ರಾಜ್ಯ

ಫಸಲ್ ಬಿಮಾ ಯೋಜನೆಗೆ ರಾಜ್ಯ ಸರ್ಕಾರದಿಂದ ಗುಡ್ ಬೈ| ಸ್ವಾವಲಂಬಿ ವಿಮಾ ನೀತಿ ಜಾರಿಗೆ ಚಿಂತನೆ – ಕೃಷ್ಣ ಬೈರೇಗೌಡ

ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್ ಸರ್ಕಾರವು ಬಜೆಟ್ ನಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಹಲವು ಯೋಜನೆಗಳನ್ನು ಕೈಬಿಟ್ಟ ಬೆನ್ನಲ್ಲೇ ಇದೀಗ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಗೆ ಕೊಕ್ ನೀಡಲು ಮುಂದಾಗಿದೆ. ಈ ಕುರಿತು ಮಾಹಿತಿ ನೀಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಪ್ರಧಾನಮಂತ್ರಿ ಫಸಲ್ ಬಿಮಾ ಬೆಳೆ ವಿಮಾ ಯೋಜನೆಯಿಂದ ಹೊರಬಂದು ನಮ್ಮದೇ ರಾಜ್ಯದ ಹೊಸ ಬೆಳೆ ವಿಮಾ ನೀತಿ ರೂಪಿಸಿಕೊಳ್ಳುವ ಬಗ್ಗೆ ಚಿಂತನೆ ನಡೆಸಲಾಗಿದೆ. ಸಮರ್ಪಕ ಚಿಂತನೆಯ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು

ಫಸಲ್ ಬಿಮಾ ಯೋಜನೆಗೆ ರಾಜ್ಯ ಸರ್ಕಾರದಿಂದ ಗುಡ್ ಬೈ| ಸ್ವಾವಲಂಬಿ ವಿಮಾ ನೀತಿ ಜಾರಿಗೆ ಚಿಂತನೆ – ಕೃಷ್ಣ ಬೈರೇಗೌಡ Read More »

ಯೋಗ ಸ್ಪರ್ಧೆಯಲ್ಲಿ ಯೋಗೇನ ಚಿತ್ತಸ್ಯ ಯೋಗ ಕೇಂದ್ರಕ್ಕೆ ರಾಷ್ಟ್ರಮಟ್ಟದ ಪ್ರಶಸ್ತಿ

ಸಮಗ್ರ ನ್ಯೂಸ್: ಬೆಂಗಳೂರಿನ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಜು.9 ರಂದು ನಡೆದ ಮುಕ್ತ ರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಯೋಗೇನ ಚಿತ್ತಸ್ಯ ಯೋಗ ಕೇಂದ್ರಕ್ಕೆ ಹಲವು ಪ್ರಶಸ್ತಿ ಲಭಿಸಿದೆ. ಶರತ್ ಅಡ್ಕಾರ್ ಹಾಗೂ ಶೋಭಾಕುಮಾರಿ ದಂಪತಿಗಳ ಪುತ್ರಿ ಸೋನಾ ಅಡ್ಕಾರ್ 9 ರಿಂದ 12ನೇ ವಯೋಮಾನದ ಬಾಲಕಿಯರ ಟ್ರೆಡಿಷನಲ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಕುಶಾಲಪ್ಪ ಹಾಗೂ ಪುಷ್ಪಾವತಿ ದಂಪತಿಗಳ ಪುತ್ರಿ ಹಾರ್ದಿಕ ಕೆರೆಕ್ಕೋಡಿ 7ನೇ ಸ್ಥಾನ ಹಾಗೂ ಸ್ವಂತ ಆಯ್ಕೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ.

ಯೋಗ ಸ್ಪರ್ಧೆಯಲ್ಲಿ ಯೋಗೇನ ಚಿತ್ತಸ್ಯ ಯೋಗ ಕೇಂದ್ರಕ್ಕೆ ರಾಷ್ಟ್ರಮಟ್ಟದ ಪ್ರಶಸ್ತಿ Read More »

ಅನ್ನಭಾಗ್ಯ ಯೋಜನೆ ನೇರನಗದು ವರ್ಗಾವಣೆ| ಕೇಂದ್ರದಿಂದ ಹೊಲಸು ರಾಜಕಾರಣ – ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ಹೊಲಸು ರಾಜಕಾರಣ ಮಾಡಿದ್ದರಿಂದಾಗಿ ಈಗ ಅನ್ನಭಾಗ್ಯ‌ ಯೋಜನೆಯಲ್ಲಿ ಫಲಾನುಭವಿಗಳಿಗೆ ಹಣ ನೀಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಅನ್ನ ಭಾಗ್ಯ ಯೋಜನೆಯಲ್ಲಿ ಪ್ರತಿ ಫಲಾನುಭವಿಗೆ 170 ರೂ.ನಂತೆ ನೇರ ನಗದು ವರ್ಗಾವಣೆ ಆರಂಭದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೋಲಾರ, ಮೈಸೂರು ಜಿಲ್ಲೆಗಳಿಗೆ ನಗದು ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಾಯಿತು. ಧಾರವಾಡ, ರಾಮನಗರ, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ ಹಾಗೂ ಯಾದಗಿರಿ ಜಿಲ್ಲೆಗಳಿಗೆ ನೇರ ವರ್ಗಾವಣೆ ಆಗಲಿದೆ. ಹಂತಹಂತವಾಗಿ ಎಲ್ಲ ಜಿಲ್ಲೆಗಳಿಗೆ ಹಣ

ಅನ್ನಭಾಗ್ಯ ಯೋಜನೆ ನೇರನಗದು ವರ್ಗಾವಣೆ| ಕೇಂದ್ರದಿಂದ ಹೊಲಸು ರಾಜಕಾರಣ – ಸಿಎಂ ಸಿದ್ದರಾಮಯ್ಯ Read More »

ಸಿದ್ದಾಪುರ: ಗುಹ್ಯ ಗ್ರಾಮದಲ್ಲಿ ಹಾಡಹಗಲೇ ಆನೆಗಳ ಹಾವಳಿ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಸಿದ್ದಾಪುರ ಗುಹ್ಯ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಪಕ್ಕದಲ್ಲಿ ಇರುವ ಏಂಜಲ್ ಫೀಡ್ ಜ್ಯೋತಿ ಪೊನ್ನಪ್ಪ ಅವರ ತೋಟದಲ್ಲಿ ಧಿಢೀರನೆ ಆನೆ ಪ್ರತ್ಯಕ್ಷಗೊಂಡಿದ್ದು, ಆತಂಕ ಸೃಷ್ಟಿಯಾಗಿದೆ. ಇತ್ತೀಚೆಗೆ ಗುಹ್ಯ ಗ್ರಾಮದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು ಕೂಲಿ ಕಾರ್ಮಿಕರು ಕೆಲಸಕ್ಕೆ ನಿಗಾವಹಿಸಲು ತುಂಬಾ ಕಷ್ಟ ಆಗಿದೆ. ಅದೇ ರೀತಿ ಶಾಲೆ ಮಕ್ಕಳು ಓಡಾಡಲು ತುಂಬಾ ಕಷ್ಟ ಹಾಗಿದೆ ಎಂದು ಸಾರ್ವಜನಿಕರು ಅಳಲು ತೋಡಿಕೊಂಡಿದ್ದಾರೆ. ಈ ಸಂಬಂಧ ಅರಣ್ಯ ಇಲಾಖೆ ಅವರು ಕೂಡಲೇ ಆನೆಗಳನ್ನು

ಸಿದ್ದಾಪುರ: ಗುಹ್ಯ ಗ್ರಾಮದಲ್ಲಿ ಹಾಡಹಗಲೇ ಆನೆಗಳ ಹಾವಳಿ Read More »

ನೀವು ಸಿಎಂಗೆ ಸಮಸ್ಯೆ ಹೇಳ್ಕೋಬೇಕಾ? ಹಾಗಾದ್ರೆ ಹೀಗೆ ಮಾಡಿ…

ಸಮಗ್ರ ನ್ಯೂಸ್: ನೀವು ನಿಮ್ಮ ಸಮಸ್ಯೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಹೇಳಿಕೊಂಡು ಪರಿಹಾರ ಕಂಡುಕೊಳ್ಳುವ ಯೋಜನೆಯಲ್ಲಿದ್ದರೆ ಅದಕ್ಕಾಗಿ ಪ್ರತ್ಯೇಕ ಸಾಮಾಜಿಕ ಜಾಲತಾಣದ ಲಿಂಕ್ ಅನ್ನು ಮುಖ್ಯಮಂತ್ರಿಗಳ ಕಾರ್ಯಾಲಯದಿಂದ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಕಾರ್ಯಾಲಯದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಸಾರ್ವಜನಿಕ ಕುಂದು ಕೊರತೆಗಳನ್ನು ನೇರವಾಗಿ ಮುಖ್ಯಮಂತ್ರಿಗಳ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಗಮನಕ್ಕೆ ತರಲು ಮಾಧ್ಯಮ ಮತ್ತು ಸಾರ್ವಜನಿಕರಿಗೆ ನೆರವಾಗುವ ಉದ್ದೇಶದಿಂದ ಹೊಸ ಟ್ವಿಟರ್ ಖಾತೆಯನ್ನು ತೆರೆಯಲಾಗಿದೆ. https://twitter.com/osd_cmkarnataka ಹೆಸರಿನ ಟ್ವಿಟರ್ ಖಾತೆಗೆ ಸಾರ್ವಜನಿಕರು ಮತ್ತು

ನೀವು ಸಿಎಂಗೆ ಸಮಸ್ಯೆ ಹೇಳ್ಕೋಬೇಕಾ? ಹಾಗಾದ್ರೆ ಹೀಗೆ ಮಾಡಿ… Read More »

ಮೈಸೂರು: ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ| ಇಬ್ಬರು ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಕ್ಲುಲ್ಲಕ ವಿಷಯಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕೊನೆಗೆ ವೇಣುಗೋಪಾಲ್ ನಾಯಕ್‌ ಎಂಬ ಯುವಕನ ಕೊಲೆಗೆ ಕಾರಣವಾಗಿದೆ. ಪ್ರಮುಖ ಆರೋಪಿಗಳಾದ ಮಣಿಕಂಠ ಮತ್ತು ಸಂದೇಶ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಟಿ ನರಸೀಪುರದಲ್ಲಿ ಧರ್ಮ ಜಾಗೃತಿ ಬಳಗದ ವತಿಯಿಂದ ಶನಿವಾರ ಹನುಮ ಜಯಂತಿ ಹಮ್ಮಿಕೊಳ್ಳಲಾಗಿತ್ತು. ಶ್ರೀ ಗುಂಜ ನರಸಿಂಹಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಸಹ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಣಿಕಂಠ ಮತ್ತು ಸಂದೇಶ್ ಎಂಬುವವರು ಬೈಕ್‌ನಲ್ಲಿ ಬಂದಿದ್ದಕ್ಕೆ

ಮೈಸೂರು: ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ| ಇಬ್ಬರು ಆರೋಪಿಗಳು ಅರೆಸ್ಟ್ Read More »

ಚಾರ್ಮಾಡಿ ಘಾಟ್ ನಲ್ಲಿ ಪ್ರವಾಸಿಗರ ಹುಚ್ಚಾಟ| ಟ್ರಾಫಿಕ್ ಜ್ಯಾಂ, ಪ್ರಯಾಣಿಕರ ಆಕ್ರೋಶ

ಸಮಗ್ರ ನ್ಯೂಸ್: ಚಾರ್ಮಾಡಿ ಘಾಟ್ ನಲ್ಲಿ ಪ್ರವಾಸಿಗರು ಹುಚ್ಚಾಟ ಮೆರೆದಿದ್ದು, ರಸ್ತೆ ಮದ್ಯೆ ಬೇಕಾಬಿಟ್ಟಿ ವಾಹನ ನಿಲ್ಲಿಸಿ ಡ್ಯಾನ್ಸ್ ಮಾಡಿದ ಘಟನೆ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಅಪಾಯದಿಂದ ಕೂಡಿದ ರಸ್ತೆಯಲ್ಲಿ ಪ್ರವಾಸಿಗರು ಮೋಜು ಮಸ್ತಿ ಮಾಡಿದ್ದು, ಇದರಿಂದ ಟ್ರಾಫಿಕ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದ್ದಾರೆ. ಪುಂಡರ ಪುಂಡಾಟಕ್ಕೆ ಬ್ರೇಕ್ ಹಾಕುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ದಟ್ಟವಾದ ಮಂಜು ಕೂಡ ಇದ್ದು, ಎದುರಿನಿಂದ ಬರುವ ವಾಹನಗಳು ಸರಿಯಾಗಿ ಕಾಣಿಸೋದಿಲ್ಲ. ಅಲ್ಲದೇ ರಸ್ತೆಗಳು ತಿರುವು ಮುರುವಿನಿಂದ

ಚಾರ್ಮಾಡಿ ಘಾಟ್ ನಲ್ಲಿ ಪ್ರವಾಸಿಗರ ಹುಚ್ಚಾಟ| ಟ್ರಾಫಿಕ್ ಜ್ಯಾಂ, ಪ್ರಯಾಣಿಕರ ಆಕ್ರೋಶ Read More »

ಹೆಚ್ಚುವರಿ ಅಕ್ಕಿ ಬದಲು ಹಣ ನೀಡುವ ಅನ್ನಭಾಗ್ಯ ಯೋಜನೆಗೆ ಸಿಎಂ ಚಾಲನೆ

ಸಮಗ್ರ ನ್ಯೂಸ್:ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲು ನೇರ ಹಣ ವರ್ಗಾವಣೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು. ಈ ಮೂಲಕ ಜನರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 170 ರೂ ಹಣ ನೇರವಾಗಿ ಖಾತೆಗೆ ವರ್ಗಾವಣೆಯಾಗಲಿದೆ. ಇಂದು ಮೈಸೂರು ಮತ್ತು ಕೋಲಾರ ಜಿಲ್ಲೆಯ ಪಡಿತರದಾರರಿಗೆ ಹಣ ವರ್ಗಾವಣೆಯಾಗಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತದಲ್ಲಿ ಬೇರೆ ಬೇರೆ ಜಿಲ್ಲೆಗಳ ಪಡಿತರದಾರರಿಗೆ ಹಣ ವರ್ಗಾವಣೆಯಾಗಲಿದೆ. ವಿಶೇಷ ಅಂದರೆ ಅನ್ನಭಾಗ್ಯ ಯೋಜನೆ ಜಾರಿಗೆ ಇದೀಗ ದಶಕದ ಸಂಭ್ರಮ ಇದೇ

ಹೆಚ್ಚುವರಿ ಅಕ್ಕಿ ಬದಲು ಹಣ ನೀಡುವ ಅನ್ನಭಾಗ್ಯ ಯೋಜನೆಗೆ ಸಿಎಂ ಚಾಲನೆ Read More »

ಉಡುಪಿ: ಓವರ್ ಪಾಸ್ ಕಾಮಗಾರಿ ಪಕ್ಕ ಸರ್ವೀಸ್ ರಸ್ತೆ ಕುಸಿತ

ಸಮಗ್ರ ನ್ಯೂಸ್: ಉಡುಪಿಯ ಸಂತೆಕಟ್ಟೆ ಬಳಿ ಕಾಮಗಾರಿ ಹಂತದಲ್ಲಿರುವ ಓವರ್ ಪಾಸ್ ಕಾಮಗಾರಿಯ ಬೃಹತ್ ಹೊಂಡದ ಒಂದು ಭಾಗ ಕುಸಿದಿದ್ದು, ಸ್ಥಳೀಯರಲ್ಲಿ ಆತಂಕ‌ ಸೃಷ್ಟಿಯಾಗಿದೆ. ರಸ್ತೆ ನಿರ್ಮಾಣಕ್ಕಾಗಿ ಹೊಂಡ ತೋಡಲಾಗಿದ್ದು, ಹೊಂಡದಲ್ಲಿ ಭಾರೀ ಪ್ರಮಾಣದ ಬಂಡೆ ಕಲ್ಲು ಕಂಡುಬಂದ ಕಾರಣ ಕಾಮಗಾರಿ ಬಹುತೇಕ ನಿಧಾನಗೊಂಡಿತ್ತು. ಬಳಿಕ ಭಾರೀ ಮಳೆಗೆ ಟಾರ್ಪಲ್ ಅಳವಡಿಕೆ ಮಾಡಲಾಗಿತ್ತು. ಆದರೆ ಇಂದು ಕಾಮಗಾರಿ ಸ್ಥಳದಲ್ಲಿ ಮಣ್ಣು ಕುಸಿಯುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ.

ಉಡುಪಿ: ಓವರ್ ಪಾಸ್ ಕಾಮಗಾರಿ ಪಕ್ಕ ಸರ್ವೀಸ್ ರಸ್ತೆ ಕುಸಿತ Read More »

ವಿಪಕ್ಷ ನಾಯಕನಿಲ್ಲದೆ ಎರಡನೇ ವಾರಕ್ಕೆ ಕಾಲಿಟ್ಟ ವಿಧಾನಮಂಡಲ ಅಧಿವೇಶನ| ಸರ್ಕಾರದ ವಿರುದ್ದ ಮುಗಿಬೀಳಲು ವಿಪಕ್ಷಗಳ ಸರ್ಕಸ್

ಸಮಗ್ರ ನ್ಯೂಸ್: ವಿಧಾನ ಮಂಡಲ ಉಭಯ ಸದನಗಳ ಅಧಿವೇಶನ ಇಂದು ಎರಡನೇ ವಾರಕ್ಕೆ ಕಾಲಿಟ್ಟಿದೆ. ಹೀಗಿದ್ದರೂ, ವಿರೋಧ ಪಕ್ಷಗಳಿಗೆ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗಿಲ್ಲ. ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಎರಡು ತಿಂಗಳಾಗುತ್ತಿದ್ದರೂ, ವಿಧಾನ ಮಂಡಲ ಅಧಿವೇಶನ ಆರಂಭವಾಗಿ ಒಂದು ವಾರ ಕಳೆದರೂ ಪ್ರತಿಪಕ್ಷಕ್ಕೆ ಅಧಿಕೃತ ನಾಯಕರು ಇಲ್ಲದಂತಾಗಿದೆ. ವಿಪಕ್ಷ ನಾಯಕನ ಆಯ್ಕೆ ಸಂಬಂಧ ಬಿಜೆಪಿ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಆಗಮಿಸಿ ಹಿರಿಯ ಮುಖಂಡರು ಹಾಗೂ ಶಾಸಕರಿಂದ ಅಭಿಪ್ರಾಯ ಪಡೆದುಕೊಂಡಿದ್ದು, ವರಿಷ್ಠರಿಗೆ ವರದಿಯನ್ನು ನೀಡಲಾಗಿದೆ. ಆದರೆ, ಇದುವರೆಗೂ

ವಿಪಕ್ಷ ನಾಯಕನಿಲ್ಲದೆ ಎರಡನೇ ವಾರಕ್ಕೆ ಕಾಲಿಟ್ಟ ವಿಧಾನಮಂಡಲ ಅಧಿವೇಶನ| ಸರ್ಕಾರದ ವಿರುದ್ದ ಮುಗಿಬೀಳಲು ವಿಪಕ್ಷಗಳ ಸರ್ಕಸ್ Read More »