ರಾಜ್ಯ

ಕರಾವಳಿಯಲ್ಲಿ ಮತ್ತೆ ಬಿರುಸು ಪಡೆದ ಮಳೆ

ಸಮಗ್ರ ನ್ಯೂಸ್ : ಕರಾವಳಿ ಭಾಗದಲ್ಲಿ ನಿನ್ನೆ ಕೊಂಚ ಬಿಡುವು ನೀಡಿದ್ದ ಮಳೆರಾಯ ಇಂದು ಮತ್ತೆ ಪ್ರಾರಂಭವಾಗಿದೆ. ಕಳೆದ ವಾರದಿಂದ ಸುರಿಯುತ್ತಿರುವ ಮಳೆ ಮತ್ತೆ ಮುಂದುವರೆದಿದೆ. ನಿನ್ನೆ ಶುಕ್ರವಾರ ಹಗಲು ಮಳೆ ಸ್ವಲ್ಪ ಮಟ್ಟಿನ ವಿರಾಮ ಪಡೆದಿತ್ತು, ಆದರೆ ರಾತ್ರಿ ಇಡೀ ಧಾರಾಕಾರ‌ ಮಳೆಯಾಗಿದ್ದು, ಶನಿವಾರವೂ ಜಿಲ್ಲೆಯಾದ್ಯಂತ ಬಿರುಸಿನ‌ ಮಳೆಯಾಗುತ್ತಿದೆ. ಮಳೆಯಿಂದಾಗಿ‌ ಮಂಗಳವಾರ ವಾರದಿಂದ ಶುಕ್ರವಾರದವರೆಗರ ಜಿಲ್ಲಾಡಳಿತವು ಶಾಲೆಗಳಿಗೆ ರಜೆ‌ ನೀಡಿತ್ತು. ಶನಿವಾರ ಶಾಲೆಗಳು ಪುನರಾರಂಭಗೊಂಡಿವೆ. ಮೂಲ್ಕಿ ತಾಲ್ಲೂಕಿನ ಕಿಲ್ಪಾಡಿ ಗ್ರಾಮದ ಕೆಂಚನಕೆರೆ ಎಂಬಲ್ಲಿ ಶುಕ್ರವಾರ ರಾತ್ರಿ

ಕರಾವಳಿಯಲ್ಲಿ ಮತ್ತೆ ಬಿರುಸು ಪಡೆದ ಮಳೆ Read More »

ಜು.16ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ – ಸಿಎಂ

ಸಮಗ್ರ ನ್ಯೂಸ್: ಮಹಿಳೆಯರು ಬಹು ನಿರೀಕ್ಷೆಯಿಂದ ನೋಡುತ್ತಿರುವ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಮುಹೂರ್ತ ಫಿಕ್ಸ್ ಆಗಿದೆ. ಜುಲೈ.16ರಂದು ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದ್ದು, ಆಗಸ್ಟ್ ನಲ್ಲಿ 2000 ರೂ ಕುಟುಂಬದ ಯಜಮಾನಿ ಮಹಿಳೆಯರ ಖಾತೆಗೆ ಜಮಾ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ರಾಜ್ಯ ಬಜೆಟ್ ಮಂಡನೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂದು ಮಂಡಿಸಿದ ಬಜೆಟ್ ಪೂರ್ಣಪ್ರಮಾಣದ ಬಜೆಟ್ ಆಗಿದೆ. ಬೊಮ್ಮಾಯಿ ನಾಲ್ಕು ತಿಂಗಳು ಲೇಖಾನುಧಾನ ತೆಗೆದುಕೊಂಡಿದ್ದರು ಎಂದರು. ಜೂನ್ 18ರಿಂದ ಗೃಹ

ಜು.16ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ – ಸಿಎಂ Read More »

ಕೊಂಚ ಬಿಡುವು ಕೊಟ್ಟ ಮಳೆ| ದ.ಕ ಜಿಲ್ಲೆಯಲ್ಲಿ ಜು.8ರಂದು ಶಾಲಾ ಕಾಲೇಜು ಎಂದಿನಂತೆ ಆರಂಭ – ಡಿಸಿ

ಸಮಗ್ರ ನ್ಯೂಸ್: ದ.ಕ. ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಕಾರಣ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸುವ ಅನಿವಾರ್ಯತೆ ಕಂಡುಬರುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಸೂಕ್ತವಾದ ರೀತಿಯಲ್ಲಿ ಎಚ್ಚರಿಕೆ ಮತ್ತು ವಿದ್ಯಾರ್ಥಿಗಳ ಸುರಕ್ಷತೆಯನ್ನು ಪರಿಶೀಲಿಸಿಕೊಂಡು ಶಾಲೆ, ಕಾಲೇಜು ನಡೆಸಲು ಜಿಲ್ಲಾಧಿಕಾರಿ ಸೂಚಿಸಿರುತ್ತಾರೆ.

ಕೊಂಚ ಬಿಡುವು ಕೊಟ್ಟ ಮಳೆ| ದ.ಕ ಜಿಲ್ಲೆಯಲ್ಲಿ ಜು.8ರಂದು ಶಾಲಾ ಕಾಲೇಜು ಎಂದಿನಂತೆ ಆರಂಭ – ಡಿಸಿ Read More »

ಚಾರ್ಮಾಡಿ ಘಾಟ್ ನಲ್ಲಿ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ಮಹಿಳೆಗೆ ಹೆರಿಗೆ ನೋವು| ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಚಾರ್ಮಾಡಿ ಘಾಟಿಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಅದರಲ್ಲಿ ಖಾಸಗಿ ವಾಹನದಲ್ಲಿ ಬಂದಿದ್ದ ಧರ್ಮಸ್ಥಳದಿಂದ ಬೆಂಗಳೂರಿಗೆ ಸಾಗುತ್ತಿದ್ದ ಗರ್ಭಿಣಿ ಮಹಿಳೆ ಚೈತ್ರಾ ಎಂಬವರು ಹೆರಿಗೆ ನೋವು ಕಾಣಿಸಿಕೊಂಡು ಅಸ್ವಸ್ಥಗೊಂಡರು. ಶುಕ್ರವಾರ ಚಾರ್ಮಾಡಿ ಘಾಟ್ ನಲ್ಲಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು ಅಸ್ವಸ್ಥತೆಗೊಂಡಿದ್ದರಿಂದ ಸ್ಥಳದಲ್ಲಿದ್ದ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಆರೀಪ್ ಅವರು ಅವರ ಅಂಬುಲೆನ್ಸ್ ನಲ್ಲಿ ವಾಹನ ದಟ್ಟಣೆಯಲ್ಲೂ ಸೈರನ್ ಹಾಕಿ ಮೂಡಿಗೆರೆ ಆಸ್ಪತ್ರೆಗೆ ತಂದು

ಚಾರ್ಮಾಡಿ ಘಾಟ್ ನಲ್ಲಿ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ಮಹಿಳೆಗೆ ಹೆರಿಗೆ ನೋವು| ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲು Read More »

ಬಜೆಟ್ ಮಂಡನೆಯ ವೇಳೆ ಶಾಸಕರ ಸೀಟ್‍ನಲ್ಲಿ ಕುಳಿತಿದ್ದ ಕರಿಯಪ್ಪ ಬಂಧನ.!

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಬಜೆಟ್ ಮಂಡನೆಯ ವೇಳೆ ಸದನದ ಒಳಗಡೆ ಕುಳಿತಿದ್ದ ವ್ಯಕ್ತಿಯನ್ನು ಕರಿಯಪ್ಪ ಯಾನೇ ತಿಪ್ಪೇರುದ್ರ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಶರಣಪ್ಪ ಅವರು ಕರಿಯಪ್ಪ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. 70 ವರ್ಷದ ಈ ವ್ಯಕ್ತಿಯನ್ನು ಪೊಲೀಸ್ ಕಮಿಷನರ್ ಗಂಭೀರವಾಗಿ ಪರಿಗಣಿಸಿದ್ದಾರೆ. ಯಾವ ಶಾಸಕರ ಹೆಸರನ್ನು ಬಳಸಿ ಒಳಹೋಗಿದ್ದ?, ಆಸನದಲ್ಲಿ ಕುಳಿತುಕೊಂಡಿದ್ದು ಯಾಕೆ? ಹಾಗೂ ಯಾವ ದಾಖಲೆಗಳು ತನ್ನ ಬಳಿಯಿದ್ದವು ಅನ್ನೋದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಸದನದೊಳಗೆ

ಬಜೆಟ್ ಮಂಡನೆಯ ವೇಳೆ ಶಾಸಕರ ಸೀಟ್‍ನಲ್ಲಿ ಕುಳಿತಿದ್ದ ಕರಿಯಪ್ಪ ಬಂಧನ.! Read More »

ಒಡಿಶಾ ರೈಲು ದುರಂತ| ಮೂವರು ಅಧಿಕಾರಿಗಳು ಅರೆಸ್ಟ್

ಸಮಗ್ರ ನ್ಯೂಸ್: ಒಡಿಶಾದಲ್ಲಿ 290 ಮಂದಿಯನ್ನು ಬಲಿಪಡೆದ ಸರಣಿ ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ರೈಲ್ವೆ ಉದ್ಯೋಗಿಗಳಾಗಿರುವ ಮೂವರನ್ನು ಸಿಬಿಐ ಬಂಧಿಸಿದೆ. ಈಗಾಗಲೇ ಪ್ರಕರಣಕ್ಕೆ ಸಂಭಧಿಸಿದಂತೆ ರೈಲ್ವೆ ಸುರಕ್ಷತಾ ಆಯುಕ್ತರು ರೈಲ್ವೆ ಮಂಡಳಿಗೆ ಸಲ್ಲಿಸಿದ್ದ ವರದಿಯಲ್ಲಿ, ಮಾನವ ಪ್ರಮಾದ ಮತ್ತು ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಹೇಳಿತ್ತು. ಬಂಧಿತ ವ್ಯಕ್ತಿಗಳಾದ ಅರುಣ್ ಕುಮಾರ್ ಮಹಂತ, ಮುಹಮ್ಮದ್ ಅಮೀರ್ ಖಾನ್ ಮತ್ತು ಪಪ್ಪು ಕುಮಾರ್ ವಿರುದ್ಧ ಕೊಲೆಗೆ ಸಮನಾಗದ ನರಹತ್ಯೆ

ಒಡಿಶಾ ರೈಲು ದುರಂತ| ಮೂವರು ಅಧಿಕಾರಿಗಳು ಅರೆಸ್ಟ್ Read More »

ಚಾರ್ಮಾಡಿ ಘಾಟ್ ನಲ್ಲಿ ಬಸ್ ಗಳ ಮುಖಾಮುಖಿ ಡಿಕ್ಕಿ| ಚಾಲಕರು ಗಂಭೀರ; ನಡೆದೇ ಸಾಗಿದ ಪ್ರಯಾಣಿಕರು

ಸಮಗ್ರ ನ್ಯೂಸ್: ದಟ್ಟವಾದ ಮಂಜು ಆವರಿಸಿದ ಪರಿಣಾಮ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಎರಡು ಸರ್ಕಾರಿ ಬಸ್ಸುಗಳ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಚಾಲಕರ ಕಾಲುಗಳಿಗೆ ತೀವ್ರ ಗಾಯಗಳಾಗಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಸಾಗುತ್ತಿದ್ದ ಬಸ್ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಬಸ್ ಗಳು ಇಕ್ಕಟ್ಟಾದ ರಸ್ತೆಯಲ್ಲಿ ಶುಕ್ರವಾರ ಸಂಜೆ ಮುಖಾಮುಖಿ ಢಿಕ್ಕಿಯಾಗಿ ಅವಘಡ ಸಂಭವಿಸಿದೆ. ಅಪಘಾತಕ್ಕೀಡಾದ ಬಸ್ಸುಗಳಲ್ಲಿ 80ಕ್ಕೂ ಹೆಚ್ಚು ಜನ ಪ್ರವಾಸಿಗರು ಇದ್ದರು. ಅಪಘಾತಕ್ಕೆ ರಸ್ತೆ ಕಾಮಗಾರಿ ಕಾರಣ

ಚಾರ್ಮಾಡಿ ಘಾಟ್ ನಲ್ಲಿ ಬಸ್ ಗಳ ಮುಖಾಮುಖಿ ಡಿಕ್ಕಿ| ಚಾಲಕರು ಗಂಭೀರ; ನಡೆದೇ ಸಾಗಿದ ಪ್ರಯಾಣಿಕರು Read More »

ಮೋದಿ ಉಪನಾಮ ಪ್ರಕರಣ| ರಾಹುಲ್ ಗಾಂಧಿಗೆ ಎರಡು ವರ್ಷ ಶಿಕ್ಷೆ ಖಾಯಂ

ಸಮಗ್ರ ನ್ಯೂಸ್: ಮೋದಿ ಉಪನಾಮಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಶಿಕ್ಷೆಯ ವಿರುದ್ಧ ಗುಜರಾತ್ ಹೈಕೋರ್ಟ್​ ಇಂದು ತೀರ್ಪು ಪ್ರಕಟಿಸಿದೆ. ರಾಹುಲ್​ ಗಾಂಧಿಗೆ ಹಿನ್ನಡೆಯಾಗಿದೆ. ಮಾರ್ಚ್​ 23ರಂದು ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿ ಎರಡು ವರ್ಷಗಳ ಬಳಿಕ ಶಿಕ್ಷೆ ವಿಧಿಸಿತ್ತು. ಇದರ ವಿರುದ್ಧ ರಾಹುಲ್ ಗಾಂಧಿ ಹೈಕೋರ್ಟ್​ ಮೆಟ್ಟಿಲೇರಿದ್ದರು. ಶಿಕ್ಷೆ ಪ್ರಕಟವಾದ ಬಳಿಕ ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಜಾಮೀನು ಸಿಕ್ಕಿದೆ.

ಮೋದಿ ಉಪನಾಮ ಪ್ರಕರಣ| ರಾಹುಲ್ ಗಾಂಧಿಗೆ ಎರಡು ವರ್ಷ ಶಿಕ್ಷೆ ಖಾಯಂ Read More »

ಬುರ್ಖಾದೊಳಗೆ ಅವಳಲ್ಲ ಅವನು! ಉಚಿತ ಪ್ರಯಾಣದ ಆಸೆಯಿಂದ ಪೇಚಿಗೆ ಸಿಲುಕಿದ ಆತ!!

ಸಮಗ್ರ ನ್ಯೂಸ್: ಸರ್ಕಾರದ ಯೋಜನೆಗಳನ್ನು ಪಡೆಯಲು ಜನರು ನಕಲಿ ಆಧಾರ್, ವೋಟರ್ ಐಡಿ ಸೇರಿದಂತೆ ಅನೇಕ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಸಿಕ್ಕಿಬಿದ್ದ ಸಾಕಷ್ಟು ನಿದರ್ಶನಗಳಿವೆ. ಅಂತಹುದೇ ಮತ್ತೊಂದು ಪ್ರಸಂಗ ಸಂಶಿಯಲ್ಲಿ ನಡೆದಿದೆ. ಸಂಶಿಯ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಗುರುವಾರ ಬುರ್ಖಾ ತೊಟ್ಟು ಕುಳಿತಿದ್ದ ವ್ಯಕ್ತಿಯನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಮಾಡಿರುವ ತಂತ್ರ ಎಂದು ಅನುಮಾನಿಸಿ ಹಿಡಿದಿದ್ದಾರೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬುರ್ಖಾ ತೊಟ್ಟಿದ್ದ ವ್ಯಕ್ತಿ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ

ಬುರ್ಖಾದೊಳಗೆ ಅವಳಲ್ಲ ಅವನು! ಉಚಿತ ಪ್ರಯಾಣದ ಆಸೆಯಿಂದ ಪೇಚಿಗೆ ಸಿಲುಕಿದ ಆತ!! Read More »

ಭ್ರಷ್ಟ ಅಧಿಕಾರಿ ಅಜಿತ್ ರೈ ನ್ಯಾಯಾಂಗ ಬಂಧನಕ್ಕೆ ‌ಕೋರ್ಟ್‌ ಆದೇಶ

ಸಮಗ್ರ ವಾರ್ತೆ: ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರ ವಶದಲ್ಲಿದ್ದ ಅಜಿತ್ ರೈ ಯನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಲೋಕಾಯುಕ್ತ ಕಸ್ಟಡಿ ಅವಧಿ ಜು.6ಕ್ಕೆ ಮುಕ್ತಾಯವಾದ ಹಿನ್ನೆಲೆ ಅಜಿತ್ ರೈ ಅವರನ್ನು ಇಂದು ಕೋರ್ಟ್ಗೆ ಹಾಜರುಪಡಿಸಿದ ಲೋಕಾಯುಕ್ತ ಅಧಿಕಾರಿಗಳು, ಮತ್ತೆ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಆದರೆ ವಿಚಾರಣೆ ನಡೆಸಿದ ಕೋರ್ಟ್ ‘ಅಜಿತ್ ರೈ’ ಯನ್ನು ನ್ಯಾಯಾಂಗ ವಶಕ್ಕೆ ನೀಡಿದ ವಿಶೇಷ ನ್ಯಾಯಾಲಯ ಜುಲೈ 11 ಕ್ಕೆ ವಿಚಾರಣೆ

ಭ್ರಷ್ಟ ಅಧಿಕಾರಿ ಅಜಿತ್ ರೈ ನ್ಯಾಯಾಂಗ ಬಂಧನಕ್ಕೆ ‌ಕೋರ್ಟ್‌ ಆದೇಶ Read More »