ರಾಜ್ಯ

ನಾಗಾಲೋಟದ ಹಾದಿ ಹಿಡಿದ ಕಾಳುಮೆಣಸು ದರ| ಇತ್ತ ಹೊಸ‌ ಅಡಿಕೆ‌ ಬೆಲೆಯೂ ಏರಿಕೆ|

ಸಮಗ್ರ ನ್ಯೂಸ್: ಸೈಲೆಂಟಾಗಿ‌ ಮಲಗಿದ್ದ ಕಾಳುಮೆಣಸು ‌ದರ ದಿಢೀರ್ ಜಿಗಿತ‌ ಕಂಡಿದ್ದು ವಾರದಲ್ಲಿ ₹100 ರಷ್ಟು ಏರಿಕೆ‌ ಕಂಡಿದೆ. ದರ ಏರಿಕೆ ಸತತವಾಗಿ ಮುಂದುವರೆದಿದ್ದು ದಿನಕ್ಕೆ 10-20 ರಷ್ಟು ಹೆಚ್ಚಾಗುತ್ತಿದೆ. 7 ವರ್ಷಗಳ ಅನಂತರ 600 ರೂ. ಗಡಿ ದಾಟಿದೆ. ಜು. 24ರಂದು ಹೊರ ಮಾರುಕಟ್ಟೆಯಲ್ಲಿ ಕೆ.ಜಿ.ಗೆ 590 ರೂ.ನಿಂದ 605 ರೂ. ತನಕವು ಖರೀದಿಯಾಗಿದೆ. ಕ್ಯಾಂಪ್ಕೋದಲ್ಲಿ 550 ರೂ ಗೆ ಖರೀದಿಯಾಗಿದೆ. 2015-16ರಲ್ಲಿ ದಾಖಲಾಗಿದ್ದ 675 ರೂ.ನಿಂದ 700 ರೂ. ಗರಿಷ್ಠ ಧಾರಣೆಯಾಗಿತ್ತು. ಅನಂತರ 300

ನಾಗಾಲೋಟದ ಹಾದಿ ಹಿಡಿದ ಕಾಳುಮೆಣಸು ದರ| ಇತ್ತ ಹೊಸ‌ ಅಡಿಕೆ‌ ಬೆಲೆಯೂ ಏರಿಕೆ| Read More »

ಭಾರೀ ಮಳೆ ಹಿನ್ನಲೆ| ಉಡುಪಿಯಲ್ಲಿ ನಾಳೆಯೂ (ಜು.27) ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಭಾರಿ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಅಂಗನವಾಡಿ, ಶಾಲಾ, ಪಿಯು ಕಾಲೇಜುಗಳಿಗೆ ಗುರುವಾರ (ಜು.27) ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ. ಸದ್ಯ ಕರಾವಳಿ ಸೇರಿದಂತೆ ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿನ ನದಿಗಳು ಉಕ್ಕಿ ಹರಿಯುತ್ತಿದ್ದು, ನೆರೆ ನೀರು ಆವರಿಸಿ ಹಲವೆಡೆ ಪ್ರವಾಹ ಭೀತಿ ಎದುರಾಗಿದೆ. ಉಡುಪಿ ಜಿಲ್ಲೆಯಲ್ಲಿ ಭಾರೀ ಗಾಳಿ ಮಳೆ ಬೀಸುತ್ತಿದ್ದು. ವಿದ್ಯಾರ್ಥಿಗಳ ಮುಂಜಾಗ್ರತಾ ಹಿತದೃಷ್ಟಿಯಿಂದ ಉಡುಪಿ ಜಿಲ್ಲಾಧಿಕಾರಿ ಉಡುಪಿ ಜಿಲ್ಲಾದ್ಯಾಂತ ನಾಳೆ

ಭಾರೀ ಮಳೆ ಹಿನ್ನಲೆ| ಉಡುಪಿಯಲ್ಲಿ ನಾಳೆಯೂ (ಜು.27) ಶಾಲೆ, ಪಿಯು ಕಾಲೇಜುಗಳಿಗೆ ರಜೆ Read More »

ಭಾರೀ ಮಳೆ ಹಿನ್ನೆಲೆ| ದ.ಕ ಜಿಲ್ಲೆಯಲ್ಲಿ ಶಾಲಾ ಕಾಲೇಜಿಗೆ ರಜೆ ವಿಸ್ತರಣೆ

ಸಮಗ್ರ ನ್ಯೂಸ್: ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಪ್ರೌಢಶಾಲೆಗಳಿಗೆ ಜು.27ರಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ| ದ.ಕ ಜಿಲ್ಲೆಯಲ್ಲಿ ಶಾಲಾ ಕಾಲೇಜಿಗೆ ರಜೆ ವಿಸ್ತರಣೆ Read More »

ಆಗುಂಬೆ ಘಾಟ್ ರಸ್ತೆಯಲ್ಲಿ ಬಿರುಕು| ಘನ‌ ವಾಹನ ಸಂಚಾರ ನಿಷೇಧಿಸಿ ಉಡುಪಿ ‌ಜಿಲ್ಲಾಧಿಕಾರಿ ಆದೇಶ

ಸಮಗ್ರ ನ್ಯೂಸ್: ಮಲ್ಪೆಯಿಂದ ತೀರ್ಥಹಳ್ಳಿಯನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ಎಯ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಹಾಗೂ ಅದಕ್ಕೆ ಬದಲಿ ಮಾರ್ಗವನ್ನು ಸೂಚಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಉಡುಪಿ-ತೀರ್ಥಹಳ್ಳಿ ರಸ್ತೆಯ ಆಗುಂಬೆ ಘಾಟಿಯ 6,7 ಹಾಗೂ 11ನೇ ತಿರುವಿನಲ್ಲಿ ಭಾರೀ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದಾಗಿ ಸಣ್ಣ ಬಿರುಕುಗಳು ಹಾಗೂ ಅಲ್ಲಲ್ಲಿ ರಸ್ತೆ ಕುಸಿತ ಕಂಡುಬಂದಿದ್ದು, ಹೆಚ್ಚಿನ ಮಳೆಯಿಂದಾಗಿ ತಡೆಗೋಡೆಯು ಕುಸಿದಿರುವುದು ಕಂಡುಬಂದಿದೆ. ಹೀಗಾಗಿ ಈ ರಸ್ತೆಯಲ್ಲಿ ಭಾರೀ ವಾಹನಗಳ

ಆಗುಂಬೆ ಘಾಟ್ ರಸ್ತೆಯಲ್ಲಿ ಬಿರುಕು| ಘನ‌ ವಾಹನ ಸಂಚಾರ ನಿಷೇಧಿಸಿ ಉಡುಪಿ ‌ಜಿಲ್ಲಾಧಿಕಾರಿ ಆದೇಶ Read More »

ಸೌಜನ್ಯ ಪ್ರಕರಣ ಮರುತನಿಖೆ ನಡೆಸಲು ಸಿಎಂಗೆ ಮನವಿ ಸಲ್ಲಿಸಿದ ಕುಟುಂಬಸ್ಥರು

ಸಮಗ್ರ ನ್ಯೂಸ್: ಧರ್ಮಸ್ಥಳ ಸಮೀಪದ ಪಾಂಗಾಳದಲ್ಲಿ ಅತ್ಯಾಚಾರಗೊಂಡು ಹತ್ಯೆಯಾದ ಅಪ್ರಾಪ್ತ ಯುವತಿ ಸೌಜನ್ಯ ಪ್ರಕರಣವನ್ನು ಮರುತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನೇತ್ರತ್ವದಲ್ಲಿ ಸೌಜನ್ಯ ಕುಟುಂಬ ಮನವಿ ಸಲ್ಲಿಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ರನ್ನು ಸೌಜನ್ಯಳ ಮನೆಯವರು ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಜು.26 ರಂದು ಬೆಂಗಳೂರಿನಲ್ಲಿ ಭೇಟಿ ಮಾಡಿದರು.

ಸೌಜನ್ಯ ಪ್ರಕರಣ ಮರುತನಿಖೆ ನಡೆಸಲು ಸಿಎಂಗೆ ಮನವಿ ಸಲ್ಲಿಸಿದ ಕುಟುಂಬಸ್ಥರು Read More »

ಕಾಸರಗೋಡು: ಹತ್ತನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ – ತನಿಖೆ ಆರಂಭ

ಸಮಗ್ರ ನ್ಯೂಸ್: ಮನೆಯಿಂದ ಹೊರಗೆ ಹೋಗಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿಯ ಮೃತದೇಹ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಜು. 23 ರಂದು ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಕುತ್ತಿಗೆ ಬಿಗಿದು ಸಾವು ಸಂಭವಿಸಿದೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದುಬಂದಿದ್ದರೂ ಯಾಕಾಗಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುದಕ್ಕೆ ಕಾರಣ ತಿಳಿದು ಬಂದಿಲ್ಲ. ಕನ್ಯಪ್ಪಾಡಿ ಮಾಡತ್ತಡ್ಕ ಕೇರ ನಿವಾಸಿ ರಾಮಕೃಷ್ಣ ಅವರ ಪುತ್ರಿ ರಶ್ಮಿತಾ ಕೆ. ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಬೀಡಿ ಹಾಗೂ ಬೆಂಕಿ ಪೊಟ್ಟಣವನ್ನು ಪೊಲೀಸರು

ಕಾಸರಗೋಡು: ಹತ್ತನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ – ತನಿಖೆ ಆರಂಭ Read More »

ಕೊಡಗು:ಮಾದಕ ವಸ್ತು ಮಾರಾಟ| 8 ಮಂದಿ ಬಂಧನ

ಸಮಗ್ರ ನ್ಯೂಸ್: ಕೊಡಗು ಜಿಲ್ಲಾ ವ್ಯಾಪ್ತಿಯ ವಿರಾಜಪೇಟೆ ಗ್ರಾಮಾಂತರ ಪೊಲೀಸ್‌ ಠಾಣೆ ಸರಹದ್ದಿನಲ್ಲಿ ನಿಷೇಧಿತ ಮಾದಕ ವಸ್ತು ಮಾರಟ ಮಾಡುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ. ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ರಶೀದ್(23) ಅರೇಕಾಡು, ಹೆಚ್.ಆರ್ ಸುದೀಶ್(23) ಒಂಟಿಯಾಂಗಡಿ, ಇಮ್ರಾನ್ ಖಾನ್(35) ಮೈಸೂರಿನ ಕೆಸಿಪಿ ಕಾಲೋನಿ, ಎಂ.ಪ್ರಕಾಶ್ (24) ಮುರ್ತಾಮುಡಿ, ಹೆಚ್.ಎಂ.ಶಾಂತಕುಮಾರ್(27) ಚೇರಂಬಾಂಣೆ, ಎಸ್.ಎಂ.ಸಜೀರ್(37) ಕಡಗದಾಳು, ಎಂ.ಇ.ನಿಯಾಜ್(35) ಕಡಗದಾಳು, ಇಮ್ರಾನ್ ಖಾನ್(46) ಮೈಸೂರಿನ ಶಾಂತಿನಗರ, ಮೊದಲಾದವರನ್ನು 1 ಕೆ.ಜಿ 243 ಗ್ರಾಂ

ಕೊಡಗು:ಮಾದಕ ವಸ್ತು ಮಾರಾಟ| 8 ಮಂದಿ ಬಂಧನ Read More »

ತುಳು ಎರಡನೇ ಅಧಿಕೃತ ಭಾಷೆಯಾಗಲು ಅರ್ಹ| ಸರ್ಕಾರಕ್ಕೆ ಶಿಫಾರಸ್ಸು ಮಾಡಿದ ಡಾ.ಎಂ ಮೋಹನ ಆಳ್ವ ಸಮಿತಿ

ಸಮಗ್ರ ನ್ಯೂಸ್: ‘ತಮಿಳು- ಕನ್ನಡ ಭಾಷೆಗಳಷ್ಟೇ ಪ್ರಾಚೀನವಾದ, ಭಾಷಿಕವಾಗಿ, ಶೈಕ್ಷಣಿಕವಾಗಿ, ಸಾಂಸ್ಕೃತಿಕವಾಗಿ ಬೆಳವಣಿಗೆ ಹೊಂದಿರುವ ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷೆ ಎಂದು ಘೋಷಿಸಲು ಅರ್ಹವಾಗಿದೆ’ ಎಂದು ಖಚಿತ ಆಧಾರಗಳ ಸಹಿತ ಡಾ.ಎಂ. ಮೋಹನ ಆಳ್ವ ಅಧ್ಯಕ್ಷತೆಯ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ತುಳು ಭಾಷೆಯನ್ನು ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಲು ಬಸವರಾಜ ಬೊಮ್ಮಾಯಿ ನೇತೃತ್ವದ ಈ ಹಿಂದಿನ ಬಿಜೆಪಿ ಸರ್ಕಾರ‌ವು ಮೋಹನ ಆಳ್ವ ನೇತೃತ್ವದಲ್ಲಿ

ತುಳು ಎರಡನೇ ಅಧಿಕೃತ ಭಾಷೆಯಾಗಲು ಅರ್ಹ| ಸರ್ಕಾರಕ್ಕೆ ಶಿಫಾರಸ್ಸು ಮಾಡಿದ ಡಾ.ಎಂ ಮೋಹನ ಆಳ್ವ ಸಮಿತಿ Read More »

ಬಿಜೆಪಿ ಆಡಳಿತವಿರುವ ರಾಜ್ಯಗಳ ತಪ್ಪು ನಿಮಗೇಕೆ ಕಾಣಲ್ಲ? ಕೇಂದ್ರ ಸರ್ಕಾರದ ಕಿವಿ ಹಿಂಡಿದ ಸುಪ್ರೀಂ

ಸಮಗ್ರ ನ್ಯೂಸ್: ಬಿಜೆಪಿಯೇತರ ರಾಜ್ಯ ಸರ್ಕಾರಗಳ ತಪ್ಪುಗಳ ವಿರುದ್ಧ ಕ್ರಮ ಕೈಗೊಳ್ಳುವ ಕೇಂದ್ರಸರ್ಕಾರ, ಬಿಜೆಪಿ ಆಡಳಿವಿರುವ ರಾಜ್ಯಗಳಲ್ಲಿನ ತಪ್ಪುಗಳನ್ನು ಕಂಡೂ ಮೌನ ವಹಿಸುವುದು ಏಕೆ? ರಾಜ್ಯಗಳ ವಿಚಾರದಲ್ಲಿ ಇಂಥ ನಿಲುವು ಸಲ್ಲದು ಎಂದು ಸುಪ್ರೀಂ ಕೋರ್ಟ್‌ ಬುಧವಾರ ಕೇಂದ್ರ ಸರ್ಕಾರಕ್ಕೆ ಛೀಮಾರಿ ಹಾಕಿದೆ. ನಾಗಾಲ್ಯಾಂಡ್‌ನ‌ಲ್ಲಿ ಮಹಿಳೆಯರಿಗೆ ಶೇ.33ರ ಮೀಸಲು ಅನ್ವಯಿಸಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಬೇಕೆಂದು ನಾಗಾಲ್ಯಾಂಡ್‌ ಸರ್ಕಾರ ಹಾಗೂ ಚುನಾವಣೆ ಆಯೋಗಕ್ಕೆ ನಿರ್ದೇಶಿಸಲಾಗಿದೆ. ಆದಾಗ್ಯೂ ನ್ಯಾಯಾಲಯದ ಆದೇಶ ಪಾಲನೆಯಾಗದಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ

ಬಿಜೆಪಿ ಆಡಳಿತವಿರುವ ರಾಜ್ಯಗಳ ತಪ್ಪು ನಿಮಗೇಕೆ ಕಾಣಲ್ಲ? ಕೇಂದ್ರ ಸರ್ಕಾರದ ಕಿವಿ ಹಿಂಡಿದ ಸುಪ್ರೀಂ Read More »

ಹವಾಮಾನ ವರದಿ: ರಾಜ್ಯಾದ್ಯಂತ ಸಮೃದ್ಧ ವರ್ಷಧಾರೆ| ಇನ್ನೆಷ್ಟು ದಿನ ಮಳೆ?

ಸಮಗ್ರ ನ್ಯೂಸ್: ನೈರುತ್ಯ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 26ರಂದು ಕಲಬುರಗಿ, ಉಡುಪಿ, ಬೀದರ, ಚಿಕ್ಕಮಗಳೂರು, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಚ್‌’ ಹಾಗೂ ಹಾಸನ, ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ‘ಯಲ್ಲೋ ಅಲರ್ಟ್‌’ ಘೋಷಿಸಲಾಗಿದೆ. ಜುಲೈ 27ರಂದು ವಿಜಯಪುರ, ಬೆಳಗಾವಿ, ಉತ್ತರ ಕನ್ನಡ,

ಹವಾಮಾನ ವರದಿ: ರಾಜ್ಯಾದ್ಯಂತ ಸಮೃದ್ಧ ವರ್ಷಧಾರೆ| ಇನ್ನೆಷ್ಟು ದಿನ ಮಳೆ? Read More »