ರಾಜ್ಯ

ಕರಾವಳಿಗೆ ಭಾರೀ ಮಳೆ ಮುನ್ಸೂಚನೆ| ಉಳಿದೆಡೆ ಹೇಗಿರಲಿದೆ ವರ್ಷಧಾರೆ?

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಜುಲೈ 3ರಂದು ಉತ್ತರ ಕನ್ನಡ,ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಟ್‌’, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗೆ ‘ಯೆಲ್ಲೊ ಅಲರ್ಟ್‌’, ಜುಲೈ 4ರಂದು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಟ್‌’, ಬೆಳಗಾವಿ, ಧಾರವಾಡ, ಹಾವೇರಿ, ತುಮಕೂರು, ಮೈಸೂರು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ನೀಡಲಾಗಿದೆ.

ಕರಾವಳಿಗೆ ಭಾರೀ ಮಳೆ ಮುನ್ಸೂಚನೆ| ಉಳಿದೆಡೆ ಹೇಗಿರಲಿದೆ ವರ್ಷಧಾರೆ? Read More »

ಸುಳ್ಯ: ಶರಣಾಗದ ಪ್ರವೀಣ್ ಹತ್ಯೆ‌ ಆರೋಪಿಗಳು| ಆಸ್ತಿ ಮುಟ್ಟುಗೋಲಿಗೆ ಮುಂದಾದ ಎನ್ಐಎ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಶರಣಾಗುವಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ನೀಡಿರುವ ಅವಧಿ ಮುಕ್ತಾಯಗೊಂಡಿದೆ. ಆರೋಪಿಗಳು ನ್ಯಾಯಾಲಯಕ್ಕೆ ಶರಣಾಗದೇ ಇರುವ ಕಾರಣಕ್ಕೆ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದಕ್ಕೆ ಎನ್‌ಐಎ ಮುಂದಾಗಿದೆ ಎಂದು ತಿಳಿದು ಬಂದಿದೆ. ಕಳೆದ ಕೆಲವು ದಿನಗಳ ಹಿಂದೆ ನೀಡಲಾದ ಆಸ್ತಿ ಮುಟ್ಟುಗೋಲು ಎಚ್ಚರಿಕೆಗೂ ಆರೋಪಿಗಳು ಮನ್ನಣೆ ನೀಡಿಲ್ಲ. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು

ಸುಳ್ಯ: ಶರಣಾಗದ ಪ್ರವೀಣ್ ಹತ್ಯೆ‌ ಆರೋಪಿಗಳು| ಆಸ್ತಿ ಮುಟ್ಟುಗೋಲಿಗೆ ಮುಂದಾದ ಎನ್ಐಎ Read More »

ಸಂಪಾಜೆ: ಮತ್ತೆ ಹೆದ್ದಾರಿ ಕುಸಿಯುವ ಭೀತಿ ಹಿನ್ನೆಲೆ ರಸ್ತೆ ಬಂದ್| ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಿದ ಸ್ಥಳೀಯಾಡಳಿತ

ಸಮಗ್ರ ನ್ಯೂಸ್: ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಅರಣ್ಯ ಇಲಾಖಾ ಕಛೇರಿಯ ಬಳಿ ಮತ್ತೆ ಹೆದ್ದಾರಿ ಕುಸಿಯುವ ಭೀತಿ ಎದುರಾಗಿದ್ದು, ಬ್ಯಾರಿಕೇಡ್ ಅಳವಡಿಸಿ ಮತ್ತೆ ರಸ್ತೆ ಬಂದ್ ಮಾಡಲಾಗಿದ್ದು, ಮುಖ್ಯ ರಸ್ತೆಯ ಬದಿಯಲ್ಲಿ ಕಳೆದ ಬಾರಿ ನಿರ್ಮಾಣ ಮಾಡಿದ್ದ ತಾತ್ಕಾಲಿಕ ರಸ್ತೆ ಮೂಲಕ ವಾಹನ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಕಳೆದ ವರ್ಷದ ಮಳೆಗಾಲದಲ್ಲಿ ಈ ಪ್ರದೇಶದಲ್ಲಿ ಹೆದ್ದಾರಿಯಲ್ಲಿ ಬಿರುಕು ಕಾಣಿಸಿಕೊಂಡ ಕಾರಣ ಬ್ಯಾರಿಕೇಡ್ ಅಳವಡಿಸಿ, ರಸ್ತೆ ಬಂದ್ ಮಾಡಿ, ಮುಖ್ಯ ರಸ್ತೆಯ ಬದಿಯಲ್ಲಿ ಜೆಸಿಬಿ ಮೂಲಕ ತಾತ್ಕಾಲಿಕ

ಸಂಪಾಜೆ: ಮತ್ತೆ ಹೆದ್ದಾರಿ ಕುಸಿಯುವ ಭೀತಿ ಹಿನ್ನೆಲೆ ರಸ್ತೆ ಬಂದ್| ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಿದ ಸ್ಥಳೀಯಾಡಳಿತ Read More »

ಸೋಮವಾರಪೇಟೆ: ಭೀಕರ ರಸ್ತೆ ಅಪಘಾತ ಹಿರಿಕರ ದಂಪತಿ ದಾರುಣ ಸಾವು

ಸಮಗ್ರ ನ್ಯೂಸ್: ಕಾರು ಮತ್ತು ಕೆ.ಎಸ್.ರ್ .ಟಿ.ಸಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸೋಮವಾರಪೇಟೆ ಬಳಿಯ ಹಿರಿಕರ ಗ್ರಾಮದ ದಂಪತಿಗಳು ಸಾವನ್ನಪ್ಪಿರುವ ಘಟನೆ ಬಿಳಿಕೆರೆ ಬಳಿಯ ರಂಗನಕೊಪ್ಪಲು ಹೆದ್ದಾರಿಯಲ್ಲಿ ನಡೆದಿದೆ. ನಿವೃತ್ತ ಪ್ರಾಂಶುಪಾಲರಾದ ಹೆಚ್.ಬಿ.ಬೆಳ್ಳಿಯಪ್ಪ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಅವರ ಪತ್ನಿ ವೀಣಾ ರವರನ್ನು ಆಸ್ಪತ್ರೆಗೆ ಕರೆದೊಯ್ಯುವ ಸಮಯದಲ್ಲಿ ಮಾರ್ಗಮಧ್ಯೆ ಕೊನೆಯುಸಿರು ಏಳದಿದ್ದಾರೆ. ಜುಲೈ 1ರಂದು ಮಧ್ಯಾಹ್ನ ಕಾರಿನಲ್ಲಿ ಬೆಳ್ಳಿಯಪ್ಪ ದಂಪತಿಗಳು ಮೈಸೂರಿಗೆ ತೆರಳುತ್ತಿದ್ದ ಸಮಯದಲ್ಲಿ ದುರ್ಘಟಣೆ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜು-ಗುಜ್ಜಾಗಿದೆ. ಬಿಳಿಕೆರೆ ಪೊಲೀಸ್

ಸೋಮವಾರಪೇಟೆ: ಭೀಕರ ರಸ್ತೆ ಅಪಘಾತ ಹಿರಿಕರ ದಂಪತಿ ದಾರುಣ ಸಾವು Read More »

ಮಡಿಕೇರಿ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ದೇವರಾಜ್ ಅಮಾನತು

ಸಮಗ್ರ ನ್ಯೂಸ್: ಮಡಿಕೇರಿ ಲೋಕೋಪಯೋಗಿ ಉಪವಿಭಾಗದ ಕಿರಿಯ ಇಂಜಿನಿಯರ್ ದೇವರಾಜು ಕೆ.ಎಲ್ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗಿದೆ. ಇವರನ್ನು ಕೂಡಲೇ ಅಮಾನತ್ತುಗೊಳಸಲು ಆದೇಶ ಹೊರಡಿಸುವಂತೆ ಹಾಗೂ ಇವರ ವಿರುದ್ಧ ಶಿಸ್ತುಕ್ರಮ ಹೊರಡಿಸಿವಂತೆ ಆದೇಶ ನೀಡಲಾಗಿದೆ. ದೇವರಾಜು ಕೆ.ಎಲ್. ಕೊಡಗು ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದ ತಡೆಗೋಡೆಯ ಕಳಪೆ ಕಾಮಗಾರಿ ನಿರ್ವಹಣೆ, ಗ್ರೇಟರ್ ರಾಜ ಸೀಟ್ ಯೋಜನೆಯಲ್ಲಿ ನಕಲಿ ಎಂ.ಬಿ. ಪುಸ್ತಕಗಳ ಬಳಕೆ ಹಾಗೂ ಕರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಪಾಲ ಎಸ್.ಸಿ ಕಾಲೋನಿಯಲ್ಲಿ ಎಸ್ಇಪಿ/ಟಿ.ಎಸ್.ಪಿ ಅನುದಾನವನ್ನು ಬೇರೆಡೆ ನಿರ್ವಹಿಸಿರುವುದಲ್ಲದೇ ದುರ್ಬಳಕೆ

ಮಡಿಕೇರಿ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ದೇವರಾಜ್ ಅಮಾನತು Read More »

ಕೊಡಗು: ಗಮನ ಸೆಳೆದ ‘ಅಣಕು ಪ್ರದರ್ಶನ’

ಸಮಗ್ರ ನ್ಯೂಸ್ : ಪ್ರಾಕೃತಿಕ ವಿಕೋಪ ಸಂಭವಿಸಿದಲ್ಲಿ ಹೇಗೆ ರಕ್ಷಣಾ ಕಾರ್ಯ ಕೈಗೊಳ್ಳಬೇಕು ಎಂಬ ಬಗ್ಗೆ ‘ಅಣಕು ಪ್ರದರ್ಶನ’ ಪ್ರಾತ್ಯಕ್ಷಿಕೆಯು ತಾಲ್ಲೂಕಿನ ಹೆಬ್ಬೆಟ್ಟಗೇರಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ನೇತೃತ್ವದಲ್ಲಿ ಶನಿವಾರ ನಡೆಯಿತು. ಜಿಲ್ಲಾಡಳಿತ, ಎನ್‍ಡಿಆರ್‍ಎಫ್, ಪೊಲೀಸ್ ಮತ್ತು ಅಗ್ನಿಶಾಮಕ, ಗೃಹ ರಕ್ಷಕ ದಳ ಹೀಗೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ‘ಅಣಕು ಪ್ರದರ್ಶನ’ ಪ್ರಾತ್ಯಕ್ಷಿಕೆ ನಡೆಯಿತು.ಭೂಕುಸಿತ, ಪ್ರವಾಹ ಮತ್ತಿತರ ವಿಪತ್ತುಗಳು ಸಂಭವಿಸಿದ ಸಂದರ್ಭದಲ್ಲಿ ರಕ್ಷಣಾ ಕಾರ್ಯಗಳನ್ನು ಹೇಗೆ ಕೈಗೊಳ್ಳಬೇಕು ಎಂಬ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

ಕೊಡಗು: ಗಮನ ಸೆಳೆದ ‘ಅಣಕು ಪ್ರದರ್ಶನ’ Read More »

ಸೋಮವಾರಪೇಟೆ: ಭೀಕರ ಅಪಘಾತದಲ್ಲಿ ದಂಪತಿ ದುರ್ಮರಣ

ಸಮಗ್ರ ನ್ಯೂಸ್: ಭೀಕರ ರಸ್ತೆ ಅಪಘಾತದಲ್ಲಿ ಕೊಡಗು ಜಿಲ್ಲೆಯ ಸೋಮವಾರಪೇಟೆ ಬಳಿಯ ಹಿರಿಕರ ಗ್ರಾಮದ ದಂಪತಿ ಸಾವನ್ನಪ್ಪಿರುವ ಘಟನೆ ಬಿಳಿಕೆರೆ ಬಳಿಯ ರಂಗನಕೊಪ್ಪಲು ಹೆದ್ದಾರಿಯಲ್ಲಿ ಶನಿವಾರ ವರದಿಯಾಗಿದೆ. ಕೆಎಸ್ಸಾರ್ಟಿಸಿ ಬಸ್ ಮತ್ತು ಕಾರು ನಡುವೆ ಢಿಕ್ಕಿ ಸಂಭವಿಸಿ ಮೈಸೂರು ಕಡೆಗೆ ಕಾರಿನಲ್ಲಿ ಸಂಚರಿಸುತ್ತಿದ್ದ ನಿವೃತ್ತ ಪ್ರಾಂಶುಪಾಲ ಹಿರಿಕರ ಗ್ರಾಮದ ನಿವಾಸಿ ಹೆಚ್.ಬಿ.ಬೆಳ್ಳಿಯಪ್ಪ (66) ಸ್ಥಳದಲ್ಲೇ ಮೃತಪಟ್ಟರು. ಬೆಳ್ಳಿಯಪ್ಪ ಅವರ ಪತ್ನಿ ವೀಣಾ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಬಿಳಿಕೆರೆ

ಸೋಮವಾರಪೇಟೆ: ಭೀಕರ ಅಪಘಾತದಲ್ಲಿ ದಂಪತಿ ದುರ್ಮರಣ Read More »

ಚಲಿಸುತ್ತಿರುವ ಬಸ್ ನಲ್ಲೇ ಸೆಕ್ಸ್ ನಲ್ಲಿ ತೊಡಗಿದ ಕಂಡಕ್ಟರ್ ಮತ್ತು ಮತ್ತೊಬ್ಬಾಕೆ!! ಹಿಂಬದಿ ಸೀಟ್ ನಲ್ಲಿ ನಡೀತಾ ಇತ್ತು ರಾಸಲೀಲೆ…

ಸಮಗ್ರ ನ್ಯೂಸ್: ಚಲಿಸುತ್ತಿರುವ ಬಸ್ಸಿನಲ್ಲೇ ಕಂಡಕ್ಟರ್ ಯೊಬ್ಬ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ಘಟನೆ ಲಕ್ನೋದಲ್ಲಿ ನಡೆದಿದೆ. ಲಕ್ನೋಗೆ ತೆರಳುತ್ತಿದ್ದ ಹತ್ರಾಸ್ ಡಿಪೋದ ಬಸ್‌ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಂಡಕ್ಟರ್ ಬಸ್‌ ಹಿಂಬದಿ ಸೀಟಿನಲ್ಲಿ ಕುಳಿತಿರುವುದನ್ನು ಪ್ರಯಾಣಿಕರೊಬ್ಬರು ನೋಡಿದ್ದಾರೆ. ಕಂಡಕ್ಟರ್ ವರ್ತನೆ ವಿಚಿತ್ರವಾಗಿ ಕಾಣುತ್ತಿದ್ದರಿಂದ ಪ್ರಯಾಣಿರೊಬ್ಬರು ಮೊಬೈಲ್‌ ನಲ್ಲಿ ಇದನ್ನು ಚಿತ್ರೀಕರಣ ಮಾಡುತ್ತಾ ಹೋಗಿದ್ದಾರೆ. ಹತ್ತಿರ ಹೋಗಿ ನೋಡಿದಾಗ ಕಂಬಳಿಯೊಳಗೆ ಮಹಿಳೆಯೊಬ್ಬರೊಂದಿಗೆ ಕಂಡಕ್ಟರ್ ಲೈಂಗಿಕ ಕ್ರಿಯೆಯನ್ನು ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಪ್ರಯಾಣಿಕ ವಿಡಿಯೋ ಮಾಡುತ್ತಿರುವಾಗಲೇ ಕಂಡಕ್ಟರ್ ಎಚ್ಚೆತ್ತುಕೊಂಡು

ಚಲಿಸುತ್ತಿರುವ ಬಸ್ ನಲ್ಲೇ ಸೆಕ್ಸ್ ನಲ್ಲಿ ತೊಡಗಿದ ಕಂಡಕ್ಟರ್ ಮತ್ತು ಮತ್ತೊಬ್ಬಾಕೆ!! ಹಿಂಬದಿ ಸೀಟ್ ನಲ್ಲಿ ನಡೀತಾ ಇತ್ತು ರಾಸಲೀಲೆ… Read More »

ಕರ್ನಾಟಕದಲ್ಲಿ ಜಲಪ್ರಳಯ| ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ, ಸ್ಥಿರ ಸರ್ಕಾರ ರಚನೆಯಾಗಲಿದೆ ಎಂದು ಚುನಾವಣಾ ಪೂರ್ವದಲ್ಲಿ ಭವಿಷ್ಯ ನುಡಿದಿದ್ದ ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ ಇದೀಗ ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಒಂದು ಪಕ್ಷದ ಸರ್ಕಾರ ಬರಲಿದೆ, ಸ್ಥಿರ ಸರ್ಕಾರ ರಚನೆಯಾಗಲಿದೆ ಎಂಬುದಾಗಿ ಹೇಳಿದ್ದೆ. ಅದು ನಿಜ ಆಗಿದೆ. ಈ ಬಾರಿ ರಾಜ್ಯದಲ್ಲಿ ಸಾಕಷ್ಟು ಮಳೆ ಬರಲಿದೆ. ಜಲಪ್ರಳಯ ಆಗುವ ಲಕ್ಷಣ ಇದೆ ಎಂದು ಭವಿಷ್ಯ ನುಡಿದಿದ್ದಾರೆ. ಜಾಗತಿಕ ಮಟ್ಟದಲ್ಲಿ

ಕರ್ನಾಟಕದಲ್ಲಿ ಜಲಪ್ರಳಯ| ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ Read More »

ತುರ್ತಾಗಿ ಬೇಕಾಗಿದ್ದಾರೆ; ಸಿಡಿಗೆ ತಡೆಯಾಜ್ಞೆ ತರದ, ಭ್ರಷ್ಟರಲ್ಲದ ವಿಪಕ್ಷ ನಾಯಕ!! ಕಾಂಗ್ರೆಸ್ ನಿಂದ ಬಿಜೆಪಿ ಕುರಿತು ವ್ಯಂಗ್ಯ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆ ಪೂರ್ಣಗೊಂಡು, ಹೊಸ ಸರ್ಕಾರ ರಚನೆಗೊಂಡರೂ ಇನ್ನೂ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿದ ಬಿಜೆಪಿ ಕುರಿತು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ. ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಸಿಡಿಗೆ ತಡೆಯಾಜ್ಞೆ ತರದ, ಭ್ರಷ್ಟಾಚಾರಿಯಲ್ಲದ ವಿಪಕ್ಷದ ನಾಯಕರೊಬ್ಬರು ತುರ್ತಾಗಿ ಬೇಕಾಗಿದ್ದಾರೆಂದು ಹೇಳಿದೆ. ಟ್ವೀಟ್ ನಲ್ಲಿ ವಿರೋಧ ಪಕ್ಷ ನಾಯಕನಲ್ಲಿ ಇರಬೇಕಾದ ಲಕ್ಷಣಗಳನ್ನೂ ಕಾಂಗ್ರೆಸ್ ತಿಳಿಸಿದೆ. ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸಿಡಿಗೆ

ತುರ್ತಾಗಿ ಬೇಕಾಗಿದ್ದಾರೆ; ಸಿಡಿಗೆ ತಡೆಯಾಜ್ಞೆ ತರದ, ಭ್ರಷ್ಟರಲ್ಲದ ವಿಪಕ್ಷ ನಾಯಕ!! ಕಾಂಗ್ರೆಸ್ ನಿಂದ ಬಿಜೆಪಿ ಕುರಿತು ವ್ಯಂಗ್ಯ Read More »