯುವಕರು ಸರಿಯಾಗಿ ಕರೆಂಟ್ ಕೊಡುತ್ತಿಲ್ಲ ಎಂದು ಲೈನ್‍ಮೆನ್‍ಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜಗಳ ಮಾಡಿದ್ದಾರೆ. ಬಳಿಕ ಇದು ವಿಕೋಪಕ್ಕೆ ತಿರುಗಿ ದೊಣ್ಣೆಗಳಿಂದ

ಹಾಸನ:ವಿದ್ಯುತ್ ಸರಿಯಾಗಿ ನೀಡುತ್ತಿಲ್ಲ ಎಂದು ಲೈನ್‍ಮೆನ್ ಮೇಲೆ ಹಲ್ಲೆ Read More »

‘ಗೃಹಲಕ್ಷ್ಮಿ’ ಯೋಜನೆಗೆ ಆ. 30ರಂದು ಚಾಲನೆ -ಲಕ್ಷ್ಮೀ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ರಾಜ್ಯ ಸರಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಗೆ ಆ.30ರಂದು ಮೈಸೂರಿನಲ್ಲಿ ಚಾಲನೆ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವೆ, ಚಾಮುಂಡೇಶ್ವರಿ ತಾಯಿಯ ಕ್ಷೇತ್ರದಲ್ಲಿ ಈ ಯೋಜನೆಗೆ ಚಾಲನೆ ಸಿಗುತ್ತಿರುವುದು ನನ್ನ ಅದೃಷ್ಟ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮ ಸಿದ್ಧತೆ ಕುರಿತು ವೀಕ್ಷಿಸಲು ಇಂದು ಮೈಸೂರಿಗೆ ತೆರಳುತ್ತಿರುವ ಅವರು ಮೈಸೂರು, ಮಂಡ್ಯ

‘ಗೃಹಲಕ್ಷ್ಮಿ’ ಯೋಜನೆಗೆ ಆ. 30ರಂದು ಚಾಲನೆ -ಲಕ್ಷ್ಮೀ ಹೆಬ್ಬಾಳ್ಕರ್ Read More »

ಶಾಲಾ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್| ಮುಂದಿನ ತಿಂಗಳಿನಿಂದ ‘ಶುಚಿ’ ಯೋಜನೆ ಮತ್ತೆ ಜಾರಿ

ಸಮಗ್ರ ನ್ಯೂಸ್: ಕರ್ನಾಟಕದ ಎಲ್ಲಾ ಸರ್ಕಾರಿ ಅನುದಾನಿತ ಶಾಲೆಗಳಲ್ಲಿನ ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ನ್ಯಾಪ್ಕಿನ್ ಒದಗಿಸುವ ಶುಚಿ ಯೋಜನೆಯು ಸೆಪ್ಟೆಂಬರ್ 10 ರಿಂದ ಮತ್ತೆ ಕಾರ್ಯರೂಪಕ್ಕೆ ಬರಲಿದೆ ಎಂದು ತಿಳಿದುಬಂದಿದೆ. ಯುವತಿಯರಲ್ಲಿ ಮುಟ್ಟಿನ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸಲು 2014 ರಲ್ಲಿ ಶುಚಿ ಯೋಜನೆಯನ್ನು ಪ್ರಾರಂಭಿಸಲಾಗಿತ್ತು. ಆದರೆ, ಕೋವಿಡ್ ನಂತರ ಯೋಜನೆ ಸ್ಥಗಿತಗೊಂಡಿತ್ತು. ಇದರಿಂದ ಹಣ ನೀಡಿ ಸ್ಯಾನಿಟರಿ ನ್ಯಾಪ್ಕಿನ್ ಖರೀದಿ ಮಾಡಲು ಸಾಧ್ಯವಾಗದೆ ಬಡಮಕ್ಕಳು ಸಂಕಷ್ಟ ಸಿಕುವಂತಾಗಿತ್ತು. ಇದೀಗ ಸರ್ಕಾರ ಯೋಜನೆ ಪುನರಾರಂಭ ಮಾಡಲು ಮುಂದಾಗಿರುವ

ಶಾಲಾ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್| ಮುಂದಿನ ತಿಂಗಳಿನಿಂದ ‘ಶುಚಿ’ ಯೋಜನೆ ಮತ್ತೆ ಜಾರಿ Read More »

ಪತಿಯನ್ನ ಸ್ನಾನಕ್ಕೆ ಕಳುಹಿಸಿ, ಸ್ನೇಹಿತನೊಂದಿಗೆ ಪತ್ನಿ ಎಸ್ಕೇಪ್..!!

ಸಮಗ್ರ ನ್ಯೂಸ್: ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಪತ್ನಿ ಗಂಡನಿಗೆ ಕೈಕೊಟ್ಟು ಎಸ್ಕೇಪ್ ಆಗಿದ್ದಾಳೆ ಎಂದು ಪತಿ ಪೊಲೀಸ್ ಠಾಣೆಗೆ ದೂರು ನೀಡಿದ್ಧಾನೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ನಿವಾಸಿ ರಮೇಶ್ ಕಳೆದ ಎರಡು ತಿಂಗಳ ಹಿಂದೆ ಮದುವೆಯಾಗಿದ್ದರು. ರಮೇಶ್ ಜೊತೆಗೆ ಚೆನ್ನಾಗಿಯೇ ಇದ್ದ ಪತ್ನಿ, ಇದೇ ಆಗಸ್ಟ್ 12ರಂದು ಬೆಳಗ್ಗೆ ಪತಿ ರಮೇಶ್‌ನನ್ನು ಸ್ನಾನ ಮಾಡುವಂತೆ ಬಾತ್ ರೂಮ್‌ಗೆ ಕಳುಹಿಸಿ, ಆತ ಒಳಗೆ ಹೋದ ತಕ್ಷಣ ಪತ್ನಿ ಹೊರಗಿನಿಂದ ಬಾತ್‌ರೂಮ್ ಬಾಗಿಲು ಹಾಕಿಕೊಂಡು ಮನೆಯ ಬಾಗಿಲನ್ನೂ ಲಾಕ್

ಪತಿಯನ್ನ ಸ್ನಾನಕ್ಕೆ ಕಳುಹಿಸಿ, ಸ್ನೇಹಿತನೊಂದಿಗೆ ಪತ್ನಿ ಎಸ್ಕೇಪ್..!! Read More »

ಕರ್ನಾಟಕದಲ್ಲಿ ನಿರ್ಮಾಣವಾಗಲಿದೆ ಮತ್ತೊಂದು ಗಾಜಿನ ಸೇತುವೆ| ಪ್ರವಾಸೋದ್ಯಮ ಇಲಾಖೆಯಿಂದ ಹೊಸ ಯೋಜನೆಗೆ ತಯಾರಿ

ಸಮಗ್ರ ನ್ಯೂಸ್: ಪಶ್ಚಿಮ ಘಟ್ಟದಲ್ಲಿ ಮೊಟ್ಟ ಮೊದಲ ಬಾರಿಗೆ ಪ್ರವಾಸೋದ್ಯಮ ಇಲಾಖೆಯು ಗಾಜಿನ ಸೇತುವೆ ನಿರ್ಮಾಣ ಮಾಡಲು ನಿರ್ಧರಿಸಿದೆ. ಮಳೆ ಬೀಳಲು ಆರಂಭಿಸಿದರೆ ಸಾಕು ಕಾಫಿನಾಡಿಗೆ ಪ್ರವಾಸ ಹೊರಡುವುದು ಸಹಜ. ಆದರೆ, ಹೀಗೆ ಹೊರಟವರು ಬಹುತೇಕರು ಮುಳ್ಳಯ್ಯನಗರಿಗೆ ಹೋಗುತ್ತಾರೆ. ಆದ್ದರಿಂದ ಪ್ರವಾಸೋದ್ಯಮ ಇಲಾಖೆ ಅಂತಹದ್ದೇ ಇನ್ನೊಂದು ಬ್ಯೂಟಿಫುಲ್‌ ಪ್ರವಾಸಿ ತಾಣವನ್ನು ಪರಿಚಯಿಸುವ ಕೆಲಸಕ್ಕೆ ಮುಂದಾಗಿದೆ. ಅದುವೇ ಪಶ್ಚಿಮ ಘಟ್ಟದ ಆರಂಭಿಕ ಪಾಯಿಂಟ್‌ ಎನಿಸಿಕೊಂಡಿರುವ “ರಾಣಿ ಝರಿ ವೀವ್‌ ಪಾಯಿಂಟ್‌”. ರಾಣಿ ಝರಿಯು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿಗೆ,

ಕರ್ನಾಟಕದಲ್ಲಿ ನಿರ್ಮಾಣವಾಗಲಿದೆ ಮತ್ತೊಂದು ಗಾಜಿನ ಸೇತುವೆ| ಪ್ರವಾಸೋದ್ಯಮ ಇಲಾಖೆಯಿಂದ ಹೊಸ ಯೋಜನೆಗೆ ತಯಾರಿ Read More »

ಬೆಂಗಳೂರು: ರೈಲಿನಲ್ಲಿ ಅಗ್ನಿ ಅವಘಡ, ಮೆಜೆಸ್ಟಿಕ್ ಸುತ್ತಮುತ್ತ ಆವರಿಸಿದ ದಟ್ಟ ಹೊಗೆ

ಸಮಗ್ರ ನ್ಯೂಸ್: ಬೆಂಗಳೂರಿನ ಮೆಜೆಸ್ಟಿಕ್‌ ರೈಲು ನಿಲ್ದಾಣದಲ್ಲಿ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನ ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡ ಆಘಾತಕಾರಿ ಘಟನೆ ಇಂದು ಮುಂಜಾನೆ ನಡೆದಿದೆ. ಮುಂಬೈನಿಂದ ಈ ರೈಲು ಬೆಳಗ್ಗೆ 6.30 ಕ್ಕೆ ಮೆಜೆಸ್ಟಿಕ್ ನಿಲ್ದಾಣಕ್ಕೆ ಆಗಮಿಸಿತ್ತು. ಬಂದು ನಿಂತ ಎರಡು ಗಂಟೆಗಳ ಬಳಿಕ ಎಂಜಿನ್‌ನಿಂದ ಐದನೇ ಬೋಗಿಯಲ್ಲಿ ಸ್ಲೀಪರ್ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನಗಳು ಬಂದಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಂತರ ಬೆಂಕಿಗೆ ಗುರಿಯಾಗಿದ್ದ

ಬೆಂಗಳೂರು: ರೈಲಿನಲ್ಲಿ ಅಗ್ನಿ ಅವಘಡ, ಮೆಜೆಸ್ಟಿಕ್ ಸುತ್ತಮುತ್ತ ಆವರಿಸಿದ ದಟ್ಟ ಹೊಗೆ Read More »

ಸೌಜನ್ಯ ಪರ ಹೋರಾಟಗಾರ ತಿಮರೋಡಿಗೆ ಗನ್ ಮ್ಯಾನ್| ಅಧಿಕೃತ ಆದೇಶ ಹೊರಡಿಸಿದ ಹೋಮ್ ಮಿನಿಸ್ಟರ್

ಸಮಗ್ರ ನ್ಯೂಸ್: ಕಳೆದ 11 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಸೌಜನ್ಯ ನ್ಯಾಯಕ್ಕಾಗಿ ನಡೆಯುತ್ತಿರುವ ಹೋರಾಟದ ಮುಂದಾಳತ್ವವನ್ನು ವಹಿಸಿಕೊಂಡಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಜೀವಕ್ಕೆ ಅಪಾಯ ಅಗುವ ಸಾಧ್ಯತೆ ಇರುವ ಕಾರಣ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರಾರ ಮನವಿ ಮೇರೆಗೆ ಕರ್ನಾಟಕ ರಾಜ್ಯ ಸರಕಾರವು ಇಬ್ಬರು ಗನ್ ಮ್ಯಾನ್ ಒದಗಿಸಲು ಮುಂದಾಗಿದೆ. ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಆಗಸ್ಟ್ 17 ರಂದು

ಸೌಜನ್ಯ ಪರ ಹೋರಾಟಗಾರ ತಿಮರೋಡಿಗೆ ಗನ್ ಮ್ಯಾನ್| ಅಧಿಕೃತ ಆದೇಶ ಹೊರಡಿಸಿದ ಹೋಮ್ ಮಿನಿಸ್ಟರ್ Read More »

ಸಕಲೇಶಪುರ: ಕಾಡಾನೆ ದಾಳಿಗೆ ಮಹಿಳೆ ಬಲಿ

ಸಮಗ್ರ ನ್ಯೂಸ್: ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತ ಪಟ್ಟ ಘಟನೆ ಸಕಲೇಶಪುರ ತಾಲ್ಲೂಕಿನ ಕುನಿಗನಹಳ್ಳಿಯ ವಡೂರು ಬಳಿ ನಡೆದಿದೆ. ಕಾಡಾನೆ ದಾಳಿಗೆ ಕವಿತಾ (40) ಎಂಬವರು ಬಲಿಯಾಗಿದ್ದು, ಅವರು ವಡೂರಿನಲ್ಲಿರುವ ತನ್ನ ಅಮ್ಮನನ್ನು ನೋಡಲೆಂದು ಬಂದಿದ್ದ ಅವರು ಮನೆಯ ಬಳಿ ಇದ್ದಾಗಲೇ ಕಾಡಾನೆ ಅಟ್ಟಿಸಿಕೊಂಡು ಬಂದಿದೆ. ಈ ವೇಳೆ ಕೆಳಗೆ ಬಿದ್ದ ಕವಿತಾ ಅವರ ಮೇಲೆ ಆನೆ ದಾಳಿ ಮಾಡಿ ಸೊಂಟದ ಭಾಗವನ್ನು ತುಳಿದಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾದರು ಚಿಕಿತ್ಸೆ ಫಲಕಾರಿಯಾಗದೇ ಕೊನೆ ಉಸಿರೆಳೆದಿದ್ದಾರೆ.

ಸಕಲೇಶಪುರ: ಕಾಡಾನೆ ದಾಳಿಗೆ ಮಹಿಳೆ ಬಲಿ Read More »