‘ಸಿದ್ದರಾಮಯ್ಯ ಕೊಲೆಗೆ ಕರೆ ನೀಡುವುದು ಪ್ರೇಮ ರಾಜಕಾರಣವೇ?’| ಅಶ್ವಥ್ ನಾರಾಯಣ್ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು
ಸಮಗ್ರ ನ್ಯೂಸ್: ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎಂದು ಹೇಳಿದ್ದ ಬಿಜೆಪಿ ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಅಶ್ವಥ್ ನಾರಾಯಣ್, ಕಾಂಗ್ರೆಸ್ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ದೂರಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕರ್ನಾಟಕ ಕಾಂಗ್ರೆಸ್ ಅಶ್ವಥ್ ನಾರಾಯಣ್ ಆರೋಪಕ್ಕೆ ಉತ್ತರ ನೀಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಪ್ರಕರಣ ದಾಖಲಿಸಿದ್ದನ್ನೇ ದ್ವೇಷ ರಾಜಕಾರಣ ಎನ್ನುತ್ತಿರುವ ಅಶ್ವಥ್ ನಾರಾಯಣ್ ಅವರೇ, ತಾವು ಸಿದ್ದರಾಮಯ್ಯ ಅವರನ್ನು ಹೊಡೆದು










