‘ಶಕ್ತಿ’ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ| ಇಂದಿನಿಂದ ಮಹಿಳೆಯರಿಗೆ ಬಸ್ಸ್ ನಲ್ಲಿ ರಾಜ್ಯಾದ್ಯಂತ ಉಚಿತ ಪ್ರಯಾಣ
ಸಮಗ್ರ ನ್ಯೂಸ್: ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ. ವಿಧಾನಸೌಧ ಮುಂಭಾಗ ಶಕ್ತಿ ಯೋಜನೆ ಉದ್ಘಾಟನಾ ಸಮಾರಂಭ ನಡೆಯಿತು. ಇಂದಿನಿಂದ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣವಿರುತ್ತದೆ. ಉಚಿತ ಪ್ರಯಾಣಕ್ಕೆ ಬಿಪಿಎಲ್, ಎಪಿಎಲ್ ಎಂಬ ನಿಯಮವಿಲ್ಲ. ಯಾವುದಾದರೂ ಐಡಿ ತೋರಿಸಿದರೆ ಪ್ರಯಾಣ ಮಾಡಬಹುದು. ಸ್ಮಾರ್ಟ್ ಕಾರ್ಡ್ ಮಾಡಿಸಲು ಯಾರೂ ದುಡ್ಡು ಕೊಡಬೇಕಿಲ್ಲ. ಸ್ಮಾರ್ಟ್ ಕಾರ್ಡ್ ಮಾಡಿಸಿಕೊಳ್ಳಲು 3 ತಿಂಗಳ ಕಾಲಾವಕಾಶವಿದೆ. ಶೇ.90 ಕ್ಕಿಂತ ಹೆಚ್ಚು ಬಸ್ ಗಳಲ್ಲಿ ರಾಜ್ಯದ ಯಾವುದೇ ಮೂಲೆಗೆ ಮಹಿಳೆಯರು ಹೋಗಬಹುದು










