ರಾಜ್ಯ

ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರಿನಲ್ಲಿ ‘ಆ್ಯಂಟಿ ಕಮ್ಯುನಲ್ ವಿಂಗ್’ – ಗೃಹಸಚಿವ ಪರಮೇಶ್ವರ್

ಸಮಗ್ರ ನ್ಯೂಸ್: ‘ಮಂಗಳೂರು ಕಮಿಷನರ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುತ್ತೇವೆ’ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಮಾತ್ರವಲ್ಲ ಕೋಮು ವೈಷಮ್ಯ ಇರುವ ಕಡೆ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುತ್ತೇವೆ. ಅದರ ರೂಪುರೇಷೆ ಕಮಿಷನರ್ ತಯಾರಿಸುತ್ತಾರೆ. ಇದರ ಮುಖ್ಯ ಉದ್ದೇಶ ಅನೈತಿಕ ಪೊಲೀಸ್‌ಗಿರಿ ಹತ್ತಿಕ್ಕುವುದು. ನೈತಿಕ ಪೊಲೀಸ್ ಗಿರಿ ನಡೆಯಲು ಅವಕಾಶವೇ ಕೊಡಬಾರದು. ಇಲ್ಲಿ ಯಶಸ್ವಿಯಾದರೆ ಇಡೀ ರಾಜ್ಯದಲ್ಲಿ ವಿಸ್ತರಣೆ ಮಾಡುತ್ತೇವೆ ಎಂದು ಹೇಳಿದರು.

ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರಿನಲ್ಲಿ ‘ಆ್ಯಂಟಿ ಕಮ್ಯುನಲ್ ವಿಂಗ್’ – ಗೃಹಸಚಿವ ಪರಮೇಶ್ವರ್ Read More »

ಬಾಡಿಗೆದಾರರಿಗೂ ಉಚಿತ ವಿದ್ಯುತ್| ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ

ಸಮಗ್ರ ನ್ಯೂಸ್: ಗೃಹಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೂ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ಬಾಡಿಗೆದಾರರಿಗೂ 200 ಯೂನಿಟ್ ವಿದ್ಯುತ್ ಉಚಿತ ನೀಡಲಾಗುತ್ತದೆ, ಬಾಡಿಗೆದಾರರು ಅರ್ಜಿ ಸಲ್ಲಿಸುವಾಗ ಸಂಪೂರ್ಣ ದಾಖಲೆಗಳನ್ನು ನೀಡಬೇಕು. ಮಾಲೀಕನ ಎಷ್ಟು ಬಾಡಿಗೆ ಮನೆ ಇದೆ ಎಂದು ಘೋಷಿಸಬೇಕು ಹಾಗೂ ಮನೆ ಮಾಲೀಕ ಕಡ್ಡಾಯವಾಗಿ ತೆರಿಗೆ ಕಟ್ಟಿರಬೇಕು. ಇಷ್ಟು ಬಾಡಿಗೆ ಮನೆಗಳಿದೆ, ಇಷ್ಟು ಮನೆಗಳಿಗೆ ನಾನು ಟ್ಯಾಕ್ಸ್ ಕಟ್ಟಿದ್ದೇನೆ ಎಂದು ಮಾಹಿತಿ ನೀಡಬೇಕು. ಒಂದು ವೇಳೆ ತಪ್ಪು

ಬಾಡಿಗೆದಾರರಿಗೂ ಉಚಿತ ವಿದ್ಯುತ್| ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ Read More »

ಸುಂಟಿಕೊಪ್ಪ: ನಾಪತ್ತೆಯಾಗಿದ್ದ ಯುವಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಎರಡು ದಿನದಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ನೇಣುಬಿಗಿದುಕೊಂಡು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಡಗು ಜಿಲ್ಲೆ ಸುಂಟಿಕೊಪ್ಪದಲ್ಲಿ ಘಟನೆ ನಡೆದಿದ್ದು, ಬಾಳೆಕಾಡು ತೋಟದ ನಿವಾಸಿ ಕಪಾಲಿ ಮುರುಗೇಶ್ ಅವರ ಪುತ್ರ ವಿಜಯ (23) ಮೃತ ಯುವಕ. ಈತ ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ. ಸೋಮವಾರ ಸಂಜೆ ತೋಟದ ಮರ ಒಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕಾರ್ಮಿಕರು ಕೆಲಸ ಮಾಡಿ ತೆರಳುವ ವೇಳೆ ಯುವಕ ನೇಣು ಬಿಗಿದುಕೊಂಡು ಮೃತಪಟ್ಟಿರುವುದು ಕಂಡುಬಂದಿದೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ

ಸುಂಟಿಕೊಪ್ಪ: ನಾಪತ್ತೆಯಾಗಿದ್ದ ಯುವಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ Read More »

ಮಂಗಳೂರು: ಜೂ.6,7 ರಂದು ದ.ಕ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ

ಸಮಗ್ರನ್ಯೂಸ್: ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಜೂ.6 ಹಾಗೂ 7ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಪ್ರವಾಸದ ವಿವರ:ಜೂ.6ರಂದು ಬೆಳಿಗ್ಗೆ 8.35ಕ್ಕೆ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ, 8.45ಕ್ಕೆ ನಗರದ ಸಕ್ರ್ಯೂಟ್ ಹೌಸ್‍ಗೆ ತೆರಳುವರು. ಬೆಳಿಗ್ಗೆ 10 ಗಂಟೆಗೆ ಪೊಲೀಸ್ ಪಶ್ಚಿಮ ವಲಯ ಕಚೇರಿ ಭೇಟಿ ಮತ್ತು ವಲಯ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದಾರೆ. 12.30ಕ್ಕೆ ಪೊಲೀಸ್ ಆಯುಕ್ತರ ಕಚೇರಿಗೆ

ಮಂಗಳೂರು: ಜೂ.6,7 ರಂದು ದ.ಕ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ Read More »

ರಾಜ್ಯಸರ್ಕಾರದಿಂದ ‘ಶಕ್ತಿ’ ಯೋಜನೆಗೆ ಅಧಿಕೃತ ಆದೇಶ ಜಾರಿ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ಈಗಾಗಲೇ ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಗೆ ಮಾರ್ಗಸೂಚಿಯನ್ನು ಪ್ರಕಟಿಸಿತ್ತು. ಈ ಬೆನ್ನಲ್ಲೇ ಇಂದು ರಾಜ್ಯದ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸುವ ಶಕ್ತಿ ಯೋಜನೆ ಜಾರಿಗೊಳಿಸಿ, ಆಡಳಿತಾತ್ಮಕ ಅನುಮೋದನೆಯ ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪುಷ್ಪ.ವಿಎಸ್ ಅವರು ನಡವಳಿಗಳನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರು ನಾಲ್ಕು

ರಾಜ್ಯಸರ್ಕಾರದಿಂದ ‘ಶಕ್ತಿ’ ಯೋಜನೆಗೆ ಅಧಿಕೃತ ಆದೇಶ ಜಾರಿ Read More »

ಭೀಕರ ಅಪಘಾತ| ಮಲೆಯಾಳಂ ನಟ ಕೊಲ್ಲಂ ಸುಧಿ ದುರ್ಮರಣ

ಸಮಗ್ರ ನ್ಯೂಸ್: ಕಾರು ಮತ್ತು ಪಿಕಪ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಲಯಾಳಂ ನಟ ಮತ್ತು ಮಿಮಿಕ್ರಿ ಕಲಾವಿದ ಕೊಲ್ಲಂ ಸುಧಿ ಸಾವನ್ನಪ್ಪಿದ್ದಾರೆ. ತ್ರಿಶೂರ್​ನ ಕೈಪಮಂಗಲಂ ಪಣಾಂಬಿಕುನ್​ನಲ್ಲಿ ಬೆಳಗಿನ ಜಾವ 4.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಕೊಲ್ಲ ಸುಧಿ ಮತ್ತು ತಂಡ ಕೋಯಿಕ್ಕೋಡ್​ನ ವಡಕಾರದಲ್ಲಿ ಖಾಸಗಿ ವಾಹಿನಿಯೊಂದರಲ್ಲಿ ಕಾರ್ಯಕ್ರಮವನ್ನು ಮುಗಿಸಿ ಮುಂಜಾನೆ ಹಿಂತಿರುಗುತ್ತಿದ್ದ ವೇಳೆ ಅವರು ಪ್ರಯಾಣಿಸುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಪಿಕಪ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಸುಧಿ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ

ಭೀಕರ ಅಪಘಾತ| ಮಲೆಯಾಳಂ ನಟ ಕೊಲ್ಲಂ ಸುಧಿ ದುರ್ಮರಣ Read More »

ಬಾಲಸೋರ್ ರೈಲು ದುರಂತದ ಬೆನ್ನಲ್ಲೇ, ಒಡಿಶಾದಲ್ಲಿ ಮತ್ತೊಂದು ದುರಂತ

ಸಮಗ್ರ ನ್ಯೂಸ್: ಇಡೀ ಜಗತ್ತನ್ನು ಬೆಚ್ಚಿಬೀಳಿಸಿದ ಬಾಲಸೋರ್ ರೈಲು ದುರಂತದ ಬೆನ್ನಲ್ಲೇ, ಒಡಿಶಾದಲ್ಲಿ ಮತ್ತೊಂದು ರೈಲು ಹಳಿ ತಪ್ಪಿದೆ ಎಂದು ವರದಿಯಾಗಿದೆ. ಬರ್ಗರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಒಡಿಶಾದ ಬಾಲಸೋರ್‌ನಲ್ಲಿ ಮೂರು ದಿನಗಳ ಹಿಂದಷ್ಟೇ ತ್ರಿವಳಿ ರೈಲು ಅಪಘಾತ ಸಂಭವಿಸಿ 275 ಮಂದಿ ಮೃತಪಟ್ಟಿದ್ದರು. ಈ ಕಹಿ ಘಟನೆ ಜನಮಾನಸದಿಂದ ಮಾಸುವ ಮೊದಲೇ ಒಡಿಶಾದಲ್ಲಿ ಮತ್ತೊಂದು ರೈಲು ಹಳ್ಳಿ ತಪ್ಪಿದ್ದು ಒಡಿಶಾದ ಬರಘಢ ಜಿಲ್ಲೆಯಲ್ಲಿ ಸುಣ್ಣದ ಕಲ್ಲು ಹೊತ್ತು ಸಾಗುತ್ತಿದ್ದ ಸರಕು ಸಾಗಣೆ ರೈಲಿನ 5

ಬಾಲಸೋರ್ ರೈಲು ದುರಂತದ ಬೆನ್ನಲ್ಲೇ, ಒಡಿಶಾದಲ್ಲಿ ಮತ್ತೊಂದು ದುರಂತ Read More »

ಕೇರಳಕ್ಕೆ ಪ್ರವೇಶಿಸದ ಮುಂಗಾರು| ಇನ್ನೊಂದು ವಾರ ಮಾನ್ಸೂನ್ ಮಳೆ ವಿಳಂಬ

ಸಮಗ್ರ ನ್ಯೂಸ್: ಮುಂಗಾರು ಮಾರುತಗಳು ಜೂನ್ 4 ರ ನಿನ್ನೆ ಕೇರಳ ಪ್ರವೇಶಿಸಲು ವಿಫಲವಾಗಿದ್ದು, ಇನ್ನೂ 3-4 ದಿನ ತಡವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಮಾರುತಗಳು ಜೂನ್ 4 ರಂದು ಕೇರಳ ರಾಜ್ಯವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಆದರೆ ಮುಂಗಾರು ಮಾರುತಗಳ ಕುರಿತಾಗಿ ಉತ್ತಮ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ದಕ್ಷಿಣ ಅರಬ್ಬಿ ಸಮುದ್ರದಲ್ಲಿ ಮಾರುತ ಚಲನೆ ವೇಗ ಪಡೆದುಕೊಂಡಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸದ್ಯ ಸಮುದ್ರಮಟ್ಟಕ್ಕಿಂತ 2 ಕಿ.

ಕೇರಳಕ್ಕೆ ಪ್ರವೇಶಿಸದ ಮುಂಗಾರು| ಇನ್ನೊಂದು ವಾರ ಮಾನ್ಸೂನ್ ಮಳೆ ವಿಳಂಬ Read More »

ಅಂಗವಿಕಲ ಹುಡುಗಿಗೆ ಪ್ರೀತಿ ಅರಸಿ ಹೊರಟಿರುವ ಶ್ವಾನ |ಕನ್ನಡದಲ್ಲಿ ಬರುತ್ತಿದೆ ಶ್ವಾನದ ಪ್ರೀತಿ ಕಥೆ

ಸಮಗ್ರ ಸಿನಿಮಾ: ಕವಿ ಗೋಪಾಲಕೃಷ್ಣ ಅಡಿಗರು ಬರೆದಿರುವ ‘ಯಾವ ಮೋಹನ ಮುರಳಿ ಕರೆಯಿತು’ ಎಂಬ ಹಾಡು ಬಹಳ ಜನಪ್ರಿಯ. ಈಗ ಈ ಹಾಡಿನ ಮೊದಲ ಸಾಲು ಚಿತ್ರದ ಶೀರ್ಷಿಕೆಯಾಗಿದೆ. ಇತ್ತೀಚಿಗೆ ‘ಯಾವ ಮೋಹನ ಮುರಳಿ ಕರೆಯಿತು’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಯಾವ ಮೋಹನ ಮುರಳಿ ಕರೆಯಿತು ಮನುಷ್ಯ ಹಾಗೂ ಶ್ವಾನದ ನಡುವಿನ ಪ್ರೀತಿಯ ಕುರಿತಾದ ಚಿತ್ರ. ಕನ್ನಡದಲ್ಲಿ ಶ್ವಾನದ ಕುರಿತಾದ ಚಿತ್ರಗಳು ಬಂದಿದೆಯಾದರೂ ಇದು ಸ್ವಲ್ಪ ಭಿನ್ನ. ಭರವಸೆಯ ಹುಡುಕಾಟದಲ್ಲಿರುವ ಅಂಗವಿಕಲ ಹುಡುಗಿಗೆ ಪ್ರೀತಿ ಅರಸಿ ಹೊರಟಿರುವ

ಅಂಗವಿಕಲ ಹುಡುಗಿಗೆ ಪ್ರೀತಿ ಅರಸಿ ಹೊರಟಿರುವ ಶ್ವಾನ |ಕನ್ನಡದಲ್ಲಿ ಬರುತ್ತಿದೆ ಶ್ವಾನದ ಪ್ರೀತಿ ಕಥೆ Read More »

4 ಮಕ್ಕಳನ್ನು ಕ್ರೂರವಾಗಿ ಕೊಂದ ತಾಯಿ ನೇಣಿಗೆ ಶರಣು

ಸಮಗ್ರ ನ್ಯೂಸ್: ಮಹಿಳೆಯೊಬ್ಬಳು ತನ್ನ 4 ಮಕ್ಕಳನ್ನು ಡ್ರಮ್‌ನಲ್ಲಿ ಕೂಡಿ ಹಾಕಿ ಕೊಂದ ಬಳಿಕ ತಾನೂ ನೇಣಿಗೆ ಶರಣಾಗಿರುವ ಆಘಾತಕಾರಿ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಜೇಥರಾಮ್ ಎಂಬವರ ಪತ್ನಿ ಊರ್ಮಿಳಾ ಶನಿವಾರ ತನ್ನ 4 ಮಕ್ಕಳೊಂದಿಗೆ ಮನೆಯಲ್ಲಿದ್ದಾಗ ತನ್ನ ಮಕ್ಕಳಾದ ಭಾವನಾ (8), ವಿಕ್ರಮ್ (5), ವಿಮಲಾ (3), ಮತ್ತು ಮನಿಶಾ (2) ರನ್ನು ಧಾನ್ಯದ ಡ್ರಮ್‌ನಲ್ಲಿ ಕೂಡಿ ಹಾಕಿ ಬೀಗ ಹಾಕಿದ್ದಾಳೆ. ಬಳಿಕ ಮನೆಯೊಳಗೆ ನೇಣು ಬಿಗಿದುಕೊಂಡು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಸಂಜೆಯವರೆಗೂ ಮಕ್ಕಳು

4 ಮಕ್ಕಳನ್ನು ಕ್ರೂರವಾಗಿ ಕೊಂದ ತಾಯಿ ನೇಣಿಗೆ ಶರಣು Read More »