ರಾಜ್ಯ

ಗೂಡ್ಸ್ ವಾಹನದಲ್ಲಿ ಜಾನುವಾರು ಸಾಗಾಟ | ಇಬ್ಬರು ಬಂಧನ

ಸಮಗ್ರ ನ್ಯೂಸ್: ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ 15 ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವನ್ನು ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿರುವ ಘಟನೆ ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿ-275ರ ಬಿಳಿಕೆರೆ ಬೈಪಾಸ್‌ನಲ್ಲಿ ನಡೆದಿದೆ. ಪಿರಿಯಾಪಟ್ಟಣ ತಾಲೂಕಿನ ಹಲಗನಹಳ್ಳಿ ನಿವಾಸಿ ಅಲೀಮ್, ಮನ್ಸೂರ್ ಬಂಧಿತ ಆರೋಪಿಗಳಾಗಿದ್ದು, ಚಾಲಕ ಪರಾರಿಯಾಗಿದ್ದಾನೆ. ಬಿಳಿಕೆರೆ ಠಾಣೆ ಸಬ್ ಇನ್ಸ್ಪೆಕ್ಟರ್ ಚಲುವಯ್ಯ ಸಿಬ್ಬಂದಿಗಳೊಂದಿಗೆ ಶನಿವಾರ ರಾತ್ರಿ 10 ಗಂಟೆಯ ಸಮಯ ರಾತ್ರಿ ಗಸ್ತಿನಲ್ಲಿದ್ದ ವೇಳೆ ಹೆದ್ದಾರಿಯಲ್ಲಿ ಹುಣಸೂರು ಕಡೆಯಿಂದ ಬರುತ್ತಿದ್ದ ಅಶೋಕ ಲೇಲ್ಯಾಂಡ್ ಗೂಡ್ಸ್ ವಾಹನವನ್ನು ಬಿಳಿಕೆರೆ ಬೈಪಾಸ್

ಗೂಡ್ಸ್ ವಾಹನದಲ್ಲಿ ಜಾನುವಾರು ಸಾಗಾಟ | ಇಬ್ಬರು ಬಂಧನ Read More »

ಚಿಕ್ಕಮಗಳೂರು: ಒಂದೇ ಸ್ಥಳದಲ್ಲಿ ಎರಡು ಕಾರುಗಳು ಅಪಘಾತ

ಸಮಗ್ರ ನ್ಯೂಸ್: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಈ ನಡುವೆ ಒಂದೇ ಸ್ಥಳದಲ್ಲಿ ಎರಡು ಕಾರುಗಳು ಉರುಳಿಬಿದ್ದ ಪರಿಣಾಮ ಒಂದು ಕಾರಿನ ಪ್ರಯಾಣಿಕರು ಗಾಯಗೊಂಡ ಘಟನೆ ಬಣಕಲ್ ಸಮೀಪ ನಡೆದಿದೆ. ಬಣಕಲ್ ಹೇಮಾವತಿ ನದಿಯ ಸಮೀಪ ಈ ಘಟನೆ ನಡೆದಿದೆ. ಪ್ರತ್ಯೇಕ ಘಟನೆಗಳಲ್ಲಿ ಎರಡು ಕಾರುಗಳು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿವೆ. ಈ ವೇಳೆ ಇನೋವಾ ಕಾರಿನಲಿದ್ದವರಿಗೆ ಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿಕ್ಕಮಗಳೂರು: ಒಂದೇ ಸ್ಥಳದಲ್ಲಿ ಎರಡು ಕಾರುಗಳು ಅಪಘಾತ Read More »

ರಾಜ್ಯಾದ್ಯಂತ ಅಬ್ಬರಿಸುತ್ತಿರುವ ಮುಂಗಾರು ಮಳೆ| ಮಹಾಮಳೆಗೆ ಮೂವರು ಬಲಿ; 9 ಜಿಲ್ಲೆಗಳಿಗೆ ಪ್ರವಾಹ ಭೀತಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ತಡವಾಗಿ ಆರಂಭಗೊಂಡ ಮುಂಗಾರು ಮಳೆ ರಾಜ್ಯದ ಮೂರನೇ ಒಂದು ಭಾಗದಲ್ಲಿ ಅಬ್ಬರಿಸುತ್ತಿದೆ. ಈ ಕಾರಣದಿಂದ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ವರುಣಾಘಾತವೇ ಉಂಟಾಗಿದೆ. ಕಳೆದ ಒಂದೆರಡು ವಾರದಿಂದ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕಾವೇರಿ, ಭೀಮಾ ಸೇರಿದಂತೆ ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿವೆ. ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಅಲ್ಲದೇ ಈವರೆಗೆ ಮಹಾಮಳೆಗೆ ಮೂವರು ಬಲಿಯಾಗಿದ್ದಾರೆ. ಭಾರೀ ಮಳೆಯಿಂದಾಗಿ ಕಲಬುರ್ಗಿ ಜಿಲ್ಲೆಯಲ್ಲಿ ಇಬ್ಬರು, ಹಾವೇರಿಯಲ್ಲಿ

ರಾಜ್ಯಾದ್ಯಂತ ಅಬ್ಬರಿಸುತ್ತಿರುವ ಮುಂಗಾರು ಮಳೆ| ಮಹಾಮಳೆಗೆ ಮೂವರು ಬಲಿ; 9 ಜಿಲ್ಲೆಗಳಿಗೆ ಪ್ರವಾಹ ಭೀತಿ Read More »

ಮಲೆನಾಡು ಈಗ ಮಳೆನಾಡು| ಹೆಬ್ಬಾಳೆ ಸೇತುವೆ ಮುಳುಗಡೆ| ಕಳಸ- ಹೊರನಾಡು ಸಂಪರ್ಕ ಕಡಿತ

ಸಮಗ್ರ ನ್ಯೂಸ್: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ರವಿವಾರವೂ ಮುಂದುವರಿದಿದ್ದು, ಭಾರೀ ಮಳೆ ಹಲವೆಡೆ ಭಾರೀ ಅವಾಂತರಗಳನ್ನು ಸೃಷ್ಟಿಸಿದೆ. ಶನಿವಾರ ರಾತ್ರಿ ಹಾಗೂ ರವಿವಾರ ಇಡೀ ದಿನ ಸುರಿದ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ಕಳಸ ಸಮೀಪದಲ್ಲಿ ಹರಿಯುವ ಭದ್ರಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಹೆಬ್ಬಾಳೆ ಸೇತುವೆ ಮುಳುಗಡೆಯಾಗಿ ಕಳಸ-ಹೊರನಾಡು ಸಂಪರ್ಕ ಕಡಿತಗೊಂಡಿದೆ. ಶೃಂಗೇರಿ ತಾಲೂಕಿನಾದ್ಯಂತ ಭಾರೀ ಮಳೆ ಪರಿಣಾಮ ತುಂಗಾ ನದಿಯ ನೆರೆ ನೀರು ಶೃಂಗೇರಿ ಪಟ್ಟಣದ ಗಾಂಧಿಮೈದಾನವನ್ನು ಆವರಿಸಿಕೊಂಡಿದೆ. ಇನ್ನು ಅಲ್ಲಲ್ಲಿ ಮರಗಳು ಉರುಳಿ

ಮಲೆನಾಡು ಈಗ ಮಳೆನಾಡು| ಹೆಬ್ಬಾಳೆ ಸೇತುವೆ ಮುಳುಗಡೆ| ಕಳಸ- ಹೊರನಾಡು ಸಂಪರ್ಕ ಕಡಿತ Read More »

ಎಡೆಬಿಡದ ಮಳೆ| ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿದ ಡಿಸಿ

ಸಮಗ್ರ ನ್ಯೂಸ್: ಭಾರಿ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಅಂಗನವಾಡಿ, ಶಾಲಾ, ಪಿಯು ಕಾಲೇಜುಗಳಿಗೆ ಸೋಮವಾರ (ಜು.24) ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಸದ್ಯ ಕರಾವಳಿ ಸೇರಿದಂತೆ ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿನ ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವೆಡೆ ನೆರೆ ನೀರು ಆವರಿಸಿ ಹಲವೆಡೆ ಪ್ರವಾಹ ಭೀತಿ ಎದುರಾಗಿದೆ.

ಎಡೆಬಿಡದ ಮಳೆ| ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿದ ಡಿಸಿ Read More »

ಭಾರೀ ಮಳೆ ಮುನ್ಸೂಚನೆ| ಜು.24 ರಂದು ಶಿವಮೊಗ್ಗದಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಎಲ್ಲ ಶಾಲೆಗಳಿಗೆ ಸೋಮವಾರ (ಜು.24) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ನಾಲ್ಕು ದಿನಗಳಿಂದ ಮಳೆ ಅಬ್ಬರಿಸುತ್ತಿದ್ದು ಶನಿವಾರ ರಾತ್ರಿಯಿಂದ ಮಳೆ ಬಿರುಸುಗೊಂಡಿದೆ. ಭಾನುವಾರ ಇಡೀ ದಿನ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಸೋಮವಾರ ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶಿಸಿದ್ದಾರೆ.

ಭಾರೀ ಮಳೆ ಮುನ್ಸೂಚನೆ| ಜು.24 ರಂದು ಶಿವಮೊಗ್ಗದಲ್ಲಿ ಶಾಲೆಗಳಿಗೆ ರಜೆ ಘೋಷಣೆ Read More »

ಚಿಕ್ಕಮಗಳೂರಿನಲ್ಲಿ ಮುಂದುವರಿದ ವರ್ಷಧಾರೆ| ಕೊಪ್ಪ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಮಲೆನಾಡು ಭಾಗದಲ್ಲಿ ವ್ಯಾಪಕವಾಗಿ ಮಳೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ (ಜುಲೈ 24) ರಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ‌ ತಾಲೂಕಿನ ಶಾಲೆಗಳಿಗೆ ಸೋಮವಾರ ರಜೆ ಘೋಷಣೆ ಮಾಡಿ ತಹಶಿಲ್ದಾರ್ ಆದೇಶ ಹೊರಡಿಸಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಈ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ತಹಸೀಲ್ದಾರ್ ರವರ ವರದಿ ಅಧರಿಸಿ ರಜೆ ಘೋಷಿಸಲಾಗಿದೆ.

ಚಿಕ್ಕಮಗಳೂರಿನಲ್ಲಿ ಮುಂದುವರಿದ ವರ್ಷಧಾರೆ| ಕೊಪ್ಪ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ Read More »

ಹಾಸನದಲ್ಲಿ ಮುಂದುವರಿದ ವರ್ಷಧಾರೆ| ನಾಲ್ಕು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಮಲೆನಾಡು ಭಾಗದಲ್ಲಿ ವ್ಯಾಪಕವಾಗಿ ಮಳೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ (ಜುಲೈ 24) ರಂದು ಸಕಲೇಶಪುರ, ಬೇಲೂರು ಆಲೂರು ಹಾಗೂ ಅರಕಲಗೂಡು ತಾಲೂಕಿನ ಎಲ್ಲಾ ಅಂಗನವಾಡಿ,ಸರ್ಕಾರಿ, ಅನುದಾನಿತ ಹಾಗೂ ಖಾಸಗಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಸೋಮವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಈ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಸಕ ಸಿಮೆಂಟ್ ಮಂಜುನಾಥ್ ಸೂಚನೆ ಮೇರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ತಹಸೀಲ್ದಾರ್ ರವರ ವರದಿ

ಹಾಸನದಲ್ಲಿ ಮುಂದುವರಿದ ವರ್ಷಧಾರೆ| ನಾಲ್ಕು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ Read More »

ಭಾರೀ ಮಳೆ ಹಿನ್ನಲೆ| ಜು.24ರಂದು ಉ.ಕನ್ನಡ ಜಿಲ್ಲೆಯಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಅಗತ್ಯ ಮುಂಜಾಗ್ರತೆ ದೃಷ್ಟಿಯಿಂದ ಜಿಲ್ಲಾಡಳಿತವು ಸೋಮವಾರ ಜುಲೈ 24ರಂದು ಜಿಲ್ಲಾದ್ಯಂತ ಎಲ್ಲಾ ಅಂಗನವಾಡಿ, ಪ್ರಾಥಮಿಕ , ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಸೋಮವಾರ ಸರ್ಕಾರಿ , ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಇರಲಿದೆ. ಕಾಳಿ ನದಿಗೆ ಕದ್ರಾ ಅಣೆಕಟ್ಟಿನಿಂದ ಹೆಚ್ಚಿನ ಪ್ರಮಾಣದ ನೀರು ಬಿಡುವ ಸಾಧ್ಯತೆ ಇದೆ. ಮೇಘಸ್ಪೋಟದ ಕಾರಣ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಮುಂಜಾಗ್ರತೆಯಿಂದ ಶಾಲೆ ಕಾಲೇಜುಗಳಿಗೆ

ಭಾರೀ ಮಳೆ ಹಿನ್ನಲೆ| ಜು.24ರಂದು ಉ.ಕನ್ನಡ ಜಿಲ್ಲೆಯಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ಧಾರಾಕಾರ ಮಳೆ ಹಿನ್ನೆಲೆ| ಬೆಳಗಾವಿಯ ಕೆಲ ತಾಲೂಕಿನಲ್ಲಿ ಶಾಲೆಗಳಿಗೆ ಜು.24ರಂದು ರಜೆ ಘೋಷಣೆ

ಸಮಗ್ರ ವಾರ್ತೆ: ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ, ಕಿತ್ತೂರು, ಬೆಳಗಾವಿ ತಾಲ್ಲೂಕಿನ ನಗರ ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿರುವ ಶಾಲೆಗಳಿಗೆ ಸೋಮವಾರ (ಜು.24) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಈ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ಧಾರಾಕಾರ ಮಳೆ ಹಿನ್ನೆಲೆ| ಬೆಳಗಾವಿಯ ಕೆಲ ತಾಲೂಕಿನಲ್ಲಿ ಶಾಲೆಗಳಿಗೆ ಜು.24ರಂದು ರಜೆ ಘೋಷಣೆ Read More »