ರಾಜ್ಯ

ತೀವ್ರ ಸ್ವರೂಪ ಪಡೆದುಕೊಂಡ ‘ಬಿಫರ್ ಜಾಯ್’ ಚಂಡಮಾರುತ| ಕರಾವಳಿ ಪ್ರಕ್ಷುಬ್ದ; ಭಾರೀ ಗಾಳಿ ಮಳೆ ಸಾಧ್ಯತೆ| ಮುಂಗಾರು ಮಳೆಯಲ್ಲಿ ಉಂಟಾಗಲಿದೆ ವ್ಯತ್ಯಯ

ಸಮಗ್ರ ನ್ಯೂಸ್: ರಾಜ್ಯದ ಪಶ್ಚಿಮ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಸೋಮವಾರ ಉಂಟಾದ ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಗೊಂಡಿದೆ. ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಎದ್ದಿರುವ ಈ ಚಂಡಮಾರುತ ‘ಬಿಪೋರ್‌ಜಾಯ್’ ತೀವ್ರಗೊಂಡು ಉತ್ತರ ದಿಕ್ಕಿನತ್ತ ಗಂಟೆಗೆ 5ಕಿ.ಮೀ ವೇಗದಲ್ಲಿ ಚಲಿಸುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಚಂಡಮಾರುತವು ಗೋವಾದಿಂದ ನೈಋತ್ಯದಲ್ಲಿ 880ಕಿ.ಮೀ. ದೂರದಲ್ಲಿ, ಮುಂಬಯಿಯಿಂದ ನೈಋತ್ಯ ದಿಕ್ಕಿನಲ್ಲಿ 990 ಕಿ.ಮೀ., ಪೋರ್‌ಬಂದರಿನಿಂದ 1060 ಹಾಗೂ ಕರಾಚಿಯಿಂದ 1360ಕಿ.ಮೀ ದೂರದಲ್ಲಿ ಕೇಂದ್ರೀಕೃತಗೊಂಡಿತ್ತು ಎಂದು ವರದಿ ತಿಳಿಸಿದೆ. ಮುಂದಿನ 12

ತೀವ್ರ ಸ್ವರೂಪ ಪಡೆದುಕೊಂಡ ‘ಬಿಫರ್ ಜಾಯ್’ ಚಂಡಮಾರುತ| ಕರಾವಳಿ ಪ್ರಕ್ಷುಬ್ದ; ಭಾರೀ ಗಾಳಿ ಮಳೆ ಸಾಧ್ಯತೆ| ಮುಂಗಾರು ಮಳೆಯಲ್ಲಿ ಉಂಟಾಗಲಿದೆ ವ್ಯತ್ಯಯ Read More »

ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್| ಡಿನೋಟಿಫಿಕೇಶನ್ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣವನ್ನು ಹೈಕೋರ್ಟ್​ ರದ್ದುಪಡಿಸಿದ್ದು ಈ ಮೂಲಕ ಬಿ.ಎಸ್​ ಯಡಿಯೂರಪ್ಪ ಅವರಿಗೆ ಬಿಗ್​ ರಿಲೀಫ್ ನೀಡಿದೆ. 2015ರಲ್ಲಿ ಅಕ್ರಮ ಡಿನೋಟಿಫಿಕೇಶನ್ ಕುರಿತು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಈ ಹಿಂದೆ ಸಿಎಜಿ ವರದಿ ಆಧರಿಸಿದ 15 ಕೇಸ್ ಹೈಕೋರ್ಟ್ ರದ್ದುಪಡಿಸಿತ್ತು. ಹಿಂದಿನ ತೀರ್ಪು ಆಧರಿಸಿ 19 ಡಿಸೆಂಬರ್​ 2015ರ ಕೇಸ್​ನ್ನು ಹೈಕೋರ್ಟ್ ರದ್ದುಪಡಿಸಿದೆ. 2006-07ರಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಯಡಿಯೂರಪ್ಪ ಅವರು ಕಾನೂನಿನ ವಿರುದ್ಧವಾಗಿ ಬೆಳ್ಳಂದೂರು ಮತ್ತು

ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್| ಡಿನೋಟಿಫಿಕೇಶನ್ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್ Read More »

ಮಂಗಳೂರು: ದೇಶದಲ್ಲೇ ಮೊದಲ ಹೃದಯ ಸಂಬಂಧಿತ ಕಾಯಿಲೆಗಳ ಉಚಿತ ತಪಾಸಣಾ ಶಿಬಿರ ʼಹೃದಯ ವೈಶಾಲ್ಯ ಯೋಜನೆʼ ಜಾರಿ

ಸಮಗ್ರ ನ್ಯೂಸ್: ಹೃದಯ ಸಂಬಂಧಿತ ಕಾಯಿಲೆಗಳ ಉಚಿತ ತಪಸಣಾ ಶಿಬಿರ ಹೃದಯ ವೈಶಾಲ್ಯ ಯೋಜನೆಯನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಜಾರಿಗೆ ತರಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ಪ್ರಕಟಿಸಿದರು. ಅವರು ಜೂ.7ರ ಬುಧವಾರ ಮೂಡುಬಿದಿರೆ ಆರೋಗ್ಯ ಕೇಂದ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಕಾರ್ಡಿಯಾಲಜಿ ಡೋರ್‍ಸ್ಟೆಪ್ ಫೌಂಡೇಶನ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಹೃದಯ ತಜ್ಞ ಡಾ.

ಮಂಗಳೂರು: ದೇಶದಲ್ಲೇ ಮೊದಲ ಹೃದಯ ಸಂಬಂಧಿತ ಕಾಯಿಲೆಗಳ ಉಚಿತ ತಪಾಸಣಾ ಶಿಬಿರ ʼಹೃದಯ ವೈಶಾಲ್ಯ ಯೋಜನೆʼ ಜಾರಿ Read More »

ಮಂಗಳೂರು: ಬಿಪೊರ್ ಜಾಯ್ ಚಂಡಮಾರುತ! ಮೀನುಗಾರರಿಗೆ ಮುನ್ನೆಚ್ಚರಿಕೆ

ಸಮಗ್ರನ್ಯೂಸ್: ಹವಾಮಾನ ಮುನ್ಸೂಚನೆಯಂತೆ ಜೂ. 6 ರಿಂದ 11ರ ವರೆಗೆ ಬಿಪೊರ್ ಜಾಯ್ ಚಂಡಮಾರುತದಿಂದಾಗಿ ಅರಬ್ಬಿ ಸಮುದ್ರವು ಪ್ರಕ್ಷುಬ್ಧಗೊಂಡಿರುತ್ತದೆ. ಈ ಸಂದರ್ಭದಲ್ಲಿ ಸಂಭವಿಸುವ ಅನಾಹುತಗಳನ್ನು ತಡೆಗಟ್ಟುವ ಸಲುವಾಗಿ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಮಂಗಳೂರು: ಬಿಪೊರ್ ಜಾಯ್ ಚಂಡಮಾರುತ! ಮೀನುಗಾರರಿಗೆ ಮುನ್ನೆಚ್ಚರಿಕೆ Read More »

`ವಿದ್ಯುತ್ ಬಿಲ್ ಕಟ್ಟುವ ವಿಚಾರದಲ್ಲಿ ಬಡವರಿಗೆ ಒಂದು ನ್ಯಾಯ, ಶ್ರೀಮಂತರಿಗೆ ಒಂದು ನ್ಯಾಯ’| ಶಿಶಿಲ ಗ್ರಾಮಸಭೆಯಲ್ಲಿ ಆಕ್ರೋಶ

ಸಮಗ್ರ ನ್ಯೂಸ್: ವಿದ್ಯುತ್ ಬಿಲ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ಬಡವರಿಗೆ ಒಂದು ನ್ಯಾಯ ಶ್ರೀಮಂತರಿಗೆ ಒಂದು ನ್ಯಾಯ ಎಂಬಂತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮಸಭೆಯಲ್ಲಿ ನಡೆದಿದೆ. ಶಿಶಿಲ ಗ್ರಾಮ ಪಂಚಾಯತ್‌ನ 2023-24ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಜೂ.7ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಅಧ್ಯಕ್ಷ ಸಂದೀಪ್ ಎ. ಎಸ್. ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ಭಾಗವಹಿಸಿದ್ದರು. ಸಭೆಯ

`ವಿದ್ಯುತ್ ಬಿಲ್ ಕಟ್ಟುವ ವಿಚಾರದಲ್ಲಿ ಬಡವರಿಗೆ ಒಂದು ನ್ಯಾಯ, ಶ್ರೀಮಂತರಿಗೆ ಒಂದು ನ್ಯಾಯ’| ಶಿಶಿಲ ಗ್ರಾಮಸಭೆಯಲ್ಲಿ ಆಕ್ರೋಶ Read More »

ಕಾರಿನ ಚಕ್ರದಂತೆ ರೈಲಿನ ಟೈಯರ್ ಅನ್ನೂ ಬದಲಾಯಿಸ್ತಾರಂತೆ! ಹೇಗೆ ಗೊತ್ತಾ?

ಸಮಗ್ರ ನ್ಯೂಸ್: ನಾವೆಲ್ಲಾ ಸಾಮನ್ಯವಾಗಿ ಬೈಕ್, ಕಾರಿನ ಚಕ್ರಗಳು ಹಾನಿಯಾದಾಗ ಅದನ್ನು ಬದಲಾಯಿಸಲಾಗುತ್ತದೆ ಎಂಬುದನ್ನು ಕೇಳಿರುತ್ತೇವೆ, ಮತ್ತು ನೋಡಿರುತ್ತೇವೆ. ಆದ್ರೆ ರೈಲಿನ ಚಕ್ರವನ್ನು ಸಹ ಚೇಂಜ್ ಮಾಡ್ತಾರೆ ಅನ್ನೋದು ನಿಮಗೆ ಗೊತ್ತಾ? ಹಾಗಿದ್ರೆ ಯಾವರೀತಿ ಚೇಂಜ್ ಮಾಡ್ತಾರೆ ಅನ್ನೋದನ್ನು ತಿಳಿದುಕೊಳ್ಳಬೇಕಾ? ಹಾಗಾದ್ರೆ ಈ ಕೆಳಗಿನ ಮಾಹಿತಿಯನ್ನು ಓದಿ. ಕಾರುಗಳು ಮತ್ತು ಬಸ್‌ಗಳಂತೆ ರೈಲುಗಳಲ್ಲಿ ಸಹ ಕಾಲಕಾಲಕ್ಕೆ ಅಧಿಕಾರಿಗಳು ಸೇವೆ ಸಲ್ಲಿಸುತ್ತಾರೆ. ಅಂದರೆ ಕಂಟೇನರ್‌ನ ಹಾನಿಗೊಳಗಾದ ಭಾಗವನ್ನು ಸರಿಪಡಿಸುತ್ತಾರೆ. ಅದೇ ರೀತಿ ರೈಲಿನ ಚಕ್ರಗಳನ್ನು ಸಹ ಬದಲಾಯಿಸಲಾಗುತ್ತದೆ. ರೈಲುಗಳಲ್ಲಿ

ಕಾರಿನ ಚಕ್ರದಂತೆ ರೈಲಿನ ಟೈಯರ್ ಅನ್ನೂ ಬದಲಾಯಿಸ್ತಾರಂತೆ! ಹೇಗೆ ಗೊತ್ತಾ? Read More »

ಕೊಡಗು:ಚುನಾವಣೆಗೆ ಮೊದಲೇ ನಡೆದ ಡಾಮರೀಕರಣ ಕಳಪೆ ಆರೋಪ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಜಿಲ್ಲಾ ಪಂಚಾಯಿತಿಯಿಂದ ಚುನಾವಣೆಗೆ ಮೊದಲು ಹಲವು ರಸ್ತೆಗಳನ್ನು ಡಾಮರೀಕರಣ ಮಾಡಿರುತ್ತಾರೆ. ಇದರಲ್ಲಿ ಭಾಗಶಃ ಕಳಪೆ ಕಾಮಗಾರಿಯಿಂದ ಕೂಡಿರುತ್ತದೆ ಇದಕ್ಕೆ ಸಾಕ್ಷಿ ಎಂಬುವಂತೆ ಗೌಡಳ್ಳಿ ಗ್ರಾಮದ ಪುಲಗಿರಿ ದೇವಸ್ಥಾನದ ರಸ್ತೆ 2.50 ಲಕ್ಷ ರಸ್ತೆ ಸಂಪೂರ್ಣವಾಗಿ ಹುಲ್ಲಿನಿಂದ ಕೂಡಿದ್ದು ಡಾಮರೀಕರಣ ಕೆಳಭಾಗದಿಂದ ಹುಲ್ಲು ಬರುತಿದ್ದು ಡಾಮರೀಕರಣ ಎಲ್ಲವೂ ಕಿತ್ತು ಹೋಗುತ್ತಿದೆ. ಹೆಗಳ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗುವ ದಾರಿಯಲ್ಲಿ 2.50 ಲಕ್ಷದ ಡಾಮರೀಕರಣ ಆಗಿರುತ್ತದೆ ಈ ರಸ್ತೆ ನಿರ್ಮಾಣವಾದ ಒಂದು ತಿಂಗಳಿನಲ್ಲೇ

ಕೊಡಗು:ಚುನಾವಣೆಗೆ ಮೊದಲೇ ನಡೆದ ಡಾಮರೀಕರಣ ಕಳಪೆ ಆರೋಪ Read More »

ಬ್ಯಾಂಕ್ ಅಧಿಕಾರಿ, ಗುಮಾಸ್ತ ಹುದ್ದೆಗೆ ಅರ್ಜಿ ಅಹ್ವಾನ

ಸಮಗ್ರ ನ್ಯೂಸ್: ಉದ್ಯೋಗಗಳ ಅವಕಾಶ ಕಡಿಮೆಯಾಗುತ್ತಿರುವ ಇತ್ತೀಚಿನ ದಿನಗಳಲ್ಲಿ ಐಬಿಪಿಎಸ್ (IBPS) ವತಿಯಿಂದ ರೀಜನಲ್ ರೂರಲ್ ಬ್ಯಾಂಕ್‍ಗಳಲ್ಲಿ ಖಾಲಿ ಇರುವ 8600 ಕ್ಕೂ ಹೆಚ್ಚು ಕ್ಲರಿಕಲ್ ಮತ್ತು ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ‌ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಹರಾಗಿರುತ್ತಾರೆ. ಜೂನ್, 21 ರವರೆಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ https://ibps.in/ ವೀಕ್ಷಿಸಬಹುದಾಗಿದೆ. ಈಗಾಗಲೇ ಅರ್ಜಿ ಆಹ್ವಾನಿಸಿರುವ ಐಬಿಪಿಎಸ್ ರೀಜನಲ್ ರೂರಲ್ ಬ್ಯಾಂಕ್ ಕ್ಲೆರಿಕಲ್ ಮತ್ತು ಆಫೀಸರ್ಸ್ ಹುದ್ದೆಗಳ ನೇಮಕಾತಿ ಪರೀಕ್ಷೆ ಮತ್ತು

ಬ್ಯಾಂಕ್ ಅಧಿಕಾರಿ, ಗುಮಾಸ್ತ ಹುದ್ದೆಗೆ ಅರ್ಜಿ ಅಹ್ವಾನ Read More »

ಇಂದಿರಾ ಕ್ಯಾಂಟೀನ್ ನಲ್ಲಿ ಅಡುಗೆಗೆ ನೀರು ಸರಬರಾಜು ಮಾಡದ ಮಡಿಕೇರಿ ನಗರಸಭೆ

ಸಮಗ್ರ ನ್ಯೂಸ್:‌ ಮಡಿಕೇರಿ ನಗರದ ಇಂದಿರಾ ಕ್ಯಾಂಟೀನ್ ಗೆ ಜೂ.7ರಂದು ಮಧ್ಯಾಹ್ನ ಸಮಯದಲ್ಲಿ ಊಟಕ್ಕೆ ಹೋದವರಿಗೆ ನಿರಾಸೆಯಾದ ಘಟನೆ ನಡೆದಿದೆ. ಇಲ್ಲಿಯ ಇಂದಿರಾ ಕ್ಯಾಂಟೀನ್ ಗೆ ಬಡವರು ಹಾಗೂ ಕೂಲಿ ಕಾರ್ಮಿಕರು ಊಟಕ್ಕೆ ಬರುತ್ತಿದರು ಆದರೆ ಅವರಿಗೆ ಇಂದು ಊಟವಿಲ್ಲದೆ ಹಾಗೆ ಹಿಂದಿರುಗಿದರು. ಕಾರಣ ಕೇಳಿದರೆ ಇಂದು ಕರೆಂಟ್ ಇಲ್ಲ ಕುಡಿಯಲು ಹಾಗೂ ಅಡುಗೆಗೆ ನೀರಿಲ್ಲ ಎಂಬ ಉತ್ತರ ನೀಡಿದ್ದಾರೆ. ಈ ಬಗ್ಗೆ ಕೊಡಗು ಹಿತರಕ್ಷಣಾ ವೇದಿಕೆ ಅಧ್ಯಕ್ಷ ರವಿಗೌಡ ಅವರು ಬಡವರ ಹಸಿವಿನ ಬೆಲೆ ಮಡಿಕೇರಿ

ಇಂದಿರಾ ಕ್ಯಾಂಟೀನ್ ನಲ್ಲಿ ಅಡುಗೆಗೆ ನೀರು ಸರಬರಾಜು ಮಾಡದ ಮಡಿಕೇರಿ ನಗರಸಭೆ Read More »

ಕೇರಳದಲ್ಲಿ ಸರ್ಕಾರದಿಂದ 20 ಲಕ್ಷ ಕುಟುಂಬಗಳಿಗೆ ಉಚಿತ ಇಂಟರ್‌ನೆಟ್‌ ಸೇವೆ

ಸಮಗ್ರ ನ್ಯೂಸ್ : ಕೇರಳವು ತನ್ನದೇ ಸ್ವಂತ ಇಂಟರ್‌ನೆಟ್‌ ಸೇವೆಯನ್ನು ಹೊಂದುವ ಮೂಲಕ ದೇಶದ ಮೊದಲ ಸರ್ಕಾರಿ ಸ್ವಾಮ್ಯದ ಅಂತರ್ಜಾಲ ಸೇವೆ ಒದಗಿಸುವ ರಾಜ್ಯ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. ಕೇರಳ ಫೈಬರ್ ಆಪ್ಟಿಕ್ ನೆಟ್‌ವರ್ಕ್ (K-FON)ಗೆ ಸಿಎಂ ಪಿಣರಾಯಿ ವಿಜಯನ್‌ ಚಾಲನೆ ನೀಡಿದ್ದು, ಇದು 1 Gbps ಸ್ಪೀಡ್‌ ಹೊಂದಿದೆ. ಆ ಮೂಲಕ ಸಮಾರು 20 ಲಕ್ಷ ಕುಟುಂಬಗಳಿಗೆ ಉಚಿತ ಇಂಟರ್‌ನೆಟ್‌ ಸೇವೆ ಒದಗಿಸಲಾಗುವುದು. ಜತೆಗೆ 17,412 ಸರ್ಕಾರಿ ಕಚೇರಿಗಳಿಗೆ K-FON ಸಂಪರ್ಕ ನೀಡಲಾಗಿದೆ ಎಂದು ಸಿಎಂ

ಕೇರಳದಲ್ಲಿ ಸರ್ಕಾರದಿಂದ 20 ಲಕ್ಷ ಕುಟುಂಬಗಳಿಗೆ ಉಚಿತ ಇಂಟರ್‌ನೆಟ್‌ ಸೇವೆ Read More »