ರಾಜ್ಯ

ಪತ್ನಿ, ಕುಟುಂಬಸ್ಥರಿಂದ ಕಿರುಕುಳ: ‘ಲೈವ್ ವಿಡಿಯೋ’ ಮಾಡಿ ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್:‌ ಪತ್ನಿ ಹಾಗೂ ಆಕೆಯ ಮನೆಯವರ ವಿರುದ್ಧ ಆರೋಪ ಮಾಡಿದ ವ್ಯಕ್ತಿ ಸೆಲ್ಫಿ ವಿಡಿಯೋ ಮಾಡಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದ ಮಾರಗೌಡನಹಳ್ಳಿಯಲ್ಲಿ ನಡೆದಿದೆ. ವಿನಯ್ (40) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಪತ್ನಿ ಆಶಾ ಹಾಗೂ ಅವರ ಪೋಷಕರು ತನಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ.ವಿಷ ಸೇವಿಸುವ ಮುನ್ನ ವಿಡಿಯೋ ಮಾಡಿಟ್ಟಿರುವ ವಿನಯ್, ನನ್ನ ಸಾವಿಗೆ ನನ್ನ ಪತ್ನಿ ಆಶಾ, ಅತ್ತೆ ರತ್ನಮ್ಮ, ನಾದಿನಿ ಉಷಾ ಕಾರಣ. ಆಶಾ

ಪತ್ನಿ, ಕುಟುಂಬಸ್ಥರಿಂದ ಕಿರುಕುಳ: ‘ಲೈವ್ ವಿಡಿಯೋ’ ಮಾಡಿ ವ್ಯಕ್ತಿ ಆತ್ಮಹತ್ಯೆ Read More »

ಕೊಡಗು: ಡಿ.ಸಿ.ಕಛೇರಿ ತಡೆಗೋಡೆ ಕಳಪೆ ಕಾಮಗಾರಿ ಪ್ರಕರಣ, ಸ್ಥಳ ತನಿಖೆಗೆ ಮುಂದಾದ ಲೋಕಾಯುಕ್ತ

ಸಮಗ್ರ ನ್ಯೂಸ್: ಕೊಡಗಿನಲ್ಲಿ ಬಹು ಚರ್ಚಿತ ವಿವಾದದ ಬೆಟ್ಟವನ್ನೇ ಸೃಷ್ಟಿಸಿದ್ದ ಕೊಡಗು ಜಿಲ್ಲಾಧಿಕಾರಿಗಳ ಕಛೇರಿ ಮುಂದಿನ ತಡೆಗೋಡೆ ನಿರ್ಮಾಣದ ಕಳಪೆ ಕಾಮಗಾರಿಯ ಬಗ್ಗೆ ಸ್ಥಳ ತನಿಖೆಗೆ ಕರ್ನಾಟಕ ಲೋಕಾಯುಕ್ತ ಮುಂದಾಗಿದೆ. ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ ಈ ಕಳಪೆ ಕಾಮಗಾರಿಯ ಬಗ್ಗೆ ತನಿಖೆ ನಡೆಸುವಂತೆ ಹಾಗೂ ಸಂಭಂದ ಪಟ್ಟ ಮಡಿಕೇರಿ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರು,ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ನಿರ್ವಹಣೆ ಜವಾಬ್ದಾರಿ ಹೊತ್ತ ಕಿರಿಯ ಅಭಿಯಂತರರ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ

ಕೊಡಗು: ಡಿ.ಸಿ.ಕಛೇರಿ ತಡೆಗೋಡೆ ಕಳಪೆ ಕಾಮಗಾರಿ ಪ್ರಕರಣ, ಸ್ಥಳ ತನಿಖೆಗೆ ಮುಂದಾದ ಲೋಕಾಯುಕ್ತ Read More »

ಕರ್ತವ್ಯದ ವೇಳೆ ಹಸಿರು ಟೋಪಿ ಧರಿಸಿದ ಬಿಎಂಟಿಸಿ ಕಂಡಕ್ಟರ್| ಮಹಿಳೆಯಿಂದ‌ ಕಂಡಕ್ಟರ್ ಗೆ ಕ್ಲಾಸ್

ಸಮಗ್ರ ನ್ಯೂಸ್: ಬಿಎಂಟಿಸಿ ಬಸ್‌ನಲ್ಲಿ ಕಂಡಕ್ಟರ್‌ ಆಗಿರುವ ಮುಸ್ಲಿಂ ವ್ಯಕ್ತಿ, ಕರ್ತವ್ಯದ ವೇಳೆ ಹಸಿರು ಬಣ್ಣದ ಟೋಪಿ ಧರಿಸಿ ಕಾರ್ಯ ನಿರ್ವಹಿಸುತ್ತಿದ್ದರು. ಇದನ್ನು ಮಹಿಳೆಯೊಬ್ಬರು ಪ್ರಶ್ನಿಸಿರುವ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಸರ್ಕಾರಿ ಸೇವೆಯಲ್ಲಿರುವಾಗ ಸರ್ಕಾರವೇ ಸಮವಸ್ತ್ರ ನೀಡುತ್ತದೆ, ಅದರಲ್ಲಿ ಈ ಹಸಿರು ಟೋಪಿ ಕೂಡ ಭಾಗವಾಗಿದೆಯೇ ಎಂದು ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ಕಂಡಕ್ಟರ್‌ ಹಾರಿಕೆ ಉತ್ತರ ನೀಡುತ್ತಲೇ ಟೋಪಿಯನ್ನು ತೆಗೆಯಲು ನಿರಾಕರಿಸುತ್ತಾರೆ. ಈ ವಿಡಿಯೋ ವೈರಲ್‌ ಆಗಿದ್ದು, ಮಹಿಳೆಯ ಧೈರ್ಯವನ್ನು ಮೆಚ್ಚಲೇಬೇಕು ಎಂದು ಕೆಲವರು

ಕರ್ತವ್ಯದ ವೇಳೆ ಹಸಿರು ಟೋಪಿ ಧರಿಸಿದ ಬಿಎಂಟಿಸಿ ಕಂಡಕ್ಟರ್| ಮಹಿಳೆಯಿಂದ‌ ಕಂಡಕ್ಟರ್ ಗೆ ಕ್ಲಾಸ್ Read More »

ಚಿಕ್ಕಮಗಳೂರು: 3,000 ಮೌಲ್ಯದ 40 ಕೆ.ಜಿ. ಟೊಮೆಟೊ ಕಳ್ಳತನ

ಸಮಗ್ರ ನ್ಯೂಸ್: ತರಕಾರಿ ಅಂಗಡಿಯಲ್ಲಿದ್ದ 3000 ಸಾವಿರ ಮೌಲ್ಯದ 40 ಕೆ.ಜಿ. ಟೊಮೆಟೊ ಇದ್ದ ಎರಡು ಟ್ರೇ ಕಳ್ಳತನವಾದ ಘಟನೆ ಜು.11 ರಂದು ಚಿಕ್ಕಮಗಳೂರು ಜಿಲ್ಲೆ ಯ ಆಲ್ದೂರಿನಲ್ಲಿ ನಡೆದಿದೆ. ಆಲ್ದೂರು ಪಟ್ಟಣದ ನಧೀಂ ಎಂಬವರ ಅಂಗಡಿಯಲ್ಲಿ ಎರಡು ಟ್ರೇ ಟಮೋಟೋ ಕಳ್ಳತನವಾಗಿದ್ದು, ಎಂದಿನಂತೆ ಸೋಮವಾರ ರಾತ್ರಿ ತರಕಾರಿಯನ್ನು ಅಂಗಡಿಯಲ್ಲಿಟ್ಟು ಟಾರ್ಪಲ್ ಎಳೆದು ಹೋಗಿದ್ದರು. ಆದರೆ, ಜು 11ರಂದು ಬೆಳಗ್ಗೆ ಅಂಗಡಿಗೆ ಬಂದು ಅಂಗಡಿಯ ಟಾರ್ಪಲ್ ಸರಿಸಿ ನೋಡಿದಾಗ ಟೊಮೆಟೊ ಇಲ್ಲದಿರುವುದು ಬೆಳಕಿಗೆ ಬಂದಿದೆ. ಆಲ್ದೂರು ಠಾಣೆಯ

ಚಿಕ್ಕಮಗಳೂರು: 3,000 ಮೌಲ್ಯದ 40 ಕೆ.ಜಿ. ಟೊಮೆಟೊ ಕಳ್ಳತನ Read More »

ಬೆಂಗಳೂರು: ರೌಡಿ ಶೀಟರ್ ನ ಕೊಚ್ಚಿ ಕೊಲೆ

ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಭೀಕರ ಹತ್ಯೆ ನಡೆದಿದೆ. ನಗರದ ಮಾರತಹಳ್ಳಿಯಲ್ಲಿ ಜೋಡಿ ಕೊಲೆ ನಡೆದ ಬೆನ್ನಲ್ಲೇ ಡಿ.ಜೆ. ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ, ರಿಯಲ್ ಎಸ್ಟೇಟ್ ಉದ್ಯಮಿಯನ್ನು ಮಾರಕಾಸ್ತ್ರಗಳಿಂದ ಭಯಾನಕವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಮೃತ ವ್ಯಕ್ತಿಯನ್ನು ರಿಯಲ್ ಎಸ್ಟೇಟ್ ಉದ್ಯಮಿ, ರೌಡಿಶೀಟರ್ ಕಪಿಲ್ ಎಂದು ಗುರುತಿಸಲಾಗಿದೆ. ನಾಲ್ಕೈದು ದುಷ್ಟರ್ಮಿಗಳು ಬೈಕ್‌ನಲ್ಲಿ ಬಂದು ಮಾರಕಾಸ್ತ್ರಗಳಿಂದ ಕಪಿಲ್ ಮೇಲೆ ದಾಳಿ ಮಾಡಿದ್ದಾರೆ.ಡಿಕೆ ಹಳ್ಳಿ ಕೆ ಎಚ್ ಬಿ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದೆ. ದಾಳಿ ಬಳಿಕ

ಬೆಂಗಳೂರು: ರೌಡಿ ಶೀಟರ್ ನ ಕೊಚ್ಚಿ ಕೊಲೆ Read More »

ಮುಕ್ತಾಯಗೊಂಡ ಜಿಎಸ್ ಟಿ ಕೌನ್ಸಿಲ್ ಸಭೆ| ಕೆಲವು ವಸ್ತುಗಳು ಅಗ್ಗ; ಆನ್ ಲೈನ್ ಗೇಮಿಂಗ್, ಕುದುರೆ ರೇಸ್ ಗೆ ತೆರಿಗೆ ಹೆಚ್ಚಳ

ಸಮಗ್ರ ನ್ಯೂಸ್: 50ನೇ ಜಿಎಸ್‌ಟಿ ಕೌನ್ಸಿಲ್ ಮಂಗಳವಾರ ನವದೆಹಲಿಯಲ್ಲಿ ಮುಕ್ತಾಯಗೊಂಡಿದೆ. ಜಿಎಸ್‌ಟಿ ಕೌನ್ಸಿಲ್ ಹಲವಾರು ಪ್ರಸ್ತಾಪಗಳಿಗೆ ಒಪ್ಪಿಗೆ ನೀಡುವುದರೊಂದಿಗೆ, ಕೆಲವು ವಸ್ತುಗಳು ಮತ್ತು ಸೇವೆಗಳು ದುಬಾರಿಯಾಗುತ್ತವೆ ಮತ್ತು ಇತರವು ಅಗ್ಗವಾಗಲಿವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದ ಸಮಿತಿಯು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಗಳನ್ನು ಹೊಂದಿದೆ. ಇದಲ್ಲದೆ, ಕೌನ್ಸಿಲ್ ಸದಸ್ಯರು ಕ್ಯಾನ್ಸರ್‌ಗೆ ಸಂಬಂಧಿಸಿದ ಔಷಧಗಳು, ಅಪರೂಪದ ಕಾಯಿಲೆಗಳಿಗೆ ಔಷಧಗಳು ಮತ್ತು ವಿಶೇಷ ವೈದ್ಯಕೀಯ ಉದ್ದೇಶಗಳಿಗಾಗಿ ಆಹಾರ (ಎಫ್‌ಎಸ್‌ಎಂಪಿ) ನಂತಹ ಫಾರ್ಮಾ ಉತ್ಪನ್ನಗಳ ಪ್ರಮುಖ

ಮುಕ್ತಾಯಗೊಂಡ ಜಿಎಸ್ ಟಿ ಕೌನ್ಸಿಲ್ ಸಭೆ| ಕೆಲವು ವಸ್ತುಗಳು ಅಗ್ಗ; ಆನ್ ಲೈನ್ ಗೇಮಿಂಗ್, ಕುದುರೆ ರೇಸ್ ಗೆ ತೆರಿಗೆ ಹೆಚ್ಚಳ Read More »

‘ಅಮ್ಮನ ಹೆಣ ನೋಡಲಾದರೂ ಬಾ ತಂಗಿ’ | ಸಕಲೇಶಪುರದಲ್ಲಿ ನಡೆಯಿತೊಂದು ಮನಕಲಕುವ ಘಟನೆ

ಸಮಗ್ರ ನ್ಯೂಸ್: ‘ತಾಯಿಯ ಸಾವಿಗೆ ತಂಗಿ ಬರದೆ ಹೇಗೆ ಅಂತಿಮ ಸಂಸ್ಕಾರ ಮಾಡಲಿ’ ಎಂದು ಸಹೋದರ ತಂಗಿಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ತಾಯಿ ಸಾವಿನ ಸುದ್ದಿ ಪ್ರಚಾರ ಮಾಡಿದ ಅಪರೂಪದ ಘಟನೆ ಸಕಲೇಶಪುರ ತಾಲ್ಲೂಕಿನ ಬೊಮ್ಮನಕೆರೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಗ್ರಾಮದ ಹೊನ್ನಮ್ಮ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ. ಇವರ ಪುತ್ರಿ ಹರಿಣಿ ಮಹಿಳಾ ಸಂಘಗಳಲ್ಲಿ ಸುಮಾರು ₹5 ಲಕ್ಷ ಸಾಲ ಮಾಡಿ, ಸಾಲ ಕಟ್ಟಲು ಆಕೆ ಊರು ಬಿಟ್ಟಿದ್ದಾರೆ ಎನ್ನಲಾಗಿದೆ. ಪುತ್ರ ರವಿ ತಾಯಿಯ ಶವದ ಮುಂದೆ ಕುಳಿತು,

‘ಅಮ್ಮನ ಹೆಣ ನೋಡಲಾದರೂ ಬಾ ತಂಗಿ’ | ಸಕಲೇಶಪುರದಲ್ಲಿ ನಡೆಯಿತೊಂದು ಮನಕಲಕುವ ಘಟನೆ Read More »

ಉಡುಪಿ: ನಮಗೂ ಬೆಳಿಗ್ಗೆ, ಸಂಜೆ 90-90 ಎಣ್ಣೆ ಉಚಿತವಾಗಿ ನೀಡಿ….!!

ಸಮಗ್ರ ನ್ಯೂಸ್: ರಾಜ್ಯ ಸರಕಾರ ಮಹಿಳೆಯರಿಗೆ ಉಚಿತ ಘೋಷಣೆ ಜಾರಿಗೊಳಿಸಿ, ಮದ್ಯದ ಬೆಲೆ ಏರಿಕೆ ಮಾಡಿದ ಹಿನ್ನಲೆ ಇದೀಗ ಮದ್ಯಪ್ರಿಯರು ತಮಗೂ ಉಚಿತವಾಗಿ ಮದ್ಯ ನೀಡುವಂತೆ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ. ಉಡುಪಿ ನಾಗರಿಕ ಸಮಿತಿ ಸಹಕಾರದಲ್ಲಿ ಮದ್ಯಪ್ರಿಯರು ಚಿತ್ತರಂಜನ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಮದ್ಯದ ಬಾಟಲಿಗೆ ಹೂಗಳಿಂದ ಅಲಂಕರಿಸಿ, ಆರತಿ ಬೆಳಗಿ, ಡೋಲು ಬಡಿದು ಗಮನ ಸೆಳೆದರು. ನಾಗರಿಕ ಸಮಿತಿ ನಿತ್ಯಾನಂದ ಒಳಕಾಡು, ಗೋವಿಂದ ಶೆಟ್ಟಿ ಮಾತನಾಡಿ, ಸರಕಾರ ಉಚಿತ ಯೋಜನೆ ಮಾದರಿಯಲ್ಲಿ ಮದ್ಯಪ್ರಿಯರಿಗೂ ಬೆಳಗ್ಗೆ 90

ಉಡುಪಿ: ನಮಗೂ ಬೆಳಿಗ್ಗೆ, ಸಂಜೆ 90-90 ಎಣ್ಣೆ ಉಚಿತವಾಗಿ ನೀಡಿ….!! Read More »

ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ರಿವರ್ ರ್ಯಾಪ್ಟಿಂಗ್ ನಿರ್ವಹಣಾ, ಮೇಲುಸ್ತುವಾರಿ ಸಮಿತಿ ಸಭೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಲ್ಲಿ ರಿವರ್ ರ್ಯಾಪ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ರಿವರ್ ರ್ಯಾಪ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ನಡೆಯಿತು. ವರ್ಷದಿಂದ ವರ್ಷಕ್ಕೆ ಕೊಡಗು ಜಿಲ್ಲೆಗೆ ಪ್ರವಾಸಿಗರು ದುಬಾರೆ, ಬರಪೊಳೆ, ಕುಮಾರಳ್ಳಿ, ಮಾಂದಲ್ಪಟ್ಟಿ, ಅಬ್ಬಿ ಜಲಪಾತ, ರಾಜಾಸೀಟು ಹೀಗೆ ವಿವಿಧ ಪ್ರವಾಸಿ ಸ್ಥಳಗಳ ವೀಕ್ಷಣೆಗೆ ಆಗಮಿಸಲಿದ್ದಾರೆ. ಪ್ರವಾಸಿಗರಿಗೆ ಯಾವುದೇ ರೀತಿಯ ಕಹಿ ಘಟನೆ

ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ರಿವರ್ ರ್ಯಾಪ್ಟಿಂಗ್ ನಿರ್ವಹಣಾ, ಮೇಲುಸ್ತುವಾರಿ ಸಮಿತಿ ಸಭೆ Read More »

ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ ಗೌರಿತಾ ಕೆ.ಜಿ. ಐದನೇ ಸ್ಥಾನ

ಸಮಗ್ರ ನ್ಯೂಸ್: 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಜು.9 ರಂದು ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 9ನೇ ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ 9 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ “ನಿರಂತರ ಯೋಗ ತರಬೇತಿ ಕೇಂದ್ರ” ಸುಬ್ರಹ್ಮಣ್ಯದ ವಿದ್ಯಾರ್ಥಿನಿ ಗೌರಿತಾ ಕೆ.ಜಿ. 5ನೇ ಸ್ಥಾನಗಳಿಸುತ್ತಾರೆ. ಇವರು ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯದಲ್ಲಿ 3ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಯೋಗ ಗುರು ಶರತ್ ಮರ್ಗಿಲಡ್ಕ ಅವರು ಮಾರ್ಗದರ್ಶನ ನೀಡಿರುತ್ತಾರೆ.

ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ ಗೌರಿತಾ ಕೆ.ಜಿ. ಐದನೇ ಸ್ಥಾನ Read More »