ರಾಜ್ಯ

ಭಾರೀ ಮಳೆ ಹಿನ್ನೆಲೆ|ಚಿಕ್ಕಮಗಳೂರು ತಾಲೂಕಿನ ಆಯ್ದ ಭಾಗದ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ಚಿಕ್ಕಮಗಳೂರು ತಾಲೂಕಿನ ಭಾರೀ ಮಳೆ ಹಿನ್ನೆಲೆ ಆಯ್ದ ಭಾಗದ ಜು.7 ರಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಳೆಯಲ್ಲಿ ಮಕ್ಕಳು ಶಾಲೆಗೆ ಹೋಗಲು ಕಷ್ಟವಾಗುತ್ತದೆ, ಹಾಗೆ ಶಾಲಾ ಕಟ್ಟಡಗಳು ಹಳೆಯದಾಗಿದ್ದು ದುರಸ್ಥಿ ಅಗತ್ಯವಿದೆ ಈ ಕಾರಣ ಯಾವುದೇ ಅನಾಹುತ ಸಂಭವಿಸದಂತೆ ಮುಂಜಾಗೃತ ಕ್ರಮವಾಗಿ ಜಾಗರ, ವಸ್ತಾರೆ, ಖಾಂಡ್ಯ, ಆಲ್ದೂರು, ಆವತಿ ಹೋಬಳಿ ಶಾಲೆಗಳಿಗೆ ಬಿಇಓ ಶುಕ್ರವಾರ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ|ಚಿಕ್ಕಮಗಳೂರು ತಾಲೂಕಿನ ಆಯ್ದ ಭಾಗದ ಶಾಲೆಗಳಿಗೆ ರಜೆ Read More »

ಉಕ್ಕಿ ಹರಿದ ಮಧು ವಾಹಿನಿ ಹೊಳೆ| ಮಧೂರು ದೇವಸ್ಥಾನದ ಆವರಣ ದೊಳಗೆ ನುಗ್ಗಿದ ನೀರು

ಸಮಗ್ರ ನ್ಯೂಸ್: ಜಿಲ್ಲೆಯಲ್ಲಿ ಗುರುವಾರವೂ ಮಳೆಯ ಆರ್ಭಟ ಮುಂದುವರಿದಿದ್ದು ನದಿಗಳು ಉಕ್ಕಿ ಹರಿಯುತ್ತಿವೆ, ತಗ್ಗು ಪ್ರದೇಶಗಳು ಜಲಾವೃತ ಗೊಂಡಿದೆ. ಇದೇ ರೀತಿ ಮಧು ವಾಹಿನಿ ಹೊಳೆಯಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ಮಧೂರು ದೇವಸ್ಥಾನದ ಆವರಣ ದೊಳಗೆ ನೀರು ನುಗ್ಗಿದೆ. ಜಿಲ್ಲೆಯ ಎಲ್ಲಾ ನದಿ ಗಳು ಉಕ್ಕಿ ಹರಿಯುತ್ತಿರುವುದರಿಂದ ತಗ್ಗು ಪ್ರದೇಶದ ಹಲವಾರು ಮನೆಗಳಿಗೆ ನೀರು ನುಗ್ಗಿದೆ. ಹಲವು ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡಿದೆ . ಹಲವಾರು ಕಂಬಗಳು ಧರಶಾಯಿ ಯಾಗಿದೆ. ಹಲವೆಡೆ ಗುಡ್ಡಗಳು

ಉಕ್ಕಿ ಹರಿದ ಮಧು ವಾಹಿನಿ ಹೊಳೆ| ಮಧೂರು ದೇವಸ್ಥಾನದ ಆವರಣ ದೊಳಗೆ ನುಗ್ಗಿದ ನೀರು Read More »

ಸ್ಪೀಕರ್ ಟು ಕನ್ನಡ ಆಪ್ ಹಾಕಿಕೊಡಿ: ಯತ್ನಾಳ್ನನ್ನ ಕನ್ನಡ ಹೆಚ್ಚು ಕಡಿಮೆ ಇರ್ಬೋದು, ಆದ್ರೆ ಪ್ರೀತಿಯ ಭಾಷೆ: ಖಾದರ್

ಸಮಗ್ರ ನ್ಯೂಸ್: ನನ್ನ ಕನ್ನಡ ಹೆಚ್ಚು ಕಡಿಮೆ ಇರಬಹುದು, ಆದರೆ ಅದು ನಮ್ಮ ಪ್ರೀತಿಯ ಭಾಷೆ. ಪ್ರೀತಿ, ಸೋದರತೆ ಸಾಮರಸ್ಯದ ಭಾಷೆ. ಅದಕ್ಕೆ ನಾನು ಯತ್ನಾಳ್‌ ಅವರಿಗೆ ಕೃತಜ್ಞತೆ ಹೇಳುತ್ತಿದ್ದೇನೆ ಎಂದು ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ. ಸ್ಪೀಕರ್ ಟು ಕನ್ನಡ ಆಪ್ ಹಾಕಿಕೊಡಿ ಎಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯಿಂದ ವಿಧಾನಸಭೆಯಲ್ಲಿ ಖಾದರ್ ಅವರ ಕನ್ನಡದ ಬಗ್ಗೆ ಸ್ವಾರಸ್ಯಕರ ಮಾತು ನಡೆಯಿತು. ಸ್ಪೀಕರ್ ಕನ್ನಡದ ಬಗ್ಗೆ ಚರ್ಚೆಯ ಹಿನ್ನೆಲೆಯಲ್ಲಿ ವಿಷಯ ಪ್ರಸ್ತಾಪ ಮಾಡಿದ ಖಾದರ್,

ಸ್ಪೀಕರ್ ಟು ಕನ್ನಡ ಆಪ್ ಹಾಕಿಕೊಡಿ: ಯತ್ನಾಳ್ನನ್ನ ಕನ್ನಡ ಹೆಚ್ಚು ಕಡಿಮೆ ಇರ್ಬೋದು, ಆದ್ರೆ ಪ್ರೀತಿಯ ಭಾಷೆ: ಖಾದರ್ Read More »

ವಿಧಾನಸಭೆಯಲ್ಲಿ ಪ್ರತಿಧ್ನಿಸಿದ ಮಡಿಕೇರಿಯ ತಡೆಗೋಡೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಜಿಲ್ಲಾಡಳಿತ ಭವನದ ತಡೆಗೋಡೆಯ ಕಾಮಗಾರಿಯ ಬಗ್ಗೆ ವಿಧಾನಸಭೆಯಲ್ಲೂ ಪ್ರಸ್ತಾಪವಾಗಿದೆ. ಸದನದಲ್ಲಿ ತಡೆಗೋಡೆ ವಿಚಾರ ಪ್ರಸ್ತಾಪಿಸಿ ಮಾತನಾಡಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾಕ್ಟರ್ ಮಂತರ್ ಗೌಡ ಕಾಮಗಾರಿಕ್ಕೆ ತಂತ್ರಜ್ಞಾನ ಸರಿಯಾಗಿ ಬಳಸಿಲ್ಲ ಅಪಾಯಕಾರಿ ಸ್ಥಿತಿಯಲ್ಲಿದ ತಡೆಗೋಡೆಯನ್ನು ತೆರೆವು ಮಾಡಿ ಮತ್ತೆ ಜೋಡಣೆ ಮಾಡಲಾಗುತ್ತಿದೆ ಗುಡ್ಡ ಕುಸಿಯುವ ಜೊತೆಗೆ ಜಿಲ್ಲಾಡಳಿತ ಕಟ್ಟಡವು ಕೂಡ ಕುಸಿವ ಆತಂಕವಿದೆ ಎಂದು ಗಮನ ಸೆಳೆದರು ಹಾಗೂ ಈ ಕಾಮಗಾರಿ ಬಗ್ಗೆ ತನಿಖೆಯಾಗಬೇಕೆಂದು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಸಿದ ಲೋಕೋಪಯೋಗಿ

ವಿಧಾನಸಭೆಯಲ್ಲಿ ಪ್ರತಿಧ್ನಿಸಿದ ಮಡಿಕೇರಿಯ ತಡೆಗೋಡೆ Read More »

ಕರಾವಳಿಯಲ್ಲಿ ಮಳೆ ಹಾನಿ ಪರಿಶೀಲಿಸಿ ಕೂಡಲೇ ಪರಿಹಾರ ಕ್ರಮ ಕೈಗೊಳ್ಳಿ|ಸಚಿವರಿಗೆ ಸಿಎಂ ಸೂಚನೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಮಾಂಕಾಳ ವೈದ್ಯ ಅವರಿಗೆ ಸಿಎಂ ಸೂಚನೆ ನೀಡಿದ್ದಾರೆ. ಮಳೆ ಹಾನಿ ಕುರಿತು ಮುಖ್ಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಪರಿಹಾರ ಕಾಮಗಾರಿಗಳಿಗೆ ಅಧಿಕಾರಿಗಳನ್ನು ತುರ್ತಾಗಿ ಸಜ್ಜುಗೊಳಿಸುವಂತೆ ಆದೇಶಿಸಿದರು.

ಕರಾವಳಿಯಲ್ಲಿ ಮಳೆ ಹಾನಿ ಪರಿಶೀಲಿಸಿ ಕೂಡಲೇ ಪರಿಹಾರ ಕ್ರಮ ಕೈಗೊಳ್ಳಿ|ಸಚಿವರಿಗೆ ಸಿಎಂ ಸೂಚನೆ Read More »

ಕೊಡಗು: ಧಾರಾಕಾರ ಸುರಿಯುತ್ತಿರುವ ಮಳೆ| ನಾಳೆ ಶಾಲೆ -ಕಾಲೇಜ್ ಗಳಿಗೆ ರಜೆ

ಸಮಗ್ರ ನ್ಯೂಸ್: ಧಾರಾಕಾರ ಮಳೆ ಸುರಿಯುತ್ತಿರುವ ಕೊಡಗು ಜಿಲ್ಲೆಯಲ್ಲಿ ಜು.7 ರಂದು ಶಾಲೆ ಕಾಲೇಜ್ ಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಅಂಗನವಾಡಿ, ಎಲ್ಲಾ ಶಾಲೆ- ಕಾಲೇಜ್ ಗಳಿಗೆ ಒಂದು ದಿನದ ಮಳೆ ರಜೆಯನ್ನು ಕೊಡಗು ಜಿಲ್ಲಾ ಜಿಲ್ಲಾಧಿಕಾರಿಗಳಾದ ವೆಂಕಟ ರಾಜನ್ ರವರು ಆದೇಶ ಹೊರಡಿಸಿದ್ದಾರೆ.

ಕೊಡಗು: ಧಾರಾಕಾರ ಸುರಿಯುತ್ತಿರುವ ಮಳೆ| ನಾಳೆ ಶಾಲೆ -ಕಾಲೇಜ್ ಗಳಿಗೆ ರಜೆ Read More »

ಭಾರೀ ಗಾಳಿ, ಮಳೆ| ಕರಾವಳಿ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಜುಲೈ 10 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಭಾಗದಲ್ಲಿ ತೀವ್ರತೆಯ ಮಳೆಯಾಗುವ ಸಾಧ್ಯತೆಯಿರುವುದರಿಂದ ಜು.6ರ ಇಂದು ಮಧ್ಯಾಹ್ನದಿಂದ ಜು.7 ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಜಿಲ್ಲೆಯಲ್ಲಿ ಭಾರೀ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇದ್ದು ಒಳನಾಡಿನ ಜಿಲ್ಲೆಗಳಲ್ಲೂ ಮುಂದಿನ ಎರಡು ದಿನ

ಭಾರೀ ಗಾಳಿ, ಮಳೆ| ಕರಾವಳಿ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಣೆ Read More »

ಸುಳ್ಯ -ಪಾಣತ್ತೂರು ಅಂತಾರಾಜ್ಯ ರಸ್ತೆಯಲ್ಲಿ ಮಣ್ಣು ಕುಸಿತ

ಸಮಗ್ರ ನ್ಯೂಸ್: ಕಳೆದ ಮೂರು ದಿನಗಳಿಂದ‌ ಎಡೆ ಬಿಡದೆ ಸುರಿಯುತ್ತಿರುವ ಮಳೆಯ ಪರಿಣಾಮ ಸುಳ್ಯ -ಪಾಣತ್ತೂರು ಅಂತಾರಾಜ್ಯ ರಸ್ತೆಯಲ್ಲಿ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ವಾಹನ ಸಂಚಾರಕ್ಕೆ ತಡೆ ಉಂಟಾದ ಘಟನೆ ಸಂಭವಿಸಿದೆ. ಗಡಿ ಪ್ರದೇಶ ಕೇರಳದ ಭಾಗ ಕಲ್ಲಪಳ್ಳಿಯಲ್ಲಿ ಜೂ.6ರಂದು ಬೆಳಿಗ್ಗೆ ಮಣ್ಣು ಕುಸಿತ ಉಂಟಾಗಿದ್ದು, ಇದರಿಂದ ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು. ಬಳಿಕ ಸ್ಥಳೀಯರು ಸೇರಿ ಮಣ್ಣು ತೆರವು ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಡಲಾಗಿದೆ.

ಸುಳ್ಯ -ಪಾಣತ್ತೂರು ಅಂತಾರಾಜ್ಯ ರಸ್ತೆಯಲ್ಲಿ ಮಣ್ಣು ಕುಸಿತ Read More »

ಉಡುಪಿ : ದೇವಸ್ಥಾನದ ಪೂಜೆಗೆ ಹೊರಟ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು..!

ಸಮಗ್ರ ನ್ಯೂಸ್: ಕುಂದಾಪುರದಲ್ಲಿರುವ ಕಮಲಶಿಲೆ ದೇವಸ್ಥಾನಕ್ಕೆ ಪೂಜೆಗೆಂದು ಹೊರಟ ವ್ಯಕ್ತಿಯೋರ್ವರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಜು.5ರಂದು ನಡೆದಿದೆ. ಶೇಷಾದ್ರಿ ಐತಾಳ್ ಮೃತ ವ್ಯಕ್ತಿ, ಇವರು ಕಮಲ ಶಿಲೆ ದೇವಳಕ್ಕೆ ಪೂಜೆಗೆಂದು ಆಗಮಿಸಿದ್ದು ಈ ವೇಳೆ ಕಮಲಶಿಲೆ ದೇವಾಲಯದ ಪಕ್ಕದಲ್ಲಿ ಹರಿಯುವ ಕುಬ್ಜಾ ನದಿಗೆ ಇಳಿದ ಸಂದರ್ಭ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ. ನದಿಗೆ ಬಿದ್ದ ಜಾಗದ ಸುಮಾರು ನೂರು ಮೀಟರ್ ದೂರಲ್ಲಿ ಶವ ಪತ್ತೆಯಾಗಿದ್ದು, ಮುಳುಗು ತಜ್ಞ ಮಂಜುನಾಥ್ ನಾಯಕ್ ತಂಡದಿಂದ ಶವ ಪತ್ತೆ ಕಾರ್ಯ

ಉಡುಪಿ : ದೇವಸ್ಥಾನದ ಪೂಜೆಗೆ ಹೊರಟ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು..! Read More »

ಉಳ್ಳಾಲ: ಭಾರೀ ಗಾಳಿ- ಮಳೆಗೆ ಉರುಳಿ ಬಿದ್ದ ಮೇಲ್ಛಾವಣಿ ಶೀಟ್ | ರಜೆ ಕಾರಣ ತಪ್ಪಿ ಅನಾಹುತ

ಸಮಗ್ರ ನ್ಯೂಸ್ : ಭಾರೀ ಗಾಳಿ ಮಳೆಗೆ ತಲಪಾಡಿಯಲ್ಲಿರುವ ಶಾರದಾ ವಿದ್ಯಾಲಯ ಕಟ್ಟಡದ ಮೇಲೆ ಅಳವಡಿಸಿದ್ದ ಶೀಟ್‌ ಚಾವಣಿ ಕೆಳಗೆ ಬಿದ್ದ ಘಟನೆ ನಡೆದಿದೆ. ದೇವಿನಗರದ ಶಾರದಾ ವಿದ್ಯಾಲಯದ ಕ್ಯಾಂಪಸ್‌ನಲ್ಲಿರುವ ಆರು ಮಹಡಿಯ ಶಾಲಾ ಕಟ್ಟಡದ ಮೇಲೆ ಇತ್ತೀಚೆಗೆ ಇದನ್ನು ಅಳವಡಿಸಲಾಗಿತ್ತು. ಸತತ ಗಾಳಿ ಮಳೆ ಕಾರಣದಿಂದಾಗಿ ಜು.6ರ ಬೆಳಿಗ್ಗೆ 9 ಗಂಟೆ ಸಂದರ್ಭ ಶೀಟ್ ಕೆಳಗೆ ಬಿದ್ದಿದೆ. ಮೇಲ್ಚಾವಣೆಗೆ ಹಾಕಲಾಗಿದ್ದ ರಾಡ್ ಗಳೂ ಕೂಡ ಕೆಳಗೆ ಬಿದ್ದಿದ್ದು, ಇದರಿಂದಾಗಿ ಹಲವು ವಾಹನಗಳು ಜಖಂಗೊಂಡಿವೆ. ಭಾರಿ ಮಳೆ

ಉಳ್ಳಾಲ: ಭಾರೀ ಗಾಳಿ- ಮಳೆಗೆ ಉರುಳಿ ಬಿದ್ದ ಮೇಲ್ಛಾವಣಿ ಶೀಟ್ | ರಜೆ ಕಾರಣ ತಪ್ಪಿ ಅನಾಹುತ Read More »