ರಾಜ್ಯ

ಪುತ್ತೂರು: ಸಹಪಾಠಿಗೆ ಗರ್ಭದಾನ ಮಾಡಿದ ಕೃಷ್ಣ ಜೆ ರಾವ್ ಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ನಿರಾಕರಿಸಿದ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ. ರಾವ್ ಗೆ ಇದೀಗ ಹೈಕೋರ್ಟ್ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ತನ್ನ ಸಹಪಾಠಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಲೈಂಗಿಕವಾಗಿ ಬಳಸಿಕೊಂಡು , ಆಕೆ ಗರ್ಭವತಿಯಾದ ಬಳಿಕ ಮದುವೆಯಾಗಲು ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣ ಜೆ ರಾವ್ ವಿರುದ್ದ ದ.ಕ. ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿತ್ತು. […]

ಪುತ್ತೂರು: ಸಹಪಾಠಿಗೆ ಗರ್ಭದಾನ ಮಾಡಿದ ಕೃಷ್ಣ ಜೆ ರಾವ್ ಗೆ ಜಾಮೀನು ಮಂಜೂರು Read More »

ಮಂಗಳೂರು: ಅತ್ಯಾಚಾರ ಸಂತ್ರಸ್ತೆಯ ಮಗು ಮಾರಾಟ| ಮೂವರು ಆರೋಪಗಳ ಬಂಧನ

ಸಮಗ್ರ ನ್ಯೂಸ್: ಅತ್ಯಾಚಾರ ಸಂತ್ರಸ್ಥೆಯ ಮಗು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾಕ್ಟರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಬಿಸಿ ರೋಡ್‌ನ‌ ವೈದ್ಯ ಡಾ| ಸೋಮೇಶ್‌ ಸೊಲೊಮನ್‌, ಮಂಗಳೂರಿನ ಪಿಜಿ ಮಾಲಕಿ ವಿಜಯಲಕ್ಷ್ಮಿ ಆಲಿಯಾಸ್‌ ವಿಜಯ ಮತ್ತು ಅತ್ಯಾಚಾರ ಆರೋಪಿ ನವನೀತ್‌ ನಾರಾಯಣ ಬಂಧಿತರು. ಕಾಪು ತಾಲ್ಲೂಕು ಕಲ್ಲುಗುಡ್ಡೆಯ ನಿವಾಸಿ ಪ್ರಭಾವತಿ- ರಮೇಶ್ ಮೂಲ್ಯ ದಂಪತಿ ಅಂಗನವಾಡಿಗೆ ಶಿಶುವನ್ನು ಕರೆದುಕೊಂಡು ಬಂದಿದ್ದರು. ಈ ವೇಳೆ ಅಂಗನವಾಡಿ ಕಾರ್ಯಕರ್ತೆಗೆ ಇದು ಇವರ ಮಗುವಲ್ಲ ಎಂದು ತಿಳಿದು ಬಂದಿದೆ. ಅವರದಲ್ಲದ ಮಗುವಿನ

ಮಂಗಳೂರು: ಅತ್ಯಾಚಾರ ಸಂತ್ರಸ್ತೆಯ ಮಗು ಮಾರಾಟ| ಮೂವರು ಆರೋಪಗಳ ಬಂಧನ Read More »

GST ಕಡಿತದ ಬೆನ್ನಲ್ಲೇ ಷೇರುಪೇಟೆ ಚುರುಕು| ಸೆನ್ಸೆಕ್ಸ್ 900 ಅಂಕಗಳ ಏರಿಕೆ

ಸಮಗ್ರ ನ್ಯೂಸ್: ಜಿಎಸ್ಟಿ ರಿಲೀಫ್ ಬೆನ್ನಲ್ಲೇ ಷೇರುಪೇಟೆ ಪುಟಿದೆದ್ದಿದ್ದು. ದಿನದ ಆರಂಭದಲ್ಲೇ ಸೆನ್ಸೆಕ್ಸ್ 900 ಅಂಕ ಏರಿಕೆಯಾಗಿದೆ. ಆರಂಭಿಕ ವಹಿವಾಟಿನಲ್ಲಿ 30 ಷೇರುಗಳ ಬಿಎಸ್‌ಇ ಸೆನ್ಸೆಕ್ಸ್ 888.96 ಪಾಯಿಂಟ್ಗಳ ಏರಿಕೆಯಾಗಿ 81,456.67 ಕ್ಕೆ ತಲುಪಿದೆ. 50 ಷೇರುಗಳ ಎನ್‌ಎಸ್‌ಇ ನಿಫ್ಟಿ 265.7 ಪಾಯಿಂಟ್ಗಳ ಏರಿಕೆಯಾಗಿ 24,980.75 ಕ್ಕೆ ತಲುಪಿದೆ. ಬುಧವಾರ ಸಂಜೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2017 ರಲ್ಲಿ ಪ್ರಾರಂಭಿಸಲಾದ ಜಿಎಸ್ಟಿ ವ್ಯವಸ್ಥೆಯ ಸಂಪೂರ್ಣ ಪರಿಷ್ಕರಣೆಯನ್ನು ಘೋಷಿಸಿದರು, ಇದು ಗೃಹೋಪಯೋಗಿ ವಸ್ತುಗಳು, ಔಷಧಿಗಳು,

GST ಕಡಿತದ ಬೆನ್ನಲ್ಲೇ ಷೇರುಪೇಟೆ ಚುರುಕು| ಸೆನ್ಸೆಕ್ಸ್ 900 ಅಂಕಗಳ ಏರಿಕೆ Read More »

ಧರ್ಮಕ್ಷೇತ್ರಗಳ ವಿರುದ್ಧ ಅಫ್ರಚಾರ ತಡೆಗೆ ಹೊಸ ಕಾನೂನು| ಸ್ವಾಮೀಜಿಗಳ ನಿಯೋಗಕ್ಕೆ ಅಮಿತ್ ಷಾ ಭರವಸೆ

ಸಮಗ್ರ ನ್ಯೂಸ್: ದೇಶದಾದ್ಯಂತ ಭಾರೀ ಸದ್ದು ಮಾಡಿರುವ ಧರ್ಮಸ್ಥಳ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ ಐಎ) ಗೆ ವಹಿಸಬೇಕೆಂದು ಒತ್ತಾಯಿಸಿ, ಕರ್ನಾಟಕದ ಸನಾತನ ಸಂತರ ನಿಯೋಗವು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದೆ. ಪಂಚಮಸಾಲಿ ಲಿಂಗಾಯತ ಮಠದ ವಚನಾನಂದ ಸ್ವಾಮೀಜಿ ನೇತೃತ್ವದ ಈ ನಿಯೋಗದಲ್ಲಿ, ಮಂಗಳೂರಿನ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಸೇರಿದಂತೆ ವಿವಿಧ ಪೀಠಗಳ ಒಟ್ಟು ಎಂಟು ಸ್ವಾಮೀಜಿಗಳು ಭಾಗವಹಿಸಿದ್ದರು. ಈ ಭೇಟಿಯ

ಧರ್ಮಕ್ಷೇತ್ರಗಳ ವಿರುದ್ಧ ಅಫ್ರಚಾರ ತಡೆಗೆ ಹೊಸ ಕಾನೂನು| ಸ್ವಾಮೀಜಿಗಳ ನಿಯೋಗಕ್ಕೆ ಅಮಿತ್ ಷಾ ಭರವಸೆ Read More »

ಬಿಸ್ಲೆ ಘಾಟ್ ರಸ್ತೆ‌ ಸಂಚಾರಕ್ಕೆ ಮುಕ್ತ

ಸಮಗ್ರ ನ್ಯೂಸ್: ಭಾರೀ ಮಳೆಯಿಂದ ಕುಕ್ಕೆ ಸುಬ್ರಹ್ಮಣ್ಯ- ಬಿಸಿಲೆ ಘಾಟಿ ರಸ್ತೆಯ ಒಂದು ಬದಿಯ ಮಣ್ಣು ಕುಸಿದು ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಯಾದ ಘಟನೆ ಬುಧವಾರ ಸಂಭವಿಸಿದೆ. ಬಿಸಿಲೆ ಘಾಟಿ ರಸ್ತೆಯ ಗಡಿ ದೇವಸ್ಥಾನದಿಂದ 1 ಕಿ.ಮೀ. ದೂರದಲ್ಲಿ ರಸ್ತೆಗೆ ಮಣ್ಣು ಕುಸಿತಗೊಂಡಿದ್ದು, ಘಟನೆಯ ಕುರಿತು ಮಾಹಿತಿ ತಿಳಿಯುತ್ತಲೇ ಸಂಬಂಧಪಟ್ಟವರು ಭೇಟಿ ಇತ್ತು ರಸ್ತೆಗೆ ಕುಸಿದು ಬಿದ್ದ ಮಣ್ಣಿನ ತೆರವು ಮಾಡುವ ಕಾರ್ಯಾಚರಣೆ ನಡೆಸಿದರು. ಬಳಿಕ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಯಿತು.

ಬಿಸ್ಲೆ ಘಾಟ್ ರಸ್ತೆ‌ ಸಂಚಾರಕ್ಕೆ ಮುಕ್ತ Read More »

ಧರ್ಮಸ್ಥಳ ಬುರುಡೆ ಪ್ರಕರಣ| ಚಿನ್ನಯ್ಯನನ್ನು ಮತ್ತೆ ಎಸ್ಐಟಿ ಕಸ್ಟಡಿಗೆ ಒಪ್ಪಿಸಿದ ಬೆಳ್ತಂಗಡಿ ಕೋರ್ಟ್

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಬಂಧಿತನಾಗಿರುವ ಬುರುಡೆ ಚಿನ್ನಯ್ಯನನ್ನ ಮತ್ತೆ 4 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶಿಸಿದೆ. ಸೆ. 6ರಂದು ಚಿನ್ನಯ್ಯನನ್ನ ಕೋರ್ಟ್‌ಗೆ ಹಾಜರುಪಡಿಸುವಂತೆ ಬೆಳ್ತಂಗಡಿ ನ್ಯಾಯಾಲಯ ಆದೇಶಿಸಿದೆ. 12 ದಿನಗಳ ಎಸ್‌ಐಟಿ ಕಸ್ಟಡಿ ಇಂದು ಅಂತ್ಯಗೊಂಡಿದ್ದ ಹಿನ್ನೆಲೆ ಚಿನ್ನಯ್ಯನನ್ನ ಬೆಳ್ತಂಗಡಿ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಬೆಳ್ತಂಗಡಿ ತಾಲೂಕು ನ್ಯಾಯಾಲಯದ ಹೆಚ್ಚುವರಿ ವ್ಯಾವಹಾರಿಕ ಮತ್ತು ಪ್ರಥಮ ದರ್ಜೆ ನ್ಯಾಯಾಧೀಶರಾದ ವಿಜಯಾನಂದ ಟಿ. ಅವರ ಎದುರು ಹಾಜರುಪಡಿಸಲಾಗಿತ್ತು. ತನಿಖಾಧಿಕಾರಿ ಎಸ್ಪಿ

ಧರ್ಮಸ್ಥಳ ಬುರುಡೆ ಪ್ರಕರಣ| ಚಿನ್ನಯ್ಯನನ್ನು ಮತ್ತೆ ಎಸ್ಐಟಿ ಕಸ್ಟಡಿಗೆ ಒಪ್ಪಿಸಿದ ಬೆಳ್ತಂಗಡಿ ಕೋರ್ಟ್ Read More »

ಧರ್ಮಸ್ಥಳ ಪ್ರಕರಣದಲ್ಲಿ ವಿದೇಶದಿಂದ ಫಂಡಿಂಗ್!? ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಎಂಟ್ರಿ ಸಾಧ್ಯತೆ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ನಡೆಯುತ್ತಿರುವಾಗಲೇ ಇದೀಗ ಕೇಂದ್ರ ತನಿಖಾ ಸಂಸ್ಥೆ ಇಡಿ ಎಂಟ್ರಿ ಕೊಟ್ಟಿದೆ. ಧರ್ಮಸ್ಥಳದ ವಿರುದ್ದ ನಡೆದ ಷಡ್ಯಂತ್ರದ ಕುರಿತಂತೆ ವಿದೇಶಿ ದೇಣಿಗೆಯ ಬಗ್ಗೆ ಇಡಿ ತನಿಖೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಧರ್ಮಸ್ಥಳ ಪ್ರಕರಣದ ತನಿಖೆ ನಡೆಯುತ್ತಿರುವ ನಡುವೆ ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ( Enforcement Directorate (ED) ತನಿಖೆಗೆ ಎಂಟ್ರಿಯಾಗಿದೆ. ವಿದೇಶಿ NGO ಗಳಿಂದ ಹಣ ಫಂಡಿಂಗ್ ಆಗಿದೆಯಾ ಎಂಬ

ಧರ್ಮಸ್ಥಳ ಪ್ರಕರಣದಲ್ಲಿ ವಿದೇಶದಿಂದ ಫಂಡಿಂಗ್!? ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಎಂಟ್ರಿ ಸಾಧ್ಯತೆ Read More »

ಧರ್ಮಸ್ಥಳ ಪ್ರಕರಣ| ಎಸ್ಐಟಿ ಕಚೇರಿಗೆ ಹಾಜರಾದ ಉದಯ ಜೈನ್

ಸಮಗ್ರ ನ್ಯೂಸ್: ಧರ್ಮಸ್ಥಳ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಕಾ ತಂಡದ (ಎಸ್‌ಐಟಿ) ಬೆಳ್ತಂಗಡಿ ಕಚೇರಿಗೆ ಧರ್ಮಸ್ಥಳದ ಉದಯ್ ಜೈನ್ ಬುಧವಾರ ಹಾಜರಾದರು. ಸುದ್ದಿಗಾರರ ಜೊತೆ ಮಾತನಾಡಿದ ಉದಯ್ ಜೈನ್, ‘ಬುಧವಾರ 11 ಗಂಟೆಗೆ ಕಚೇರಿಗೆ ಹಾಜರಾಗುವಂತೆ ಎಸ್ಐಟಿ ಅಧಿಕಾರಿಯೊಬ್ಬರು ನಿನ್ನೆ ದೂರವಾಣಿ ಕರೆ ಮಾಡಿ ತಿಳಿಸಿದ್ದರು. ಹಾಗಾಗಿ ಇಲ್ಲಿಗೆ ಬಂದಿದ್ದೇನೆ’ ಎಂದು ಹೇಳಿದರು. ಸೌಜನ್ಯ ಕೊಲೆ ಪ್ರಕರಣದ ಎಫ್‌ಐಆರ್ ನಲ್ಲಿ ನಮ್ಮ ಹೆಸರು ಇರಲಿಲ್ಲ. ಆದರೂ ನಮ್ಮನ್ನು ಆರೋಪಿಗಳನ್ನಾಗಿಸುವ ಷಡ್ಯಂತ್ರ ನಡೆದಿತ್ತು. ಸಿಬಿಐ ಮತ್ತು

ಧರ್ಮಸ್ಥಳ ಪ್ರಕರಣ| ಎಸ್ಐಟಿ ಕಚೇರಿಗೆ ಹಾಜರಾದ ಉದಯ ಜೈನ್ Read More »

ರಾಜ್ಯಾದ್ಯಂತ ಸೆ.8ರವರೆಗೂ ಮಳೆ ಮುಂದುವರಿಕೆ

ಸಮಗ್ರ ನ್ಯೂಸ್: ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆ, ಗುಡುಗು ಮತ್ತು ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಕರಾವಳಿ, ಮಲೆನಾಡು ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ವಾರದವರೆಗೆ ಮಳೆ ಮುಂದುವರೆಯಲಿದೆ. ಇಂದು(ಸೆ.3) ಕರ್ನಾಟಕದಾದ್ಯಂತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ಮಂಗಳೂರು, ಉಡುಪಿ ಮತ್ತು ಕಾರವಾರ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಗುಡುಗು ಸಹಿತ ಭಾರೀ ಮಳೆ ಮತ್ತು ಗಾಳಿ ಬೀಸುವ

ರಾಜ್ಯಾದ್ಯಂತ ಸೆ.8ರವರೆಗೂ ಮಳೆ ಮುಂದುವರಿಕೆ Read More »

ಬಿಸ್ಲೆ ಘಾಟ್ ನಲ್ಲಿ ಗುಡ್ಡ ಕುಸಿತ| ರಸ್ತೆ ಸಂಚಾರ ಬಂದ್

ಸಮಗ್ರ ನ್ಯೂಸ್: ಭಾರೀ ಮಳೆ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ಬಿಸ್ಲೆ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತ ಉಂಟಾಗಿದ್ದು ರಸ್ತೆ ಸಂಚಾರ ಬಂದ್ ಆಗಿದೆ. ಬಿಸಿಲೆ‌ ಘಾಟ್ ರಸ್ತೆಯ ಗಡಿ ಚಾಮುಂಡೇಶ್ವರಿ ಗುಡಿಯ ಸಮೀಪದಲ್ಲಿ ರಸ್ತೆಗೆ ಗುಡ್ಡ ಕುಸಿದಿದ್ದು ವಾಹನ ಸಂಚಾರ ಬಂದ್ ಆಗಿದೆ. ಇದರಿಂದಾಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಬಿಸ್ಲೆ ಘಾಟ್ ನಲ್ಲಿ ಗುಡ್ಡ ಕುಸಿತ| ರಸ್ತೆ ಸಂಚಾರ ಬಂದ್ Read More »