ರಾಜ್ಯ

ಬ್ರಹ್ಮಾಂಡ ಭ್ರಷ್ಟಾಚಾರ, ಬೇನಾಮಿ ಆಸ್ತಿ ಗಳಿಕೆ| ಅಜಿತ್ ರೈ ಜನ್ಮ ಜಾಲಾಡಲು ಎಸ್ಐಟಿ ರಚನೆ

ಸಮಗ್ರ ನ್ಯೂಸ್: ₹500 ಕೋಟಿಗೂ ಹೆಚ್ಚು ಮೌಲ್ಯದ ಬೇನಾಮಿ ಆಸ್ತಿಗಳನ್ನು ಹೊಂದಿರುವ ಆರೋಪದಡಿ ಕೆ.ಆರ್‌.ಪುರ ತಾಲ್ಲೂಕಿನ ಹಿಂದಿನ ತಹಶೀಲ್ದಾರ್‌ ಅಜಿತ್‌ ಕುಮಾರ್‌ ರೈ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದಾಖಲಿಸಿರುವ ಪ್ರಕರಣದ ತನಿಖೆಗೆ ಲೋಕಾಯುಕ್ತ ಪೊಲೀಸ್‌ ವಿಭಾಗದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ. ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಡಿವೈಎಸ್‌‍ಪಿ ಪ್ರಮೋದ್‌ ಕುಮಾರ್‌ ಎಸ್‌ಐಟಿಯ ನೇತೃತ್ವ ವಹಿಸಿದ್ದು, ಅವರೂ ಸೇರಿದಂತೆ ಇಬ್ಬರು ಡಿವೈಎಸ್‌ಪಿ, ನಾಲ್ವರು ಇನ್‌ಸ್ಪೆಕ್ಟರ್‌ಗಳು ತಂಡದಲ್ಲಿದ್ದಾರೆ. ಹಲವು ಇತರ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಈ

ಬ್ರಹ್ಮಾಂಡ ಭ್ರಷ್ಟಾಚಾರ, ಬೇನಾಮಿ ಆಸ್ತಿ ಗಳಿಕೆ| ಅಜಿತ್ ರೈ ಜನ್ಮ ಜಾಲಾಡಲು ಎಸ್ಐಟಿ ರಚನೆ Read More »

ಹವಾ ವರ್ತಮಾನ| ಕರಾವಳಿಯಲ್ಲಿ ಜು.5ರ ವರೆಗೆ ಭಾರೀ ಮಳೆ‌ ಸಾಧ್ಯತೆ| ಆರೆಂಜ್ ಅಲರ್ಟ್ ಘೋಷಣೆ

ಕರಾವಳಿಯಲ್ಲಿ ಮುಂದಿನ ಒಂದು ವಾರ ಕಾಲ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಜು.3ರ ವರೆಗೆ ಯೆಲ್ಲೋ ಅಲರ್ಚ್‌ ಹಾಗೂ ಜು.4 ಮತ್ತು 5ರಂದು ಆರೆಂಜ್‌ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಜಿಲ್ಲೆಗಳಲ್ಲಿ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಆದ್ದರಿಂದ ಸಮುದ್ರತೀರದ ನಿವಾಸಿಗಳು ಮತ್ತು ಮೀನುಗಾರರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಜುಲೈ 1ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ಹಾಗೂ ಜುಲೈ 2ರಂದು ಉತ್ತರ ಕನ್ನಡ,

ಹವಾ ವರ್ತಮಾನ| ಕರಾವಳಿಯಲ್ಲಿ ಜು.5ರ ವರೆಗೆ ಭಾರೀ ಮಳೆ‌ ಸಾಧ್ಯತೆ| ಆರೆಂಜ್ ಅಲರ್ಟ್ ಘೋಷಣೆ Read More »

ದೇವರ ದರ್ಶನ ಮುಗಿಸಿ ಬರುತ್ತಿದ್ದಾಗ ಭೀಕರ ಅಪಘಾತ| 6 ಸಾವು, 10 ಜನರಿಗೆ ಗಂಭೀರ

ಸಮಗ್ರ ನ್ಯೂಸ್: ದೇವರ ದರ್ಶನಕ್ಕೆಂದು ಹೋಗಿ ಮರಳಿ ಊರಿಗೆ ಬರುವಾಗ ಸಿಮೆಂಟ್ ಟ್ಯಾಂಕರ್ ಹಾಗೂ ಕ್ರೂಸರ್ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 10 ಜನರು ಗಂಭೀರವಾಗಿ ಗಾಯಗೊಂಡ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಅಪಘಾತದಲ್ಲಿ ಲಲಿತಾಬಾಯಿ ಮಹಾದೇವ ಬುಗ್ಗೆ (50), ರೋಹಿಣಿ ಗೋಪಾಲ ಪೂಜಾರಿ (40), ಸುಂದರಾಬಾಯಿ ಭರತಸಿಂಗ್ ರಜಪೂತ (55), ಸಾಹಿನಾಥ್ ಗೋವಿಂದ ಪೂಜಾರಿ (10) ಸಂಗೀತ ಮದನ್ ಗಾನೆ (35) ಛಾಯಾ ಹನುಮಾನ ನವರೆ (46) ಸ್ಥಳದಲ್ಲೇ

ದೇವರ ದರ್ಶನ ಮುಗಿಸಿ ಬರುತ್ತಿದ್ದಾಗ ಭೀಕರ ಅಪಘಾತ| 6 ಸಾವು, 10 ಜನರಿಗೆ ಗಂಭೀರ Read More »

58ರ ಹರೆಯದಲ್ಲಿ ಅವಳಿ ಮಕ್ಕಳ ಹಡೆದ ಮಹಾತಾಯಿ!!

ಸಮಗ್ರ ನ್ಯೂಸ್: ಮಕ್ಕಳಿಲ್ಲದ ಮಹಿಳೆಯೊಬ್ಬರು ತಮ್ಮ 58ನೇ ವಯಸ್ಸಿನಲ್ಲಿ ಅವಳಿ ಮಕ್ಕಳ ತಾಯಿಯಾಗಿದ್ದಾರೆ. ಜೈಪುರದ ಬಿಕಾನೇರ್‌ನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯೊಂದರಲ್ಲಿ ಅವಳಿ ಗಂಡು-ಹೆಣ್ಣು ಮಕ್ಕಳಿಗೆ ಜನ್ಮ ನೀಡಿರುವ ಅಚ್ಚರಿಯ ಘಟನೆ ನಡೆದಿದ್ದು, ಹೆರಿಗೆಯ ನಂತರ ತಾಯಿ ಮತ್ತು ಮಕ್ಕಳು ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ವರದಿಗಳ ಪ್ರಕಾರ 58 ವರ್ಷದ ಶೇರಾ ಬಹದ್ದೂರ್ ಅವರಿಗೆ ಮಕ್ಕಳಿರಲಿಲ್ಲ. ಕೊನೆಗೆ ಐವಿಎಫ್ ತಂತ್ರದ ಮೊರೆ ಹೋಗಿದ್ದರು. ಎರಡು ವರ್ಷಗಳ ಬಳಿಕ ಗರ್ಭಿಣಿಯಾಗಿದ್ದಾರೆ. ವೃದ್ಧಾಪ್ಯದಲ್ಲೂ ಮಕ್ಕಳನ್ನು ಹೊಂದಬೇಕೆಂಬ ಅವರ ಬಯಕೆ

58ರ ಹರೆಯದಲ್ಲಿ ಅವಳಿ ಮಕ್ಕಳ ಹಡೆದ ಮಹಾತಾಯಿ!! Read More »

ಏಷ್ಯನ್ ಕಬಡ್ಡಿ ಚಾಂಪಿಯನ್‌ ಶಿಪ್| ಇರಾನ್ ಮಣಿಸಿ ಎಂಟನೇ ಬಾರಿಗೆ ಪ್ರಶಸ್ತಿಗೆ ಮುತ್ತಿಕ್ಕಿದ ಭಾರತ

ಸಮಗ್ರ ನ್ಯೂಸ್: ದ.ಕೊರಿಯಾದ ಬುಸಾನ್ ನಲ್ಲಿ ನಡೆದ 11ನೇ ಆವೃತ್ತಿಯ ಪುರುಷರ ಏಷ್ಯನ್‌ ಕಬಡ್ಡಿ ಚಾಂಪಿಯನ್‌ಷಿಪ್‌ ಟೂರ್ನಿಯಲ್ಲಿ ಪೂರ್ಣ ಪ್ರಾಬಲ್ಯ ಮೆರೆದು ಭಾರತ ತಂಡ ಚಾಂಪಿಯನ್ಸ್ ಪಟ್ಟ ಅಲಂಕರಿಸಿದೆ. ಇಂದು ನಡೆದ ಫೈನಲ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಿದ ಸ್ಟಾರ್‌ ರೇಡರ್‌ ಪವನ್‌ ಕುಮಾರ್‌ ಸೆಹ್ರಾವತ್‌ ಸಾರಥ್ಯದ ಟೀಮ್ ಇಂಡಿಯಾ 42-32 ಅಂಕಗಳಿಂದ ಅಪಾಯಕಾರಿ ಹಾಗೂ ಬದ್ಧ ಎದುರಾಳಿ ಇರಾನ್‌ ತಂಡವನ್ನು ಬಗ್ಗು ಬಡಿದು ಟ್ರೋಫಿ ಮುಡಿಗೇರಿಸಿಕೊಂಡಿದೆ. ಟೂರ್ನಿಯ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಟ್ರೋಫಿ ಗೆದ್ದ ತಂಡವಾಗಿರುವ

ಏಷ್ಯನ್ ಕಬಡ್ಡಿ ಚಾಂಪಿಯನ್‌ ಶಿಪ್| ಇರಾನ್ ಮಣಿಸಿ ಎಂಟನೇ ಬಾರಿಗೆ ಪ್ರಶಸ್ತಿಗೆ ಮುತ್ತಿಕ್ಕಿದ ಭಾರತ Read More »

ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಕೆಎಸ್ಆರ್ ಟಿಸಿ| ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ವಿವಿಧ ಪದವಿ ಕೋರ್ಸ್‌ಗಳ ಪರೀಕ್ಷೆಗಳು ಆಗಸ್ಟ್‌ ನಲ್ಲಿ ನಡೆಯುವುದರಿಂದ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿರುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ತಿಳಿಸಿದೆ. ಈ ಹಿಂದೆ 2022-23 ಸಾಲಿನ ಸ್ನಾತಕೋತ್ತರ, ಡಿಪ್ಲೋಮಾ ಬಿ.ಫಾರ್ಮ, ಕಾನೂನು ಪದವಿ ಹಾಗೂ ಮುಂತಾದ ಕೋರ್ಸುಗಳ ಪದವಿವಿದ್ಯಾರ್ಥಿಗಳ ಬಸ್‌ಪಾಸ್ ಜೂನ್ 2023ರ ಅಂತ್ಯದವರೆಗೆ ಮಾತ್ರ ವಿಸ್ತರಿಸಲಾಗಿತ್ತು. ಆದರೆ ಪದವಿ ವಿದ್ಯಾರ್ಥಿಗಳಿಗೆ ಜುಲೈ/ಆಗಸ್ಟ್ ನಲ್ಲಿ ಪರೀಕ್ಷೆಗಳು ನಡೆಯಲಿದ್ದು ಈ ಕುರಿತು ಆಯಾ ವಿಶ್ವವಿದ್ಯಾನಿಲಯಗಳು ಅಧಿಸೂಚನೆಯನ್ನು ಹೊರಡಿಸಿವೆ. ಈ

ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಕೆಎಸ್ಆರ್ ಟಿಸಿ| ಇಲ್ಲಿದೆ ಫುಲ್ ಡೀಟೈಲ್ಸ್ Read More »

ಮೊದಲ ರಾತ್ರಿಯೇ ಮಗು ಹೆತ್ತ ನವ ವಧು!!

ಸಮಗ್ರ ನ್ಯೂಸ್: ಮದುವೆಯಾದ ಮೊದಲನೇ ರಾತ್ರಿಯೇ ವಧು ಮಗುವಿಗೆ ಜನ್ಮ ನೀಡಿದ ಘಟನೆ ದೆಹಲಿ ಹೊರವಲಯದ ಗ್ರೇಟರ್‌ ನೊಯ್ಡಾದಲ್ಲಿ ವರದಿಯಾಗಿದೆ. ಗ್ರೇಟರ್‌ ನೊಯ್ಡಾದ ವರನಿಗೆ ತೆಲಂಗಾಣದ ಸಿಕಂದರಾಬಾದ್‌ನ ಯುವತಿಯೊಬ್ಬಳ ಜತೆಗೆ ಜೂ.26ರಂದು ಮದುವೆ ನಡೆಯಿತು. ಪ್ರಥಮ ರಾತ್ರಿಯಂದು ವಧು ತನಗೆ ಹೊಟ್ಟೆ ನೋವು ಎಂದು ಹೇಳಿದ್ದಾಳೆ. ಹುಡುಗನ ಮನೆಯವರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ತಪಾಸಣೆ ನಡೆಸಿದ ವೈದ್ಯರು, ಆಕೆ 7 ತಿಂಗಳ ಗರ್ಭಿಣಿ ಎಂದು ಹೇಳಿದ್ದಾರೆ. ಮುಂಜಾನೆ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. “ವಧುವಿಗೆ

ಮೊದಲ ರಾತ್ರಿಯೇ ಮಗು ಹೆತ್ತ ನವ ವಧು!! Read More »

ಎಸ್ಎಸ್ಎಲ್ ಸಿ ಪೂರಕ ಪಲಿತಾಂಶ ಪ್ರಕಟ| ಬಾಲಕಿಯರೇ ಮೇಲುಗೈ

ಸಮಗ್ರ ನ್ಯೂಸ್: ಜೂನ್ ತಿಂಗಳಿನಲ್ಲಿ ನಡೆದಿದ್ದ ಎಸ್‌ಎಸ್‌ಎಲ್​ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದ್ದು, ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. 1,11,781 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 46,270 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಶೇ. 41.39ರಷ್ಟು ಫಲಿತಾಂಶ ಬಂದಿದೆ. ಮಂಡಳಿಯ ಅಧಿಕೃತ ವೆಬ್​ಸೈಟ್​ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಎಸ್‌ಎಂಎಸ್ ಮೂಲಕವೂ ವಿದ್ಯಾರ್ಥಿಗಳಿಗೆ ಫಲಿತಾಂಶ ಕಳುಹಿಸಿಕೊಡಲಾಗುತ್ತದೆ ಎಂದು ಮಂಡಳಿ ತಿಳಿಸಿದೆ. ಪರೀಕ್ಷೆಗೆ ಹಾಜರಾದ 71,134 ಬಾಲಕರಲ್ಲಿ 27,705 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.38 ಫಲಿತಾಂಶ ಬಂದಿದೆ.

ಎಸ್ಎಸ್ಎಲ್ ಸಿ ಪೂರಕ ಪಲಿತಾಂಶ ಪ್ರಕಟ| ಬಾಲಕಿಯರೇ ಮೇಲುಗೈ Read More »

ಈ ಸ್ಪುರದ್ರೂಪಿ ಯುವಕ ವಧು ಸಿಗಲಿಲ್ಲವೆಂದು ಆತ್ಮಹತ್ಯೆಗೆ ಶರಣಾದ| ಕೃಷಿಕರ ಮಕ್ಕಳಿಗೆ ಹೆಣ್ಣು ಕೊಡೋರೇ ಇಲ್ಲ!!

ಸಮಗ್ರ ನ್ಯೂಸ್: ಕರಾವಳಿ ಮತ್ತು ಮಲೆನಾಡು ಭಾಗದಲ್ಲಂತೂ ಕೃಷಿಕರಿಗೆ, ಬಾಣಸಿಗರಿಗೆ, ಅರ್ಚಕರಿಗೆ, ಸಣ್ಣ ಪುಟ್ಟ ಉದ್ಯೋಗ ಮಾಡಿಕೊಂಡಿರುವವರಿಗೆ ಮದುವೆಯೇ ಮರೀಚಿಕೆಯಾದಂತಿದೆ. ಇಂಥಹುದೇ ಪರಿಸ್ಥಿತಿಯನ್ನು ಎದುರಿಸಿದ ಯುವಕನೊಬ್ಬ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ತೇಲಂಗಾರ ನಿವಾಸಿ ಕಿರಗಾರಿ ಮನೆಯ ನಾಗರಾಜ ಗಣಪತಿ ಗಾಂವ್ಕರ (35) ಮೃತ ಯುವಕ. ಕಳೆದ ಹಲವಾರು ವರ್ಷಗಳಿಂದ ಹುಡುಗಿ ಹುಡುಕುತ್ತಿದ್ದ ಅವರಿಗೆ ಕೊನೆಗೂ ಒಂದು ಮದುವೆ ಸೆಟ್‌ ಆಗಲೇ ಇಲ್ಲ. ಇದರಿಂದ ನೊಂದು ಪ್ರಾಣವನ್ನೇ ಕಳೆದುಕೊಳ್ಳುವ ತೀರ್ಮಾನಕ್ಕೆ ಬಂದಿದ್ದಾರೆ

ಈ ಸ್ಪುರದ್ರೂಪಿ ಯುವಕ ವಧು ಸಿಗಲಿಲ್ಲವೆಂದು ಆತ್ಮಹತ್ಯೆಗೆ ಶರಣಾದ| ಕೃಷಿಕರ ಮಕ್ಕಳಿಗೆ ಹೆಣ್ಣು ಕೊಡೋರೇ ಇಲ್ಲ!! Read More »

ಶ್ರೀಮಂತ ದೇಗುಲಗಳ ಪಟ್ಟಿ ರಿಲೀಸ್ ಮಾಡಿದ ಮುಜುರಾಯಿ ಇಲಾಖೆ| ಈ ಬಾರಿಯೂ ಕುಕ್ಕೆ ಸುಬ್ರಹ್ಮಣ್ಯನೇ ಅತೀ ಶ್ರೀಮಂತ ದೇವರು

ಸಮಗ್ರ ನ್ಯೂಸ್: ರಾಜ್ಯ ಮುಜರಾಯಿ ಇಲಾಖೆ ಆದಾಯ ತರುವ ರಾಜ್ಯದ ಟಾಪ್ 10 ದೇವಾಲಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 2022-23ರ ಅವಧಿಯಲ್ಲಿ ದೇವಾಲಯ ಗಳಿಸಿರುವ ಒಟ್ಟು ಆದಾಯ ಮತ್ತು ಒಟ್ಟು ವೆಚ್ಚದ ಪಟ್ಟಿಯನ್ನು ಬಿಡುಗಡೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮೊದಲ ಸ್ಥಾನ ಪಡೆದಿದೆ. ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನ, ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನವನ್ನು ಪಡೆದಿದೆ. ಯಾವ

ಶ್ರೀಮಂತ ದೇಗುಲಗಳ ಪಟ್ಟಿ ರಿಲೀಸ್ ಮಾಡಿದ ಮುಜುರಾಯಿ ಇಲಾಖೆ| ಈ ಬಾರಿಯೂ ಕುಕ್ಕೆ ಸುಬ್ರಹ್ಮಣ್ಯನೇ ಅತೀ ಶ್ರೀಮಂತ ದೇವರು Read More »