ರಾಜ್ಯ

ಭಾರೀ ಮಳೆ ಹಿನ್ನೆಲೆ| ಕೊಡಗು ಜಿಲ್ಲೆಯಲ್ಲಿ ಜು.24 ರಂದು ಕೊಡಗು ಜಿಲ್ಲೆಯಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಭಾರಿ ಮಳೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ- ಕಾಲೇಜುಗಳಿಗೆ ಸೋಮವಾರ (ಜು.24) ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ವೆಂಕಟ್‌ ರಾಜಾ ರಜೆ ಘೋಷಿಸಿ ಪ್ರಕಟಣೆ ಹೊರಡಿಸಿದ್ದಾರೆ. ಸದ್ಯ ಕೊಡಗು ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿನ ನದಿಗಳು ಉಕ್ಕಿ ಹರಿಯುತ್ತಿದ್ದು ಹಲವೆಡೆ ಪ್ರವಾಹ ಭೀತಿ ಎದುರಾಗಿದೆ.

ಭಾರೀ ಮಳೆ ಹಿನ್ನೆಲೆ| ಕೊಡಗು ಜಿಲ್ಲೆಯಲ್ಲಿ ಜು.24 ರಂದು ಕೊಡಗು ಜಿಲ್ಲೆಯಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ Read More »

ಭಾರೀ ಮಳೆಗೆ ಕುಸಿದ ಸುಳ್ಯ – ಪಾಣತ್ತೂರು ಅಂತರಾಜ್ಯ ಸಂಪರ್ಕ ರಸ್ತೆ| ಸಂಚಾರ ಸಂಪೂರ್ಣ ನಿಷೇಧಿಸಿ ಕಾಸರಗೋಡು ಡಿಸಿ ಆದೇಶ

ಸಮಗ್ರ ನ್ಯೂಸ್: ಭಾರೀ ಮಳೆ ಹಿನ್ನಲೆಯಲ್ಲಿ ಪನತ್ತಡಿ ಬಾಟೋಳಿಯಲ್ಲಿ ಭೂಕುಸಿತ ಉಂಟಾದ ಹಿನ್ನೆಯಲ್ಲಿ ಪಾಣತ್ತೂರು – ಕಲ್ಲಪಳ್ಳಿ – ಸುಳ್ಯ ಅಂತಾರಾಜ್ಯ ರಸ್ತೆಯಲ್ಲಿ ರಾತ್ರಿ ಸಂಚಾರ ನಿಷೇಧಿಸಿ ಕಾಸರಗೋಡು ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಆದೇಶ ಹೊರಡಿಸಿದ್ದಾರೆ. ಈ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಬಿರುಕು ಬಿಟ್ಟ ಗುಡ್ಡ, ಅವಘಡಕ್ಕೆ ಕಾರಣವಾಗಿರುವ ಮಣ್ಣು ಮೊದಲಾದವುಗಳನ್ನು ಪೂರ್ಣವಾಗಿ ತೆರವುಗೊಳಿಸಿದ ಬಳಿಕ ಸಂಚಾರಕ್ಕೆ ಪೂರ್ಣ ವಾಗಿ ಮುಕ್ತಗೊಳಿಸಲಾಗುವುದು ಎಂದು ಜಿಲ್ಲಾ ವಿಪತ್ತು ನಿವಾರಣಾ ಪ್ರಾಧಿಕಾರ ಅಧ್ಯಕ್ಷರಾಗಿರುವ . ಜಿಲ್ಲಾಧಿಕಾರಿ ಕೆ. ಇಂಪಾಶೇಖರ್

ಭಾರೀ ಮಳೆಗೆ ಕುಸಿದ ಸುಳ್ಯ – ಪಾಣತ್ತೂರು ಅಂತರಾಜ್ಯ ಸಂಪರ್ಕ ರಸ್ತೆ| ಸಂಚಾರ ಸಂಪೂರ್ಣ ನಿಷೇಧಿಸಿ ಕಾಸರಗೋಡು ಡಿಸಿ ಆದೇಶ Read More »

ಹವಾಮಾನ ವರದಿ| ಇನ್ನೆರಡು ದಿನ ಭಾರೀ ಮಳೆ‌ ಸಾಧ್ಯತೆ

ಸಮಗ್ರ ನ್ಯೂಸ್: ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಹಲವೆಡೆ ಭಾನುವಾರ (ಜುಲೈ 23) ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಬಹುತೇಕ ಕಡೆ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ ಎಂದು ತಿಳಿದು ಬಂದಿದೆ. ಕಳೆದ ಒಂದು ವಾರದಿಂದ ಕರಾವಳಿಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಇತರೆಡೆಗಳಲ್ಲೂ ವ್ಯಾಪಿಸಿದೆ. ಆದರೆ, ಕರಾವಳಿಯಲ್ಲಿ ಮಳೆ ಪ್ರಮಾಣ ಸಾಮಾನ್ಯವಾಗಿದೆ ಎಂದು ಹೇಳಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಒಂದೆರಡು ಕಡೆಗಳಲ್ಲಿ

ಹವಾಮಾನ ವರದಿ| ಇನ್ನೆರಡು ದಿನ ಭಾರೀ ಮಳೆ‌ ಸಾಧ್ಯತೆ Read More »

ಕೊಡಗು: ರಸ್ತೆ ದಾಟುವ ವೇಳೆ ಬಸ್ಸನ್ನು ಅಟ್ಟಿಸಿಕೊಂಡು ಬಂದ ಕಾಡಾನೆ!

ಸಮಗ್ರ ನ್ಯೂಸ್: ಹಾಡುಹಗಲೇ ಕಾಡಾನೆಯೊಂದು ಕೆಎಸ್ಆರ್ಟಿಸಿ ಬಸ್ ಅನ್ನು ಅಡ್ಡಗಟ್ಟಿ ಅಟ್ಟಿಸಿಕೊಂಡು ಬಂದ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ದೆವರಪುರದಲ್ಲಿ ಜು.22 ರಂದು ನಡೆದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗ್ಗೆ ಕೆಎಸ್ಆರ್ಟಿಸಿ ಬಸ್ ಅನ್ನು ಕಾಡಾನೆ ಅಟ್ಟಿಸಿಕೊಂಡು ಬಂದ ದೃಶ್ಯವು ಪ್ರಯಾಣಿಕರೋರ್ವರ ಮೊಬೈಲ್​ನಲ್ಲಿ ಸೆರೆಯಾಗಿದೆ. ದೃಶ್ಯದಲ್ಲಿ ಕಂಡಂತೆ ಕಾಡಾನೆ ರಸ್ತೆ ದಾಟುತ್ತಿದ್ದರಿಂದ ಚಾಲಕ ಸಮಯ ಪ್ರಜ್ಞೆ ಮೆರೆದು ಬಸ್ ನಿಲ್ಲಿಸಿದ್ದಾನೆ. ಆದರೆ, ಈ ವೇಳೆ ಆನೆ ಬಸ್ ಬಳಿಗೆ ಓಡೋಡಿ ಬಂದಿದ್ದು ಇದರಿಂದ

ಕೊಡಗು: ರಸ್ತೆ ದಾಟುವ ವೇಳೆ ಬಸ್ಸನ್ನು ಅಟ್ಟಿಸಿಕೊಂಡು ಬಂದ ಕಾಡಾನೆ! Read More »

ಭಾರೀ ಮಳೆಗೆ ಉಕ್ಕಿ‌ ಹರಿಯುತ್ತಿರುವ ಕುಮಾರಧಾರಾ| ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ನಾನಘಟ್ಟ ಮುಳುಗಡೆ

ಸಮಗ್ರ ನ್ಯೂಸ್: ಸುಬ್ರಹ್ಮಣ್ಯ ಪರಿಸರದಲ್ಲಿ ಹಾಗೂ ಘಟ್ಟ ಪ್ರದೇಶದಲ್ಲಿ ಬಾರೀ ಮಳೆಯಾಗುತ್ತಿರುವುದರಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಸ್ನಾನಘಟ್ಟ ಶನಿವಾರ ಮುಳುಗಡೆಗೊಂಡಿದೆ. ಶುಕ್ರವಾರ ರಾತ್ರಿಯಿಂದಲೇ ಬಾರೀ ಮಳೆಯಾಗುತ್ತಿದೆ. ಘಟ್ಟ ಪ್ರದೇಶದಲ್ಲೂ ಬಾರೀ ಮಳೆಯಾಗುತ್ತಿರುವುದರಿಂದ ಕುಮಾರಧಾರ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳಗೊಂಡಿದೆ. ಕುಮಾರಧಾರ ಸ್ನಾನ ಘಟ್ಟ ಹಾಗೂ ಕಿಂಡಿ ಅಣೆಕಟ್ಟು ಮುಳುಗಡೆಯಾಗಿದೆ. ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿರುವುದರಿಂದ ಭಕ್ತಾಧಿಗಳಿಗೆ ನೀರಿಗಿಳಿಯದಂತೆ ಸೂಚನೆ ನೀಡಲಾಗಿದೆ. ನದಿ ದಡದಲ್ಲಿ ಸಿಬ್ಬಂದಿಗಳ ನಿಯೋಜಿಸಲಾಗಿದೆ. ಎಚ್ಚರಿಕಾ

ಭಾರೀ ಮಳೆಗೆ ಉಕ್ಕಿ‌ ಹರಿಯುತ್ತಿರುವ ಕುಮಾರಧಾರಾ| ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ನಾನಘಟ್ಟ ಮುಳುಗಡೆ Read More »

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ| ಮರು ತನಿಖೆ ನಡೆಸಲು ಸಿಎಂ‌ಗೆ ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜಾ ಮನವಿ

ಸಮಗ್ರ ನ್ಯೂಸ್: ಅತ್ಯಾಚಾರಕ್ಕೊಳಗಾಗಿ ಹತ್ಯೆಗೀಡಾದ ಧರ್ಮಸ್ಥಳದ ಸೌಜನ್ಯಾ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮನವಿ ಸಲ್ಲಿಸಿದ್ದಾರೆ. ಈ ಕುರಿತು ಸಿದ್ದರಾಮಯ್ಯ ಅವರಿಗೆ ಲಿಖಿತ ದೂರು ನೀಡಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸೌಜನ್ಯಾ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದ್ದಾರೆ. 2012ರ ಅಕ್ಟೋಬರ್ 9ರಂದು ಬೆಳ್ತಂಗಡಿ ತಾಲೂಕಿನ ಉಜಿರೆಯ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರಕ್ಕೀಡಾಗಿ ಕೊಲೆಯಾಗಿದ್ದು, ಅದರ ವಿಚಾರವಾಗಿ ಹಲವು ತನಿಖೆ ನಡೆದು ತಮ್ಮ ನೇತೃತ್ವದ ಸರಕಾರ ಈ ಪ್ರಕರಣವನ್ನು

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ| ಮರು ತನಿಖೆ ನಡೆಸಲು ಸಿಎಂ‌ಗೆ ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜಾ ಮನವಿ Read More »

ಟೀ ಮಾರುತ್ತಿದ್ದ ಮಹಿಳೆ‌ ಗ್ರಾ.ಪಂ ಅಧ್ಯಕ್ಷೆ!

ಸಮಗ್ರ ನ್ಯೂಸ್: ಟೀ ಮಾರುತ್ತಿದ್ದ ವ್ಯಕ್ತಿ ಇಂದು ದೇಶದ ಉನ್ನತ ಹುದ್ದೆಯಾದ ಪ್ರಧಾನಿ ಸ್ಥಾನದಲ್ಲಿ ಕುಳಿತುಕೊಂಡಿದ್ದಾರೆ. ಅದೃಷ್ಟ ಯಾರಿಗೆ ಇರುತ್ತದೆ ಎಂದು ಹೇಳುವುದು ಅಸಾಧ್ಯ. ಅಂತಹ ಒಂದು ಪ್ರಸಂಗ ತುಮಕೂರು ಜಿಲ್ಲೆಯಲ್ಲಿ ನಿನ್ನೆ ಗುರುವಾರ ಜರುಗಿದೆ. ಟೀ ಮಾರಾಟ ಮಾಡುತ್ತಿದ್ದ ಮಹಿಳೆಯೊಬ್ಬರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದು, ಜನರಿಂದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ದೇವರಾಯನದುರ್ಗ ಪ್ರದೇಶದ ಯೋಗ ನರಸಿಂಹ ಸ್ವಾಮಿ ದೇವಸ್ಥಾನದ ಎದುರು ಟೀ ಅಂಗಡಿ ಇಟ್ಟುಕೊಂಡು ಮಾರುತ್ತಿದ್ದ ಮಹಿಳೆಯೊಬ್ಬರು ಉರ್ಡಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಅವಿರೋಧವಾಗಿ

ಟೀ ಮಾರುತ್ತಿದ್ದ ಮಹಿಳೆ‌ ಗ್ರಾ.ಪಂ ಅಧ್ಯಕ್ಷೆ! Read More »

ಬೆಂಗಳೂರು ವಿ.ವಿ ಕುಲಸಚಿವರಾಗಿ ಬೆಳ್ತಂಗಡಿ ಮೂಲದ ಶೇಕ್ ಲತೀಫ್ ಅಧಿಕಾರ ಸ್ವೀಕಾರ

ಸಮಗ್ರ ನ್ಯೂಸ್: ಬೆಂಗಳೂರು ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾಗಿ (ಆಡಳಿತ) ಮೂಲತಃ ಬೆಳ್ತಂಗಡಿ ತಾಲೂಕಿನ ಉಜಿರೆಯ ನಿವಾಸಿ ಪ್ರಸಕ್ತ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ಶೇಕ್ ಲತೀಫ್ ಅಧಿಕಾರ ಸ್ವೀಕರಿಸಿದ್ದಾರೆ. ಕೆಎಎಸ್ ಅಧಿಕಾರಿಯಾಗಿರುವ ಶೇಕ್ ಲತೀಫ್ ಈ ಹಿಂದೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಹಣಕಾಸು ಸದಸ್ಯರಾಗಿದ್ದರು. ಪ್ರಾರಂಭದಲ್ಲಿ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ವಿಭಾಗದ ಸಹಾಯಕ ನಿಯಂತ್ರಣ ಅಧಿಕಾರಿಯಾಗಿದ್ದ ಶೇಕ್ ಲತೀಫ್ ಪದವಿ ಪೂರ್ವ ಶಿಕ್ಷಣ ಇಲಾಖಾ ಲೆಕ್ಕಾಧಿಕಾರಿಯಾಗಿ, ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿಯಾಗಿ, ಕರ್ನಾಟಕ ರಾಜ್ಯ ಹಜ್

ಬೆಂಗಳೂರು ವಿ.ವಿ ಕುಲಸಚಿವರಾಗಿ ಬೆಳ್ತಂಗಡಿ ಮೂಲದ ಶೇಕ್ ಲತೀಫ್ ಅಧಿಕಾರ ಸ್ವೀಕಾರ Read More »

ಹವಾಮಾನ ವರದಿ| ರಾಜ್ಯದ ಹಲವೆಡೆ ಮಳೆ ಅಬ್ಬರ| ಮುಂದಿನ ಐದು ದಿನ ಭಾರೀ ಮಳೆ‌ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಉತ್ತರ ಕರ್ನಾಟಕ ಮತ್ತು ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ. ಬೆಳಗಾವಿ, ಕಲಬುರಗಿ ಮತ್ತು ಬೀದರ ಜಿಲ್ಲೆ ಭಾರಿ ಮಳೆಯಾಗುತ್ತಿರುವುದರಿಂದ ಕೆಲ ಪ್ರದೇಶಗಳು ಜಲಾವೃತವಾಗಿವೆ. ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ. ಉತ್ತರ ಒಳನಾಡು ಪ್ರದೇಶಗಳಾದ ಬೆಳಗಾವಿ, ಬೀದರ, ಧಾರವಾಡ, ಕಲಬುರ್ಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ

ಹವಾಮಾನ ವರದಿ| ರಾಜ್ಯದ ಹಲವೆಡೆ ಮಳೆ ಅಬ್ಬರ| ಮುಂದಿನ ಐದು ದಿನ ಭಾರೀ ಮಳೆ‌ ಸಾಧ್ಯತೆ Read More »

ಚಿಕ್ಕಮಗಳೂರು: ಕೊಟ್ಟಿಗೆಯಲ್ಲಿದ್ದ 27 ಕುರಿಗಳನ್ನ ಕದ್ದು 9 ಕುರಿಗಳ ಕತ್ತು ಕೊಯ್ದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಸುಮಾರು 38 ಕುರಿಗಳಲ್ಲಿ 27 ಕುರಿಗಳನ್ನ ಕದ್ದು ಒಂಬತ್ತು ಕುರಿಗಳ ಕತ್ತು ಕೊಯ್ದು ಸಾಯಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಚಂದ್ರಶೇಖರಪುರ ಗ್ರಾಮದಲ್ಲಿ ನಡೆದಿದೆ. ಮೂಲತಃ ಚಿಕ್ಕಮಗಳೂರು ಮೂಲದ ದಿನಕರ್ ಎಂಬುವರು ಕುರಿ ಸಾಕಾಣಿಕೆ ಮಾಡುತ್ತಿದ್ದರು. ಕಳೆದ ರಾತ್ರಿ ಕುರಿಗಳನ್ನ ಕೊಟ್ಟಿಗೆಯಲ್ಲಿ ಕಟ್ಟಿ ಮನೆಗೆ ಬಂದು ಬೆಳಗ್ಗೆ ಹೋಗುವಷ್ಟರಲ್ಲಿ ಕೊಟ್ಟಿಗೆ ತುಂಬಾ ಕುರಿಗಳ ಮಾರಣ ಹೋಮ ನಡೆದಿದೆ. 38 ಕುರಿಗಳ ಪೈಕಿ 27 ಕುರಿಗಳನ್ನ ಕದ್ದಿದ್ದಾರೆ. ಒಂಬತ್ತು ಕುರಿಗಳ

ಚಿಕ್ಕಮಗಳೂರು: ಕೊಟ್ಟಿಗೆಯಲ್ಲಿದ್ದ 27 ಕುರಿಗಳನ್ನ ಕದ್ದು 9 ಕುರಿಗಳ ಕತ್ತು ಕೊಯ್ದ ದುಷ್ಕರ್ಮಿಗಳು Read More »