ಮುಂಗಾರು ಅಬ್ಬರಕ್ಕೆ ರಾಜ್ಯದಲ್ಲಿ ನಾಲ್ಕು ಬಲಿ| ಇಂದೂ ಸುರಿಯಲಿದೆ ಭಾರೀ ಮಳೆ| ಕರಾವಳಿ ಜಿಲ್ಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ
ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಕರಾವಳಿ ಭಾಗದಲ್ಲಿ ಮಳೆ ಸಂಬಂಧಿ ಅವಘಡಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಮಳೆಯ ಅಬ್ಬರದಿಂದಾಗಿ ಮಂಗಳೂರು, ಉಡುಪಿ, ಕುಂದಾಪುರ, ಕಾರವಾರ ತಾಲೂಕಿನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಮಳೆಯಿಂದಾಗಿ ಕರಾವಳಿ, ಮಲೆನಾಡು ಭಾಗದ ನದಿಗಳಲ್ಲಿ ನೀರಿನ ಹರಿವು ಹೆಚ್ಚಿದ್ದು, ಉಡುಪಿ ಸಮೀಪದ ಬಜೆ ಹಾಗೂ ಶಿವಮೊಗ್ಗದ ಗಾಜನೂರು ಜಲಾಶಯಗಳು ಭರ್ತಿಯಾಗಿವೆ. ರಾಜ್ಯಾದ್ಯಂತ 2 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್









